Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ 'ಸುಮುದ್ ಫ್ಲೋಟಿಲ್ಲಾ' ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

- Advertisement -
- Advertisement -

ಯುದ್ಧ ಪೀಡಿತ ಗಾಝಾದ ಜನತೆಗೆ ಮಾನವೀಯ ನೆರವು ಹೊತ್ತು, ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲು ಹೊರಟಿರುವ ಜಾಗತಿಕ ‘ಸುಮುದ್ ಫ್ಲೊಟಿಲ್ಲಾ’ ನೆರವು ಹಡಗುಗಳ ಗುಂಪು ತನ್ನ ಪ್ರಯಾಣದ ಅಂತಿಮ ಹಂತಕ್ಕೆ ತಲುಪಿದೆ ಎಂದು ಸೋಮವಾರ (ಸೆ.29) ವರದಿಯಾಗಿದೆ.

ಜಾಗತಿಕ ಸುಮುದ್ ಫ್ಲೊಟಿಲ್ಲಾ ಎನ್ನುವುದು ಇಸ್ರೇಲ್‌ ಗಾಝಾ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಭೇದಿಸುವ ಗುರಿಯನ್ನು ಹೊಂದಿರುವ ಒಂದು ಪ್ರಮುಖ ಅಂತಾರಾಷ್ಟ್ರೀಯ ಮಿಷನ್ ಆಗಿದೆ. ಈ ಫ್ಲೊಟಿಲ್ಲಾದಲ್ಲಿ 44 ಹಡಗುಗಳು ಇದ್ದು, ಇವು ಮಾನವೀಯ ನೆರವುಗಳಾದ ಆಹಾರ, ಔಷಧ ಮತ್ತು ಇತರ ಅಗತ್ಯ ವಸ್ತುಗಳನ್ನು ಒಯ್ಯುತ್ತಿವೆ. ಜೊತೆಗೆ, ವಿಶ್ವದ ವಿವಿಧ ಭಾಗಗಳ ನೂರಾರು ಪ್ರತಿನಿಧಿಗಳು ಈ ಮಿಷನ್‌ನ ಭಾಗವಾಗಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಪ್ರಸ್ತುತ ಗಾಝಾದಿಂದ ಸುಮಾರು 366 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿವೆ. ಆಯೋಜಕರು ಹೇಳುವಂತೆ, ಈ 44 ಹಡಗುಗಳ ಗುಂಪು ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ಸಮುದ್ರ ತೀರ ತಲುಪಲಿದೆ. ಅದಕ್ಕೂ ಮುನ್ನ ಜಲ ಪ್ರದೇಶದ ‘ಕಿತ್ತಳೆ ವಲಯ’ (ಆರೆಂಜ್ ಝೋನ್‌) ಪ್ರವೇಶಿಸಲಿದೆ. ಅಲ್ಲಿ ಇಸ್ರೇಲ್‌ನ ನೌಕಾಪಡೆ ಈ ಹಡಗುಗಳನ್ನು ತಡೆಯುವ ಸಾಧ್ಯತೆ ಇದೆ.

44 ಹಡಗುಗಳ ಗುಂಪಿನ ಭಾಗವಾದ ಜಾನಿ ಎಂ. ಎಂಬ ಹಡಗಿನ ಇಂಜಿನ್ ಕೋಣೆಯಲ್ಲಿ ಸೋಮವಾರ (ಸೆ.29) ಸೋರಿಕೆ ಕಂಡು ಬಂದಿದ್ದು, ಆ ಬಳಿಕ ಅದರ ಪ್ರಯಾಣ ಸ್ಥಗಿತಗೊಳಿಸಲಾಗಿದೆ.

ಆ ಹಡಗಿನಲ್ಲಿದ್ದ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಈ ಪೈಕಿ ಕೆಲವರನ್ನು ಬೇರೆ ಹಡಗುಗಳಿಗೆ ಹತ್ತಿಸಲಾಗಿದೆ. ಇನ್ನೂ ಕೆಲವರಿಗೆ ಬೇರೆ ಹಡಗಿನ ವ್ಯವಸ್ಥೆ ಮಾಡಲಾಗಿದೆ. ಉಳಿದವರನ್ನು ತೀರಕ್ಕೆ ಕರೆತರಲಾಗಿದೆ.

ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ತಲುಪುವ ಗುರಿಗೆ ಇದರಿಂದ ಅಡ್ಡಿಯೇನು ಇಲ್ಲ ಎಂದು ಸಮುದ್ ತಂಡ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿದೆ.

46 ದೇಶಗಳ ಪ್ರತಿನಿಧಿಗಳು ಈ ಸುಮುದ್ ಫ್ಲೊಟಿಲ್ಲಾ ತಂಡದಲ್ಲಿ ಇದ್ದಾರೆ. ಇದು ಕಳೆದ 18 ವರ್ಷಗಳಿಂದ ಗಾಝಾದ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಬೇಧಿಸುವ ಇದುವರೆಗಿನ ಅತಿದೊಡ್ಡ ಸಮುದ್ರ ಆಧಾರಿತ ಪ್ರಯತ್ನವಾಗಿದೆ. ಈ 44 ಹಡಗುಗಳ ಗುಂಪು 500ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯತ್ತಿದೆ. ಇವರಲ್ಲಿ ವೈದ್ಯರು, ವಿವಿಧ ದೇಶಗಳ ಸಂಸದರು, ಮಾನವ ಹಕ್ಕುಗಳ ಹೋರಾಟಗಾರರು ಮತ್ತು ಸ್ವೀಡನ್‌ನ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ರಂತಹ ಪ್ರಸಿದ್ಧ ಚಳವಳಿಗಾರರು ಇದ್ದಾರೆ.

ಈ ವರ್ಷದ ಆರಂಭದಲ್ಲಿ ಇಸ್ರೇಲಿ ಪಡೆಗಳು ಮದ್ಲೀನ್ ಹಡಗನ್ನು ತಡೆದ ಅದೇ ಜಲ ಪ್ರದೇಶವನ್ನು ಫ್ಲೋಟಿಲ್ಲಾ ಸಮೀಪಿಸುತ್ತಿದೆ ಎಂದು ಜರ್ಮನ್ ಹೋರಾಟಗಾರ್ತಿ ಯಾಸ್ಮಿನ್ ಅಕಾರ್ ದೃಢಪಡಿಸಿದ್ದಾರೆ.

“ನಾವು ಕೇವಲ ಮಾನವೀಯ ನೆರವು ನೀಡುತ್ತಿಲ್ಲ, ಗಾಝಾ ಜನತೆಯಲ್ಲಿ ಭರವಸೆ ಮೂಡಿಸುತ್ತಿದ್ದೇವೆ. ಅವರೊಂದಿಗೆ ಒಗ್ಗಟ್ಟು ಪ್ರದರ್ಶಿಸುತ್ತಿದ್ದೇವೆ. ಜಗತ್ತು ಪ್ಯಾಲೆಸ್ತೀನ್‌ನೊಂದಿಗೆ ಇದೆ ಎಂಬ ಬಲವಾದ ಸಂದೇಶವನ್ನು ಕಳುಹಿಸುತ್ತಿದ್ದೇವೆ” ಎಂದು ಗ್ರೀಸ್‌ನ ದ್ವೀಪ ಕ್ರೀಟ್ ಬಳಿ ಗ್ರೇಟಾ ಥನ್‌ಬರ್ಗ್ ಹೇಳಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಗಾಝಾಕ್ಕೆ ಹತ್ತಿರವಾಗುತ್ತಿವೆ. ಪ್ರತಿ ನಿಮಿಷವೂ ಅವು ಗಾಝಾದ ಜನರಿಗೆ ನ್ಯಾಯ ತಲುಪಿಸಲು ಮುಂದುವರಿಯುತ್ತಿವೆ ಎಂದು ಆಯೋಜಕರು ಹೇಳಿದ್ದಾರೆ. ಅವರ ವೆಬ್‌ಸೈಟ್‌ನಲ್ಲಿ ಒಂದು ಟ್ರ್ಯಾಕರ್ ಇದೆ, ಅದು ಈ ಹಡಗುಗಳು ಮೆಡಿಟರೇನಿಯನ್ ಸಮುದ್ರದಲ್ಲಿ ಮುಂದುವರಿಯುವುದನ್ನು ತೋರಿಸುತ್ತಿದೆ. ಇಡೀ ಜಗತ್ತಿನ ಗಮನ ಈಗ ಸುಮುದ್ ತಂಡ ಮೇಲಿದೆ.

