Homeಮುಖಪುಟಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

- Advertisement -
- Advertisement -

ಇದೇನಿದು ಸೂರ್ಯ ಪಶ್ಚಿಮದಲ್ಲಿ ಹುಟ್ಟಲು ಸಾಧ್ಯವೇ ಅಂತ ಯೋಚನೆ ಮಾಡುತ್ತಿದ್ದಿರಾ? ನಮಗೆ ತಿಳಿದಿರೋ ಹಾಗೆ ಸೂರ್ಯ ಯಾವತ್ತಾದರೂ ಪೂರ್ವ ದಿಕ್ಕಿನಲ್ಲಿ ಹುಟ್ಟುವುದನ್ನೂ ಬಿಟ್ಟು ಬೇರೆ ಯಾವ ದಿಕ್ಕಿನಲ್ಲಾದರೂ ಹುಟ್ಟಿದ್ದಾನೇಯೇ ಅಥವಾ, ಸೂರ್ಯ ಪಶ್ಚಿಮದಲ್ಲಿ ಹುಟ್ಟಿದ್ದರ ಬಗ್ಗೆ ಯಾವುದಾದರೂ ಪುರಾಣ ಕಥೆಗಳಲ್ಲಾದರೂ ಕೇಳಿದ್ದೇವೆಯೇ? ಬಹುಶಃ ಇಲ್ಲ! ನಮ್ಮ ಎಲ್ಲಾ ಕಾಲದ ಗ್ರಹಿಕೆಯಲ್ಲಿ, ಭೂಮಿಯ ಮೇಲೆ ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುತ್ತಾನೆ ಎಂದೇ ನಮ್ಮ ತಿಳಿವಳಿಕೆ ಅಲ್ಲವೇ? ಭೂಮಿಯಲ್ಲೇನೋ ಈ ಪ್ರಕ್ರಿಯೆ ಸರಿ, ನಮ್ಮ ಸೌರಮಂಡಲದ ಇತರೆ ಗ್ರಹಗಳಲ್ಲೂ ಸೂರ್ಯ ಪೂರ್ವ ದಿಕ್ಕಿನಲ್ಲಿಯೇ ಹುಟ್ಟುತ್ತಾನಾ? ಇಂತಹ ಪ್ರಶ್ನೆಗಳೂ ನಿಮ್ಮಲ್ಲೂ ಹುಟ್ಟಿರಬಹುದು ಅಲ್ಲವೇ?

ಅದಕ್ಕೂ ಮುಂಚೆ, ಈ ಪ್ರಶ್ನೆ ಕೇಳಿಕೊಳ್ಳೋಣ. ನಮ್ಮ ಸೌರಮಂಡಲದಲ್ಲಿ ಭೂಮಿಯ ಗಾತ್ರದಲ್ಲೇ ಇರುವ ಮತ್ತೊಂದು ಗ್ರಹ ಯಾವುದು? ನಿಮ್ಮ ಊಹೆ ಶುಕ್ರ ಗ್ರಹವಾಗಿದ್ದರೆ ಅದು ಸರಿ ಉತ್ತರ. ಬನ್ನಿ ಹಾಗಾದರೆ, ಶುಕ್ರ ಗ್ರಹಕ್ಕೆ ಹೋಗಿ, ಅದರ ವಿಶೇಷತೆಯನ್ನು ತಿಳಿದುಬರೋಣ.

ಸೌರಮಂಡಲದಲ್ಲಿ ಶುಕ್ರ, ಬುಧ ಗ್ರಹದ ನಂತರದ ಗ್ರಹ. ಶುಕ್ರ ನಮ್ಮ ಸೌರಮಂಡಲದಲ್ಲೇ ಅತ್ಯಂತ ವಿಶಿಷ್ಟ ಗ್ರಹ. ಈ ಗ್ರಹದ ವಿಶಿಷ್ಟತೆ ತಿಳಿಯುವ ಮೊದಲು ಭೂಮಿಯ ಮೇಲೆ ಸೂರ್ಯ ಏಕೆ ಪೂರ್ವದಲ್ಲಿ ಹುಟ್ಟಿ, ಪಶ್ಚಿಮದಲ್ಲಿ ಮುಳುಗುತ್ತಾನೆ ಎನ್ನುವ ವಿಚಾರವನ್ನು ತಿಳಿಯೋಣ.

