Homeಮುಖಪುಟಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

- Advertisement -
- Advertisement -

ಇದೇನಿದು ಸೂರ್ಯ ಪಶ್ಚಿಮದಲ್ಲಿ ಹುಟ್ಟಲು ಸಾಧ್ಯವೇ ಅಂತ ಯೋಚನೆ ಮಾಡುತ್ತಿದ್ದಿರಾ? ನಮಗೆ ತಿಳಿದಿರೋ ಹಾಗೆ ಸೂರ್ಯ ಯಾವತ್ತಾದರೂ ಪೂರ್ವ ದಿಕ್ಕಿನಲ್ಲಿ ಹುಟ್ಟುವುದನ್ನೂ ಬಿಟ್ಟು ಬೇರೆ ಯಾವ ದಿಕ್ಕಿನಲ್ಲಾದರೂ ಹುಟ್ಟಿದ್ದಾನೇಯೇ ಅಥವಾ, ಸೂರ್ಯ ಪಶ್ಚಿಮದಲ್ಲಿ ಹುಟ್ಟಿದ್ದರ ಬಗ್ಗೆ ಯಾವುದಾದರೂ ಪುರಾಣ ಕಥೆಗಳಲ್ಲಾದರೂ ಕೇಳಿದ್ದೇವೆಯೇ? ಬಹುಶಃ ಇಲ್ಲ! ನಮ್ಮ ಎಲ್ಲಾ ಕಾಲದ ಗ್ರಹಿಕೆಯಲ್ಲಿ, ಭೂಮಿಯ ಮೇಲೆ ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುತ್ತಾನೆ ಎಂದೇ ನಮ್ಮ ತಿಳಿವಳಿಕೆ ಅಲ್ಲವೇ? ಭೂಮಿಯಲ್ಲೇನೋ ಈ ಪ್ರಕ್ರಿಯೆ ಸರಿ, ನಮ್ಮ ಸೌರಮಂಡಲದ ಇತರೆ ಗ್ರಹಗಳಲ್ಲೂ ಸೂರ್ಯ ಪೂರ್ವ ದಿಕ್ಕಿನಲ್ಲಿಯೇ ಹುಟ್ಟುತ್ತಾನಾ? ಇಂತಹ ಪ್ರಶ್ನೆಗಳೂ ನಿಮ್ಮಲ್ಲೂ ಹುಟ್ಟಿರಬಹುದು ಅಲ್ಲವೇ?

ಅದಕ್ಕೂ ಮುಂಚೆ, ಈ ಪ್ರಶ್ನೆ ಕೇಳಿಕೊಳ್ಳೋಣ. ನಮ್ಮ ಸೌರಮಂಡಲದಲ್ಲಿ ಭೂಮಿಯ ಗಾತ್ರದಲ್ಲೇ ಇರುವ ಮತ್ತೊಂದು ಗ್ರಹ ಯಾವುದು? ನಿಮ್ಮ ಊಹೆ ಶುಕ್ರ ಗ್ರಹವಾಗಿದ್ದರೆ ಅದು ಸರಿ ಉತ್ತರ. ಬನ್ನಿ ಹಾಗಾದರೆ, ಶುಕ್ರ ಗ್ರಹಕ್ಕೆ ಹೋಗಿ, ಅದರ ವಿಶೇಷತೆಯನ್ನು ತಿಳಿದುಬರೋಣ.

ಸೌರಮಂಡಲದಲ್ಲಿ ಶುಕ್ರ, ಬುಧ ಗ್ರಹದ ನಂತರದ ಗ್ರಹ. ಶುಕ್ರ ನಮ್ಮ ಸೌರಮಂಡಲದಲ್ಲೇ ಅತ್ಯಂತ ವಿಶಿಷ್ಟ ಗ್ರಹ. ಈ ಗ್ರಹದ ವಿಶಿಷ್ಟತೆ ತಿಳಿಯುವ ಮೊದಲು ಭೂಮಿಯ ಮೇಲೆ ಸೂರ್ಯ ಏಕೆ ಪೂರ್ವದಲ್ಲಿ ಹುಟ್ಟಿ, ಪಶ್ಚಿಮದಲ್ಲಿ ಮುಳುಗುತ್ತಾನೆ ಎನ್ನುವ ವಿಚಾರವನ್ನು ತಿಳಿಯೋಣ.

