Homeಮುಖಪುಟಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

- Advertisement -
- Advertisement -

ಇದೇನಿದು ಸೂರ್ಯ ಪಶ್ಚಿಮದಲ್ಲಿ ಹುಟ್ಟಲು ಸಾಧ್ಯವೇ ಅಂತ ಯೋಚನೆ ಮಾಡುತ್ತಿದ್ದಿರಾ? ನಮಗೆ ತಿಳಿದಿರೋ ಹಾಗೆ ಸೂರ್ಯ ಯಾವತ್ತಾದರೂ ಪೂರ್ವ ದಿಕ್ಕಿನಲ್ಲಿ ಹುಟ್ಟುವುದನ್ನೂ ಬಿಟ್ಟು ಬೇರೆ ಯಾವ ದಿಕ್ಕಿನಲ್ಲಾದರೂ ಹುಟ್ಟಿದ್ದಾನೇಯೇ ಅಥವಾ, ಸೂರ್ಯ ಪಶ್ಚಿಮದಲ್ಲಿ ಹುಟ್ಟಿದ್ದರ ಬಗ್ಗೆ ಯಾವುದಾದರೂ ಪುರಾಣ ಕಥೆಗಳಲ್ಲಾದರೂ ಕೇಳಿದ್ದೇವೆಯೇ? ಬಹುಶಃ ಇಲ್ಲ! ನಮ್ಮ ಎಲ್ಲಾ ಕಾಲದ ಗ್ರಹಿಕೆಯಲ್ಲಿ, ಭೂಮಿಯ ಮೇಲೆ ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುತ್ತಾನೆ ಎಂದೇ ನಮ್ಮ ತಿಳಿವಳಿಕೆ ಅಲ್ಲವೇ? ಭೂಮಿಯಲ್ಲೇನೋ ಈ ಪ್ರಕ್ರಿಯೆ ಸರಿ, ನಮ್ಮ ಸೌರಮಂಡಲದ ಇತರೆ ಗ್ರಹಗಳಲ್ಲೂ ಸೂರ್ಯ ಪೂರ್ವ ದಿಕ್ಕಿನಲ್ಲಿಯೇ ಹುಟ್ಟುತ್ತಾನಾ? ಇಂತಹ ಪ್ರಶ್ನೆಗಳೂ ನಿಮ್ಮಲ್ಲೂ ಹುಟ್ಟಿರಬಹುದು ಅಲ್ಲವೇ?

ಅದಕ್ಕೂ ಮುಂಚೆ, ಈ ಪ್ರಶ್ನೆ ಕೇಳಿಕೊಳ್ಳೋಣ. ನಮ್ಮ ಸೌರಮಂಡಲದಲ್ಲಿ ಭೂಮಿಯ ಗಾತ್ರದಲ್ಲೇ ಇರುವ ಮತ್ತೊಂದು ಗ್ರಹ ಯಾವುದು? ನಿಮ್ಮ ಊಹೆ ಶುಕ್ರ ಗ್ರಹವಾಗಿದ್ದರೆ ಅದು ಸರಿ ಉತ್ತರ. ಬನ್ನಿ ಹಾಗಾದರೆ, ಶುಕ್ರ ಗ್ರಹಕ್ಕೆ ಹೋಗಿ, ಅದರ ವಿಶೇಷತೆಯನ್ನು ತಿಳಿದುಬರೋಣ.

ಸೌರಮಂಡಲದಲ್ಲಿ ಶುಕ್ರ, ಬುಧ ಗ್ರಹದ ನಂತರದ ಗ್ರಹ. ಶುಕ್ರ ನಮ್ಮ ಸೌರಮಂಡಲದಲ್ಲೇ ಅತ್ಯಂತ ವಿಶಿಷ್ಟ ಗ್ರಹ. ಈ ಗ್ರಹದ ವಿಶಿಷ್ಟತೆ ತಿಳಿಯುವ ಮೊದಲು ಭೂಮಿಯ ಮೇಲೆ ಸೂರ್ಯ ಏಕೆ ಪೂರ್ವದಲ್ಲಿ ಹುಟ್ಟಿ, ಪಶ್ಚಿಮದಲ್ಲಿ ಮುಳುಗುತ್ತಾನೆ ಎನ್ನುವ ವಿಚಾರವನ್ನು ತಿಳಿಯೋಣ.

