Homeಮುಖಪುಟಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

- Advertisement -
- Advertisement -

ಇದೇನಿದು ಸೂರ್ಯ ಪಶ್ಚಿಮದಲ್ಲಿ ಹುಟ್ಟಲು ಸಾಧ್ಯವೇ ಅಂತ ಯೋಚನೆ ಮಾಡುತ್ತಿದ್ದಿರಾ? ನಮಗೆ ತಿಳಿದಿರೋ ಹಾಗೆ ಸೂರ್ಯ ಯಾವತ್ತಾದರೂ ಪೂರ್ವ ದಿಕ್ಕಿನಲ್ಲಿ ಹುಟ್ಟುವುದನ್ನೂ ಬಿಟ್ಟು ಬೇರೆ ಯಾವ ದಿಕ್ಕಿನಲ್ಲಾದರೂ ಹುಟ್ಟಿದ್ದಾನೇಯೇ ಅಥವಾ, ಸೂರ್ಯ ಪಶ್ಚಿಮದಲ್ಲಿ ಹುಟ್ಟಿದ್ದರ ಬಗ್ಗೆ ಯಾವುದಾದರೂ ಪುರಾಣ ಕಥೆಗಳಲ್ಲಾದರೂ ಕೇಳಿದ್ದೇವೆಯೇ? ಬಹುಶಃ ಇಲ್ಲ! ನಮ್ಮ ಎಲ್ಲಾ ಕಾಲದ ಗ್ರಹಿಕೆಯಲ್ಲಿ, ಭೂಮಿಯ ಮೇಲೆ ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುತ್ತಾನೆ ಎಂದೇ ನಮ್ಮ ತಿಳಿವಳಿಕೆ ಅಲ್ಲವೇ? ಭೂಮಿಯಲ್ಲೇನೋ ಈ ಪ್ರಕ್ರಿಯೆ ಸರಿ, ನಮ್ಮ ಸೌರಮಂಡಲದ ಇತರೆ ಗ್ರಹಗಳಲ್ಲೂ ಸೂರ್ಯ ಪೂರ್ವ ದಿಕ್ಕಿನಲ್ಲಿಯೇ ಹುಟ್ಟುತ್ತಾನಾ? ಇಂತಹ ಪ್ರಶ್ನೆಗಳೂ ನಿಮ್ಮಲ್ಲೂ ಹುಟ್ಟಿರಬಹುದು ಅಲ್ಲವೇ?

ಅದಕ್ಕೂ ಮುಂಚೆ, ಈ ಪ್ರಶ್ನೆ ಕೇಳಿಕೊಳ್ಳೋಣ. ನಮ್ಮ ಸೌರಮಂಡಲದಲ್ಲಿ ಭೂಮಿಯ ಗಾತ್ರದಲ್ಲೇ ಇರುವ ಮತ್ತೊಂದು ಗ್ರಹ ಯಾವುದು? ನಿಮ್ಮ ಊಹೆ ಶುಕ್ರ ಗ್ರಹವಾಗಿದ್ದರೆ ಅದು ಸರಿ ಉತ್ತರ. ಬನ್ನಿ ಹಾಗಾದರೆ, ಶುಕ್ರ ಗ್ರಹಕ್ಕೆ ಹೋಗಿ, ಅದರ ವಿಶೇಷತೆಯನ್ನು ತಿಳಿದುಬರೋಣ.

ಸೌರಮಂಡಲದಲ್ಲಿ ಶುಕ್ರ, ಬುಧ ಗ್ರಹದ ನಂತರದ ಗ್ರಹ. ಶುಕ್ರ ನಮ್ಮ ಸೌರಮಂಡಲದಲ್ಲೇ ಅತ್ಯಂತ ವಿಶಿಷ್ಟ ಗ್ರಹ. ಈ ಗ್ರಹದ ವಿಶಿಷ್ಟತೆ ತಿಳಿಯುವ ಮೊದಲು ಭೂಮಿಯ ಮೇಲೆ ಸೂರ್ಯ ಏಕೆ ಪೂರ್ವದಲ್ಲಿ ಹುಟ್ಟಿ, ಪಶ್ಚಿಮದಲ್ಲಿ ಮುಳುಗುತ್ತಾನೆ ಎನ್ನುವ ವಿಚಾರವನ್ನು ತಿಳಿಯೋಣ.

