Homeಮುಖಪುಟಸುನಂದಾ ಪುಷ್ಕರ್‌ ಪ್ರಕರಣ: ಕಾಂಗ್ರೆಸ್ ಸಂಸದ ಶಶಿ ತರೂರ್ ಖುಲಾಸೆ

ಸುನಂದಾ ಪುಷ್ಕರ್‌ ಪ್ರಕರಣ: ಕಾಂಗ್ರೆಸ್ ಸಂಸದ ಶಶಿ ತರೂರ್ ಖುಲಾಸೆ

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ, ಸಂಸದ ಶಶಿ ತರೂರ್ ಅವರನ್ನು ಅವರ ಪತ್ನಿ ಸುನಂದಾ ಪುಷ್ಕರ್‌ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಬುಧವಾರ ಖುಲಾಸೆಗೊಳಿಸಿದೆ. ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಆನ್‌ಲೈನ್‌ ವಿಚಾರಣೆಯಲ್ಲಿ ಈ ಆದೇಶ ನೀಡಿದ್ದಾರೆ.

“ನ್ಯಾಯಾಧೀಶರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇದು ಏಳೂವರೆ ವರ್ಷಗಳ ಸಂಪೂರ್ಣ ಹಿಂಸೆಯಾಗಿದೆ. ತೀರ್ಪನ್ನು ನಿಜವಾಗಿಯೂ ಪ್ರಶಂಸಿಸುತ್ತೇನೆ. ಈಗ ದೊಡ್ಡ ಪರಿಹಾರ ಸಿಕ್ಕಿದೆ” ಎಂದು ಶಶಿ ತರೂರ್ ನ್ಯಾಯಾಧೀಶರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಿ: ಸಿಎಂಗೆ ಸಿದ್ದರಾಮಯ್ಯ ಪತ್ರ

ಪೊಲೀಸರು ಆತ್ಮಹತ್ಯೆಗೆ ಕುಮ್ಮಕ್ಕು ಸೇರಿದಂತೆ ವಿವಿಧ ಆರೋಪಗಳನ್ನು ದಾಖಲಿಸುವಂತೆ ನ್ಯಾಯಾಲಯಕ್ಕೆ ಕೋರಿದ್ದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಶಿ ತರೂರ್‌ ಪರ ವಕೀಲ, “ಎಸ್‌ಐಟಿ ಈಗಾಗಲೆ ನಡೆಸಿದ ತನಿಖೆಯು ಶಶಿ ತರೂರ್ ಅವರನ್ನು ಸಂಪೂರ್ಣವಾಗಿ ದೋಷಮುಕ್ತಗೊಳಿಸಿದೆ” ಎಂದು ವಾದಿಸಿದ್ದಾರೆ.

ಸುನಂದಾ ಪುಷ್ಕರ್ ಅವರು ಜನವರಿ 17, 2014 ರ ರಾತ್ರಿ ದೆಹಲಿಯ ಐಷಾರಾಮಿ ಹೋಟೆಲ್‌ನ ಸೂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಆ ಸಮಯದಲ್ಲಿ ಶಶಿ ತರೂರ್ ಅವರ ಅಧಿಕೃತ ಬಂಗಲೆಯನ್ನು ನವೀಕರಿಸುತ್ತಿದ್ದ ಕಾರಣ ದಂಪತಿಗಳು ಹೋಟೆಲ್‌ನಲ್ಲಿ ತಂಗಿದ್ದರು.

ಇದನ್ನೂ ಓದಿ: ಹೆಸರು ಬದಲಾವಣೆ ಮುಂದುವರೆಸಿದ ಬಿಜೆಪಿ: ಉತ್ತರ ಪ್ರದೇಶದ ಅಲಿಗಢ ಮರುನಾಮಕರಣಕ್ಕೆ ಪ್ರಸ್ತಾಪ

ದೆಹಲಿ ಪೊಲೀಸರು ತರೂರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ (ಗಂಡ ಅಥವಾ ಗಂಡನ ಸಂಬಂಧಿಗಳು ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವುದು) ಮತ್ತು 306 ರ ಅಡಿಯಲ್ಲಿ ಆರೋಪ ಹೊರಿಸಿದ್ದರು, ಆದರೆ ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿಲ್ಲ. ಜುಲೈ 5, 2018 ರಂದು ಅವರಿಗೆ ಪ್ರಕರಣದಲ್ಲಿ ಜಾಮೀನು ನೀಡಲಾಯಿತು.

ಶಶಿ ತರೂರ್ ಮತ್ತು ಸುನಂದಾ ಪುಷ್ಕರ್ 2010 ರಲ್ಲಿ ವಿವಾಹವಾದರು. ನಾಲ್ಕು ವರ್ಷಗಳ ನಂತರ ಸಂಭವಿಸಿದ ಸುನಂದಾ ಸಾವು ರಾಜಕೀಯ ವಲಯಗಳಲ್ಲಿ ಭಾರಿ ಊಹಾಪೋಹಗಳಿಗೆ ಕಾರಣವಾಯಿತು. ಸುನಂದಾ ವಿಷ ಸೇವಿಸಿದ್ದಾರೆ ಎಂದು ಪೊಲೀಸರು ಮೊದಲು ಹೇಳಿಕೊಂಡಿದ್ದರು. ಒಂದು ವರ್ಷದ ನಂತರ, ಅವರು ಯಾವುದೇ ಶಂಕಿತರನ್ನು ಹೆಸರಿಸದೆ ಕೊಲೆ ಪ್ರಕರಣವನ್ನು ದಾಖಲಿಸಿದರು.

ಪ್ರಕರಣದಲ್ಲಿ ರಾಜಕೀಯ ವಿರೋಧಿಗಳಿಂದ ಪದೇ ಪದೇ ಗುರಿಯಾಗುತ್ತಿದ್ದ ತರೂರ್, ತಮ್ಮ ಮೇಲಿನ ಆರೋಪಗಳನ್ನು, “ಅಸಂಬದ್ಧ, ಆಧಾರರಹಿತ, ದುರುದ್ದೇಶಪೂರಿತ ಮತ್ತು ಪ್ರತೀಕಾರ ಅಭಿಯಾನದ ಉತ್ಪನ್ನ” ಎಂದು ಕರೆದಿದ್ದರು.

ಇದನ್ನೂ ಓದಿ: ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...