Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ 'ಸುಮುದ್ ಫ್ಲೋಟಿಲ್ಲಾ' ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

- Advertisement -
- Advertisement -

ಯುದ್ಧ ಪೀಡಿತ ಗಾಝಾದ ಜನತೆಗೆ ಮಾನವೀಯ ನೆರವು ಹೊತ್ತು, ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲು ಹೊರಟಿರುವ ಜಾಗತಿಕ ‘ಸುಮುದ್ ಫ್ಲೊಟಿಲ್ಲಾ’ ನೆರವು ಹಡಗುಗಳ ಗುಂಪು ತನ್ನ ಪ್ರಯಾಣದ ಅಂತಿಮ ಹಂತಕ್ಕೆ ತಲುಪಿದೆ ಎಂದು ಸೋಮವಾರ (ಸೆ.29) ವರದಿಯಾಗಿದೆ.

ಜಾಗತಿಕ ಸುಮುದ್ ಫ್ಲೊಟಿಲ್ಲಾ ಎನ್ನುವುದು ಇಸ್ರೇಲ್‌ ಗಾಝಾ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಭೇದಿಸುವ ಗುರಿಯನ್ನು ಹೊಂದಿರುವ ಒಂದು ಪ್ರಮುಖ ಅಂತಾರಾಷ್ಟ್ರೀಯ ಮಿಷನ್ ಆಗಿದೆ. ಈ ಫ್ಲೊಟಿಲ್ಲಾದಲ್ಲಿ 44 ಹಡಗುಗಳು ಇದ್ದು, ಇವು ಮಾನವೀಯ ನೆರವುಗಳಾದ ಆಹಾರ, ಔಷಧ ಮತ್ತು ಇತರ ಅಗತ್ಯ ವಸ್ತುಗಳನ್ನು ಒಯ್ಯುತ್ತಿವೆ. ಜೊತೆಗೆ, ವಿಶ್ವದ ವಿವಿಧ ಭಾಗಗಳ ನೂರಾರು ಪ್ರತಿನಿಧಿಗಳು ಈ ಮಿಷನ್‌ನ ಭಾಗವಾಗಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಪ್ರಸ್ತುತ ಗಾಝಾದಿಂದ ಸುಮಾರು 366 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿವೆ. ಆಯೋಜಕರು ಹೇಳುವಂತೆ, ಈ 44 ಹಡಗುಗಳ ಗುಂಪು ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ಸಮುದ್ರ ತೀರ ತಲುಪಲಿದೆ. ಅದಕ್ಕೂ ಮುನ್ನ ಜಲ ಪ್ರದೇಶದ ‘ಕಿತ್ತಳೆ ವಲಯ’ (ಆರೆಂಜ್ ಝೋನ್‌) ಪ್ರವೇಶಿಸಲಿದೆ. ಅಲ್ಲಿ ಇಸ್ರೇಲ್‌ನ ನೌಕಾಪಡೆ ಈ ಹಡಗುಗಳನ್ನು ತಡೆಯುವ ಸಾಧ್ಯತೆ ಇದೆ.

44 ಹಡಗುಗಳ ಗುಂಪಿನ ಭಾಗವಾದ ಜಾನಿ ಎಂ. ಎಂಬ ಹಡಗಿನ ಇಂಜಿನ್ ಕೋಣೆಯಲ್ಲಿ ಸೋಮವಾರ (ಸೆ.29) ಸೋರಿಕೆ ಕಂಡು ಬಂದಿದ್ದು, ಆ ಬಳಿಕ ಅದರ ಪ್ರಯಾಣ ಸ್ಥಗಿತಗೊಳಿಸಲಾಗಿದೆ.

ಆ ಹಡಗಿನಲ್ಲಿದ್ದ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಈ ಪೈಕಿ ಕೆಲವರನ್ನು ಬೇರೆ ಹಡಗುಗಳಿಗೆ ಹತ್ತಿಸಲಾಗಿದೆ. ಇನ್ನೂ ಕೆಲವರಿಗೆ ಬೇರೆ ಹಡಗಿನ ವ್ಯವಸ್ಥೆ ಮಾಡಲಾಗಿದೆ. ಉಳಿದವರನ್ನು ತೀರಕ್ಕೆ ಕರೆತರಲಾಗಿದೆ.

ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ತಲುಪುವ ಗುರಿಗೆ ಇದರಿಂದ ಅಡ್ಡಿಯೇನು ಇಲ್ಲ ಎಂದು ಸಮುದ್ ತಂಡ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿದೆ.

46 ದೇಶಗಳ ಪ್ರತಿನಿಧಿಗಳು ಈ ಸುಮುದ್ ಫ್ಲೊಟಿಲ್ಲಾ ತಂಡದಲ್ಲಿ ಇದ್ದಾರೆ. ಇದು ಕಳೆದ 18 ವರ್ಷಗಳಿಂದ ಗಾಝಾದ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಬೇಧಿಸುವ ಇದುವರೆಗಿನ ಅತಿದೊಡ್ಡ ಸಮುದ್ರ ಆಧಾರಿತ ಪ್ರಯತ್ನವಾಗಿದೆ. ಈ 44 ಹಡಗುಗಳ ಗುಂಪು 500ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯತ್ತಿದೆ. ಇವರಲ್ಲಿ ವೈದ್ಯರು, ವಿವಿಧ ದೇಶಗಳ ಸಂಸದರು, ಮಾನವ ಹಕ್ಕುಗಳ ಹೋರಾಟಗಾರರು ಮತ್ತು ಸ್ವೀಡನ್‌ನ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ರಂತಹ ಪ್ರಸಿದ್ಧ ಚಳವಳಿಗಾರರು ಇದ್ದಾರೆ.

ಈ ವರ್ಷದ ಆರಂಭದಲ್ಲಿ ಇಸ್ರೇಲಿ ಪಡೆಗಳು ಮದ್ಲೀನ್ ಹಡಗನ್ನು ತಡೆದ ಅದೇ ಜಲ ಪ್ರದೇಶವನ್ನು ಫ್ಲೋಟಿಲ್ಲಾ ಸಮೀಪಿಸುತ್ತಿದೆ ಎಂದು ಜರ್ಮನ್ ಹೋರಾಟಗಾರ್ತಿ ಯಾಸ್ಮಿನ್ ಅಕಾರ್ ದೃಢಪಡಿಸಿದ್ದಾರೆ.

“ನಾವು ಕೇವಲ ಮಾನವೀಯ ನೆರವು ನೀಡುತ್ತಿಲ್ಲ, ಗಾಝಾ ಜನತೆಯಲ್ಲಿ ಭರವಸೆ ಮೂಡಿಸುತ್ತಿದ್ದೇವೆ. ಅವರೊಂದಿಗೆ ಒಗ್ಗಟ್ಟು ಪ್ರದರ್ಶಿಸುತ್ತಿದ್ದೇವೆ. ಜಗತ್ತು ಪ್ಯಾಲೆಸ್ತೀನ್‌ನೊಂದಿಗೆ ಇದೆ ಎಂಬ ಬಲವಾದ ಸಂದೇಶವನ್ನು ಕಳುಹಿಸುತ್ತಿದ್ದೇವೆ” ಎಂದು ಗ್ರೀಸ್‌ನ ದ್ವೀಪ ಕ್ರೀಟ್ ಬಳಿ ಗ್ರೇಟಾ ಥನ್‌ಬರ್ಗ್ ಹೇಳಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಗಾಝಾಕ್ಕೆ ಹತ್ತಿರವಾಗುತ್ತಿವೆ. ಪ್ರತಿ ನಿಮಿಷವೂ ಅವು ಗಾಝಾದ ಜನರಿಗೆ ನ್ಯಾಯ ತಲುಪಿಸಲು ಮುಂದುವರಿಯುತ್ತಿವೆ ಎಂದು ಆಯೋಜಕರು ಹೇಳಿದ್ದಾರೆ. ಅವರ ವೆಬ್‌ಸೈಟ್‌ನಲ್ಲಿ ಒಂದು ಟ್ರ್ಯಾಕರ್ ಇದೆ, ಅದು ಈ ಹಡಗುಗಳು ಮೆಡಿಟರೇನಿಯನ್ ಸಮುದ್ರದಲ್ಲಿ ಮುಂದುವರಿಯುವುದನ್ನು ತೋರಿಸುತ್ತಿದೆ. ಇಡೀ ಜಗತ್ತಿನ ಗಮನ ಈಗ ಸುಮುದ್ ತಂಡ ಮೇಲಿದೆ.

