Homeಮುಖಪುಟಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

- Advertisement -
- Advertisement -

ಇದೇನಿದು ಸೂರ್ಯ ಪಶ್ಚಿಮದಲ್ಲಿ ಹುಟ್ಟಲು ಸಾಧ್ಯವೇ ಅಂತ ಯೋಚನೆ ಮಾಡುತ್ತಿದ್ದಿರಾ? ನಮಗೆ ತಿಳಿದಿರೋ ಹಾಗೆ ಸೂರ್ಯ ಯಾವತ್ತಾದರೂ ಪೂರ್ವ ದಿಕ್ಕಿನಲ್ಲಿ ಹುಟ್ಟುವುದನ್ನೂ ಬಿಟ್ಟು ಬೇರೆ ಯಾವ ದಿಕ್ಕಿನಲ್ಲಾದರೂ ಹುಟ್ಟಿದ್ದಾನೇಯೇ ಅಥವಾ, ಸೂರ್ಯ ಪಶ್ಚಿಮದಲ್ಲಿ ಹುಟ್ಟಿದ್ದರ ಬಗ್ಗೆ ಯಾವುದಾದರೂ ಪುರಾಣ ಕಥೆಗಳಲ್ಲಾದರೂ ಕೇಳಿದ್ದೇವೆಯೇ? ಬಹುಶಃ ಇಲ್ಲ! ನಮ್ಮ ಎಲ್ಲಾ ಕಾಲದ ಗ್ರಹಿಕೆಯಲ್ಲಿ, ಭೂಮಿಯ ಮೇಲೆ ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುತ್ತಾನೆ ಎಂದೇ ನಮ್ಮ ತಿಳಿವಳಿಕೆ ಅಲ್ಲವೇ? ಭೂಮಿಯಲ್ಲೇನೋ ಈ ಪ್ರಕ್ರಿಯೆ ಸರಿ, ನಮ್ಮ ಸೌರಮಂಡಲದ ಇತರೆ ಗ್ರಹಗಳಲ್ಲೂ ಸೂರ್ಯ ಪೂರ್ವ ದಿಕ್ಕಿನಲ್ಲಿಯೇ ಹುಟ್ಟುತ್ತಾನಾ? ಇಂತಹ ಪ್ರಶ್ನೆಗಳೂ ನಿಮ್ಮಲ್ಲೂ ಹುಟ್ಟಿರಬಹುದು ಅಲ್ಲವೇ?

ಅದಕ್ಕೂ ಮುಂಚೆ, ಈ ಪ್ರಶ್ನೆ ಕೇಳಿಕೊಳ್ಳೋಣ. ನಮ್ಮ ಸೌರಮಂಡಲದಲ್ಲಿ ಭೂಮಿಯ ಗಾತ್ರದಲ್ಲೇ ಇರುವ ಮತ್ತೊಂದು ಗ್ರಹ ಯಾವುದು? ನಿಮ್ಮ ಊಹೆ ಶುಕ್ರ ಗ್ರಹವಾಗಿದ್ದರೆ ಅದು ಸರಿ ಉತ್ತರ. ಬನ್ನಿ ಹಾಗಾದರೆ, ಶುಕ್ರ ಗ್ರಹಕ್ಕೆ ಹೋಗಿ, ಅದರ ವಿಶೇಷತೆಯನ್ನು ತಿಳಿದುಬರೋಣ.

ಸೌರಮಂಡಲದಲ್ಲಿ ಶುಕ್ರ, ಬುಧ ಗ್ರಹದ ನಂತರದ ಗ್ರಹ. ಶುಕ್ರ ನಮ್ಮ ಸೌರಮಂಡಲದಲ್ಲೇ ಅತ್ಯಂತ ವಿಶಿಷ್ಟ ಗ್ರಹ. ಈ ಗ್ರಹದ ವಿಶಿಷ್ಟತೆ ತಿಳಿಯುವ ಮೊದಲು ಭೂಮಿಯ ಮೇಲೆ ಸೂರ್ಯ ಏಕೆ ಪೂರ್ವದಲ್ಲಿ ಹುಟ್ಟಿ, ಪಶ್ಚಿಮದಲ್ಲಿ ಮುಳುಗುತ್ತಾನೆ ಎನ್ನುವ ವಿಚಾರವನ್ನು ತಿಳಿಯೋಣ.