ಭೂಮಿಯು, ತನ್ನ ಉತ್ತರ ಮತ್ತು ದಕ್ಷಿಣ ಧ್ರುವದ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ತಿರುಗುತ್ತಿರುವುದು ನಮಗೆಲ್ಲರಿಗೂ ತಿಳಿದ ವಿಷಯ. ಈ ತಿರುಗುವಿಕೆ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಇದೆ. ಇದನ್ನ Diurnal Motion ಅಂತ ಕರೆಯುತ್ತೇವೆ. ಈ ರೀತಿಯ ತಿರುಗುವಿಕೆಯಿಂದ, ಭೂಮಿಯ ಆಗಸದಲ್ಲಿ ಕಾಣುವ ಎಲ್ಲಾ ಆಕಾಶಕಾಯಗಳು ಅಂದರೆ, ಸೂರ್ಯ, ಚಂದ್ರ, ಗ್ರಹ ಮತ್ತು ನಕ್ಷತ್ರ ಎಲ್ಲವೂ ಪೂರ್ವದಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುವಂತೆ ಗೋಚರಿಸುತ್ತವೆ.

ಈಗೆ ಭೂಮಿಯು ತನ್ನ ಅಕ್ಷದ ಸುತ್ತ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ತಿರುಗಲು ಸುಮಾರು 24 ಗಂಟೆಗಳು ಬೇಕಾಗುತ್ತವೆ. ಇದನ್ನೇ ನಾವು ಒಂದು ಭೂ ದಿನ ಎಂದು ಕರೆಯುತ್ತೇವೆ. ಭೂಮಿಯ ಹಾಗೆ ಇತರೆ ಗ್ರಹಗಳು ಕೂಡ ತನ್ನ ಧ್ರುವಗಳ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ಬೇರೆ ಬೇರೆ ಅವಧಿಯಲ್ಲಿ ತಿರುಗುತ್ತಿವೆ. ಸೌರ ಮಂಡಲದ ಎಲ್ಲಾ ಗ್ರಹಗಳು ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಸುತ್ತುತ್ತಿದ್ದರೆ, ಶುಕ್ರ ಗ್ರಹ ಮಾತ್ರ ಪೂರ್ವದಿಂದ ಪಶ್ಚಿಮ ದಿಕ್ಕಿಗೆ ತಿರುಗುತ್ತಿದೆ! (ಯುರೇನಸ್ ಗ್ರಹದ ತಿರುಗುವಿಕೆಯು ವಿಭಿನ್ನವಾಗಿದೆ. ಅದನ್ನು ಮುಂದೊಮ್ಮೆ ಚರ್ಚಿಸೋಣ).

ಶುಕ್ರ ಗ್ರಹವು ಪೂರ್ವದಿಂದ ಪಶ್ಚಿಮಕ್ಕೆ ತನ್ನ ಅಕ್ಷದ ಸುತ್ತ ಸುತ್ತುತ್ತಿರುವ ಕಾರಣದಿಂದ, ಶುಕ್ರ ಗ್ರಹಕ್ಕೆ ಮಾನವನೇನಾದರೂ ಒಂದು ದಿನ ಹೋದರೆ, ಅಲ್ಲಿಯ ಆಕಾಶದಲ್ಲಿ ಎಲ್ಲಾ ಆಕಾಶ ಕಾಯಗಳು ಪಶ್ಚಿಮ ದಿಕ್ಕಿನಲ್ಲಿ ಹುಟ್ಟಿ ಪೂರ್ವ ದಿಕ್ಕಿನಲ್ಲಿ ಮುಳುಗುವುದನ್ನ ಕಾಣುತ್ತಾನೆ. ಹಾಗಾಗಿ ಸೂರ್ಯ ಕೂಡ ಶುಕ್ರ ಗ್ರಹದಲ್ಲಿ ಪಶ್ಚಿಮದಲ್ಲಿ ಹುಟ್ಟಿ ಪೂರ್ವದಲ್ಲಿ ಮುಳುಗುತ್ತಾನೆ. ಎಷ್ಟು ವಿಸ್ಮಯಕಾರಿ ವಿಷಯ ಅಲ್ಲವೇ?. ಅಂದಹಾಗೆ ಶುಕ್ರ ಗ್ರಹದ ವಿಶೇಷತೆ ಇಲ್ಲಿಗೇ ನಿಲ್ಲುವುದಿಲ್ಲ!

