Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ 'ಸುಮುದ್ ಫ್ಲೋಟಿಲ್ಲಾ' ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

- Advertisement -
- Advertisement -

ಯುದ್ಧ ಪೀಡಿತ ಗಾಝಾದ ಜನತೆಗೆ ಮಾನವೀಯ ನೆರವು ಹೊತ್ತು, ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲು ಹೊರಟಿರುವ ಜಾಗತಿಕ ‘ಸುಮುದ್ ಫ್ಲೊಟಿಲ್ಲಾ’ ನೆರವು ಹಡಗುಗಳ ಗುಂಪು ತನ್ನ ಪ್ರಯಾಣದ ಅಂತಿಮ ಹಂತಕ್ಕೆ ತಲುಪಿದೆ ಎಂದು ಸೋಮವಾರ (ಸೆ.29) ವರದಿಯಾಗಿದೆ.

ಜಾಗತಿಕ ಸುಮುದ್ ಫ್ಲೊಟಿಲ್ಲಾ ಎನ್ನುವುದು ಇಸ್ರೇಲ್‌ ಗಾಝಾ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಭೇದಿಸುವ ಗುರಿಯನ್ನು ಹೊಂದಿರುವ ಒಂದು ಪ್ರಮುಖ ಅಂತಾರಾಷ್ಟ್ರೀಯ ಮಿಷನ್ ಆಗಿದೆ. ಈ ಫ್ಲೊಟಿಲ್ಲಾದಲ್ಲಿ 44 ಹಡಗುಗಳು ಇದ್ದು, ಇವು ಮಾನವೀಯ ನೆರವುಗಳಾದ ಆಹಾರ, ಔಷಧ ಮತ್ತು ಇತರ ಅಗತ್ಯ ವಸ್ತುಗಳನ್ನು ಒಯ್ಯುತ್ತಿವೆ. ಜೊತೆಗೆ, ವಿಶ್ವದ ವಿವಿಧ ಭಾಗಗಳ ನೂರಾರು ಪ್ರತಿನಿಧಿಗಳು ಈ ಮಿಷನ್‌ನ ಭಾಗವಾಗಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಪ್ರಸ್ತುತ ಗಾಝಾದಿಂದ ಸುಮಾರು 366 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿವೆ. ಆಯೋಜಕರು ಹೇಳುವಂತೆ, ಈ 44 ಹಡಗುಗಳ ಗುಂಪು ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ಸಮುದ್ರ ತೀರ ತಲುಪಲಿದೆ. ಅದಕ್ಕೂ ಮುನ್ನ ಜಲ ಪ್ರದೇಶದ ‘ಕಿತ್ತಳೆ ವಲಯ’ (ಆರೆಂಜ್ ಝೋನ್‌) ಪ್ರವೇಶಿಸಲಿದೆ. ಅಲ್ಲಿ ಇಸ್ರೇಲ್‌ನ ನೌಕಾಪಡೆ ಈ ಹಡಗುಗಳನ್ನು ತಡೆಯುವ ಸಾಧ್ಯತೆ ಇದೆ.

44 ಹಡಗುಗಳ ಗುಂಪಿನ ಭಾಗವಾದ ಜಾನಿ ಎಂ. ಎಂಬ ಹಡಗಿನ ಇಂಜಿನ್ ಕೋಣೆಯಲ್ಲಿ ಸೋಮವಾರ (ಸೆ.29) ಸೋರಿಕೆ ಕಂಡು ಬಂದಿದ್ದು, ಆ ಬಳಿಕ ಅದರ ಪ್ರಯಾಣ ಸ್ಥಗಿತಗೊಳಿಸಲಾಗಿದೆ.

ಆ ಹಡಗಿನಲ್ಲಿದ್ದ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಈ ಪೈಕಿ ಕೆಲವರನ್ನು ಬೇರೆ ಹಡಗುಗಳಿಗೆ ಹತ್ತಿಸಲಾಗಿದೆ. ಇನ್ನೂ ಕೆಲವರಿಗೆ ಬೇರೆ ಹಡಗಿನ ವ್ಯವಸ್ಥೆ ಮಾಡಲಾಗಿದೆ. ಉಳಿದವರನ್ನು ತೀರಕ್ಕೆ ಕರೆತರಲಾಗಿದೆ.

ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ತಲುಪುವ ಗುರಿಗೆ ಇದರಿಂದ ಅಡ್ಡಿಯೇನು ಇಲ್ಲ ಎಂದು ಸಮುದ್ ತಂಡ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿದೆ.

46 ದೇಶಗಳ ಪ್ರತಿನಿಧಿಗಳು ಈ ಸುಮುದ್ ಫ್ಲೊಟಿಲ್ಲಾ ತಂಡದಲ್ಲಿ ಇದ್ದಾರೆ. ಇದು ಕಳೆದ 18 ವರ್ಷಗಳಿಂದ ಗಾಝಾದ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಬೇಧಿಸುವ ಇದುವರೆಗಿನ ಅತಿದೊಡ್ಡ ಸಮುದ್ರ ಆಧಾರಿತ ಪ್ರಯತ್ನವಾಗಿದೆ. ಈ 44 ಹಡಗುಗಳ ಗುಂಪು 500ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯತ್ತಿದೆ. ಇವರಲ್ಲಿ ವೈದ್ಯರು, ವಿವಿಧ ದೇಶಗಳ ಸಂಸದರು, ಮಾನವ ಹಕ್ಕುಗಳ ಹೋರಾಟಗಾರರು ಮತ್ತು ಸ್ವೀಡನ್‌ನ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ರಂತಹ ಪ್ರಸಿದ್ಧ ಚಳವಳಿಗಾರರು ಇದ್ದಾರೆ.

ಈ ವರ್ಷದ ಆರಂಭದಲ್ಲಿ ಇಸ್ರೇಲಿ ಪಡೆಗಳು ಮದ್ಲೀನ್ ಹಡಗನ್ನು ತಡೆದ ಅದೇ ಜಲ ಪ್ರದೇಶವನ್ನು ಫ್ಲೋಟಿಲ್ಲಾ ಸಮೀಪಿಸುತ್ತಿದೆ ಎಂದು ಜರ್ಮನ್ ಹೋರಾಟಗಾರ್ತಿ ಯಾಸ್ಮಿನ್ ಅಕಾರ್ ದೃಢಪಡಿಸಿದ್ದಾರೆ.

“ನಾವು ಕೇವಲ ಮಾನವೀಯ ನೆರವು ನೀಡುತ್ತಿಲ್ಲ, ಗಾಝಾ ಜನತೆಯಲ್ಲಿ ಭರವಸೆ ಮೂಡಿಸುತ್ತಿದ್ದೇವೆ. ಅವರೊಂದಿಗೆ ಒಗ್ಗಟ್ಟು ಪ್ರದರ್ಶಿಸುತ್ತಿದ್ದೇವೆ. ಜಗತ್ತು ಪ್ಯಾಲೆಸ್ತೀನ್‌ನೊಂದಿಗೆ ಇದೆ ಎಂಬ ಬಲವಾದ ಸಂದೇಶವನ್ನು ಕಳುಹಿಸುತ್ತಿದ್ದೇವೆ” ಎಂದು ಗ್ರೀಸ್‌ನ ದ್ವೀಪ ಕ್ರೀಟ್ ಬಳಿ ಗ್ರೇಟಾ ಥನ್‌ಬರ್ಗ್ ಹೇಳಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಗಾಝಾಕ್ಕೆ ಹತ್ತಿರವಾಗುತ್ತಿವೆ. ಪ್ರತಿ ನಿಮಿಷವೂ ಅವು ಗಾಝಾದ ಜನರಿಗೆ ನ್ಯಾಯ ತಲುಪಿಸಲು ಮುಂದುವರಿಯುತ್ತಿವೆ ಎಂದು ಆಯೋಜಕರು ಹೇಳಿದ್ದಾರೆ. ಅವರ ವೆಬ್‌ಸೈಟ್‌ನಲ್ಲಿ ಒಂದು ಟ್ರ್ಯಾಕರ್ ಇದೆ, ಅದು ಈ ಹಡಗುಗಳು ಮೆಡಿಟರೇನಿಯನ್ ಸಮುದ್ರದಲ್ಲಿ ಮುಂದುವರಿಯುವುದನ್ನು ತೋರಿಸುತ್ತಿದೆ. ಇಡೀ ಜಗತ್ತಿನ ಗಮನ ಈಗ ಸುಮುದ್ ತಂಡ ಮೇಲಿದೆ.