ಭೂಮಿಯು, ತನ್ನ ಉತ್ತರ ಮತ್ತು ದಕ್ಷಿಣ ಧ್ರುವದ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ತಿರುಗುತ್ತಿರುವುದು ನಮಗೆಲ್ಲರಿಗೂ ತಿಳಿದ ವಿಷಯ. ಈ ತಿರುಗುವಿಕೆ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಇದೆ. ಇದನ್ನ Diurnal Motion ಅಂತ ಕರೆಯುತ್ತೇವೆ. ಈ ರೀತಿಯ ತಿರುಗುವಿಕೆಯಿಂದ, ಭೂಮಿಯ ಆಗಸದಲ್ಲಿ ಕಾಣುವ ಎಲ್ಲಾ ಆಕಾಶಕಾಯಗಳು ಅಂದರೆ, ಸೂರ್ಯ, ಚಂದ್ರ, ಗ್ರಹ ಮತ್ತು ನಕ್ಷತ್ರ ಎಲ್ಲವೂ ಪೂರ್ವದಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುವಂತೆ ಗೋಚರಿಸುತ್ತವೆ.

ಈಗೆ ಭೂಮಿಯು ತನ್ನ ಅಕ್ಷದ ಸುತ್ತ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ತಿರುಗಲು ಸುಮಾರು 24 ಗಂಟೆಗಳು ಬೇಕಾಗುತ್ತವೆ. ಇದನ್ನೇ ನಾವು ಒಂದು ಭೂ ದಿನ ಎಂದು ಕರೆಯುತ್ತೇವೆ. ಭೂಮಿಯ ಹಾಗೆ ಇತರೆ ಗ್ರಹಗಳು ಕೂಡ ತನ್ನ ಧ್ರುವಗಳ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ಬೇರೆ ಬೇರೆ ಅವಧಿಯಲ್ಲಿ ತಿರುಗುತ್ತಿವೆ. ಸೌರ ಮಂಡಲದ ಎಲ್ಲಾ ಗ್ರಹಗಳು ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಸುತ್ತುತ್ತಿದ್ದರೆ, ಶುಕ್ರ ಗ್ರಹ ಮಾತ್ರ ಪೂರ್ವದಿಂದ ಪಶ್ಚಿಮ ದಿಕ್ಕಿಗೆ ತಿರುಗುತ್ತಿದೆ! (ಯುರೇನಸ್ ಗ್ರಹದ ತಿರುಗುವಿಕೆಯು ವಿಭಿನ್ನವಾಗಿದೆ. ಅದನ್ನು ಮುಂದೊಮ್ಮೆ ಚರ್ಚಿಸೋಣ).

ಶುಕ್ರ ಗ್ರಹವು ಪೂರ್ವದಿಂದ ಪಶ್ಚಿಮಕ್ಕೆ ತನ್ನ ಅಕ್ಷದ ಸುತ್ತ ಸುತ್ತುತ್ತಿರುವ ಕಾರಣದಿಂದ, ಶುಕ್ರ ಗ್ರಹಕ್ಕೆ ಮಾನವನೇನಾದರೂ ಒಂದು ದಿನ ಹೋದರೆ, ಅಲ್ಲಿಯ ಆಕಾಶದಲ್ಲಿ ಎಲ್ಲಾ ಆಕಾಶ ಕಾಯಗಳು ಪಶ್ಚಿಮ ದಿಕ್ಕಿನಲ್ಲಿ ಹುಟ್ಟಿ ಪೂರ್ವ ದಿಕ್ಕಿನಲ್ಲಿ ಮುಳುಗುವುದನ್ನ ಕಾಣುತ್ತಾನೆ. ಹಾಗಾಗಿ ಸೂರ್ಯ ಕೂಡ ಶುಕ್ರ ಗ್ರಹದಲ್ಲಿ ಪಶ್ಚಿಮದಲ್ಲಿ ಹುಟ್ಟಿ ಪೂರ್ವದಲ್ಲಿ ಮುಳುಗುತ್ತಾನೆ. ಎಷ್ಟು ವಿಸ್ಮಯಕಾರಿ ವಿಷಯ ಅಲ್ಲವೇ?. ಅಂದಹಾಗೆ ಶುಕ್ರ ಗ್ರಹದ ವಿಶೇಷತೆ ಇಲ್ಲಿಗೇ ನಿಲ್ಲುವುದಿಲ್ಲ!

