Homeಮುಖಪುಟಸುಂದರ್ ನಗರದಲ್ಲಿ ಅತಂತ್ರರಾದ ಸ್ಲಂ ನಿವಾಸಿಗಳು

ಸುಂದರ್ ನಗರದಲ್ಲಿ ಅತಂತ್ರರಾದ ಸ್ಲಂ ನಿವಾಸಿಗಳು

- Advertisement -
- Advertisement -

ದೆಹಲಿಯ ಸುಂದರ್ ನಗರದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸೂಚನೆ ಮೇರೆಗೆ ಮನೆಗಳನ್ನು ತೆರವು ಮಾಡಲಾಗಿದ್ದು, ಇದರಿಂದ ಸ್ಲಂ ನಿವಾಸಿಗಳು ಅತಂತ್ರರಾಗಿದ್ದಾರೆ. ಪುನರ್ವಸತಿಯನ್ನು ಕಲ್ಪಿಸದೆ ಸ್ಲಂ ನಿವಾಸಿಗಳ ಮನೆಗಳನ್ನು ಏಕಾಏಕಿ ತೆರವು ಮಾಡಿ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸುಂದರ್ ನಗರದಲ್ಲಿ ಕೈಗೊಂಡ ಮನೆಗಳ ತೆರವು ಕಾರ್ಯಾಚರಣೆ 200ಕ್ಕೂ ಹೆಚ್ಚು ಕುಟುಂಬಗಳ  ಮೇಲೆ ಪರಿಣಾಮ ಬೀಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸೂಚನೆ ಮೇರೆ ಮನೆಗಳನ್ನು ತೆರವು ಮಾಡಲಾಗಿದೆ ಮತ್ತು ದೆಹಲಿ ಹೈಕೋರ್ಟ್ ತೆರವು ಕಾರ್ಯಚರಣೆಗೆ ತಡೆಯಲು ನಿರಾಕರಿಸಿತ್ತು.

ನ.18 ರಂದು ಪೋಸ್ಟರ್‌ಗಳು ಮತ್ತು ನೋಟಿಸ್‌ಗಳನ್ನು ಹಾಕಲಾಯಿತು ಮತ್ತು ಸ್ಲಂಗಳನ್ನು ತಕ್ಷಣವೇ ಖಾಲಿ ಮಾಡುವಂತೆ ಆದೇಶ ನೀಡಲಾಯಿತು. ಇಲ್ಲಿ ವಾಸಿಸುವ ಹೆಚ್ಚಿನವರು ಮಹಿಳೆಯರು ಮತ್ತು ಪುರುಷರು ಚಿಂದಿ ಆಯುವವರು, ರಿಕ್ಷಾ  ಚಾಲಕರು ಮತ್ತು ಮನೆಗೆಲಸ ಮಾಡುವವರು. ಅವರಲ್ಲಿ ಹಲವರು ಬಾಡಿಗೆಗೆ ವಾಸಿಸುತ್ತಿದ್ದಾರೆ. ಕೆಲವರು 40 ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದರು.

ಸುಂದರ್ ನಗರ ಬಸ್ತಿಯಲ್ಲಿರುವ ಮನೆಗಳನ್ನು ಕೆಡವುವಾಗ ಅಧಿಕಾರಿಗಳು 2015ರ ನೀತಿಯಲ್ಲಿ ರೂಪಿಸಲಾದ ದೆಹಲಿ ಸ್ಲಂ ಮತ್ತು ಜೆಜೆ ಪುನರ್ವಸತಿ ಮತ್ತು ಸ್ಥಳಾಂತರ ನೀತಿ ಎಂಬ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕಿತ್ತು. ಆದರೆ ಭೂ ಮತ್ತು ಅಭಿವೃದ್ಧಿ ಕಚೇರಿ (L&DO) ಜನರು ವಾಸಿಸುತ್ತಿದ್ದ ಮನೆಗಳನ್ನು ಕೆಡವುವ ಸಮಯದಲ್ಲಿ ಹಲವಾರು ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.