ಭೂಮಿಯು, ತನ್ನ ಉತ್ತರ ಮತ್ತು ದಕ್ಷಿಣ ಧ್ರುವದ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ತಿರುಗುತ್ತಿರುವುದು ನಮಗೆಲ್ಲರಿಗೂ ತಿಳಿದ ವಿಷಯ. ಈ ತಿರುಗುವಿಕೆ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಇದೆ. ಇದನ್ನ Diurnal Motion ಅಂತ ಕರೆಯುತ್ತೇವೆ. ಈ ರೀತಿಯ ತಿರುಗುವಿಕೆಯಿಂದ, ಭೂಮಿಯ ಆಗಸದಲ್ಲಿ ಕಾಣುವ ಎಲ್ಲಾ ಆಕಾಶಕಾಯಗಳು ಅಂದರೆ, ಸೂರ್ಯ, ಚಂದ್ರ, ಗ್ರಹ ಮತ್ತು ನಕ್ಷತ್ರ ಎಲ್ಲವೂ ಪೂರ್ವದಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುವಂತೆ ಗೋಚರಿಸುತ್ತವೆ.

ಈಗೆ ಭೂಮಿಯು ತನ್ನ ಅಕ್ಷದ ಸುತ್ತ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ತಿರುಗಲು ಸುಮಾರು 24 ಗಂಟೆಗಳು ಬೇಕಾಗುತ್ತವೆ. ಇದನ್ನೇ ನಾವು ಒಂದು ಭೂ ದಿನ ಎಂದು ಕರೆಯುತ್ತೇವೆ. ಭೂಮಿಯ ಹಾಗೆ ಇತರೆ ಗ್ರಹಗಳು ಕೂಡ ತನ್ನ ಧ್ರುವಗಳ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ಬೇರೆ ಬೇರೆ ಅವಧಿಯಲ್ಲಿ ತಿರುಗುತ್ತಿವೆ. ಸೌರ ಮಂಡಲದ ಎಲ್ಲಾ ಗ್ರಹಗಳು ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಸುತ್ತುತ್ತಿದ್ದರೆ, ಶುಕ್ರ ಗ್ರಹ ಮಾತ್ರ ಪೂರ್ವದಿಂದ ಪಶ್ಚಿಮ ದಿಕ್ಕಿಗೆ ತಿರುಗುತ್ತಿದೆ! (ಯುರೇನಸ್ ಗ್ರಹದ ತಿರುಗುವಿಕೆಯು ವಿಭಿನ್ನವಾಗಿದೆ. ಅದನ್ನು ಮುಂದೊಮ್ಮೆ ಚರ್ಚಿಸೋಣ).

ಶುಕ್ರ ಗ್ರಹವು ಪೂರ್ವದಿಂದ ಪಶ್ಚಿಮಕ್ಕೆ ತನ್ನ ಅಕ್ಷದ ಸುತ್ತ ಸುತ್ತುತ್ತಿರುವ ಕಾರಣದಿಂದ, ಶುಕ್ರ ಗ್ರಹಕ್ಕೆ ಮಾನವನೇನಾದರೂ ಒಂದು ದಿನ ಹೋದರೆ, ಅಲ್ಲಿಯ ಆಕಾಶದಲ್ಲಿ ಎಲ್ಲಾ ಆಕಾಶ ಕಾಯಗಳು ಪಶ್ಚಿಮ ದಿಕ್ಕಿನಲ್ಲಿ ಹುಟ್ಟಿ ಪೂರ್ವ ದಿಕ್ಕಿನಲ್ಲಿ ಮುಳುಗುವುದನ್ನ ಕಾಣುತ್ತಾನೆ. ಹಾಗಾಗಿ ಸೂರ್ಯ ಕೂಡ ಶುಕ್ರ ಗ್ರಹದಲ್ಲಿ ಪಶ್ಚಿಮದಲ್ಲಿ ಹುಟ್ಟಿ ಪೂರ್ವದಲ್ಲಿ ಮುಳುಗುತ್ತಾನೆ. ಎಷ್ಟು ವಿಸ್ಮಯಕಾರಿ ವಿಷಯ ಅಲ್ಲವೇ?. ಅಂದಹಾಗೆ ಶುಕ್ರ ಗ್ರಹದ ವಿಶೇಷತೆ ಇಲ್ಲಿಗೇ ನಿಲ್ಲುವುದಿಲ್ಲ!

