HomeಮುಖಪುಟJNU ದಾಳಿಯ ಯೋಜನೆ ರೂಪಿಸಿದ ವಾಟ್ಸಾಪ್‌ ಗುಂಪಿನ ಸದಸ್ಯರ ಫೋನ್‌ ವಶಪಡಿಸಿಕೊಳ್ಳಿ: ಹೈಕೋರ್ಟ್

JNU ದಾಳಿಯ ಯೋಜನೆ ರೂಪಿಸಿದ ವಾಟ್ಸಾಪ್‌ ಗುಂಪಿನ ಸದಸ್ಯರ ಫೋನ್‌ ವಶಪಡಿಸಿಕೊಳ್ಳಿ: ಹೈಕೋರ್ಟ್

Friends of RSS ಮತ್ತು Unity against left ಎಂಬ ಎರಡು ಗುಂಪುಗಳನ್ನು ದಾಳಿಯ ವೇಳೆಯ ಬಳಸಲಾಯಿತು ಎಂದು ಪ್ರಾಧ್ಯಾಪಕರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಜೆಎನ್‌ಯು ಹಿಂಸಾಚಾರಕ್ಕೆ ಸಂಬಂಧಿಸಿರುವ ವಾಟ್ಸಾಪ್ ಗುಂಪಿನ ಸದಸ್ಯರನ್ನು ಕರೆಸಿ, ಅವರ ಫೋನ್‌ಗಳನ್ನು ವಶಪಡಿಸಿಕೊಳ್ಳಿ ಎಂದು ದೆಹಲಿ ಹೈಕೋರ್ಟ್‌ಗೆ ಆದೇಶಿಸಿದೆ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕ್ಯಾಂಪಸ್‌ನಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿರುವ ಎರಡು ವಾಟ್ಸಾಪ್ ಗುಂಪುಗಳ ಎಲ್ಲ ಸದಸ್ಯರನ್ನು ಕರೆಸಿ ವಿಚಾರಣೆ ನಡೆಸುವಂತೆ ದೆಹಲಿ ಹೈಕೋರ್ಟ್ ಮಂಗಳವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

ಜನವರಿ 5 ರ ದಾಳಿಯಲ್ಲಿ ಗಾಯಗೊಂಡ ಮೂವರು ಜೆಎನ್‌ಯು ಪ್ರಾಧ್ಯಾಪಕರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಹೈಕೋರ್ಟ್ ಆದೇಶ ಬಂದಿದೆ. ಸ್ಕೂಲ್ ಆಫ್ ಆರ್ಟ್ಸ್ ಅಂಡ್ ಎಸ್ಥೆಟಿಕ್ಸ್‌ನ ಪ್ರಾಧ್ಯಾಪಕ ಅಮೀತ್ ಪರಮೇಶ್ವರನ್, ಪ್ರಾದೇಶಿಕ ಅಭಿವೃದ್ಧಿ, ಸ್ಕೂಲ್ ಆಫ್ ಸೋಶಿಯಲ್ ಸೈನ್ಸಸ್‌ನ ಸೆಂಟರ್ ಫಾರ್ ಸ್ಟಡಿ ಪ್ರಾಧ್ಯಾಪಕ ಅತುಲ್ ಸೂದ್ ಮತ್ತು ಸ್ಕೂಲ್ ಆಫ್ ಆರ್ಟ್ಸ್ ಮತ್ತು ಸೌಂದರ್ಯಶಾಸ್ತ್ರದ ಪ್ರಾಧ್ಯಾಪಕ ಶುಕ್ಲಾ ವಿನಾಯಕ್ ಸಾವಂತ್ ತಮ್ಮ ಮನವಿಯಲ್ಲಿ ಈ ದಾಳಿಗಳು ಪೂರ್ವನಿಯೋಜಿತವಾಗಿದ್ದು ಮತ್ತು ವಿವಿಧ ವಾಟ್ಸಾಪ್ ಗುಂಪುಗಳಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

Friends of RSS ಮತ್ತು Unity against left ಎಂಬ ಎರಡು ಗುಂಪುಗಳನ್ನು ದಾಳಿಯ ವೇಳೆಯ ಬಳಸಲಾಯಿತು ಎಂದು ಪ್ರಾಧ್ಯಾಪಕರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಹಿಂಸಾಚಾರದ ನಂತರ, ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ, ವಿಶೇಷವಾಗಿ ವಾಟ್ಸಾಪ್‌ನಲ್ಲಿ ದಾಳಿಯ ಕುರತಾಗಿ ನಡೆದ ಚಾಟ್‌ಗಳ ಕುರಿತಾಗಿ ವೀಡಿಯೊಗಳು ಮತ್ತು ಸ್ಕ್ರೀನ್ ಶಾಟ್‌ಗಳು ಹೊರಹೊಮ್ಮಿದವು. ಇದು ದಾಳಿಯ ಪೂರ್ವನಿಯೋಜಿತ ಸ್ವರೂಪ ಮತ್ತು ಪಿತೂರಿ ಸ್ವರೂಪವನ್ನು ಸೂಚಿಸುತ್ತದೆ.

ತಮ್ಮ ನೀತಿಗಳಿಗೆ ಅನುಗುಣವಾಗಿ ಡೇಟಾವನ್ನು ಸಂರಕ್ಷಿಸುವಂತೆ ದೆಹಲಿ ಹೈಕೋರ್ಟ್ ವಾಟ್ಸಾಪ್ ಮತ್ತು ಗೂಗಲ್‌ಗೆ ನಿರ್ದೇಶನ ನೀಡಿತು. ನ್ಯಾಯಾಲಯಕ್ಕೆ ಉತ್ತರಿಸಿದ ವಾಟ್ಸಾಪ್ ಅನ್ನು ಪ್ರತಿನಿಧಿಸುವ ವಕೀಲರು ಕಂಪನಿಯು ತನ್ನ ಸರ್ವರ್‌ನಲ್ಲಿ ಸಂದೇಶಗಳನ್ನು ಉಳಿಸುವುದಿಲ್ಲ ಮತ್ತು ಸದಸ್ಯರ ಮೂಲಕ ಮಾತ್ರ ಅದನ್ನು ಪಡೆಯಬಹುದು ಎಂದು ಹೇಳಿದರು.

ಈ ವಾದದ ನಂತರ ಎರಡು ವಾಟ್ಸಾಪ್ ಗುಂಪುಗಳ ಎಲ್ಲ ಸದಸ್ಯರನ್ನು ಕರೆದು ಅವರ ಫೋನ್‌ಗಳನ್ನು ವಶಪಡಿಸಿಕೊಳ್ಳಲು ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...