ಸುಂದರ್ ನಗರ ಬಸ್ತಿಯಲ್ಲಿರುವ ಫಾತಿಮಾ ಎಂಬವರ ಮನೆಯನ್ನು ನ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆಡವಲಾಗಿದೆ. ಅವರ ಪತಿ ಟೂರಿಸ್ಟ್ ಟ್ಯಾಕ್ಸಿ ಚಾಲಕರಾಗಿದ್ದು ಆಗ್ರಾಕ್ಕೆ ತೆರಳಿದ್ದರು. ಪ್ರವಾಸಿಗರಿಗೆ ತಾಜ್ ಮಹಲ್ ತೋರಿಸಿ ಮನೆಗೆಂದು ವಾಪಾಸ್ಸು ಬರುವಾಗ ಮನೆಯೇ ನೆಲಸಮಗೊಂಡಿತ್ತು. ಮನೆ ಕಳೆದುಕೊಂಡು ಫಾತಿಮಾ (20) ಬೀದಿಯಲ್ಲಿ ತನ್ನ 4 ತಿಂಗಳ ಮಗಳನ್ನು ತೊಟ್ಟಿಲಲ್ಲಿ ಹಾಕಿಕೊಂಡು ಕುಳಿತಿದ್ದರು. ಪಕ್ಕದ ರಸ್ತೆಯಲ್ಲಿ ಗೃಹೋಪಯೋಗಿ ವಸ್ತುಗಳು ಬಿದ್ದುಕೊಂಡಿದ್ದವು. ಫಾತಿಮಾಳ ಪಕ್ಕದಲ್ಲಿ ಪಾರ್ಶ್ವವಾಯುವಿನಿಂದ ನರಳುತ್ತಿದ್ದ ಅತ್ತಿಗೆ ಕಣ್ಣೀರಿಡುತ್ತಿದ್ದರು.

ಮನೆಗಳನ್ನು ಕೆಡವಲು 15 ದಿನಗಳ ಮೊದಲು ಪರ್ಯಾಯ ಪುನರ್ವಸತಿಯನ್ನು ಒದಗಿಸಬೇಕು ಎಂದು ನಿಯಮವು ಹೇಳುತ್ತದೆ. ಗುಜಿರಿ ಕೆಲಸ ಮಾಡುತ್ತಿದ್ದ ಪ್ಯಾರೆ ಲಾಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ನ.18 ರಂದು  ಮನೆಗಳನ್ನು ತೆರವುಗೊಳಿಸುವುದಾಗಿ ಪೋಸ್ಟರ್‌ ಹಾಕಿದ್ದಾರೆ. ನೋಟಿಸ್ ನಮ್ಮನ್ನು ಭಯಭೀತರನ್ನಾಗಿ ಮಾಡಿತ್ತು. ತದನಂತರ ಇದ್ದಕ್ಕಿದ್ದಂತೆ ಬುಲ್ಡೋಜರ್‌ಗಳು ಬಂದವು. ನಮ್ಮ ಮನೆಗಳನ್ನು ನೆಲಸಮ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮನೆ ಕಳೆದುಕೊಂಡವರು ಈ 3 ದಿನಗಳ ಅವಧಿಯಲ್ಲಿ ವಸತಿಗಳನ್ನು ಬಾಡಿಗೆಗೆ ಪಡೆಯಲು ಬೇಕಾದಷ್ಟು ಆರ್ಥಿಕ ಸಾಮರ್ಥ್ಯವನ್ನು ಹೊಂದಿರಲಿಲ್ಲ. ಅವರಲ್ಲಿ ಬಹುಪಾಲು ದಿನಗೂಲಿದಾರರು, ಮನೆ ಕೆಲಸಗಾರರು ಮತ್ತು ಗುಜಿರಿ ಸಂಗ್ರಹಿಸುವವರಾಗಿದ್ದರು. ಸ್ಥಳಾಂತರಗೊಂಡ ಒಂದು ಕುಟುಂಬಕ್ಕೂ ಪರ್ಯಾಯ ಪುನರ್ವಸತಿ ಒದಗಿಸಲು DUSIB ವಿಫಲವಾಗಿದೆ. ಮನೆಗಳನ್ನು ಕೆಡವಿದ ಸ್ಥಳದಿಂದ 5 ಕಿಲೋಮೀಟರ್‌ಗಳ ಒಳಗೆ ಪರ್ಯಾಯ ಪುನರ್ವಸತಿಯನ್ನು ಒದಗಿಸಬೇಕು ಎಂದು ನೀತಿಯು ಉಲ್ಲೇಖಿಸುತ್ತದೆ. ಆದರೆ ಜನರಿಗೆ ವಸತಿ ವ್ಯವಸ್ಥೆಯನ್ನು ಮಾಡಿರಲಿಲ್ಲ.

