Homeಮುಖಪುಟಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

- Advertisement -
- Advertisement -

ಇದೇನಿದು ಸೂರ್ಯ ಪಶ್ಚಿಮದಲ್ಲಿ ಹುಟ್ಟಲು ಸಾಧ್ಯವೇ ಅಂತ ಯೋಚನೆ ಮಾಡುತ್ತಿದ್ದಿರಾ? ನಮಗೆ ತಿಳಿದಿರೋ ಹಾಗೆ ಸೂರ್ಯ ಯಾವತ್ತಾದರೂ ಪೂರ್ವ ದಿಕ್ಕಿನಲ್ಲಿ ಹುಟ್ಟುವುದನ್ನೂ ಬಿಟ್ಟು ಬೇರೆ ಯಾವ ದಿಕ್ಕಿನಲ್ಲಾದರೂ ಹುಟ್ಟಿದ್ದಾನೇಯೇ ಅಥವಾ, ಸೂರ್ಯ ಪಶ್ಚಿಮದಲ್ಲಿ ಹುಟ್ಟಿದ್ದರ ಬಗ್ಗೆ ಯಾವುದಾದರೂ ಪುರಾಣ ಕಥೆಗಳಲ್ಲಾದರೂ ಕೇಳಿದ್ದೇವೆಯೇ? ಬಹುಶಃ ಇಲ್ಲ! ನಮ್ಮ ಎಲ್ಲಾ ಕಾಲದ ಗ್ರಹಿಕೆಯಲ್ಲಿ, ಭೂಮಿಯ ಮೇಲೆ ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುತ್ತಾನೆ ಎಂದೇ ನಮ್ಮ ತಿಳಿವಳಿಕೆ ಅಲ್ಲವೇ? ಭೂಮಿಯಲ್ಲೇನೋ ಈ ಪ್ರಕ್ರಿಯೆ ಸರಿ, ನಮ್ಮ ಸೌರಮಂಡಲದ ಇತರೆ ಗ್ರಹಗಳಲ್ಲೂ ಸೂರ್ಯ ಪೂರ್ವ ದಿಕ್ಕಿನಲ್ಲಿಯೇ ಹುಟ್ಟುತ್ತಾನಾ? ಇಂತಹ ಪ್ರಶ್ನೆಗಳೂ ನಿಮ್ಮಲ್ಲೂ ಹುಟ್ಟಿರಬಹುದು ಅಲ್ಲವೇ?

ಅದಕ್ಕೂ ಮುಂಚೆ, ಈ ಪ್ರಶ್ನೆ ಕೇಳಿಕೊಳ್ಳೋಣ. ನಮ್ಮ ಸೌರಮಂಡಲದಲ್ಲಿ ಭೂಮಿಯ ಗಾತ್ರದಲ್ಲೇ ಇರುವ ಮತ್ತೊಂದು ಗ್ರಹ ಯಾವುದು? ನಿಮ್ಮ ಊಹೆ ಶುಕ್ರ ಗ್ರಹವಾಗಿದ್ದರೆ ಅದು ಸರಿ ಉತ್ತರ. ಬನ್ನಿ ಹಾಗಾದರೆ, ಶುಕ್ರ ಗ್ರಹಕ್ಕೆ ಹೋಗಿ, ಅದರ ವಿಶೇಷತೆಯನ್ನು ತಿಳಿದುಬರೋಣ.

ಸೌರಮಂಡಲದಲ್ಲಿ ಶುಕ್ರ, ಬುಧ ಗ್ರಹದ ನಂತರದ ಗ್ರಹ. ಶುಕ್ರ ನಮ್ಮ ಸೌರಮಂಡಲದಲ್ಲೇ ಅತ್ಯಂತ ವಿಶಿಷ್ಟ ಗ್ರಹ. ಈ ಗ್ರಹದ ವಿಶಿಷ್ಟತೆ ತಿಳಿಯುವ ಮೊದಲು ಭೂಮಿಯ ಮೇಲೆ ಸೂರ್ಯ ಏಕೆ ಪೂರ್ವದಲ್ಲಿ ಹುಟ್ಟಿ, ಪಶ್ಚಿಮದಲ್ಲಿ ಮುಳುಗುತ್ತಾನೆ ಎನ್ನುವ ವಿಚಾರವನ್ನು ತಿಳಿಯೋಣ.