ಭೂಮಿಯು, ತನ್ನ ಉತ್ತರ ಮತ್ತು ದಕ್ಷಿಣ ಧ್ರುವದ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ತಿರುಗುತ್ತಿರುವುದು ನಮಗೆಲ್ಲರಿಗೂ ತಿಳಿದ ವಿಷಯ. ಈ ತಿರುಗುವಿಕೆ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಇದೆ. ಇದನ್ನ Diurnal Motion ಅಂತ ಕರೆಯುತ್ತೇವೆ. ಈ ರೀತಿಯ ತಿರುಗುವಿಕೆಯಿಂದ, ಭೂಮಿಯ ಆಗಸದಲ್ಲಿ ಕಾಣುವ ಎಲ್ಲಾ ಆಕಾಶಕಾಯಗಳು ಅಂದರೆ, ಸೂರ್ಯ, ಚಂದ್ರ, ಗ್ರಹ ಮತ್ತು ನಕ್ಷತ್ರ ಎಲ್ಲವೂ ಪೂರ್ವದಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುವಂತೆ ಗೋಚರಿಸುತ್ತವೆ.

ಈಗೆ ಭೂಮಿಯು ತನ್ನ ಅಕ್ಷದ ಸುತ್ತ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ತಿರುಗಲು ಸುಮಾರು 24 ಗಂಟೆಗಳು ಬೇಕಾಗುತ್ತವೆ. ಇದನ್ನೇ ನಾವು ಒಂದು ಭೂ ದಿನ ಎಂದು ಕರೆಯುತ್ತೇವೆ. ಭೂಮಿಯ ಹಾಗೆ ಇತರೆ ಗ್ರಹಗಳು ಕೂಡ ತನ್ನ ಧ್ರುವಗಳ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ಬೇರೆ ಬೇರೆ ಅವಧಿಯಲ್ಲಿ ತಿರುಗುತ್ತಿವೆ. ಸೌರ ಮಂಡಲದ ಎಲ್ಲಾ ಗ್ರಹಗಳು ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಸುತ್ತುತ್ತಿದ್ದರೆ, ಶುಕ್ರ ಗ್ರಹ ಮಾತ್ರ ಪೂರ್ವದಿಂದ ಪಶ್ಚಿಮ ದಿಕ್ಕಿಗೆ ತಿರುಗುತ್ತಿದೆ! (ಯುರೇನಸ್ ಗ್ರಹದ ತಿರುಗುವಿಕೆಯು ವಿಭಿನ್ನವಾಗಿದೆ. ಅದನ್ನು ಮುಂದೊಮ್ಮೆ ಚರ್ಚಿಸೋಣ).

ಶುಕ್ರ ಗ್ರಹವು ಪೂರ್ವದಿಂದ ಪಶ್ಚಿಮಕ್ಕೆ ತನ್ನ ಅಕ್ಷದ ಸುತ್ತ ಸುತ್ತುತ್ತಿರುವ ಕಾರಣದಿಂದ, ಶುಕ್ರ ಗ್ರಹಕ್ಕೆ ಮಾನವನೇನಾದರೂ ಒಂದು ದಿನ ಹೋದರೆ, ಅಲ್ಲಿಯ ಆಕಾಶದಲ್ಲಿ ಎಲ್ಲಾ ಆಕಾಶ ಕಾಯಗಳು ಪಶ್ಚಿಮ ದಿಕ್ಕಿನಲ್ಲಿ ಹುಟ್ಟಿ ಪೂರ್ವ ದಿಕ್ಕಿನಲ್ಲಿ ಮುಳುಗುವುದನ್ನ ಕಾಣುತ್ತಾನೆ. ಹಾಗಾಗಿ ಸೂರ್ಯ ಕೂಡ ಶುಕ್ರ ಗ್ರಹದಲ್ಲಿ ಪಶ್ಚಿಮದಲ್ಲಿ ಹುಟ್ಟಿ ಪೂರ್ವದಲ್ಲಿ ಮುಳುಗುತ್ತಾನೆ. ಎಷ್ಟು ವಿಸ್ಮಯಕಾರಿ ವಿಷಯ ಅಲ್ಲವೇ?. ಅಂದಹಾಗೆ ಶುಕ್ರ ಗ್ರಹದ ವಿಶೇಷತೆ ಇಲ್ಲಿಗೇ ನಿಲ್ಲುವುದಿಲ್ಲ!