ಶುಕ್ರ ಗ್ರಹ ತನ್ನ ಅಕ್ಷದ ಸುತ್ತ ಒಂದು ಸುತ್ತು ಸುತ್ತಲು ಬರೋಬ್ಬರಿ 243 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಇದರ ಅರ್ಥ, ಶುಕ್ರ ಗ್ರಹದ ಒಂದು ದಿನ ಭೂಮಿಯ 243 ದಿನಗಳಿಗೆ ಸಮ ಎಂದು. ಇದರ ಜೊತೆಗೆ, ಶುಕ್ರ ಗ್ರಹವು ಸೂರ್ಯನ ಸುತ್ತ ಒಂದು ಸುತ್ತು ಹಾಕಲು 225 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಹಾಗಾದರೆ, ಇದರ ಅರ್ಥ ಏನನ್ನು ಧ್ವನಿಸುತ್ತದೆ? ಶುಕ್ರ ಗ್ರಹದಲ್ಲಿ ಒಂದು ವರ್ಷಕ್ಕೆ 225 ಭೂ ದಿನಗಳು? ಆದರೆ, ಒಂದು ದಿನಕ್ಕೆ 243 ಭೂ ದಿನಗಳು ಎಂದು?

ಇವೆಲ್ಲವುವನ್ನು ಒಟ್ಟಾರೆಯಾಗಿ ಗಮನಿಸಿದರೆ, ಶುಕ್ರ ಗ್ರಹದಲ್ಲಿ ಒಂದು ದಿನ, ಒಂದು ವರ್ಷಕ್ಕಿಂತಲೂ ಹೆಚ್ಚು! ಅಂದರೆ, ಶುಕ್ರ ಗ್ರಹದಲ್ಲಿ ಒಂದು ದಿನವಾಗಬೇಕೆಂದರೆ, ಒಂದು ವರ್ಷ ಕಳೆದು, 18 ಭೂ ದಿನ ಕಳೆದಾಗ ಒಂದು ದಿನವಾಗುತ್ತದೆ! ಆಶ್ಚರ್ಯವಾದರೂ, ನಭೋ ಮಂಡಲದಲ್ಲಿ ಇಂತಹ ವಿಸ್ಮಯವಾದ ಅಂಶಗಳು ಬಹಳಷ್ಟಿವೆ.

ಸೌರಮಂಡಲದ ಇತರೆ ಗ್ರಹಗಳಿಗೆ ಹೋಲಿಸಿದರೆ, ಶುಕ್ರ ಗ್ರಹದ ಈ ವಿಶಿಷ್ಟವಾದ ತಿರುಗುವಿಕೆಗೆ (ಪಶ್ಚಿಮದಿಂದ ಪೂರ್ವಕ್ಕೆ) ವೈಜ್ಞಾನಿಕ ಕಾರಣಗಳು ಇನ್ನೂ ಅಸ್ಪಷ್ಟವಾಗಿದೆ. ಒಂದು ದೊಡ್ಡ ಆಕಾಶಕಾಯದ ಘರ್ಷಣೆಯಿಂದ ಹಾಗೂ ಸೂರ್ಯನ ಗುರುತ್ವ ಬಲದಿಂದ ಶುಕ್ರ ಗ್ರಹಕ್ಕೆ ಈ ರೀತಿಯ ತಿರುಗುವಿಕೆ ಇರಬಹುದು ಎಂದು ಊಹಿಸಲಾಗಿದೆ.


ಇದನ್ನೂ ಓದಿ: ವಿಜ್ಞಾನ-ವಿಶೇಷ; ಹಡಗು ಹಾರುತಿದೆ ನೋಡಿದಿರಾ?: ವಿಶ್ವಕೀರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...