ಭೂಮಿಯು, ತನ್ನ ಉತ್ತರ ಮತ್ತು ದಕ್ಷಿಣ ಧ್ರುವದ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ತಿರುಗುತ್ತಿರುವುದು ನಮಗೆಲ್ಲರಿಗೂ ತಿಳಿದ ವಿಷಯ. ಈ ತಿರುಗುವಿಕೆ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಇದೆ. ಇದನ್ನ Diurnal Motion ಅಂತ ಕರೆಯುತ್ತೇವೆ. ಈ ರೀತಿಯ ತಿರುಗುವಿಕೆಯಿಂದ, ಭೂಮಿಯ ಆಗಸದಲ್ಲಿ ಕಾಣುವ ಎಲ್ಲಾ ಆಕಾಶಕಾಯಗಳು ಅಂದರೆ, ಸೂರ್ಯ, ಚಂದ್ರ, ಗ್ರಹ ಮತ್ತು ನಕ್ಷತ್ರ ಎಲ್ಲವೂ ಪೂರ್ವದಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುವಂತೆ ಗೋಚರಿಸುತ್ತವೆ.

ಈಗೆ ಭೂಮಿಯು ತನ್ನ ಅಕ್ಷದ ಸುತ್ತ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ತಿರುಗಲು ಸುಮಾರು 24 ಗಂಟೆಗಳು ಬೇಕಾಗುತ್ತವೆ. ಇದನ್ನೇ ನಾವು ಒಂದು ಭೂ ದಿನ ಎಂದು ಕರೆಯುತ್ತೇವೆ. ಭೂಮಿಯ ಹಾಗೆ ಇತರೆ ಗ್ರಹಗಳು ಕೂಡ ತನ್ನ ಧ್ರುವಗಳ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ಬೇರೆ ಬೇರೆ ಅವಧಿಯಲ್ಲಿ ತಿರುಗುತ್ತಿವೆ. ಸೌರ ಮಂಡಲದ ಎಲ್ಲಾ ಗ್ರಹಗಳು ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಸುತ್ತುತ್ತಿದ್ದರೆ, ಶುಕ್ರ ಗ್ರಹ ಮಾತ್ರ ಪೂರ್ವದಿಂದ ಪಶ್ಚಿಮ ದಿಕ್ಕಿಗೆ ತಿರುಗುತ್ತಿದೆ! (ಯುರೇನಸ್ ಗ್ರಹದ ತಿರುಗುವಿಕೆಯು ವಿಭಿನ್ನವಾಗಿದೆ. ಅದನ್ನು ಮುಂದೊಮ್ಮೆ ಚರ್ಚಿಸೋಣ).

ಶುಕ್ರ ಗ್ರಹವು ಪೂರ್ವದಿಂದ ಪಶ್ಚಿಮಕ್ಕೆ ತನ್ನ ಅಕ್ಷದ ಸುತ್ತ ಸುತ್ತುತ್ತಿರುವ ಕಾರಣದಿಂದ, ಶುಕ್ರ ಗ್ರಹಕ್ಕೆ ಮಾನವನೇನಾದರೂ ಒಂದು ದಿನ ಹೋದರೆ, ಅಲ್ಲಿಯ ಆಕಾಶದಲ್ಲಿ ಎಲ್ಲಾ ಆಕಾಶ ಕಾಯಗಳು ಪಶ್ಚಿಮ ದಿಕ್ಕಿನಲ್ಲಿ ಹುಟ್ಟಿ ಪೂರ್ವ ದಿಕ್ಕಿನಲ್ಲಿ ಮುಳುಗುವುದನ್ನ ಕಾಣುತ್ತಾನೆ. ಹಾಗಾಗಿ ಸೂರ್ಯ ಕೂಡ ಶುಕ್ರ ಗ್ರಹದಲ್ಲಿ ಪಶ್ಚಿಮದಲ್ಲಿ ಹುಟ್ಟಿ ಪೂರ್ವದಲ್ಲಿ ಮುಳುಗುತ್ತಾನೆ. ಎಷ್ಟು ವಿಸ್ಮಯಕಾರಿ ವಿಷಯ ಅಲ್ಲವೇ?. ಅಂದಹಾಗೆ ಶುಕ್ರ ಗ್ರಹದ ವಿಶೇಷತೆ ಇಲ್ಲಿಗೇ ನಿಲ್ಲುವುದಿಲ್ಲ!

