Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ 'ಸುಮುದ್ ಫ್ಲೋಟಿಲ್ಲಾ' ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

- Advertisement -
- Advertisement -

ಯುದ್ಧ ಪೀಡಿತ ಗಾಝಾದ ಜನತೆಗೆ ಮಾನವೀಯ ನೆರವು ಹೊತ್ತು, ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲು ಹೊರಟಿರುವ ಜಾಗತಿಕ ‘ಸುಮುದ್ ಫ್ಲೊಟಿಲ್ಲಾ’ ನೆರವು ಹಡಗುಗಳ ಗುಂಪು ತನ್ನ ಪ್ರಯಾಣದ ಅಂತಿಮ ಹಂತಕ್ಕೆ ತಲುಪಿದೆ ಎಂದು ಸೋಮವಾರ (ಸೆ.29) ವರದಿಯಾಗಿದೆ.

ಜಾಗತಿಕ ಸುಮುದ್ ಫ್ಲೊಟಿಲ್ಲಾ ಎನ್ನುವುದು ಇಸ್ರೇಲ್‌ ಗಾಝಾ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಭೇದಿಸುವ ಗುರಿಯನ್ನು ಹೊಂದಿರುವ ಒಂದು ಪ್ರಮುಖ ಅಂತಾರಾಷ್ಟ್ರೀಯ ಮಿಷನ್ ಆಗಿದೆ. ಈ ಫ್ಲೊಟಿಲ್ಲಾದಲ್ಲಿ 44 ಹಡಗುಗಳು ಇದ್ದು, ಇವು ಮಾನವೀಯ ನೆರವುಗಳಾದ ಆಹಾರ, ಔಷಧ ಮತ್ತು ಇತರ ಅಗತ್ಯ ವಸ್ತುಗಳನ್ನು ಒಯ್ಯುತ್ತಿವೆ. ಜೊತೆಗೆ, ವಿಶ್ವದ ವಿವಿಧ ಭಾಗಗಳ ನೂರಾರು ಪ್ರತಿನಿಧಿಗಳು ಈ ಮಿಷನ್‌ನ ಭಾಗವಾಗಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಪ್ರಸ್ತುತ ಗಾಝಾದಿಂದ ಸುಮಾರು 366 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿವೆ. ಆಯೋಜಕರು ಹೇಳುವಂತೆ, ಈ 44 ಹಡಗುಗಳ ಗುಂಪು ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ಸಮುದ್ರ ತೀರ ತಲುಪಲಿದೆ. ಅದಕ್ಕೂ ಮುನ್ನ ಜಲ ಪ್ರದೇಶದ ‘ಕಿತ್ತಳೆ ವಲಯ’ (ಆರೆಂಜ್ ಝೋನ್‌) ಪ್ರವೇಶಿಸಲಿದೆ. ಅಲ್ಲಿ ಇಸ್ರೇಲ್‌ನ ನೌಕಾಪಡೆ ಈ ಹಡಗುಗಳನ್ನು ತಡೆಯುವ ಸಾಧ್ಯತೆ ಇದೆ.

44 ಹಡಗುಗಳ ಗುಂಪಿನ ಭಾಗವಾದ ಜಾನಿ ಎಂ. ಎಂಬ ಹಡಗಿನ ಇಂಜಿನ್ ಕೋಣೆಯಲ್ಲಿ ಸೋಮವಾರ (ಸೆ.29) ಸೋರಿಕೆ ಕಂಡು ಬಂದಿದ್ದು, ಆ ಬಳಿಕ ಅದರ ಪ್ರಯಾಣ ಸ್ಥಗಿತಗೊಳಿಸಲಾಗಿದೆ.

ಆ ಹಡಗಿನಲ್ಲಿದ್ದ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಈ ಪೈಕಿ ಕೆಲವರನ್ನು ಬೇರೆ ಹಡಗುಗಳಿಗೆ ಹತ್ತಿಸಲಾಗಿದೆ. ಇನ್ನೂ ಕೆಲವರಿಗೆ ಬೇರೆ ಹಡಗಿನ ವ್ಯವಸ್ಥೆ ಮಾಡಲಾಗಿದೆ. ಉಳಿದವರನ್ನು ತೀರಕ್ಕೆ ಕರೆತರಲಾಗಿದೆ.

ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ತಲುಪುವ ಗುರಿಗೆ ಇದರಿಂದ ಅಡ್ಡಿಯೇನು ಇಲ್ಲ ಎಂದು ಸಮುದ್ ತಂಡ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿದೆ.

46 ದೇಶಗಳ ಪ್ರತಿನಿಧಿಗಳು ಈ ಸುಮುದ್ ಫ್ಲೊಟಿಲ್ಲಾ ತಂಡದಲ್ಲಿ ಇದ್ದಾರೆ. ಇದು ಕಳೆದ 18 ವರ್ಷಗಳಿಂದ ಗಾಝಾದ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಬೇಧಿಸುವ ಇದುವರೆಗಿನ ಅತಿದೊಡ್ಡ ಸಮುದ್ರ ಆಧಾರಿತ ಪ್ರಯತ್ನವಾಗಿದೆ. ಈ 44 ಹಡಗುಗಳ ಗುಂಪು 500ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯತ್ತಿದೆ. ಇವರಲ್ಲಿ ವೈದ್ಯರು, ವಿವಿಧ ದೇಶಗಳ ಸಂಸದರು, ಮಾನವ ಹಕ್ಕುಗಳ ಹೋರಾಟಗಾರರು ಮತ್ತು ಸ್ವೀಡನ್‌ನ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ರಂತಹ ಪ್ರಸಿದ್ಧ ಚಳವಳಿಗಾರರು ಇದ್ದಾರೆ.

ಈ ವರ್ಷದ ಆರಂಭದಲ್ಲಿ ಇಸ್ರೇಲಿ ಪಡೆಗಳು ಮದ್ಲೀನ್ ಹಡಗನ್ನು ತಡೆದ ಅದೇ ಜಲ ಪ್ರದೇಶವನ್ನು ಫ್ಲೋಟಿಲ್ಲಾ ಸಮೀಪಿಸುತ್ತಿದೆ ಎಂದು ಜರ್ಮನ್ ಹೋರಾಟಗಾರ್ತಿ ಯಾಸ್ಮಿನ್ ಅಕಾರ್ ದೃಢಪಡಿಸಿದ್ದಾರೆ.

“ನಾವು ಕೇವಲ ಮಾನವೀಯ ನೆರವು ನೀಡುತ್ತಿಲ್ಲ, ಗಾಝಾ ಜನತೆಯಲ್ಲಿ ಭರವಸೆ ಮೂಡಿಸುತ್ತಿದ್ದೇವೆ. ಅವರೊಂದಿಗೆ ಒಗ್ಗಟ್ಟು ಪ್ರದರ್ಶಿಸುತ್ತಿದ್ದೇವೆ. ಜಗತ್ತು ಪ್ಯಾಲೆಸ್ತೀನ್‌ನೊಂದಿಗೆ ಇದೆ ಎಂಬ ಬಲವಾದ ಸಂದೇಶವನ್ನು ಕಳುಹಿಸುತ್ತಿದ್ದೇವೆ” ಎಂದು ಗ್ರೀಸ್‌ನ ದ್ವೀಪ ಕ್ರೀಟ್ ಬಳಿ ಗ್ರೇಟಾ ಥನ್‌ಬರ್ಗ್ ಹೇಳಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಗಾಝಾಕ್ಕೆ ಹತ್ತಿರವಾಗುತ್ತಿವೆ. ಪ್ರತಿ ನಿಮಿಷವೂ ಅವು ಗಾಝಾದ ಜನರಿಗೆ ನ್ಯಾಯ ತಲುಪಿಸಲು ಮುಂದುವರಿಯುತ್ತಿವೆ ಎಂದು ಆಯೋಜಕರು ಹೇಳಿದ್ದಾರೆ. ಅವರ ವೆಬ್‌ಸೈಟ್‌ನಲ್ಲಿ ಒಂದು ಟ್ರ್ಯಾಕರ್ ಇದೆ, ಅದು ಈ ಹಡಗುಗಳು ಮೆಡಿಟರೇನಿಯನ್ ಸಮುದ್ರದಲ್ಲಿ ಮುಂದುವರಿಯುವುದನ್ನು ತೋರಿಸುತ್ತಿದೆ. ಇಡೀ ಜಗತ್ತಿನ ಗಮನ ಈಗ ಸುಮುದ್ ತಂಡ ಮೇಲಿದೆ.