ಭೂಮಿಯು, ತನ್ನ ಉತ್ತರ ಮತ್ತು ದಕ್ಷಿಣ ಧ್ರುವದ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ತಿರುಗುತ್ತಿರುವುದು ನಮಗೆಲ್ಲರಿಗೂ ತಿಳಿದ ವಿಷಯ. ಈ ತಿರುಗುವಿಕೆ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಇದೆ. ಇದನ್ನ Diurnal Motion ಅಂತ ಕರೆಯುತ್ತೇವೆ. ಈ ರೀತಿಯ ತಿರುಗುವಿಕೆಯಿಂದ, ಭೂಮಿಯ ಆಗಸದಲ್ಲಿ ಕಾಣುವ ಎಲ್ಲಾ ಆಕಾಶಕಾಯಗಳು ಅಂದರೆ, ಸೂರ್ಯ, ಚಂದ್ರ, ಗ್ರಹ ಮತ್ತು ನಕ್ಷತ್ರ ಎಲ್ಲವೂ ಪೂರ್ವದಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುವಂತೆ ಗೋಚರಿಸುತ್ತವೆ.

ಈಗೆ ಭೂಮಿಯು ತನ್ನ ಅಕ್ಷದ ಸುತ್ತ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ತಿರುಗಲು ಸುಮಾರು 24 ಗಂಟೆಗಳು ಬೇಕಾಗುತ್ತವೆ. ಇದನ್ನೇ ನಾವು ಒಂದು ಭೂ ದಿನ ಎಂದು ಕರೆಯುತ್ತೇವೆ. ಭೂಮಿಯ ಹಾಗೆ ಇತರೆ ಗ್ರಹಗಳು ಕೂಡ ತನ್ನ ಧ್ರುವಗಳ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ಬೇರೆ ಬೇರೆ ಅವಧಿಯಲ್ಲಿ ತಿರುಗುತ್ತಿವೆ. ಸೌರ ಮಂಡಲದ ಎಲ್ಲಾ ಗ್ರಹಗಳು ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಸುತ್ತುತ್ತಿದ್ದರೆ, ಶುಕ್ರ ಗ್ರಹ ಮಾತ್ರ ಪೂರ್ವದಿಂದ ಪಶ್ಚಿಮ ದಿಕ್ಕಿಗೆ ತಿರುಗುತ್ತಿದೆ! (ಯುರೇನಸ್ ಗ್ರಹದ ತಿರುಗುವಿಕೆಯು ವಿಭಿನ್ನವಾಗಿದೆ. ಅದನ್ನು ಮುಂದೊಮ್ಮೆ ಚರ್ಚಿಸೋಣ).

ಶುಕ್ರ ಗ್ರಹವು ಪೂರ್ವದಿಂದ ಪಶ್ಚಿಮಕ್ಕೆ ತನ್ನ ಅಕ್ಷದ ಸುತ್ತ ಸುತ್ತುತ್ತಿರುವ ಕಾರಣದಿಂದ, ಶುಕ್ರ ಗ್ರಹಕ್ಕೆ ಮಾನವನೇನಾದರೂ ಒಂದು ದಿನ ಹೋದರೆ, ಅಲ್ಲಿಯ ಆಕಾಶದಲ್ಲಿ ಎಲ್ಲಾ ಆಕಾಶ ಕಾಯಗಳು ಪಶ್ಚಿಮ ದಿಕ್ಕಿನಲ್ಲಿ ಹುಟ್ಟಿ ಪೂರ್ವ ದಿಕ್ಕಿನಲ್ಲಿ ಮುಳುಗುವುದನ್ನ ಕಾಣುತ್ತಾನೆ. ಹಾಗಾಗಿ ಸೂರ್ಯ ಕೂಡ ಶುಕ್ರ ಗ್ರಹದಲ್ಲಿ ಪಶ್ಚಿಮದಲ್ಲಿ ಹುಟ್ಟಿ ಪೂರ್ವದಲ್ಲಿ ಮುಳುಗುತ್ತಾನೆ. ಎಷ್ಟು ವಿಸ್ಮಯಕಾರಿ ವಿಷಯ ಅಲ್ಲವೇ?. ಅಂದಹಾಗೆ ಶುಕ್ರ ಗ್ರಹದ ವಿಶೇಷತೆ ಇಲ್ಲಿಗೇ ನಿಲ್ಲುವುದಿಲ್ಲ!

