Homeಮುಖಪುಟಸುಂದರ್ ನಗರದಲ್ಲಿ ಅತಂತ್ರರಾದ ಸ್ಲಂ ನಿವಾಸಿಗಳು

ಸುಂದರ್ ನಗರದಲ್ಲಿ ಅತಂತ್ರರಾದ ಸ್ಲಂ ನಿವಾಸಿಗಳು

- Advertisement -
- Advertisement -

ದೆಹಲಿಯ ಸುಂದರ್ ನಗರದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸೂಚನೆ ಮೇರೆಗೆ ಮನೆಗಳನ್ನು ತೆರವು ಮಾಡಲಾಗಿದ್ದು, ಇದರಿಂದ ಸ್ಲಂ ನಿವಾಸಿಗಳು ಅತಂತ್ರರಾಗಿದ್ದಾರೆ. ಪುನರ್ವಸತಿಯನ್ನು ಕಲ್ಪಿಸದೆ ಸ್ಲಂ ನಿವಾಸಿಗಳ ಮನೆಗಳನ್ನು ಏಕಾಏಕಿ ತೆರವು ಮಾಡಿ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸುಂದರ್ ನಗರದಲ್ಲಿ ಕೈಗೊಂಡ ಮನೆಗಳ ತೆರವು ಕಾರ್ಯಾಚರಣೆ 200ಕ್ಕೂ ಹೆಚ್ಚು ಕುಟುಂಬಗಳ  ಮೇಲೆ ಪರಿಣಾಮ ಬೀಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸೂಚನೆ ಮೇರೆ ಮನೆಗಳನ್ನು ತೆರವು ಮಾಡಲಾಗಿದೆ ಮತ್ತು ದೆಹಲಿ ಹೈಕೋರ್ಟ್ ತೆರವು ಕಾರ್ಯಚರಣೆಗೆ ತಡೆಯಲು ನಿರಾಕರಿಸಿತ್ತು.

ನ.18 ರಂದು ಪೋಸ್ಟರ್‌ಗಳು ಮತ್ತು ನೋಟಿಸ್‌ಗಳನ್ನು ಹಾಕಲಾಯಿತು ಮತ್ತು ಸ್ಲಂಗಳನ್ನು ತಕ್ಷಣವೇ ಖಾಲಿ ಮಾಡುವಂತೆ ಆದೇಶ ನೀಡಲಾಯಿತು. ಇಲ್ಲಿ ವಾಸಿಸುವ ಹೆಚ್ಚಿನವರು ಮಹಿಳೆಯರು ಮತ್ತು ಪುರುಷರು ಚಿಂದಿ ಆಯುವವರು, ರಿಕ್ಷಾ  ಚಾಲಕರು ಮತ್ತು ಮನೆಗೆಲಸ ಮಾಡುವವರು. ಅವರಲ್ಲಿ ಹಲವರು ಬಾಡಿಗೆಗೆ ವಾಸಿಸುತ್ತಿದ್ದಾರೆ. ಕೆಲವರು 40 ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದರು.

ಸುಂದರ್ ನಗರ ಬಸ್ತಿಯಲ್ಲಿರುವ ಮನೆಗಳನ್ನು ಕೆಡವುವಾಗ ಅಧಿಕಾರಿಗಳು 2015ರ ನೀತಿಯಲ್ಲಿ ರೂಪಿಸಲಾದ ದೆಹಲಿ ಸ್ಲಂ ಮತ್ತು ಜೆಜೆ ಪುನರ್ವಸತಿ ಮತ್ತು ಸ್ಥಳಾಂತರ ನೀತಿ ಎಂಬ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕಿತ್ತು. ಆದರೆ ಭೂ ಮತ್ತು ಅಭಿವೃದ್ಧಿ ಕಚೇರಿ (L&DO) ಜನರು ವಾಸಿಸುತ್ತಿದ್ದ ಮನೆಗಳನ್ನು ಕೆಡವುವ ಸಮಯದಲ್ಲಿ ಹಲವಾರು ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.