ಸುಂದರ್ ನಗರದ ಸ್ಥಳಾಂತರಗೊಂಡ ಕುಟುಂಬಗಳಿಗೆ ಜೀವನೋಪಾಯದ ಮತ್ತು ಮಕ್ಕಳ ಶಿಕ್ಷಣದ ಬಗೆಗೆ ಸಮಸ್ಯೆ ಎದುರಾಗಿದೆ. ನಾಸಿರಾ ಬೀಬಿ (33) ಸಮೀಪದ ಐಷಾರಾಮಿ ಬಂಗಲೆಯಲ್ಲಿ ಮನೆ ಕೆಲಸಗಾರ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ನಾವು ದೂರ ಹೋದರೆ ಇನ್ನು ಕೆಲಸವನ್ನು ಮಾಡಲು ಸಾಧ್ಯವಿಲ್ಲ. ಮಕ್ಕಳು ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಕಲಿಯುತ್ತಿದ್ದರು. ಮನೆಗಳನ್ನು ತೆರವಿನ ಬಳಿಕ ಮಕ್ಕಳ ಭವಿಷ್ಯವು ಅತಂತ್ರವಾಗಿದೆ ಎಂದು ಹೇಳಿದ್ದಾರೆ.

ಶಾಲಾ-ಕಾಲೇಜು ಪರೀಕ್ಷೆಗಳು ನಡೆಯುವಾಗ ಮನೆಗಳನ್ನು ಕೆಡವಬಾರದು ಎಂದು ನಿಯಮವು ಹೇಳುತ್ತದೆ.  ಆದರೆ ಫಲಕ್ ಎಂಬಾಕೆ 12ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆಕೆಯ ಮನೆಯನ್ನು ಕೂಡ ಕೆಡವಲಾಗಿದೆ. ಮುಂದಿನ ತಿಂಗಳು ಅವರ ಪ್ರಿ-ಬೋರ್ಡ್ ಪರೀಕ್ಷೆಗಳು ನಡೆಯಲಿವೆ. ನಾಳೆ ನನಗೆ ವಾರದ ಪರೀಕ್ಷೆ ಇದೆ. ನನಗೆ ಮನಸ್ಸಿಗೆ ಶಾಂತಿ ಇಲ್ಲ ಎಂದು ಫಲಕ್‌ ಅಳಲು ತೋಡಿಕೊಂಡಿದ್ದಾರೆ. ಪ್ರಿಯಾ (38) ಅವರು ಈ ಬಗ್ಗೆ ಮಾತನಾಡಿದ್ದು, ಮಕ್ಕಳ ಮತ್ತು ನಮ್ಮ ಭವಿಷ್ಯಗಳು ಈಗ ಮಂಕಾಗಿವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’: ಕೇಂದ್ರದ ಉತ್ತರದಲ್ಲಿ ಸ್ಪಷ್ಟನೆ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...