ಶುಕ್ರ ಗ್ರಹ ತನ್ನ ಅಕ್ಷದ ಸುತ್ತ ಒಂದು ಸುತ್ತು ಸುತ್ತಲು ಬರೋಬ್ಬರಿ 243 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಇದರ ಅರ್ಥ, ಶುಕ್ರ ಗ್ರಹದ ಒಂದು ದಿನ ಭೂಮಿಯ 243 ದಿನಗಳಿಗೆ ಸಮ ಎಂದು. ಇದರ ಜೊತೆಗೆ, ಶುಕ್ರ ಗ್ರಹವು ಸೂರ್ಯನ ಸುತ್ತ ಒಂದು ಸುತ್ತು ಹಾಕಲು 225 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಹಾಗಾದರೆ, ಇದರ ಅರ್ಥ ಏನನ್ನು ಧ್ವನಿಸುತ್ತದೆ? ಶುಕ್ರ ಗ್ರಹದಲ್ಲಿ ಒಂದು ವರ್ಷಕ್ಕೆ 225 ಭೂ ದಿನಗಳು? ಆದರೆ, ಒಂದು ದಿನಕ್ಕೆ 243 ಭೂ ದಿನಗಳು ಎಂದು?

ಇವೆಲ್ಲವುವನ್ನು ಒಟ್ಟಾರೆಯಾಗಿ ಗಮನಿಸಿದರೆ, ಶುಕ್ರ ಗ್ರಹದಲ್ಲಿ ಒಂದು ದಿನ, ಒಂದು ವರ್ಷಕ್ಕಿಂತಲೂ ಹೆಚ್ಚು! ಅಂದರೆ, ಶುಕ್ರ ಗ್ರಹದಲ್ಲಿ ಒಂದು ದಿನವಾಗಬೇಕೆಂದರೆ, ಒಂದು ವರ್ಷ ಕಳೆದು, 18 ಭೂ ದಿನ ಕಳೆದಾಗ ಒಂದು ದಿನವಾಗುತ್ತದೆ! ಆಶ್ಚರ್ಯವಾದರೂ, ನಭೋ ಮಂಡಲದಲ್ಲಿ ಇಂತಹ ವಿಸ್ಮಯವಾದ ಅಂಶಗಳು ಬಹಳಷ್ಟಿವೆ.

ಸೌರಮಂಡಲದ ಇತರೆ ಗ್ರಹಗಳಿಗೆ ಹೋಲಿಸಿದರೆ, ಶುಕ್ರ ಗ್ರಹದ ಈ ವಿಶಿಷ್ಟವಾದ ತಿರುಗುವಿಕೆಗೆ (ಪಶ್ಚಿಮದಿಂದ ಪೂರ್ವಕ್ಕೆ) ವೈಜ್ಞಾನಿಕ ಕಾರಣಗಳು ಇನ್ನೂ ಅಸ್ಪಷ್ಟವಾಗಿದೆ. ಒಂದು ದೊಡ್ಡ ಆಕಾಶಕಾಯದ ಘರ್ಷಣೆಯಿಂದ ಹಾಗೂ ಸೂರ್ಯನ ಗುರುತ್ವ ಬಲದಿಂದ ಶುಕ್ರ ಗ್ರಹಕ್ಕೆ ಈ ರೀತಿಯ ತಿರುಗುವಿಕೆ ಇರಬಹುದು ಎಂದು ಊಹಿಸಲಾಗಿದೆ.


ಇದನ್ನೂ ಓದಿ: ವಿಜ್ಞಾನ-ವಿಶೇಷ; ಹಡಗು ಹಾರುತಿದೆ ನೋಡಿದಿರಾ?: ವಿಶ್ವಕೀರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...