Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ 'ಸುಮುದ್ ಫ್ಲೋಟಿಲ್ಲಾ' ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

- Advertisement -
- Advertisement -

ಯುದ್ಧ ಪೀಡಿತ ಗಾಝಾದ ಜನತೆಗೆ ಮಾನವೀಯ ನೆರವು ಹೊತ್ತು, ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲು ಹೊರಟಿರುವ ಜಾಗತಿಕ ‘ಸುಮುದ್ ಫ್ಲೊಟಿಲ್ಲಾ’ ನೆರವು ಹಡಗುಗಳ ಗುಂಪು ತನ್ನ ಪ್ರಯಾಣದ ಅಂತಿಮ ಹಂತಕ್ಕೆ ತಲುಪಿದೆ ಎಂದು ಸೋಮವಾರ (ಸೆ.29) ವರದಿಯಾಗಿದೆ.

ಜಾಗತಿಕ ಸುಮುದ್ ಫ್ಲೊಟಿಲ್ಲಾ ಎನ್ನುವುದು ಇಸ್ರೇಲ್‌ ಗಾಝಾ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಭೇದಿಸುವ ಗುರಿಯನ್ನು ಹೊಂದಿರುವ ಒಂದು ಪ್ರಮುಖ ಅಂತಾರಾಷ್ಟ್ರೀಯ ಮಿಷನ್ ಆಗಿದೆ. ಈ ಫ್ಲೊಟಿಲ್ಲಾದಲ್ಲಿ 44 ಹಡಗುಗಳು ಇದ್ದು, ಇವು ಮಾನವೀಯ ನೆರವುಗಳಾದ ಆಹಾರ, ಔಷಧ ಮತ್ತು ಇತರ ಅಗತ್ಯ ವಸ್ತುಗಳನ್ನು ಒಯ್ಯುತ್ತಿವೆ. ಜೊತೆಗೆ, ವಿಶ್ವದ ವಿವಿಧ ಭಾಗಗಳ ನೂರಾರು ಪ್ರತಿನಿಧಿಗಳು ಈ ಮಿಷನ್‌ನ ಭಾಗವಾಗಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಪ್ರಸ್ತುತ ಗಾಝಾದಿಂದ ಸುಮಾರು 366 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿವೆ. ಆಯೋಜಕರು ಹೇಳುವಂತೆ, ಈ 44 ಹಡಗುಗಳ ಗುಂಪು ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ಸಮುದ್ರ ತೀರ ತಲುಪಲಿದೆ. ಅದಕ್ಕೂ ಮುನ್ನ ಜಲ ಪ್ರದೇಶದ ‘ಕಿತ್ತಳೆ ವಲಯ’ (ಆರೆಂಜ್ ಝೋನ್‌) ಪ್ರವೇಶಿಸಲಿದೆ. ಅಲ್ಲಿ ಇಸ್ರೇಲ್‌ನ ನೌಕಾಪಡೆ ಈ ಹಡಗುಗಳನ್ನು ತಡೆಯುವ ಸಾಧ್ಯತೆ ಇದೆ.

44 ಹಡಗುಗಳ ಗುಂಪಿನ ಭಾಗವಾದ ಜಾನಿ ಎಂ. ಎಂಬ ಹಡಗಿನ ಇಂಜಿನ್ ಕೋಣೆಯಲ್ಲಿ ಸೋಮವಾರ (ಸೆ.29) ಸೋರಿಕೆ ಕಂಡು ಬಂದಿದ್ದು, ಆ ಬಳಿಕ ಅದರ ಪ್ರಯಾಣ ಸ್ಥಗಿತಗೊಳಿಸಲಾಗಿದೆ.

ಆ ಹಡಗಿನಲ್ಲಿದ್ದ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಈ ಪೈಕಿ ಕೆಲವರನ್ನು ಬೇರೆ ಹಡಗುಗಳಿಗೆ ಹತ್ತಿಸಲಾಗಿದೆ. ಇನ್ನೂ ಕೆಲವರಿಗೆ ಬೇರೆ ಹಡಗಿನ ವ್ಯವಸ್ಥೆ ಮಾಡಲಾಗಿದೆ. ಉಳಿದವರನ್ನು ತೀರಕ್ಕೆ ಕರೆತರಲಾಗಿದೆ.

ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ತಲುಪುವ ಗುರಿಗೆ ಇದರಿಂದ ಅಡ್ಡಿಯೇನು ಇಲ್ಲ ಎಂದು ಸಮುದ್ ತಂಡ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿದೆ.

46 ದೇಶಗಳ ಪ್ರತಿನಿಧಿಗಳು ಈ ಸುಮುದ್ ಫ್ಲೊಟಿಲ್ಲಾ ತಂಡದಲ್ಲಿ ಇದ್ದಾರೆ. ಇದು ಕಳೆದ 18 ವರ್ಷಗಳಿಂದ ಗಾಝಾದ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಬೇಧಿಸುವ ಇದುವರೆಗಿನ ಅತಿದೊಡ್ಡ ಸಮುದ್ರ ಆಧಾರಿತ ಪ್ರಯತ್ನವಾಗಿದೆ. ಈ 44 ಹಡಗುಗಳ ಗುಂಪು 500ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯತ್ತಿದೆ. ಇವರಲ್ಲಿ ವೈದ್ಯರು, ವಿವಿಧ ದೇಶಗಳ ಸಂಸದರು, ಮಾನವ ಹಕ್ಕುಗಳ ಹೋರಾಟಗಾರರು ಮತ್ತು ಸ್ವೀಡನ್‌ನ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ರಂತಹ ಪ್ರಸಿದ್ಧ ಚಳವಳಿಗಾರರು ಇದ್ದಾರೆ.

ಈ ವರ್ಷದ ಆರಂಭದಲ್ಲಿ ಇಸ್ರೇಲಿ ಪಡೆಗಳು ಮದ್ಲೀನ್ ಹಡಗನ್ನು ತಡೆದ ಅದೇ ಜಲ ಪ್ರದೇಶವನ್ನು ಫ್ಲೋಟಿಲ್ಲಾ ಸಮೀಪಿಸುತ್ತಿದೆ ಎಂದು ಜರ್ಮನ್ ಹೋರಾಟಗಾರ್ತಿ ಯಾಸ್ಮಿನ್ ಅಕಾರ್ ದೃಢಪಡಿಸಿದ್ದಾರೆ.

“ನಾವು ಕೇವಲ ಮಾನವೀಯ ನೆರವು ನೀಡುತ್ತಿಲ್ಲ, ಗಾಝಾ ಜನತೆಯಲ್ಲಿ ಭರವಸೆ ಮೂಡಿಸುತ್ತಿದ್ದೇವೆ. ಅವರೊಂದಿಗೆ ಒಗ್ಗಟ್ಟು ಪ್ರದರ್ಶಿಸುತ್ತಿದ್ದೇವೆ. ಜಗತ್ತು ಪ್ಯಾಲೆಸ್ತೀನ್‌ನೊಂದಿಗೆ ಇದೆ ಎಂಬ ಬಲವಾದ ಸಂದೇಶವನ್ನು ಕಳುಹಿಸುತ್ತಿದ್ದೇವೆ” ಎಂದು ಗ್ರೀಸ್‌ನ ದ್ವೀಪ ಕ್ರೀಟ್ ಬಳಿ ಗ್ರೇಟಾ ಥನ್‌ಬರ್ಗ್ ಹೇಳಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಗಾಝಾಕ್ಕೆ ಹತ್ತಿರವಾಗುತ್ತಿವೆ. ಪ್ರತಿ ನಿಮಿಷವೂ ಅವು ಗಾಝಾದ ಜನರಿಗೆ ನ್ಯಾಯ ತಲುಪಿಸಲು ಮುಂದುವರಿಯುತ್ತಿವೆ ಎಂದು ಆಯೋಜಕರು ಹೇಳಿದ್ದಾರೆ. ಅವರ ವೆಬ್‌ಸೈಟ್‌ನಲ್ಲಿ ಒಂದು ಟ್ರ್ಯಾಕರ್ ಇದೆ, ಅದು ಈ ಹಡಗುಗಳು ಮೆಡಿಟರೇನಿಯನ್ ಸಮುದ್ರದಲ್ಲಿ ಮುಂದುವರಿಯುವುದನ್ನು ತೋರಿಸುತ್ತಿದೆ. ಇಡೀ ಜಗತ್ತಿನ ಗಮನ ಈಗ ಸುಮುದ್ ತಂಡ ಮೇಲಿದೆ.

