Homeಅಂತರಾಷ್ಟ್ರೀಯನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ 'ಸುಮುದ್ ಫ್ಲೋಟಿಲ್ಲಾ' ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

- Advertisement -
- Advertisement -

ಯುದ್ಧ ಪೀಡಿತ ಗಾಝಾದ ಜನತೆಗೆ ಮಾನವೀಯ ನೆರವು ಹೊತ್ತು, ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲು ಹೊರಟಿರುವ ಜಾಗತಿಕ ‘ಸುಮುದ್ ಫ್ಲೊಟಿಲ್ಲಾ’ ನೆರವು ಹಡಗುಗಳ ಗುಂಪು ತನ್ನ ಪ್ರಯಾಣದ ಅಂತಿಮ ಹಂತಕ್ಕೆ ತಲುಪಿದೆ ಎಂದು ಸೋಮವಾರ (ಸೆ.29) ವರದಿಯಾಗಿದೆ.

ಜಾಗತಿಕ ಸುಮುದ್ ಫ್ಲೊಟಿಲ್ಲಾ ಎನ್ನುವುದು ಇಸ್ರೇಲ್‌ ಗಾಝಾ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಭೇದಿಸುವ ಗುರಿಯನ್ನು ಹೊಂದಿರುವ ಒಂದು ಪ್ರಮುಖ ಅಂತಾರಾಷ್ಟ್ರೀಯ ಮಿಷನ್ ಆಗಿದೆ. ಈ ಫ್ಲೊಟಿಲ್ಲಾದಲ್ಲಿ 44 ಹಡಗುಗಳು ಇದ್ದು, ಇವು ಮಾನವೀಯ ನೆರವುಗಳಾದ ಆಹಾರ, ಔಷಧ ಮತ್ತು ಇತರ ಅಗತ್ಯ ವಸ್ತುಗಳನ್ನು ಒಯ್ಯುತ್ತಿವೆ. ಜೊತೆಗೆ, ವಿಶ್ವದ ವಿವಿಧ ಭಾಗಗಳ ನೂರಾರು ಪ್ರತಿನಿಧಿಗಳು ಈ ಮಿಷನ್‌ನ ಭಾಗವಾಗಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಪ್ರಸ್ತುತ ಗಾಝಾದಿಂದ ಸುಮಾರು 366 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿವೆ. ಆಯೋಜಕರು ಹೇಳುವಂತೆ, ಈ 44 ಹಡಗುಗಳ ಗುಂಪು ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ಸಮುದ್ರ ತೀರ ತಲುಪಲಿದೆ. ಅದಕ್ಕೂ ಮುನ್ನ ಜಲ ಪ್ರದೇಶದ ‘ಕಿತ್ತಳೆ ವಲಯ’ (ಆರೆಂಜ್ ಝೋನ್‌) ಪ್ರವೇಶಿಸಲಿದೆ. ಅಲ್ಲಿ ಇಸ್ರೇಲ್‌ನ ನೌಕಾಪಡೆ ಈ ಹಡಗುಗಳನ್ನು ತಡೆಯುವ ಸಾಧ್ಯತೆ ಇದೆ.

44 ಹಡಗುಗಳ ಗುಂಪಿನ ಭಾಗವಾದ ಜಾನಿ ಎಂ. ಎಂಬ ಹಡಗಿನ ಇಂಜಿನ್ ಕೋಣೆಯಲ್ಲಿ ಸೋಮವಾರ (ಸೆ.29) ಸೋರಿಕೆ ಕಂಡು ಬಂದಿದ್ದು, ಆ ಬಳಿಕ ಅದರ ಪ್ರಯಾಣ ಸ್ಥಗಿತಗೊಳಿಸಲಾಗಿದೆ.

ಆ ಹಡಗಿನಲ್ಲಿದ್ದ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಈ ಪೈಕಿ ಕೆಲವರನ್ನು ಬೇರೆ ಹಡಗುಗಳಿಗೆ ಹತ್ತಿಸಲಾಗಿದೆ. ಇನ್ನೂ ಕೆಲವರಿಗೆ ಬೇರೆ ಹಡಗಿನ ವ್ಯವಸ್ಥೆ ಮಾಡಲಾಗಿದೆ. ಉಳಿದವರನ್ನು ತೀರಕ್ಕೆ ಕರೆತರಲಾಗಿದೆ.

ಮುಂದಿನ ನಾಲ್ಕು ದಿನಗಳಲ್ಲಿ ಗಾಝಾ ತಲುಪುವ ಗುರಿಗೆ ಇದರಿಂದ ಅಡ್ಡಿಯೇನು ಇಲ್ಲ ಎಂದು ಸಮುದ್ ತಂಡ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿದೆ.

