Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ 'ಸುಮುದ್ ಫ್ಲೋಟಿಲ್ಲಾ' ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

- Advertisement -
- Advertisement -

ಯುದ್ಧ ಪೀಡಿತ ಗಾಝಾದ ಜನತೆಗೆ ಮಾನವೀಯ ನೆರವು ಹೊತ್ತು, ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲು ಹೊರಟಿರುವ ಜಾಗತಿಕ ‘ಸುಮುದ್ ಫ್ಲೊಟಿಲ್ಲಾ’ ನೆರವು ಹಡಗುಗಳ ಗುಂಪು ತನ್ನ ಪ್ರಯಾಣದ ಅಂತಿಮ ಹಂತಕ್ಕೆ ತಲುಪಿದೆ ಎಂದು ಸೋಮವಾರ (ಸೆ.29) ವರದಿಯಾಗಿದೆ.

ಜಾಗತಿಕ ಸುಮುದ್ ಫ್ಲೊಟಿಲ್ಲಾ ಎನ್ನುವುದು ಇಸ್ರೇಲ್‌ ಗಾಝಾ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಭೇದಿಸುವ ಗುರಿಯನ್ನು ಹೊಂದಿರುವ ಒಂದು ಪ್ರಮುಖ ಅಂತಾರಾಷ್ಟ್ರೀಯ ಮಿಷನ್ ಆಗಿದೆ. ಈ ಫ್ಲೊಟಿಲ್ಲಾದಲ್ಲಿ 44 ಹಡಗುಗಳು ಇದ್ದು, ಇವು ಮಾನವೀಯ ನೆರವುಗಳಾದ ಆಹಾರ, ಔಷಧ ಮತ್ತು ಇತರ ಅಗತ್ಯ ವಸ್ತುಗಳನ್ನು ಒಯ್ಯುತ್ತಿವೆ. ಜೊತೆಗೆ, ವಿಶ್ವದ ವಿವಿಧ ಭಾಗಗಳ ನೂರಾರು ಪ್ರತಿನಿಧಿಗಳು ಈ ಮಿಷನ್‌ನ ಭಾಗವಾಗಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಪ್ರಸ್ತುತ ಗಾಝಾದಿಂದ ಸುಮಾರು 366 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿವೆ. ಆಯೋಜಕರು ಹೇಳುವಂತೆ, ಈ 44 ಹಡಗುಗಳ ಗುಂಪು ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ಸಮುದ್ರ ತೀರ ತಲುಪಲಿದೆ. ಅದಕ್ಕೂ ಮುನ್ನ ಜಲ ಪ್ರದೇಶದ ‘ಕಿತ್ತಳೆ ವಲಯ’ (ಆರೆಂಜ್ ಝೋನ್‌) ಪ್ರವೇಶಿಸಲಿದೆ. ಅಲ್ಲಿ ಇಸ್ರೇಲ್‌ನ ನೌಕಾಪಡೆ ಈ ಹಡಗುಗಳನ್ನು ತಡೆಯುವ ಸಾಧ್ಯತೆ ಇದೆ.

44 ಹಡಗುಗಳ ಗುಂಪಿನ ಭಾಗವಾದ ಜಾನಿ ಎಂ. ಎಂಬ ಹಡಗಿನ ಇಂಜಿನ್ ಕೋಣೆಯಲ್ಲಿ ಸೋಮವಾರ (ಸೆ.29) ಸೋರಿಕೆ ಕಂಡು ಬಂದಿದ್ದು, ಆ ಬಳಿಕ ಅದರ ಪ್ರಯಾಣ ಸ್ಥಗಿತಗೊಳಿಸಲಾಗಿದೆ.

ಆ ಹಡಗಿನಲ್ಲಿದ್ದ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಈ ಪೈಕಿ ಕೆಲವರನ್ನು ಬೇರೆ ಹಡಗುಗಳಿಗೆ ಹತ್ತಿಸಲಾಗಿದೆ. ಇನ್ನೂ ಕೆಲವರಿಗೆ ಬೇರೆ ಹಡಗಿನ ವ್ಯವಸ್ಥೆ ಮಾಡಲಾಗಿದೆ. ಉಳಿದವರನ್ನು ತೀರಕ್ಕೆ ಕರೆತರಲಾಗಿದೆ.

ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ತಲುಪುವ ಗುರಿಗೆ ಇದರಿಂದ ಅಡ್ಡಿಯೇನು ಇಲ್ಲ ಎಂದು ಸಮುದ್ ತಂಡ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿದೆ.

46 ದೇಶಗಳ ಪ್ರತಿನಿಧಿಗಳು ಈ ಸುಮುದ್ ಫ್ಲೊಟಿಲ್ಲಾ ತಂಡದಲ್ಲಿ ಇದ್ದಾರೆ. ಇದು ಕಳೆದ 18 ವರ್ಷಗಳಿಂದ ಗಾಝಾದ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಬೇಧಿಸುವ ಇದುವರೆಗಿನ ಅತಿದೊಡ್ಡ ಸಮುದ್ರ ಆಧಾರಿತ ಪ್ರಯತ್ನವಾಗಿದೆ. ಈ 44 ಹಡಗುಗಳ ಗುಂಪು 500ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯತ್ತಿದೆ. ಇವರಲ್ಲಿ ವೈದ್ಯರು, ವಿವಿಧ ದೇಶಗಳ ಸಂಸದರು, ಮಾನವ ಹಕ್ಕುಗಳ ಹೋರಾಟಗಾರರು ಮತ್ತು ಸ್ವೀಡನ್‌ನ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ರಂತಹ ಪ್ರಸಿದ್ಧ ಚಳವಳಿಗಾರರು ಇದ್ದಾರೆ.

ಈ ವರ್ಷದ ಆರಂಭದಲ್ಲಿ ಇಸ್ರೇಲಿ ಪಡೆಗಳು ಮದ್ಲೀನ್ ಹಡಗನ್ನು ತಡೆದ ಅದೇ ಜಲ ಪ್ರದೇಶವನ್ನು ಫ್ಲೋಟಿಲ್ಲಾ ಸಮೀಪಿಸುತ್ತಿದೆ ಎಂದು ಜರ್ಮನ್ ಹೋರಾಟಗಾರ್ತಿ ಯಾಸ್ಮಿನ್ ಅಕಾರ್ ದೃಢಪಡಿಸಿದ್ದಾರೆ.

“ನಾವು ಕೇವಲ ಮಾನವೀಯ ನೆರವು ನೀಡುತ್ತಿಲ್ಲ, ಗಾಝಾ ಜನತೆಯಲ್ಲಿ ಭರವಸೆ ಮೂಡಿಸುತ್ತಿದ್ದೇವೆ. ಅವರೊಂದಿಗೆ ಒಗ್ಗಟ್ಟು ಪ್ರದರ್ಶಿಸುತ್ತಿದ್ದೇವೆ. ಜಗತ್ತು ಪ್ಯಾಲೆಸ್ತೀನ್‌ನೊಂದಿಗೆ ಇದೆ ಎಂಬ ಬಲವಾದ ಸಂದೇಶವನ್ನು ಕಳುಹಿಸುತ್ತಿದ್ದೇವೆ” ಎಂದು ಗ್ರೀಸ್‌ನ ದ್ವೀಪ ಕ್ರೀಟ್ ಬಳಿ ಗ್ರೇಟಾ ಥನ್‌ಬರ್ಗ್ ಹೇಳಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಗಾಝಾಕ್ಕೆ ಹತ್ತಿರವಾಗುತ್ತಿವೆ. ಪ್ರತಿ ನಿಮಿಷವೂ ಅವು ಗಾಝಾದ ಜನರಿಗೆ ನ್ಯಾಯ ತಲುಪಿಸಲು ಮುಂದುವರಿಯುತ್ತಿವೆ ಎಂದು ಆಯೋಜಕರು ಹೇಳಿದ್ದಾರೆ. ಅವರ ವೆಬ್‌ಸೈಟ್‌ನಲ್ಲಿ ಒಂದು ಟ್ರ್ಯಾಕರ್ ಇದೆ, ಅದು ಈ ಹಡಗುಗಳು ಮೆಡಿಟರೇನಿಯನ್ ಸಮುದ್ರದಲ್ಲಿ ಮುಂದುವರಿಯುವುದನ್ನು ತೋರಿಸುತ್ತಿದೆ. ಇಡೀ ಜಗತ್ತಿನ ಗಮನ ಈಗ ಸುಮುದ್ ತಂಡ ಮೇಲಿದೆ.