ಶುಕ್ರ ಗ್ರಹ ತನ್ನ ಅಕ್ಷದ ಸುತ್ತ ಒಂದು ಸುತ್ತು ಸುತ್ತಲು ಬರೋಬ್ಬರಿ 243 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಇದರ ಅರ್ಥ, ಶುಕ್ರ ಗ್ರಹದ ಒಂದು ದಿನ ಭೂಮಿಯ 243 ದಿನಗಳಿಗೆ ಸಮ ಎಂದು. ಇದರ ಜೊತೆಗೆ, ಶುಕ್ರ ಗ್ರಹವು ಸೂರ್ಯನ ಸುತ್ತ ಒಂದು ಸುತ್ತು ಹಾಕಲು 225 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಹಾಗಾದರೆ, ಇದರ ಅರ್ಥ ಏನನ್ನು ಧ್ವನಿಸುತ್ತದೆ? ಶುಕ್ರ ಗ್ರಹದಲ್ಲಿ ಒಂದು ವರ್ಷಕ್ಕೆ 225 ಭೂ ದಿನಗಳು? ಆದರೆ, ಒಂದು ದಿನಕ್ಕೆ 243 ಭೂ ದಿನಗಳು ಎಂದು?

ಇವೆಲ್ಲವುವನ್ನು ಒಟ್ಟಾರೆಯಾಗಿ ಗಮನಿಸಿದರೆ, ಶುಕ್ರ ಗ್ರಹದಲ್ಲಿ ಒಂದು ದಿನ, ಒಂದು ವರ್ಷಕ್ಕಿಂತಲೂ ಹೆಚ್ಚು! ಅಂದರೆ, ಶುಕ್ರ ಗ್ರಹದಲ್ಲಿ ಒಂದು ದಿನವಾಗಬೇಕೆಂದರೆ, ಒಂದು ವರ್ಷ ಕಳೆದು, 18 ಭೂ ದಿನ ಕಳೆದಾಗ ಒಂದು ದಿನವಾಗುತ್ತದೆ! ಆಶ್ಚರ್ಯವಾದರೂ, ನಭೋ ಮಂಡಲದಲ್ಲಿ ಇಂತಹ ವಿಸ್ಮಯವಾದ ಅಂಶಗಳು ಬಹಳಷ್ಟಿವೆ.

ಸೌರಮಂಡಲದ ಇತರೆ ಗ್ರಹಗಳಿಗೆ ಹೋಲಿಸಿದರೆ, ಶುಕ್ರ ಗ್ರಹದ ಈ ವಿಶಿಷ್ಟವಾದ ತಿರುಗುವಿಕೆಗೆ (ಪಶ್ಚಿಮದಿಂದ ಪೂರ್ವಕ್ಕೆ) ವೈಜ್ಞಾನಿಕ ಕಾರಣಗಳು ಇನ್ನೂ ಅಸ್ಪಷ್ಟವಾಗಿದೆ. ಒಂದು ದೊಡ್ಡ ಆಕಾಶಕಾಯದ ಘರ್ಷಣೆಯಿಂದ ಹಾಗೂ ಸೂರ್ಯನ ಗುರುತ್ವ ಬಲದಿಂದ ಶುಕ್ರ ಗ್ರಹಕ್ಕೆ ಈ ರೀತಿಯ ತಿರುಗುವಿಕೆ ಇರಬಹುದು ಎಂದು ಊಹಿಸಲಾಗಿದೆ.


ಇದನ್ನೂ ಓದಿ: ವಿಜ್ಞಾನ-ವಿಶೇಷ; ಹಡಗು ಹಾರುತಿದೆ ನೋಡಿದಿರಾ?: ವಿಶ್ವಕೀರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...