ಸೆಪ್ಟೆಂಬರ್ 26 ಶುಕ್ರವಾರ ಸುಮುದ್ ತಂಡದಿಂದ ಮಾತನಾಡಿದ್ದ ಗ್ರೇಟಾ ಥನ್‌ಬರ್ಗ್, “ನಾನು ಇಸ್ರೇಲ್‌ಗೆ ಹೆದರುವುದಿಲ್ಲ, ಮಾನವೀಯತೆಯ ಎಲ್ಲಾ ಪ್ರಜ್ಞೆಯನ್ನು ಕಳೆದುಕೊಂಡಿರುವ ಜಗತ್ತಿಗೆ ಹೆದರುತ್ತೇನೆ” ಎಂದು ಹೇಳಿದ್ದರು.

ಫ್ಲೋಟಿಲ್ಲಾದ ಸಂಚಾರವು ಅಂತಾರಾಷ್ಟ್ರೀಯ ಗಮನ ಸೆಳೆದಿದೆ ಮತ್ತು ಪ್ರಾದೇಶಿಕ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಓಪನ್ ಸೋರ್ಸ್ ಟ್ರ್ಯಾಕಿಂಗ್ ಪ್ರಕಾರ, ಟರ್ಕಿಯು ಹಡಗುಗಳ ಮೇಲ್ವಿಚಾರಣೆ ಮಾಡಲು ಮತ್ತು ರಕ್ಷಿಸಲು ಡ್ರೋನ್‌ಗಳು ಮತ್ತು ಫ್ರಿಗೇಟ್ ಅನ್ನು ನಿಯೋಜಿಸಿದೆ.

ಇಟಲಿ ಮತ್ತು ಸ್ಪೇನ್ ಸಂಭಾವ್ಯ ರಕ್ಷಣೆ ಮತ್ತು ಮಾನವೀಯ ನೆರವಿಗಾಗಿ ನೌಕಾ ಹಡಗುಗಳನ್ನು ಸನ್ನದ್ಧವಾಗಿ ಇರಿಸಿವೆ.

ಈ ತಿಂಗಳ ಆರಂಭದಲ್ಲಿ, ಫ್ಲೋಟಿಲ್ಲಾದ ಎರಡು ಹಡಗುಗಳನ್ನು ಡ್ರೋನ್‌ಗಳು ಗುರಿಯಾಗಿಸಿಕೊಂಡಿದ್ದವು ಎಂದು ವರದಿಯಾಗಿದೆ. ಈ ದಾಳಿಗಳಿಂದ ಉಂಟಾದ ವಿಳಂಬ ಮತ್ತು ಹವಾಮಾನ ವೈಪರೀತ್ಯಗಳ ಹೊರತಾಗಿಯೂ, ನಾವು ಗಾಝಾ ತಲುಪಿಯೇ ತೀರುತ್ತೇವೆ ಎಂದು ಸುಮುದ್ ತಂಡ ಶಪಥ ಮಾಡಿದೆ.

ಇಸ್ರೇಲಿ ಮಾಧ್ಯಮಗಳ ಪ್ರಕಾರ, ಇಸ್ರೇಲ್‌ನ ನೌಕಾಪಡೆಯ ಗುಂಪಾದ ಶಯೆತೆತ್ 13 ತಂಡವು ಈ ಹಡಗುಗಳನ್ನು ವಶಪಡಿಸಿಕೊಳ್ಳಲು ತಯಾರಿ ನಡೆಸುತ್ತಿದೆ ಮತ್ತು ಈಗಾಗಲೇ ತರಬೇತಿ ಅಭ್ಯಾಸಗಳನ್ನು ಮಾಡುತ್ತಿದೆ. ಅಧಿಕಾರಿಗಳು ಹೇಳುವಂತೆ, ಈ ಹಡಗುಗಳು ಗಾಝಾ ತೀರಕ್ಕೆ ತಲುಪದಂತೆ ತಡೆಯುವುದು ಇಸ್ರೇಲ್ ಗುರಿಯಾಗಿದೆ. ಆದರೆ, ಈ ಸಂದರ್ಭದಲ್ಲಿ ಫ್ಲೊಟಿಲ್ಲಾದ ಭಾಗವಾದವರಿಗೆ ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಇಸ್ರೇಲ್ ಯೋಜಿಸಿದೆ.

‘ಭಾರತೀಯ ಇಲಿಗಳು..’ ಎಂದು ಕೆನಡಾದಲ್ಲಿ ದ್ವೇಷಪೂರಿತ ಗೋಡೆ ಬರಹ: ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...