HomeಮುಖಪುಟJNU ದಾಳಿಯ ಯೋಜನೆ ರೂಪಿಸಿದ ವಾಟ್ಸಾಪ್‌ ಗುಂಪಿನ ಸದಸ್ಯರ ಫೋನ್‌ ವಶಪಡಿಸಿಕೊಳ್ಳಿ: ಹೈಕೋರ್ಟ್

JNU ದಾಳಿಯ ಯೋಜನೆ ರೂಪಿಸಿದ ವಾಟ್ಸಾಪ್‌ ಗುಂಪಿನ ಸದಸ್ಯರ ಫೋನ್‌ ವಶಪಡಿಸಿಕೊಳ್ಳಿ: ಹೈಕೋರ್ಟ್

Friends of RSS ಮತ್ತು Unity against left ಎಂಬ ಎರಡು ಗುಂಪುಗಳನ್ನು ದಾಳಿಯ ವೇಳೆಯ ಬಳಸಲಾಯಿತು ಎಂದು ಪ್ರಾಧ್ಯಾಪಕರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಜೆಎನ್‌ಯು ಹಿಂಸಾಚಾರಕ್ಕೆ ಸಂಬಂಧಿಸಿರುವ ವಾಟ್ಸಾಪ್ ಗುಂಪಿನ ಸದಸ್ಯರನ್ನು ಕರೆಸಿ, ಅವರ ಫೋನ್‌ಗಳನ್ನು ವಶಪಡಿಸಿಕೊಳ್ಳಿ ಎಂದು ದೆಹಲಿ ಹೈಕೋರ್ಟ್‌ಗೆ ಆದೇಶಿಸಿದೆ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕ್ಯಾಂಪಸ್‌ನಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿರುವ ಎರಡು ವಾಟ್ಸಾಪ್ ಗುಂಪುಗಳ ಎಲ್ಲ ಸದಸ್ಯರನ್ನು ಕರೆಸಿ ವಿಚಾರಣೆ ನಡೆಸುವಂತೆ ದೆಹಲಿ ಹೈಕೋರ್ಟ್ ಮಂಗಳವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

ಜನವರಿ 5 ರ ದಾಳಿಯಲ್ಲಿ ಗಾಯಗೊಂಡ ಮೂವರು ಜೆಎನ್‌ಯು ಪ್ರಾಧ್ಯಾಪಕರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಹೈಕೋರ್ಟ್ ಆದೇಶ ಬಂದಿದೆ. ಸ್ಕೂಲ್ ಆಫ್ ಆರ್ಟ್ಸ್ ಅಂಡ್ ಎಸ್ಥೆಟಿಕ್ಸ್‌ನ ಪ್ರಾಧ್ಯಾಪಕ ಅಮೀತ್ ಪರಮೇಶ್ವರನ್, ಪ್ರಾದೇಶಿಕ ಅಭಿವೃದ್ಧಿ, ಸ್ಕೂಲ್ ಆಫ್ ಸೋಶಿಯಲ್ ಸೈನ್ಸಸ್‌ನ ಸೆಂಟರ್ ಫಾರ್ ಸ್ಟಡಿ ಪ್ರಾಧ್ಯಾಪಕ ಅತುಲ್ ಸೂದ್ ಮತ್ತು ಸ್ಕೂಲ್ ಆಫ್ ಆರ್ಟ್ಸ್ ಮತ್ತು ಸೌಂದರ್ಯಶಾಸ್ತ್ರದ ಪ್ರಾಧ್ಯಾಪಕ ಶುಕ್ಲಾ ವಿನಾಯಕ್ ಸಾವಂತ್ ತಮ್ಮ ಮನವಿಯಲ್ಲಿ ಈ ದಾಳಿಗಳು ಪೂರ್ವನಿಯೋಜಿತವಾಗಿದ್ದು ಮತ್ತು ವಿವಿಧ ವಾಟ್ಸಾಪ್ ಗುಂಪುಗಳಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

Friends of RSS ಮತ್ತು Unity against left ಎಂಬ ಎರಡು ಗುಂಪುಗಳನ್ನು ದಾಳಿಯ ವೇಳೆಯ ಬಳಸಲಾಯಿತು ಎಂದು ಪ್ರಾಧ್ಯಾಪಕರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಹಿಂಸಾಚಾರದ ನಂತರ, ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ, ವಿಶೇಷವಾಗಿ ವಾಟ್ಸಾಪ್‌ನಲ್ಲಿ ದಾಳಿಯ ಕುರತಾಗಿ ನಡೆದ ಚಾಟ್‌ಗಳ ಕುರಿತಾಗಿ ವೀಡಿಯೊಗಳು ಮತ್ತು ಸ್ಕ್ರೀನ್ ಶಾಟ್‌ಗಳು ಹೊರಹೊಮ್ಮಿದವು. ಇದು ದಾಳಿಯ ಪೂರ್ವನಿಯೋಜಿತ ಸ್ವರೂಪ ಮತ್ತು ಪಿತೂರಿ ಸ್ವರೂಪವನ್ನು ಸೂಚಿಸುತ್ತದೆ.

ತಮ್ಮ ನೀತಿಗಳಿಗೆ ಅನುಗುಣವಾಗಿ ಡೇಟಾವನ್ನು ಸಂರಕ್ಷಿಸುವಂತೆ ದೆಹಲಿ ಹೈಕೋರ್ಟ್ ವಾಟ್ಸಾಪ್ ಮತ್ತು ಗೂಗಲ್‌ಗೆ ನಿರ್ದೇಶನ ನೀಡಿತು. ನ್ಯಾಯಾಲಯಕ್ಕೆ ಉತ್ತರಿಸಿದ ವಾಟ್ಸಾಪ್ ಅನ್ನು ಪ್ರತಿನಿಧಿಸುವ ವಕೀಲರು ಕಂಪನಿಯು ತನ್ನ ಸರ್ವರ್‌ನಲ್ಲಿ ಸಂದೇಶಗಳನ್ನು ಉಳಿಸುವುದಿಲ್ಲ ಮತ್ತು ಸದಸ್ಯರ ಮೂಲಕ ಮಾತ್ರ ಅದನ್ನು ಪಡೆಯಬಹುದು ಎಂದು ಹೇಳಿದರು.

ಈ ವಾದದ ನಂತರ ಎರಡು ವಾಟ್ಸಾಪ್ ಗುಂಪುಗಳ ಎಲ್ಲ ಸದಸ್ಯರನ್ನು ಕರೆದು ಅವರ ಫೋನ್‌ಗಳನ್ನು ವಶಪಡಿಸಿಕೊಳ್ಳಲು ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...