46 ದೇಶಗಳ ಪ್ರತಿನಿಧಿಗಳು ಈ ಸುಮುದ್ ಫ್ಲೊಟಿಲ್ಲಾ ತಂಡದಲ್ಲಿ ಇದ್ದಾರೆ. ಇದು ಕಳೆದ 18 ವರ್ಷಗಳಿಂದ ಗಾಝಾದ ಮೇಲೆ ವಿಧಿಸಿರುವ ನಾಕಾಬಂದಿಯನ್ನು ಬೇಧಿಸುವ ಇದುವರೆಗಿನ ಅತಿದೊಡ್ಡ ಸಮುದ್ರ ಆಧಾರಿತ ಪ್ರಯತ್ನವಾಗಿದೆ. ಈ 44 ಹಡಗುಗಳ ಗುಂಪು 500ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯತ್ತಿದೆ. ಇವರಲ್ಲಿ ವೈದ್ಯರು, ವಿವಿಧ ದೇಶಗಳ ಸಂಸದರು, ಮಾನವ ಹಕ್ಕುಗಳ ಹೋರಾಟಗಾರರು ಮತ್ತು ಸ್ವೀಡನ್‌ನ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ರಂತಹ ಪ್ರಸಿದ್ಧ ಚಳವಳಿಗಾರರು ಇದ್ದಾರೆ.

ಈ ವರ್ಷದ ಆರಂಭದಲ್ಲಿ ಇಸ್ರೇಲಿ ಪಡೆಗಳು ಮದ್ಲೀನ್ ಹಡಗನ್ನು ತಡೆದ ಅದೇ ಜಲ ಪ್ರದೇಶವನ್ನು ಫ್ಲೋಟಿಲ್ಲಾ ಸಮೀಪಿಸುತ್ತಿದೆ ಎಂದು ಜರ್ಮನ್ ಹೋರಾಟಗಾರ್ತಿ ಯಾಸ್ಮಿನ್ ಅಕಾರ್ ದೃಢಪಡಿಸಿದ್ದಾರೆ.

“ನಾವು ಕೇವಲ ಮಾನವೀಯ ನೆರವು ನೀಡುತ್ತಿಲ್ಲ, ಗಾಝಾ ಜನತೆಯಲ್ಲಿ ಭರವಸೆ ಮೂಡಿಸುತ್ತಿದ್ದೇವೆ. ಅವರೊಂದಿಗೆ ಒಗ್ಗಟ್ಟು ಪ್ರದರ್ಶಿಸುತ್ತಿದ್ದೇವೆ. ಜಗತ್ತು ಪ್ಯಾಲೆಸ್ತೀನ್‌ನೊಂದಿಗೆ ಇದೆ ಎಂಬ ಬಲವಾದ ಸಂದೇಶವನ್ನು ಕಳುಹಿಸುತ್ತಿದ್ದೇವೆ” ಎಂದು ಗ್ರೀಸ್‌ನ ದ್ವೀಪ ಕ್ರೀಟ್ ಬಳಿ ಗ್ರೇಟಾ ಥನ್‌ಬರ್ಗ್ ಹೇಳಿದ್ದಾರೆ.

ಸುಮುದ್ ಫ್ಲೊಟಿಲ್ಲಾದ ಹಡಗುಗಳು ಗಾಝಾಕ್ಕೆ ಹತ್ತಿರವಾಗುತ್ತಿವೆ. ಪ್ರತಿ ನಿಮಿಷವೂ ಅವು ಗಾಝಾದ ಜನರಿಗೆ ನ್ಯಾಯ ತಲುಪಿಸಲು ಮುಂದುವರಿಯುತ್ತಿವೆ ಎಂದು ಆಯೋಜಕರು ಹೇಳಿದ್ದಾರೆ. ಅವರ ವೆಬ್‌ಸೈಟ್‌ನಲ್ಲಿ ಒಂದು ಟ್ರ್ಯಾಕರ್ ಇದೆ, ಅದು ಈ ಹಡಗುಗಳು ಮೆಡಿಟರೇನಿಯನ್ ಸಮುದ್ರದಲ್ಲಿ ಮುಂದುವರಿಯುವುದನ್ನು ತೋರಿಸುತ್ತಿದೆ. ಇಡೀ ಜಗತ್ತಿನ ಗಮನ ಈಗ ಸುಮುದ್ ತಂಡ ಮೇಲಿದೆ.