ಶುಕ್ರ ಗ್ರಹ ತನ್ನ ಅಕ್ಷದ ಸುತ್ತ ಒಂದು ಸುತ್ತು ಸುತ್ತಲು ಬರೋಬ್ಬರಿ 243 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಇದರ ಅರ್ಥ, ಶುಕ್ರ ಗ್ರಹದ ಒಂದು ದಿನ ಭೂಮಿಯ 243 ದಿನಗಳಿಗೆ ಸಮ ಎಂದು. ಇದರ ಜೊತೆಗೆ, ಶುಕ್ರ ಗ್ರಹವು ಸೂರ್ಯನ ಸುತ್ತ ಒಂದು ಸುತ್ತು ಹಾಕಲು 225 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಹಾಗಾದರೆ, ಇದರ ಅರ್ಥ ಏನನ್ನು ಧ್ವನಿಸುತ್ತದೆ? ಶುಕ್ರ ಗ್ರಹದಲ್ಲಿ ಒಂದು ವರ್ಷಕ್ಕೆ 225 ಭೂ ದಿನಗಳು? ಆದರೆ, ಒಂದು ದಿನಕ್ಕೆ 243 ಭೂ ದಿನಗಳು ಎಂದು?

ಇವೆಲ್ಲವುವನ್ನು ಒಟ್ಟಾರೆಯಾಗಿ ಗಮನಿಸಿದರೆ, ಶುಕ್ರ ಗ್ರಹದಲ್ಲಿ ಒಂದು ದಿನ, ಒಂದು ವರ್ಷಕ್ಕಿಂತಲೂ ಹೆಚ್ಚು! ಅಂದರೆ, ಶುಕ್ರ ಗ್ರಹದಲ್ಲಿ ಒಂದು ದಿನವಾಗಬೇಕೆಂದರೆ, ಒಂದು ವರ್ಷ ಕಳೆದು, 18 ಭೂ ದಿನ ಕಳೆದಾಗ ಒಂದು ದಿನವಾಗುತ್ತದೆ! ಆಶ್ಚರ್ಯವಾದರೂ, ನಭೋ ಮಂಡಲದಲ್ಲಿ ಇಂತಹ ವಿಸ್ಮಯವಾದ ಅಂಶಗಳು ಬಹಳಷ್ಟಿವೆ.

ಸೌರಮಂಡಲದ ಇತರೆ ಗ್ರಹಗಳಿಗೆ ಹೋಲಿಸಿದರೆ, ಶುಕ್ರ ಗ್ರಹದ ಈ ವಿಶಿಷ್ಟವಾದ ತಿರುಗುವಿಕೆಗೆ (ಪಶ್ಚಿಮದಿಂದ ಪೂರ್ವಕ್ಕೆ) ವೈಜ್ಞಾನಿಕ ಕಾರಣಗಳು ಇನ್ನೂ ಅಸ್ಪಷ್ಟವಾಗಿದೆ. ಒಂದು ದೊಡ್ಡ ಆಕಾಶಕಾಯದ ಘರ್ಷಣೆಯಿಂದ ಹಾಗೂ ಸೂರ್ಯನ ಗುರುತ್ವ ಬಲದಿಂದ ಶುಕ್ರ ಗ್ರಹಕ್ಕೆ ಈ ರೀತಿಯ ತಿರುಗುವಿಕೆ ಇರಬಹುದು ಎಂದು ಊಹಿಸಲಾಗಿದೆ.


ಇದನ್ನೂ ಓದಿ: ವಿಜ್ಞಾನ-ವಿಶೇಷ; ಹಡಗು ಹಾರುತಿದೆ ನೋಡಿದಿರಾ?: ವಿಶ್ವಕೀರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...