ಸೆಪ್ಟೆಂಬರ್ 26 ಶುಕ್ರವಾರ ಸುಮುದ್ ತಂಡದಿಂದ ಮಾತನಾಡಿದ್ದ ಗ್ರೇಟಾ ಥನ್‌ಬರ್ಗ್, “ನಾನು ಇಸ್ರೇಲ್‌ಗೆ ಹೆದರುವುದಿಲ್ಲ, ಮಾನವೀಯತೆಯ ಎಲ್ಲಾ ಪ್ರಜ್ಞೆಯನ್ನು ಕಳೆದುಕೊಂಡಿರುವ ಜಗತ್ತಿಗೆ ಹೆದರುತ್ತೇನೆ” ಎಂದು ಹೇಳಿದ್ದರು.

ಫ್ಲೋಟಿಲ್ಲಾದ ಸಂಚಾರವು ಅಂತಾರಾಷ್ಟ್ರೀಯ ಗಮನ ಸೆಳೆದಿದೆ ಮತ್ತು ಪ್ರಾದೇಶಿಕ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಓಪನ್ ಸೋರ್ಸ್ ಟ್ರ್ಯಾಕಿಂಗ್ ಪ್ರಕಾರ, ಟರ್ಕಿಯು ಹಡಗುಗಳ ಮೇಲ್ವಿಚಾರಣೆ ಮಾಡಲು ಮತ್ತು ರಕ್ಷಿಸಲು ಡ್ರೋನ್‌ಗಳು ಮತ್ತು ಫ್ರಿಗೇಟ್ ಅನ್ನು ನಿಯೋಜಿಸಿದೆ.

ಇಟಲಿ ಮತ್ತು ಸ್ಪೇನ್ ಸಂಭಾವ್ಯ ರಕ್ಷಣೆ ಮತ್ತು ಮಾನವೀಯ ನೆರವಿಗಾಗಿ ನೌಕಾ ಹಡಗುಗಳನ್ನು ಸನ್ನದ್ಧವಾಗಿ ಇರಿಸಿವೆ.

ಈ ತಿಂಗಳ ಆರಂಭದಲ್ಲಿ, ಫ್ಲೋಟಿಲ್ಲಾದ ಎರಡು ಹಡಗುಗಳನ್ನು ಡ್ರೋನ್‌ಗಳು ಗುರಿಯಾಗಿಸಿಕೊಂಡಿದ್ದವು ಎಂದು ವರದಿಯಾಗಿದೆ. ಈ ದಾಳಿಗಳಿಂದ ಉಂಟಾದ ವಿಳಂಬ ಮತ್ತು ಹವಾಮಾನ ವೈಪರೀತ್ಯಗಳ ಹೊರತಾಗಿಯೂ, ನಾವು ಗಾಝಾ ತಲುಪಿಯೇ ತೀರುತ್ತೇವೆ ಎಂದು ಸುಮುದ್ ತಂಡ ಶಪಥ ಮಾಡಿದೆ.

ಇಸ್ರೇಲಿ ಮಾಧ್ಯಮಗಳ ಪ್ರಕಾರ, ಇಸ್ರೇಲ್‌ನ ನೌಕಾಪಡೆಯ ಗುಂಪಾದ ಶಯೆತೆತ್ 13 ತಂಡವು ಈ ಹಡಗುಗಳನ್ನು ವಶಪಡಿಸಿಕೊಳ್ಳಲು ತಯಾರಿ ನಡೆಸುತ್ತಿದೆ ಮತ್ತು ಈಗಾಗಲೇ ತರಬೇತಿ ಅಭ್ಯಾಸಗಳನ್ನು ಮಾಡುತ್ತಿದೆ. ಅಧಿಕಾರಿಗಳು ಹೇಳುವಂತೆ, ಈ ಹಡಗುಗಳು ಗಾಝಾ ತೀರಕ್ಕೆ ತಲುಪದಂತೆ ತಡೆಯುವುದು ಇಸ್ರೇಲ್ ಗುರಿಯಾಗಿದೆ. ಆದರೆ, ಈ ಸಂದರ್ಭದಲ್ಲಿ ಫ್ಲೊಟಿಲ್ಲಾದ ಭಾಗವಾದವರಿಗೆ ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಇಸ್ರೇಲ್ ಯೋಜಿಸಿದೆ.

‘ಭಾರತೀಯ ಇಲಿಗಳು..’ ಎಂದು ಕೆನಡಾದಲ್ಲಿ ದ್ವೇಷಪೂರಿತ ಗೋಡೆ ಬರಹ: ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...