Homeಮುಖಪುಟಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

- Advertisement -
- Advertisement -

ಇದೇನಿದು ಸೂರ್ಯ ಪಶ್ಚಿಮದಲ್ಲಿ ಹುಟ್ಟಲು ಸಾಧ್ಯವೇ ಅಂತ ಯೋಚನೆ ಮಾಡುತ್ತಿದ್ದಿರಾ? ನಮಗೆ ತಿಳಿದಿರೋ ಹಾಗೆ ಸೂರ್ಯ ಯಾವತ್ತಾದರೂ ಪೂರ್ವ ದಿಕ್ಕಿನಲ್ಲಿ ಹುಟ್ಟುವುದನ್ನೂ ಬಿಟ್ಟು ಬೇರೆ ಯಾವ ದಿಕ್ಕಿನಲ್ಲಾದರೂ ಹುಟ್ಟಿದ್ದಾನೇಯೇ ಅಥವಾ, ಸೂರ್ಯ ಪಶ್ಚಿಮದಲ್ಲಿ ಹುಟ್ಟಿದ್ದರ ಬಗ್ಗೆ ಯಾವುದಾದರೂ ಪುರಾಣ ಕಥೆಗಳಲ್ಲಾದರೂ ಕೇಳಿದ್ದೇವೆಯೇ? ಬಹುಶಃ ಇಲ್ಲ! ನಮ್ಮ ಎಲ್ಲಾ ಕಾಲದ ಗ್ರಹಿಕೆಯಲ್ಲಿ, ಭೂಮಿಯ ಮೇಲೆ ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುತ್ತಾನೆ ಎಂದೇ ನಮ್ಮ ತಿಳಿವಳಿಕೆ ಅಲ್ಲವೇ? ಭೂಮಿಯಲ್ಲೇನೋ ಈ ಪ್ರಕ್ರಿಯೆ ಸರಿ, ನಮ್ಮ ಸೌರಮಂಡಲದ ಇತರೆ ಗ್ರಹಗಳಲ್ಲೂ ಸೂರ್ಯ ಪೂರ್ವ ದಿಕ್ಕಿನಲ್ಲಿಯೇ ಹುಟ್ಟುತ್ತಾನಾ? ಇಂತಹ ಪ್ರಶ್ನೆಗಳೂ ನಿಮ್ಮಲ್ಲೂ ಹುಟ್ಟಿರಬಹುದು ಅಲ್ಲವೇ?

ಅದಕ್ಕೂ ಮುಂಚೆ, ಈ ಪ್ರಶ್ನೆ ಕೇಳಿಕೊಳ್ಳೋಣ. ನಮ್ಮ ಸೌರಮಂಡಲದಲ್ಲಿ ಭೂಮಿಯ ಗಾತ್ರದಲ್ಲೇ ಇರುವ ಮತ್ತೊಂದು ಗ್ರಹ ಯಾವುದು? ನಿಮ್ಮ ಊಹೆ ಶುಕ್ರ ಗ್ರಹವಾಗಿದ್ದರೆ ಅದು ಸರಿ ಉತ್ತರ. ಬನ್ನಿ ಹಾಗಾದರೆ, ಶುಕ್ರ ಗ್ರಹಕ್ಕೆ ಹೋಗಿ, ಅದರ ವಿಶೇಷತೆಯನ್ನು ತಿಳಿದುಬರೋಣ.

ಸೌರಮಂಡಲದಲ್ಲಿ ಶುಕ್ರ, ಬುಧ ಗ್ರಹದ ನಂತರದ ಗ್ರಹ. ಶುಕ್ರ ನಮ್ಮ ಸೌರಮಂಡಲದಲ್ಲೇ ಅತ್ಯಂತ ವಿಶಿಷ್ಟ ಗ್ರಹ. ಈ ಗ್ರಹದ ವಿಶಿಷ್ಟತೆ ತಿಳಿಯುವ ಮೊದಲು ಭೂಮಿಯ ಮೇಲೆ ಸೂರ್ಯ ಏಕೆ ಪೂರ್ವದಲ್ಲಿ ಹುಟ್ಟಿ, ಪಶ್ಚಿಮದಲ್ಲಿ ಮುಳುಗುತ್ತಾನೆ ಎನ್ನುವ ವಿಚಾರವನ್ನು ತಿಳಿಯೋಣ.