ಸೆಪ್ಟೆಂಬರ್ 26 ಶುಕ್ರವಾರ ಸುಮುದ್ ತಂಡದಿಂದ ಮಾತನಾಡಿದ್ದ ಗ್ರೇಟಾ ಥನ್‌ಬರ್ಗ್, “ನಾನು ಇಸ್ರೇಲ್‌ಗೆ ಹೆದರುವುದಿಲ್ಲ, ಮಾನವೀಯತೆಯ ಎಲ್ಲಾ ಪ್ರಜ್ಞೆಯನ್ನು ಕಳೆದುಕೊಂಡಿರುವ ಜಗತ್ತಿಗೆ ಹೆದರುತ್ತೇನೆ” ಎಂದು ಹೇಳಿದ್ದರು.

ಫ್ಲೋಟಿಲ್ಲಾದ ಸಂಚಾರವು ಅಂತಾರಾಷ್ಟ್ರೀಯ ಗಮನ ಸೆಳೆದಿದೆ ಮತ್ತು ಪ್ರಾದೇಶಿಕ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಓಪನ್ ಸೋರ್ಸ್ ಟ್ರ್ಯಾಕಿಂಗ್ ಪ್ರಕಾರ, ಟರ್ಕಿಯು ಹಡಗುಗಳ ಮೇಲ್ವಿಚಾರಣೆ ಮಾಡಲು ಮತ್ತು ರಕ್ಷಿಸಲು ಡ್ರೋನ್‌ಗಳು ಮತ್ತು ಫ್ರಿಗೇಟ್ ಅನ್ನು ನಿಯೋಜಿಸಿದೆ.

ಇಟಲಿ ಮತ್ತು ಸ್ಪೇನ್ ಸಂಭಾವ್ಯ ರಕ್ಷಣೆ ಮತ್ತು ಮಾನವೀಯ ನೆರವಿಗಾಗಿ ನೌಕಾ ಹಡಗುಗಳನ್ನು ಸನ್ನದ್ಧವಾಗಿ ಇರಿಸಿವೆ.

ಈ ತಿಂಗಳ ಆರಂಭದಲ್ಲಿ, ಫ್ಲೋಟಿಲ್ಲಾದ ಎರಡು ಹಡಗುಗಳನ್ನು ಡ್ರೋನ್‌ಗಳು ಗುರಿಯಾಗಿಸಿಕೊಂಡಿದ್ದವು ಎಂದು ವರದಿಯಾಗಿದೆ. ಈ ದಾಳಿಗಳಿಂದ ಉಂಟಾದ ವಿಳಂಬ ಮತ್ತು ಹವಾಮಾನ ವೈಪರೀತ್ಯಗಳ ಹೊರತಾಗಿಯೂ, ನಾವು ಗಾಝಾ ತಲುಪಿಯೇ ತೀರುತ್ತೇವೆ ಎಂದು ಸುಮುದ್ ತಂಡ ಶಪಥ ಮಾಡಿದೆ.

ಇಸ್ರೇಲಿ ಮಾಧ್ಯಮಗಳ ಪ್ರಕಾರ, ಇಸ್ರೇಲ್‌ನ ನೌಕಾಪಡೆಯ ಗುಂಪಾದ ಶಯೆತೆತ್ 13 ತಂಡವು ಈ ಹಡಗುಗಳನ್ನು ವಶಪಡಿಸಿಕೊಳ್ಳಲು ತಯಾರಿ ನಡೆಸುತ್ತಿದೆ ಮತ್ತು ಈಗಾಗಲೇ ತರಬೇತಿ ಅಭ್ಯಾಸಗಳನ್ನು ಮಾಡುತ್ತಿದೆ. ಅಧಿಕಾರಿಗಳು ಹೇಳುವಂತೆ, ಈ ಹಡಗುಗಳು ಗಾಝಾ ತೀರಕ್ಕೆ ತಲುಪದಂತೆ ತಡೆಯುವುದು ಇಸ್ರೇಲ್ ಗುರಿಯಾಗಿದೆ. ಆದರೆ, ಈ ಸಂದರ್ಭದಲ್ಲಿ ಫ್ಲೊಟಿಲ್ಲಾದ ಭಾಗವಾದವರಿಗೆ ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಇಸ್ರೇಲ್ ಯೋಜಿಸಿದೆ.

‘ಭಾರತೀಯ ಇಲಿಗಳು..’ ಎಂದು ಕೆನಡಾದಲ್ಲಿ ದ್ವೇಷಪೂರಿತ ಗೋಡೆ ಬರಹ: ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...