ಸೆಪ್ಟೆಂಬರ್ 26 ಶುಕ್ರವಾರ ಸುಮುದ್ ತಂಡದಿಂದ ಮಾತನಾಡಿದ್ದ ಗ್ರೇಟಾ ಥನ್‌ಬರ್ಗ್, “ನಾನು ಇಸ್ರೇಲ್‌ಗೆ ಹೆದರುವುದಿಲ್ಲ, ಮಾನವೀಯತೆಯ ಎಲ್ಲಾ ಪ್ರಜ್ಞೆಯನ್ನು ಕಳೆದುಕೊಂಡಿರುವ ಜಗತ್ತಿಗೆ ಹೆದರುತ್ತೇನೆ” ಎಂದು ಹೇಳಿದ್ದರು.

ಫ್ಲೋಟಿಲ್ಲಾದ ಸಂಚಾರವು ಅಂತಾರಾಷ್ಟ್ರೀಯ ಗಮನ ಸೆಳೆದಿದೆ ಮತ್ತು ಪ್ರಾದೇಶಿಕ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಓಪನ್ ಸೋರ್ಸ್ ಟ್ರ್ಯಾಕಿಂಗ್ ಪ್ರಕಾರ, ಟರ್ಕಿಯು ಹಡಗುಗಳ ಮೇಲ್ವಿಚಾರಣೆ ಮಾಡಲು ಮತ್ತು ರಕ್ಷಿಸಲು ಡ್ರೋನ್‌ಗಳು ಮತ್ತು ಫ್ರಿಗೇಟ್ ಅನ್ನು ನಿಯೋಜಿಸಿದೆ.

ಇಟಲಿ ಮತ್ತು ಸ್ಪೇನ್ ಸಂಭಾವ್ಯ ರಕ್ಷಣೆ ಮತ್ತು ಮಾನವೀಯ ನೆರವಿಗಾಗಿ ನೌಕಾ ಹಡಗುಗಳನ್ನು ಸನ್ನದ್ಧವಾಗಿ ಇರಿಸಿವೆ.

ಈ ತಿಂಗಳ ಆರಂಭದಲ್ಲಿ, ಫ್ಲೋಟಿಲ್ಲಾದ ಎರಡು ಹಡಗುಗಳನ್ನು ಡ್ರೋನ್‌ಗಳು ಗುರಿಯಾಗಿಸಿಕೊಂಡಿದ್ದವು ಎಂದು ವರದಿಯಾಗಿದೆ. ಈ ದಾಳಿಗಳಿಂದ ಉಂಟಾದ ವಿಳಂಬ ಮತ್ತು ಹವಾಮಾನ ವೈಪರೀತ್ಯಗಳ ಹೊರತಾಗಿಯೂ, ನಾವು ಗಾಝಾ ತಲುಪಿಯೇ ತೀರುತ್ತೇವೆ ಎಂದು ಸುಮುದ್ ತಂಡ ಶಪಥ ಮಾಡಿದೆ.

ಇಸ್ರೇಲಿ ಮಾಧ್ಯಮಗಳ ಪ್ರಕಾರ, ಇಸ್ರೇಲ್‌ನ ನೌಕಾಪಡೆಯ ಗುಂಪಾದ ಶಯೆತೆತ್ 13 ತಂಡವು ಈ ಹಡಗುಗಳನ್ನು ವಶಪಡಿಸಿಕೊಳ್ಳಲು ತಯಾರಿ ನಡೆಸುತ್ತಿದೆ ಮತ್ತು ಈಗಾಗಲೇ ತರಬೇತಿ ಅಭ್ಯಾಸಗಳನ್ನು ಮಾಡುತ್ತಿದೆ. ಅಧಿಕಾರಿಗಳು ಹೇಳುವಂತೆ, ಈ ಹಡಗುಗಳು ಗಾಝಾ ತೀರಕ್ಕೆ ತಲುಪದಂತೆ ತಡೆಯುವುದು ಇಸ್ರೇಲ್ ಗುರಿಯಾಗಿದೆ. ಆದರೆ, ಈ ಸಂದರ್ಭದಲ್ಲಿ ಫ್ಲೊಟಿಲ್ಲಾದ ಭಾಗವಾದವರಿಗೆ ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಇಸ್ರೇಲ್ ಯೋಜಿಸಿದೆ.

‘ಭಾರತೀಯ ಇಲಿಗಳು..’ ಎಂದು ಕೆನಡಾದಲ್ಲಿ ದ್ವೇಷಪೂರಿತ ಗೋಡೆ ಬರಹ: ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...