ಸೆಪ್ಟೆಂಬರ್ 26 ಶುಕ್ರವಾರ ಸುಮುದ್ ತಂಡದಿಂದ ಮಾತನಾಡಿದ್ದ ಗ್ರೇಟಾ ಥನ್‌ಬರ್ಗ್, “ನಾನು ಇಸ್ರೇಲ್‌ಗೆ ಹೆದರುವುದಿಲ್ಲ, ಮಾನವೀಯತೆಯ ಎಲ್ಲಾ ಪ್ರಜ್ಞೆಯನ್ನು ಕಳೆದುಕೊಂಡಿರುವ ಜಗತ್ತಿಗೆ ಹೆದರುತ್ತೇನೆ” ಎಂದು ಹೇಳಿದ್ದರು.

ಫ್ಲೋಟಿಲ್ಲಾದ ಸಂಚಾರವು ಅಂತಾರಾಷ್ಟ್ರೀಯ ಗಮನ ಸೆಳೆದಿದೆ ಮತ್ತು ಪ್ರಾದೇಶಿಕ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಓಪನ್ ಸೋರ್ಸ್ ಟ್ರ್ಯಾಕಿಂಗ್ ಪ್ರಕಾರ, ಟರ್ಕಿಯು ಹಡಗುಗಳ ಮೇಲ್ವಿಚಾರಣೆ ಮಾಡಲು ಮತ್ತು ರಕ್ಷಿಸಲು ಡ್ರೋನ್‌ಗಳು ಮತ್ತು ಫ್ರಿಗೇಟ್ ಅನ್ನು ನಿಯೋಜಿಸಿದೆ.

ಇಟಲಿ ಮತ್ತು ಸ್ಪೇನ್ ಸಂಭಾವ್ಯ ರಕ್ಷಣೆ ಮತ್ತು ಮಾನವೀಯ ನೆರವಿಗಾಗಿ ನೌಕಾ ಹಡಗುಗಳನ್ನು ಸನ್ನದ್ಧವಾಗಿ ಇರಿಸಿವೆ.

ಈ ತಿಂಗಳ ಆರಂಭದಲ್ಲಿ, ಫ್ಲೋಟಿಲ್ಲಾದ ಎರಡು ಹಡಗುಗಳನ್ನು ಡ್ರೋನ್‌ಗಳು ಗುರಿಯಾಗಿಸಿಕೊಂಡಿದ್ದವು ಎಂದು ವರದಿಯಾಗಿದೆ. ಈ ದಾಳಿಗಳಿಂದ ಉಂಟಾದ ವಿಳಂಬ ಮತ್ತು ಹವಾಮಾನ ವೈಪರೀತ್ಯಗಳ ಹೊರತಾಗಿಯೂ, ನಾವು ಗಾಝಾ ತಲುಪಿಯೇ ತೀರುತ್ತೇವೆ ಎಂದು ಸುಮುದ್ ತಂಡ ಶಪಥ ಮಾಡಿದೆ.

ಇಸ್ರೇಲಿ ಮಾಧ್ಯಮಗಳ ಪ್ರಕಾರ, ಇಸ್ರೇಲ್‌ನ ನೌಕಾಪಡೆಯ ಗುಂಪಾದ ಶಯೆತೆತ್ 13 ತಂಡವು ಈ ಹಡಗುಗಳನ್ನು ವಶಪಡಿಸಿಕೊಳ್ಳಲು ತಯಾರಿ ನಡೆಸುತ್ತಿದೆ ಮತ್ತು ಈಗಾಗಲೇ ತರಬೇತಿ ಅಭ್ಯಾಸಗಳನ್ನು ಮಾಡುತ್ತಿದೆ. ಅಧಿಕಾರಿಗಳು ಹೇಳುವಂತೆ, ಈ ಹಡಗುಗಳು ಗಾಝಾ ತೀರಕ್ಕೆ ತಲುಪದಂತೆ ತಡೆಯುವುದು ಇಸ್ರೇಲ್ ಗುರಿಯಾಗಿದೆ. ಆದರೆ, ಈ ಸಂದರ್ಭದಲ್ಲಿ ಫ್ಲೊಟಿಲ್ಲಾದ ಭಾಗವಾದವರಿಗೆ ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಇಸ್ರೇಲ್ ಯೋಜಿಸಿದೆ.

‘ಭಾರತೀಯ ಇಲಿಗಳು..’ ಎಂದು ಕೆನಡಾದಲ್ಲಿ ದ್ವೇಷಪೂರಿತ ಗೋಡೆ ಬರಹ: ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...