ಸುಂದರ್ ನಗರ ಬಸ್ತಿಯಲ್ಲಿರುವ ಫಾತಿಮಾ ಎಂಬವರ ಮನೆಯನ್ನು ನ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆಡವಲಾಗಿದೆ. ಅವರ ಪತಿ ಟೂರಿಸ್ಟ್ ಟ್ಯಾಕ್ಸಿ ಚಾಲಕರಾಗಿದ್ದು ಆಗ್ರಾಕ್ಕೆ ತೆರಳಿದ್ದರು. ಪ್ರವಾಸಿಗರಿಗೆ ತಾಜ್ ಮಹಲ್ ತೋರಿಸಿ ಮನೆಗೆಂದು ವಾಪಾಸ್ಸು ಬರುವಾಗ ಮನೆಯೇ ನೆಲಸಮಗೊಂಡಿತ್ತು. ಮನೆ ಕಳೆದುಕೊಂಡು ಫಾತಿಮಾ (20) ಬೀದಿಯಲ್ಲಿ ತನ್ನ 4 ತಿಂಗಳ ಮಗಳನ್ನು ತೊಟ್ಟಿಲಲ್ಲಿ ಹಾಕಿಕೊಂಡು ಕುಳಿತಿದ್ದರು. ಪಕ್ಕದ ರಸ್ತೆಯಲ್ಲಿ ಗೃಹೋಪಯೋಗಿ ವಸ್ತುಗಳು ಬಿದ್ದುಕೊಂಡಿದ್ದವು. ಫಾತಿಮಾಳ ಪಕ್ಕದಲ್ಲಿ ಪಾರ್ಶ್ವವಾಯುವಿನಿಂದ ನರಳುತ್ತಿದ್ದ ಅತ್ತಿಗೆ ಕಣ್ಣೀರಿಡುತ್ತಿದ್ದರು.

ಮನೆಗಳನ್ನು ಕೆಡವಲು 15 ದಿನಗಳ ಮೊದಲು ಪರ್ಯಾಯ ಪುನರ್ವಸತಿಯನ್ನು ಒದಗಿಸಬೇಕು ಎಂದು ನಿಯಮವು ಹೇಳುತ್ತದೆ. ಗುಜಿರಿ ಕೆಲಸ ಮಾಡುತ್ತಿದ್ದ ಪ್ಯಾರೆ ಲಾಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ನ.18 ರಂದು  ಮನೆಗಳನ್ನು ತೆರವುಗೊಳಿಸುವುದಾಗಿ ಪೋಸ್ಟರ್‌ ಹಾಕಿದ್ದಾರೆ. ನೋಟಿಸ್ ನಮ್ಮನ್ನು ಭಯಭೀತರನ್ನಾಗಿ ಮಾಡಿತ್ತು. ತದನಂತರ ಇದ್ದಕ್ಕಿದ್ದಂತೆ ಬುಲ್ಡೋಜರ್‌ಗಳು ಬಂದವು. ನಮ್ಮ ಮನೆಗಳನ್ನು ನೆಲಸಮ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮನೆ ಕಳೆದುಕೊಂಡವರು ಈ 3 ದಿನಗಳ ಅವಧಿಯಲ್ಲಿ ವಸತಿಗಳನ್ನು ಬಾಡಿಗೆಗೆ ಪಡೆಯಲು ಬೇಕಾದಷ್ಟು ಆರ್ಥಿಕ ಸಾಮರ್ಥ್ಯವನ್ನು ಹೊಂದಿರಲಿಲ್ಲ. ಅವರಲ್ಲಿ ಬಹುಪಾಲು ದಿನಗೂಲಿದಾರರು, ಮನೆ ಕೆಲಸಗಾರರು ಮತ್ತು ಗುಜಿರಿ ಸಂಗ್ರಹಿಸುವವರಾಗಿದ್ದರು. ಸ್ಥಳಾಂತರಗೊಂಡ ಒಂದು ಕುಟುಂಬಕ್ಕೂ ಪರ್ಯಾಯ ಪುನರ್ವಸತಿ ಒದಗಿಸಲು DUSIB ವಿಫಲವಾಗಿದೆ. ಮನೆಗಳನ್ನು ಕೆಡವಿದ ಸ್ಥಳದಿಂದ 5 ಕಿಲೋಮೀಟರ್‌ಗಳ ಒಳಗೆ ಪರ್ಯಾಯ ಪುನರ್ವಸತಿಯನ್ನು ಒದಗಿಸಬೇಕು ಎಂದು ನೀತಿಯು ಉಲ್ಲೇಖಿಸುತ್ತದೆ. ಆದರೆ ಜನರಿಗೆ ವಸತಿ ವ್ಯವಸ್ಥೆಯನ್ನು ಮಾಡಿರಲಿಲ್ಲ.