ಭೂಮಿಯು, ತನ್ನ ಉತ್ತರ ಮತ್ತು ದಕ್ಷಿಣ ಧ್ರುವದ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ತಿರುಗುತ್ತಿರುವುದು ನಮಗೆಲ್ಲರಿಗೂ ತಿಳಿದ ವಿಷಯ. ಈ ತಿರುಗುವಿಕೆ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಇದೆ. ಇದನ್ನ Diurnal Motion ಅಂತ ಕರೆಯುತ್ತೇವೆ. ಈ ರೀತಿಯ ತಿರುಗುವಿಕೆಯಿಂದ, ಭೂಮಿಯ ಆಗಸದಲ್ಲಿ ಕಾಣುವ ಎಲ್ಲಾ ಆಕಾಶಕಾಯಗಳು ಅಂದರೆ, ಸೂರ್ಯ, ಚಂದ್ರ, ಗ್ರಹ ಮತ್ತು ನಕ್ಷತ್ರ ಎಲ್ಲವೂ ಪೂರ್ವದಲ್ಲಿ ಹುಟ್ಟಿ ಪಶ್ಚಿಮದಲ್ಲಿ ಮುಳುಗುವಂತೆ ಗೋಚರಿಸುತ್ತವೆ.

ಈಗೆ ಭೂಮಿಯು ತನ್ನ ಅಕ್ಷದ ಸುತ್ತ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ತಿರುಗಲು ಸುಮಾರು 24 ಗಂಟೆಗಳು ಬೇಕಾಗುತ್ತವೆ. ಇದನ್ನೇ ನಾವು ಒಂದು ಭೂ ದಿನ ಎಂದು ಕರೆಯುತ್ತೇವೆ. ಭೂಮಿಯ ಹಾಗೆ ಇತರೆ ಗ್ರಹಗಳು ಕೂಡ ತನ್ನ ಧ್ರುವಗಳ ಮೂಲಕ ಹಾದು ಹೋಗುವ ಕಾಲ್ಪನಿಕ ಅಕ್ಷದ ಸುತ್ತ ಬೇರೆ ಬೇರೆ ಅವಧಿಯಲ್ಲಿ ತಿರುಗುತ್ತಿವೆ. ಸೌರ ಮಂಡಲದ ಎಲ್ಲಾ ಗ್ರಹಗಳು ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಸುತ್ತುತ್ತಿದ್ದರೆ, ಶುಕ್ರ ಗ್ರಹ ಮಾತ್ರ ಪೂರ್ವದಿಂದ ಪಶ್ಚಿಮ ದಿಕ್ಕಿಗೆ ತಿರುಗುತ್ತಿದೆ! (ಯುರೇನಸ್ ಗ್ರಹದ ತಿರುಗುವಿಕೆಯು ವಿಭಿನ್ನವಾಗಿದೆ. ಅದನ್ನು ಮುಂದೊಮ್ಮೆ ಚರ್ಚಿಸೋಣ).

ಶುಕ್ರ ಗ್ರಹವು ಪೂರ್ವದಿಂದ ಪಶ್ಚಿಮಕ್ಕೆ ತನ್ನ ಅಕ್ಷದ ಸುತ್ತ ಸುತ್ತುತ್ತಿರುವ ಕಾರಣದಿಂದ, ಶುಕ್ರ ಗ್ರಹಕ್ಕೆ ಮಾನವನೇನಾದರೂ ಒಂದು ದಿನ ಹೋದರೆ, ಅಲ್ಲಿಯ ಆಕಾಶದಲ್ಲಿ ಎಲ್ಲಾ ಆಕಾಶ ಕಾಯಗಳು ಪಶ್ಚಿಮ ದಿಕ್ಕಿನಲ್ಲಿ ಹುಟ್ಟಿ ಪೂರ್ವ ದಿಕ್ಕಿನಲ್ಲಿ ಮುಳುಗುವುದನ್ನ ಕಾಣುತ್ತಾನೆ. ಹಾಗಾಗಿ ಸೂರ್ಯ ಕೂಡ ಶುಕ್ರ ಗ್ರಹದಲ್ಲಿ ಪಶ್ಚಿಮದಲ್ಲಿ ಹುಟ್ಟಿ ಪೂರ್ವದಲ್ಲಿ ಮುಳುಗುತ್ತಾನೆ. ಎಷ್ಟು ವಿಸ್ಮಯಕಾರಿ ವಿಷಯ ಅಲ್ಲವೇ?. ಅಂದಹಾಗೆ ಶುಕ್ರ ಗ್ರಹದ ವಿಶೇಷತೆ ಇಲ್ಲಿಗೇ ನಿಲ್ಲುವುದಿಲ್ಲ!