ಶುಕ್ರ ಗ್ರಹ ತನ್ನ ಅಕ್ಷದ ಸುತ್ತ ಒಂದು ಸುತ್ತು ಸುತ್ತಲು ಬರೋಬ್ಬರಿ 243 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಇದರ ಅರ್ಥ, ಶುಕ್ರ ಗ್ರಹದ ಒಂದು ದಿನ ಭೂಮಿಯ 243 ದಿನಗಳಿಗೆ ಸಮ ಎಂದು. ಇದರ ಜೊತೆಗೆ, ಶುಕ್ರ ಗ್ರಹವು ಸೂರ್ಯನ ಸುತ್ತ ಒಂದು ಸುತ್ತು ಹಾಕಲು 225 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಹಾಗಾದರೆ, ಇದರ ಅರ್ಥ ಏನನ್ನು ಧ್ವನಿಸುತ್ತದೆ? ಶುಕ್ರ ಗ್ರಹದಲ್ಲಿ ಒಂದು ವರ್ಷಕ್ಕೆ 225 ಭೂ ದಿನಗಳು? ಆದರೆ, ಒಂದು ದಿನಕ್ಕೆ 243 ಭೂ ದಿನಗಳು ಎಂದು?

ಇವೆಲ್ಲವುವನ್ನು ಒಟ್ಟಾರೆಯಾಗಿ ಗಮನಿಸಿದರೆ, ಶುಕ್ರ ಗ್ರಹದಲ್ಲಿ ಒಂದು ದಿನ, ಒಂದು ವರ್ಷಕ್ಕಿಂತಲೂ ಹೆಚ್ಚು! ಅಂದರೆ, ಶುಕ್ರ ಗ್ರಹದಲ್ಲಿ ಒಂದು ದಿನವಾಗಬೇಕೆಂದರೆ, ಒಂದು ವರ್ಷ ಕಳೆದು, 18 ಭೂ ದಿನ ಕಳೆದಾಗ ಒಂದು ದಿನವಾಗುತ್ತದೆ! ಆಶ್ಚರ್ಯವಾದರೂ, ನಭೋ ಮಂಡಲದಲ್ಲಿ ಇಂತಹ ವಿಸ್ಮಯವಾದ ಅಂಶಗಳು ಬಹಳಷ್ಟಿವೆ.

ಸೌರಮಂಡಲದ ಇತರೆ ಗ್ರಹಗಳಿಗೆ ಹೋಲಿಸಿದರೆ, ಶುಕ್ರ ಗ್ರಹದ ಈ ವಿಶಿಷ್ಟವಾದ ತಿರುಗುವಿಕೆಗೆ (ಪಶ್ಚಿಮದಿಂದ ಪೂರ್ವಕ್ಕೆ) ವೈಜ್ಞಾನಿಕ ಕಾರಣಗಳು ಇನ್ನೂ ಅಸ್ಪಷ್ಟವಾಗಿದೆ. ಒಂದು ದೊಡ್ಡ ಆಕಾಶಕಾಯದ ಘರ್ಷಣೆಯಿಂದ ಹಾಗೂ ಸೂರ್ಯನ ಗುರುತ್ವ ಬಲದಿಂದ ಶುಕ್ರ ಗ್ರಹಕ್ಕೆ ಈ ರೀತಿಯ ತಿರುಗುವಿಕೆ ಇರಬಹುದು ಎಂದು ಊಹಿಸಲಾಗಿದೆ.


ಇದನ್ನೂ ಓದಿ: ವಿಜ್ಞಾನ-ವಿಶೇಷ; ಹಡಗು ಹಾರುತಿದೆ ನೋಡಿದಿರಾ?: ವಿಶ್ವಕೀರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...