ಸುಂದರ್ ನಗರದ ಸ್ಥಳಾಂತರಗೊಂಡ ಕುಟುಂಬಗಳಿಗೆ ಜೀವನೋಪಾಯದ ಮತ್ತು ಮಕ್ಕಳ ಶಿಕ್ಷಣದ ಬಗೆಗೆ ಸಮಸ್ಯೆ ಎದುರಾಗಿದೆ. ನಾಸಿರಾ ಬೀಬಿ (33) ಸಮೀಪದ ಐಷಾರಾಮಿ ಬಂಗಲೆಯಲ್ಲಿ ಮನೆ ಕೆಲಸಗಾರ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ನಾವು ದೂರ ಹೋದರೆ ಇನ್ನು ಕೆಲಸವನ್ನು ಮಾಡಲು ಸಾಧ್ಯವಿಲ್ಲ. ಮಕ್ಕಳು ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಕಲಿಯುತ್ತಿದ್ದರು. ಮನೆಗಳನ್ನು ತೆರವಿನ ಬಳಿಕ ಮಕ್ಕಳ ಭವಿಷ್ಯವು ಅತಂತ್ರವಾಗಿದೆ ಎಂದು ಹೇಳಿದ್ದಾರೆ.

ಶಾಲಾ-ಕಾಲೇಜು ಪರೀಕ್ಷೆಗಳು ನಡೆಯುವಾಗ ಮನೆಗಳನ್ನು ಕೆಡವಬಾರದು ಎಂದು ನಿಯಮವು ಹೇಳುತ್ತದೆ.  ಆದರೆ ಫಲಕ್ ಎಂಬಾಕೆ 12ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆಕೆಯ ಮನೆಯನ್ನು ಕೂಡ ಕೆಡವಲಾಗಿದೆ. ಮುಂದಿನ ತಿಂಗಳು ಅವರ ಪ್ರಿ-ಬೋರ್ಡ್ ಪರೀಕ್ಷೆಗಳು ನಡೆಯಲಿವೆ. ನಾಳೆ ನನಗೆ ವಾರದ ಪರೀಕ್ಷೆ ಇದೆ. ನನಗೆ ಮನಸ್ಸಿಗೆ ಶಾಂತಿ ಇಲ್ಲ ಎಂದು ಫಲಕ್‌ ಅಳಲು ತೋಡಿಕೊಂಡಿದ್ದಾರೆ. ಪ್ರಿಯಾ (38) ಅವರು ಈ ಬಗ್ಗೆ ಮಾತನಾಡಿದ್ದು, ಮಕ್ಕಳ ಮತ್ತು ನಮ್ಮ ಭವಿಷ್ಯಗಳು ಈಗ ಮಂಕಾಗಿವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’: ಕೇಂದ್ರದ ಉತ್ತರದಲ್ಲಿ ಸ್ಪಷ್ಟನೆ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...