ಸೆಪ್ಟೆಂಬರ್ 26 ಶುಕ್ರವಾರ ಸುಮುದ್ ತಂಡದಿಂದ ಮಾತನಾಡಿದ್ದ ಗ್ರೇಟಾ ಥನ್‌ಬರ್ಗ್, “ನಾನು ಇಸ್ರೇಲ್‌ಗೆ ಹೆದರುವುದಿಲ್ಲ, ಮಾನವೀಯತೆಯ ಎಲ್ಲಾ ಪ್ರಜ್ಞೆಯನ್ನು ಕಳೆದುಕೊಂಡಿರುವ ಜಗತ್ತಿಗೆ ಹೆದರುತ್ತೇನೆ” ಎಂದು ಹೇಳಿದ್ದರು.

ಫ್ಲೋಟಿಲ್ಲಾದ ಸಂಚಾರವು ಅಂತಾರಾಷ್ಟ್ರೀಯ ಗಮನ ಸೆಳೆದಿದೆ ಮತ್ತು ಪ್ರಾದೇಶಿಕ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಓಪನ್ ಸೋರ್ಸ್ ಟ್ರ್ಯಾಕಿಂಗ್ ಪ್ರಕಾರ, ಟರ್ಕಿಯು ಹಡಗುಗಳ ಮೇಲ್ವಿಚಾರಣೆ ಮಾಡಲು ಮತ್ತು ರಕ್ಷಿಸಲು ಡ್ರೋನ್‌ಗಳು ಮತ್ತು ಫ್ರಿಗೇಟ್ ಅನ್ನು ನಿಯೋಜಿಸಿದೆ.

ಇಟಲಿ ಮತ್ತು ಸ್ಪೇನ್ ಸಂಭಾವ್ಯ ರಕ್ಷಣೆ ಮತ್ತು ಮಾನವೀಯ ನೆರವಿಗಾಗಿ ನೌಕಾ ಹಡಗುಗಳನ್ನು ಸನ್ನದ್ಧವಾಗಿ ಇರಿಸಿವೆ.

ಈ ತಿಂಗಳ ಆರಂಭದಲ್ಲಿ, ಫ್ಲೋಟಿಲ್ಲಾದ ಎರಡು ಹಡಗುಗಳನ್ನು ಡ್ರೋನ್‌ಗಳು ಗುರಿಯಾಗಿಸಿಕೊಂಡಿದ್ದವು ಎಂದು ವರದಿಯಾಗಿದೆ. ಈ ದಾಳಿಗಳಿಂದ ಉಂಟಾದ ವಿಳಂಬ ಮತ್ತು ಹವಾಮಾನ ವೈಪರೀತ್ಯಗಳ ಹೊರತಾಗಿಯೂ, ನಾವು ಗಾಝಾ ತಲುಪಿಯೇ ತೀರುತ್ತೇವೆ ಎಂದು ಸುಮುದ್ ತಂಡ ಶಪಥ ಮಾಡಿದೆ.

ಇಸ್ರೇಲಿ ಮಾಧ್ಯಮಗಳ ಪ್ರಕಾರ, ಇಸ್ರೇಲ್‌ನ ನೌಕಾಪಡೆಯ ಗುಂಪಾದ ಶಯೆತೆತ್ 13 ತಂಡವು ಈ ಹಡಗುಗಳನ್ನು ವಶಪಡಿಸಿಕೊಳ್ಳಲು ತಯಾರಿ ನಡೆಸುತ್ತಿದೆ ಮತ್ತು ಈಗಾಗಲೇ ತರಬೇತಿ ಅಭ್ಯಾಸಗಳನ್ನು ಮಾಡುತ್ತಿದೆ. ಅಧಿಕಾರಿಗಳು ಹೇಳುವಂತೆ, ಈ ಹಡಗುಗಳು ಗಾಝಾ ತೀರಕ್ಕೆ ತಲುಪದಂತೆ ತಡೆಯುವುದು ಇಸ್ರೇಲ್ ಗುರಿಯಾಗಿದೆ. ಆದರೆ, ಈ ಸಂದರ್ಭದಲ್ಲಿ ಫ್ಲೊಟಿಲ್ಲಾದ ಭಾಗವಾದವರಿಗೆ ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಇಸ್ರೇಲ್ ಯೋಜಿಸಿದೆ.

‘ಭಾರತೀಯ ಇಲಿಗಳು..’ ಎಂದು ಕೆನಡಾದಲ್ಲಿ ದ್ವೇಷಪೂರಿತ ಗೋಡೆ ಬರಹ: ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...