ಸೆಪ್ಟೆಂಬರ್ 26 ಶುಕ್ರವಾರ ಸುಮುದ್ ತಂಡದಿಂದ ಮಾತನಾಡಿದ್ದ ಗ್ರೇಟಾ ಥನ್‌ಬರ್ಗ್, “ನಾನು ಇಸ್ರೇಲ್‌ಗೆ ಹೆದರುವುದಿಲ್ಲ, ಮಾನವೀಯತೆಯ ಎಲ್ಲಾ ಪ್ರಜ್ಞೆಯನ್ನು ಕಳೆದುಕೊಂಡಿರುವ ಜಗತ್ತಿಗೆ ಹೆದರುತ್ತೇನೆ” ಎಂದು ಹೇಳಿದ್ದರು.

ಫ್ಲೋಟಿಲ್ಲಾದ ಸಂಚಾರವು ಅಂತಾರಾಷ್ಟ್ರೀಯ ಗಮನ ಸೆಳೆದಿದೆ ಮತ್ತು ಪ್ರಾದೇಶಿಕ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಓಪನ್ ಸೋರ್ಸ್ ಟ್ರ್ಯಾಕಿಂಗ್ ಪ್ರಕಾರ, ಟರ್ಕಿಯು ಹಡಗುಗಳ ಮೇಲ್ವಿಚಾರಣೆ ಮಾಡಲು ಮತ್ತು ರಕ್ಷಿಸಲು ಡ್ರೋನ್‌ಗಳು ಮತ್ತು ಫ್ರಿಗೇಟ್ ಅನ್ನು ನಿಯೋಜಿಸಿದೆ.

ಇಟಲಿ ಮತ್ತು ಸ್ಪೇನ್ ಸಂಭಾವ್ಯ ರಕ್ಷಣೆ ಮತ್ತು ಮಾನವೀಯ ನೆರವಿಗಾಗಿ ನೌಕಾ ಹಡಗುಗಳನ್ನು ಸನ್ನದ್ಧವಾಗಿ ಇರಿಸಿವೆ.

ಈ ತಿಂಗಳ ಆರಂಭದಲ್ಲಿ, ಫ್ಲೋಟಿಲ್ಲಾದ ಎರಡು ಹಡಗುಗಳನ್ನು ಡ್ರೋನ್‌ಗಳು ಗುರಿಯಾಗಿಸಿಕೊಂಡಿದ್ದವು ಎಂದು ವರದಿಯಾಗಿದೆ. ಈ ದಾಳಿಗಳಿಂದ ಉಂಟಾದ ವಿಳಂಬ ಮತ್ತು ಹವಾಮಾನ ವೈಪರೀತ್ಯಗಳ ಹೊರತಾಗಿಯೂ, ನಾವು ಗಾಝಾ ತಲುಪಿಯೇ ತೀರುತ್ತೇವೆ ಎಂದು ಸುಮುದ್ ತಂಡ ಶಪಥ ಮಾಡಿದೆ.

ಇಸ್ರೇಲಿ ಮಾಧ್ಯಮಗಳ ಪ್ರಕಾರ, ಇಸ್ರೇಲ್‌ನ ನೌಕಾಪಡೆಯ ಗುಂಪಾದ ಶಯೆತೆತ್ 13 ತಂಡವು ಈ ಹಡಗುಗಳನ್ನು ವಶಪಡಿಸಿಕೊಳ್ಳಲು ತಯಾರಿ ನಡೆಸುತ್ತಿದೆ ಮತ್ತು ಈಗಾಗಲೇ ತರಬೇತಿ ಅಭ್ಯಾಸಗಳನ್ನು ಮಾಡುತ್ತಿದೆ. ಅಧಿಕಾರಿಗಳು ಹೇಳುವಂತೆ, ಈ ಹಡಗುಗಳು ಗಾಝಾ ತೀರಕ್ಕೆ ತಲುಪದಂತೆ ತಡೆಯುವುದು ಇಸ್ರೇಲ್ ಗುರಿಯಾಗಿದೆ. ಆದರೆ, ಈ ಸಂದರ್ಭದಲ್ಲಿ ಫ್ಲೊಟಿಲ್ಲಾದ ಭಾಗವಾದವರಿಗೆ ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಇಸ್ರೇಲ್ ಯೋಜಿಸಿದೆ.

‘ಭಾರತೀಯ ಇಲಿಗಳು..’ ಎಂದು ಕೆನಡಾದಲ್ಲಿ ದ್ವೇಷಪೂರಿತ ಗೋಡೆ ಬರಹ: ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...