Homeಕವನಅನುಷಾ ಚಂದ್ರುರವರ ಕವಿತೆ ಸುಮ್ಮನಿದ್ದೇನೆ ನಾನು…..

ಅನುಷಾ ಚಂದ್ರುರವರ ಕವಿತೆ ಸುಮ್ಮನಿದ್ದೇನೆ ನಾನು…..

- Advertisement -
- Advertisement -

ಹಾ….
ಸುಮ್ಮನಿದ್ದೇನೆ ನಾನು
ಹೇಳಲು ಬಹಳಷ್ಟಿದ್ದರು
ಅನುಭವಿಸಿದ್ದೇನೊ ಕೆಲವು
ಕಂಡದ್ದು ಹಲವು
ಆದರೆ ಎಲ್ಲವೂ ಸ್ವಂತದ್ದು
ಆದರದೇಕೊ ನಕ್ಕೊಮ್ಮೆ ಸುಮ್ಮನಾಗುವೆ ನಾನು
ಹೇಳಲು ಬಹಳಷ್ಟಿದ್ದರು

ಚಿಮಣಿ ಮೇಲಿನ ದೀಪದುರಿಯ ಕಪ್ಪಿನಲಿ
ಹೂತ ಕನಸುಗಳ ಚಿತ್ರವ ಕಂಡು……
ನನ್ನಮ್ಮ ಅಪ್ಪನಿಗೆ ಭರವಸೆಯೊಂದೆ
ಹೊಟ್ಟೆ ತುಂಬಿಸಿದ
ಖಾಲಿ ನೀರವ ರಾತ್ರಿಗಳ ನೆನೆದು

ನೀವು ನಾನಾಗದೆ ನಾನೇ ನೀವಾಗಲೊರಟು
ವಿಳಾಸವಿರದ ಊರಿನಲಿ
ದಾರಿ ತಪ್ಪಿ
ಕೊಳವಾದ ಕಂಗಳಲಿ
ಮಾಡಿದೊಂಟಿ ಯುದ್ಧವ ನೆನೆದು…..
ಸುಮ್ಮನಾದೆ ನಾನು

ಇದ್ದ ಬದುಕಿಗಿಡಿದ ಕನ್ನಡಿಯೆದುರು
ಹೊಸಕಿ‌ – ಕೊಂದ ಕನಸುಗಳ ಬಿಂಬ ಕಂಡು
ಹೆದರಿ ಮುದುರಿ ಮೌನಿಯಾದ ಕ್ಷಣವ ನೆನೆದು
ಸುಮ್ಮನಾಗಿ ಬಿಟ್ಟೆ ನಾನು
ಮಾತು ಬರುವ ಮೂಕಿಯಂತೆ
ಹೇಳಲು ಎಷ್ಟೊ ಅದೆಷ್ಟೋ ಇದ್ದರು

ಶಾಶ್ವತವಲ್ಲದೀ ದುಡ್ಡು
ಮೂಡಿಸಿದ ಶಾಶ್ವತ ಗುರುತುಗಳ
ಲೆಕ್ಕ ಪಟ್ಟಿಯ ಲೆಕ್ಕಗಳಲಿ
ಒದ್ದೆಯಾದ ಕಂಗಳನು
ಹುದುಗಿಸಿಡುತ
ಸುಮ್ಮನಾಗುವೆ ನಾನು
ನಿಮ್ಮಗಳೆದುರು
ನಾಲಿಗೆಯ ತುದಿಯಲ್ಲಿ
ಜಾರಲು ಅವೆಷ್ಟೋ ಮಾತುಗಳು ತವಕಿಸುತ್ತಿದ್ದರು

ಚೆಂದದ ನೋಟ ನಮ್ಮನ್ನಳೆವ ಮಾನದಂಡ
ಬೆಂಗಳೂರಿನಲ್ಲಿಇದೇ ನಾ ಕಲಿತ ಮೊದಲ ಪಾಠ
ಕಲಿಕೆಗೇನು ಕೊನೆಮೊದಲಿಲ್ಲವಲ್ಲ
ಪ್ರದರ್ಶನಕ್ಕೆ ಅಡ್ಡಿ ಮಾಡಿತ್ತು
ಧೂಳು ಹಿಡಿದು ತೂತು ಬಿದ್ದ ಆ ಖಾಲಿ ಪರ್ಸ್‌
ಅದನ್ನೇ ನೆನೆವೆ………ಅದನ್ನೇ ನೆನೆದು
ಸುಮ್ಮನಾಗಿ ಬಿಡುವೆ ನಾನು
ನಿಮ್ಮೆಲ್ಲರ ಇಂದಿನ ಗೇಲಿಗಳಿಗೆ
ಭರ್ತಿ ಪರ್ಸ್‌ ಕಿಸೆಯೊಳಗಿದ್ದರು

ಬೊಗಸೆ ತುಂಬ ಸಂಬಳವೆಣಿಸುತ್ತ
ಖರ್ಚಿಗೊಂದು ಬಾರಿ ಸಂಕಲನ ವ್ಯವಕಲನಕ್ಕೆ
ಓರೇ ಹಚ್ಚುವ ನಾನು
ಕೊಂದ ಕನಸುಗಳ, ಮರೆತ ನೋವುಗಳ
ಪಟ್ಟಿ ಇಟ್ಟು ವಾದ ಮಾಡದ ನಾನು
ಜಿಪುಣತನಕ್ಕೊಂದು ಆದರ್ಶ ಉದಾಹರಣೆ
ನಿಮ್ಮಗಳ ಮುಂದೆ
ಆದರು ಅದೇಕೊ
ನಕ್ಕು ಸುಮ್ಮನಾಗುವೆ ನಾನು
ಇಂದಿನಂತಯೇ ……..ಮುಂದೆಯೂ ಕೂಡ

ಉತ್ತರಿಸಲಾರೆ ಎಂದಲ್ಲ
ನಾ ನಡೆದ ಬದುಕಿನ ದಾರಿಯಲಿ
ಹೆಜ್ಜೆ ಕೂಡ ಇಡದ ನಿಮಗೆ
ಪಯಣದ ವರದಿಯ ನೀಡಿ ಸಾಧಿಸುವುದಾದರು ಏನು ? ನಾನು.

ಹಾ….ಸುಮ್ಮನಿದ್ದೇನೆ ನಾನು
ಹೇಳಲು ಬಹಳಷ್ಟಿದ್ದರು.

ಅನುಷಾ ಚಂದ್ರು

(ಮೂಲತಾ ಚಿಕ್ಕಮಗಳೂರಿನ ಸಖರಾಯಪಟ್ಟಣದವರು. ಕನ್ನಡದಲ್ಲಿ ಎಂ ಎ ಪದವಿಯನ್ನು ಪಡೆದಿದ್ದು, ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.)


ಇದನ್ನೂ ಓದಿ: ಮೊಳಗುತ್ತಿದೆ ಸೈರನ್! : ಶಂಕರ್ ಸಿಹಿಮೊಗೆಯವರ ಕವನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...