ಶುಕ್ರ ಗ್ರಹ ತನ್ನ ಅಕ್ಷದ ಸುತ್ತ ಒಂದು ಸುತ್ತು ಸುತ್ತಲು ಬರೋಬ್ಬರಿ 243 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಇದರ ಅರ್ಥ, ಶುಕ್ರ ಗ್ರಹದ ಒಂದು ದಿನ ಭೂಮಿಯ 243 ದಿನಗಳಿಗೆ ಸಮ ಎಂದು. ಇದರ ಜೊತೆಗೆ, ಶುಕ್ರ ಗ್ರಹವು ಸೂರ್ಯನ ಸುತ್ತ ಒಂದು ಸುತ್ತು ಹಾಕಲು 225 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಹಾಗಾದರೆ, ಇದರ ಅರ್ಥ ಏನನ್ನು ಧ್ವನಿಸುತ್ತದೆ? ಶುಕ್ರ ಗ್ರಹದಲ್ಲಿ ಒಂದು ವರ್ಷಕ್ಕೆ 225 ಭೂ ದಿನಗಳು? ಆದರೆ, ಒಂದು ದಿನಕ್ಕೆ 243 ಭೂ ದಿನಗಳು ಎಂದು?

ಇವೆಲ್ಲವುವನ್ನು ಒಟ್ಟಾರೆಯಾಗಿ ಗಮನಿಸಿದರೆ, ಶುಕ್ರ ಗ್ರಹದಲ್ಲಿ ಒಂದು ದಿನ, ಒಂದು ವರ್ಷಕ್ಕಿಂತಲೂ ಹೆಚ್ಚು! ಅಂದರೆ, ಶುಕ್ರ ಗ್ರಹದಲ್ಲಿ ಒಂದು ದಿನವಾಗಬೇಕೆಂದರೆ, ಒಂದು ವರ್ಷ ಕಳೆದು, 18 ಭೂ ದಿನ ಕಳೆದಾಗ ಒಂದು ದಿನವಾಗುತ್ತದೆ! ಆಶ್ಚರ್ಯವಾದರೂ, ನಭೋ ಮಂಡಲದಲ್ಲಿ ಇಂತಹ ವಿಸ್ಮಯವಾದ ಅಂಶಗಳು ಬಹಳಷ್ಟಿವೆ.

ಸೌರಮಂಡಲದ ಇತರೆ ಗ್ರಹಗಳಿಗೆ ಹೋಲಿಸಿದರೆ, ಶುಕ್ರ ಗ್ರಹದ ಈ ವಿಶಿಷ್ಟವಾದ ತಿರುಗುವಿಕೆಗೆ (ಪಶ್ಚಿಮದಿಂದ ಪೂರ್ವಕ್ಕೆ) ವೈಜ್ಞಾನಿಕ ಕಾರಣಗಳು ಇನ್ನೂ ಅಸ್ಪಷ್ಟವಾಗಿದೆ. ಒಂದು ದೊಡ್ಡ ಆಕಾಶಕಾಯದ ಘರ್ಷಣೆಯಿಂದ ಹಾಗೂ ಸೂರ್ಯನ ಗುರುತ್ವ ಬಲದಿಂದ ಶುಕ್ರ ಗ್ರಹಕ್ಕೆ ಈ ರೀತಿಯ ತಿರುಗುವಿಕೆ ಇರಬಹುದು ಎಂದು ಊಹಿಸಲಾಗಿದೆ.


ಇದನ್ನೂ ಓದಿ: ವಿಜ್ಞಾನ-ವಿಶೇಷ; ಹಡಗು ಹಾರುತಿದೆ ನೋಡಿದಿರಾ?: ವಿಶ್ವಕೀರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....