ಶುಕ್ರ ಗ್ರಹ ತನ್ನ ಅಕ್ಷದ ಸುತ್ತ ಒಂದು ಸುತ್ತು ಸುತ್ತಲು ಬರೋಬ್ಬರಿ 243 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಇದರ ಅರ್ಥ, ಶುಕ್ರ ಗ್ರಹದ ಒಂದು ದಿನ ಭೂಮಿಯ 243 ದಿನಗಳಿಗೆ ಸಮ ಎಂದು. ಇದರ ಜೊತೆಗೆ, ಶುಕ್ರ ಗ್ರಹವು ಸೂರ್ಯನ ಸುತ್ತ ಒಂದು ಸುತ್ತು ಹಾಕಲು 225 ಭೂ ದಿನಗಳನ್ನು ತೆಗೆದುಕೊಳ್ಳುತ್ತದೆ. ಹಾಗಾದರೆ, ಇದರ ಅರ್ಥ ಏನನ್ನು ಧ್ವನಿಸುತ್ತದೆ? ಶುಕ್ರ ಗ್ರಹದಲ್ಲಿ ಒಂದು ವರ್ಷಕ್ಕೆ 225 ಭೂ ದಿನಗಳು? ಆದರೆ, ಒಂದು ದಿನಕ್ಕೆ 243 ಭೂ ದಿನಗಳು ಎಂದು?

ಇವೆಲ್ಲವುವನ್ನು ಒಟ್ಟಾರೆಯಾಗಿ ಗಮನಿಸಿದರೆ, ಶುಕ್ರ ಗ್ರಹದಲ್ಲಿ ಒಂದು ದಿನ, ಒಂದು ವರ್ಷಕ್ಕಿಂತಲೂ ಹೆಚ್ಚು! ಅಂದರೆ, ಶುಕ್ರ ಗ್ರಹದಲ್ಲಿ ಒಂದು ದಿನವಾಗಬೇಕೆಂದರೆ, ಒಂದು ವರ್ಷ ಕಳೆದು, 18 ಭೂ ದಿನ ಕಳೆದಾಗ ಒಂದು ದಿನವಾಗುತ್ತದೆ! ಆಶ್ಚರ್ಯವಾದರೂ, ನಭೋ ಮಂಡಲದಲ್ಲಿ ಇಂತಹ ವಿಸ್ಮಯವಾದ ಅಂಶಗಳು ಬಹಳಷ್ಟಿವೆ.

ಸೌರಮಂಡಲದ ಇತರೆ ಗ್ರಹಗಳಿಗೆ ಹೋಲಿಸಿದರೆ, ಶುಕ್ರ ಗ್ರಹದ ಈ ವಿಶಿಷ್ಟವಾದ ತಿರುಗುವಿಕೆಗೆ (ಪಶ್ಚಿಮದಿಂದ ಪೂರ್ವಕ್ಕೆ) ವೈಜ್ಞಾನಿಕ ಕಾರಣಗಳು ಇನ್ನೂ ಅಸ್ಪಷ್ಟವಾಗಿದೆ. ಒಂದು ದೊಡ್ಡ ಆಕಾಶಕಾಯದ ಘರ್ಷಣೆಯಿಂದ ಹಾಗೂ ಸೂರ್ಯನ ಗುರುತ್ವ ಬಲದಿಂದ ಶುಕ್ರ ಗ್ರಹಕ್ಕೆ ಈ ರೀತಿಯ ತಿರುಗುವಿಕೆ ಇರಬಹುದು ಎಂದು ಊಹಿಸಲಾಗಿದೆ.


ಇದನ್ನೂ ಓದಿ: ವಿಜ್ಞಾನ-ವಿಶೇಷ; ಹಡಗು ಹಾರುತಿದೆ ನೋಡಿದಿರಾ?: ವಿಶ್ವಕೀರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...