Homeಮುಖಪುಟಸುಂದರ್ ನಗರದಲ್ಲಿ ಅತಂತ್ರರಾದ ಸ್ಲಂ ನಿವಾಸಿಗಳು

ಸುಂದರ್ ನಗರದಲ್ಲಿ ಅತಂತ್ರರಾದ ಸ್ಲಂ ನಿವಾಸಿಗಳು

- Advertisement -
- Advertisement -

ದೆಹಲಿಯ ಸುಂದರ್ ನಗರದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸೂಚನೆ ಮೇರೆಗೆ ಮನೆಗಳನ್ನು ತೆರವು ಮಾಡಲಾಗಿದ್ದು, ಇದರಿಂದ ಸ್ಲಂ ನಿವಾಸಿಗಳು ಅತಂತ್ರರಾಗಿದ್ದಾರೆ. ಪುನರ್ವಸತಿಯನ್ನು ಕಲ್ಪಿಸದೆ ಸ್ಲಂ ನಿವಾಸಿಗಳ ಮನೆಗಳನ್ನು ಏಕಾಏಕಿ ತೆರವು ಮಾಡಿ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸುಂದರ್ ನಗರದಲ್ಲಿ ಕೈಗೊಂಡ ಮನೆಗಳ ತೆರವು ಕಾರ್ಯಾಚರಣೆ 200ಕ್ಕೂ ಹೆಚ್ಚು ಕುಟುಂಬಗಳ  ಮೇಲೆ ಪರಿಣಾಮ ಬೀಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸೂಚನೆ ಮೇರೆ ಮನೆಗಳನ್ನು ತೆರವು ಮಾಡಲಾಗಿದೆ ಮತ್ತು ದೆಹಲಿ ಹೈಕೋರ್ಟ್ ತೆರವು ಕಾರ್ಯಚರಣೆಗೆ ತಡೆಯಲು ನಿರಾಕರಿಸಿತ್ತು.

ನ.18 ರಂದು ಪೋಸ್ಟರ್‌ಗಳು ಮತ್ತು ನೋಟಿಸ್‌ಗಳನ್ನು ಹಾಕಲಾಯಿತು ಮತ್ತು ಸ್ಲಂಗಳನ್ನು ತಕ್ಷಣವೇ ಖಾಲಿ ಮಾಡುವಂತೆ ಆದೇಶ ನೀಡಲಾಯಿತು. ಇಲ್ಲಿ ವಾಸಿಸುವ ಹೆಚ್ಚಿನವರು ಮಹಿಳೆಯರು ಮತ್ತು ಪುರುಷರು ಚಿಂದಿ ಆಯುವವರು, ರಿಕ್ಷಾ  ಚಾಲಕರು ಮತ್ತು ಮನೆಗೆಲಸ ಮಾಡುವವರು. ಅವರಲ್ಲಿ ಹಲವರು ಬಾಡಿಗೆಗೆ ವಾಸಿಸುತ್ತಿದ್ದಾರೆ. ಕೆಲವರು 40 ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದರು.

ಸುಂದರ್ ನಗರ ಬಸ್ತಿಯಲ್ಲಿರುವ ಮನೆಗಳನ್ನು ಕೆಡವುವಾಗ ಅಧಿಕಾರಿಗಳು 2015ರ ನೀತಿಯಲ್ಲಿ ರೂಪಿಸಲಾದ ದೆಹಲಿ ಸ್ಲಂ ಮತ್ತು ಜೆಜೆ ಪುನರ್ವಸತಿ ಮತ್ತು ಸ್ಥಳಾಂತರ ನೀತಿ ಎಂಬ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕಿತ್ತು. ಆದರೆ ಭೂ ಮತ್ತು ಅಭಿವೃದ್ಧಿ ಕಚೇರಿ (L&DO) ಜನರು ವಾಸಿಸುತ್ತಿದ್ದ ಮನೆಗಳನ್ನು ಕೆಡವುವ ಸಮಯದಲ್ಲಿ ಹಲವಾರು ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.

ಸುಂದರ್ ನಗರ ಬಸ್ತಿಯಲ್ಲಿರುವ ಫಾತಿಮಾ ಎಂಬವರ ಮನೆಯನ್ನು ನ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆಡವಲಾಗಿದೆ. ಅವರ ಪತಿ ಟೂರಿಸ್ಟ್ ಟ್ಯಾಕ್ಸಿ ಚಾಲಕರಾಗಿದ್ದು ಆಗ್ರಾಕ್ಕೆ ತೆರಳಿದ್ದರು. ಪ್ರವಾಸಿಗರಿಗೆ ತಾಜ್ ಮಹಲ್ ತೋರಿಸಿ ಮನೆಗೆಂದು ವಾಪಾಸ್ಸು ಬರುವಾಗ ಮನೆಯೇ ನೆಲಸಮಗೊಂಡಿತ್ತು. ಮನೆ ಕಳೆದುಕೊಂಡು ಫಾತಿಮಾ (20) ಬೀದಿಯಲ್ಲಿ ತನ್ನ 4 ತಿಂಗಳ ಮಗಳನ್ನು ತೊಟ್ಟಿಲಲ್ಲಿ ಹಾಕಿಕೊಂಡು ಕುಳಿತಿದ್ದರು. ಪಕ್ಕದ ರಸ್ತೆಯಲ್ಲಿ ಗೃಹೋಪಯೋಗಿ ವಸ್ತುಗಳು ಬಿದ್ದುಕೊಂಡಿದ್ದವು. ಫಾತಿಮಾಳ ಪಕ್ಕದಲ್ಲಿ ಪಾರ್ಶ್ವವಾಯುವಿನಿಂದ ನರಳುತ್ತಿದ್ದ ಅತ್ತಿಗೆ ಕಣ್ಣೀರಿಡುತ್ತಿದ್ದರು.

ಮನೆಗಳನ್ನು ಕೆಡವಲು 15 ದಿನಗಳ ಮೊದಲು ಪರ್ಯಾಯ ಪುನರ್ವಸತಿಯನ್ನು ಒದಗಿಸಬೇಕು ಎಂದು ನಿಯಮವು ಹೇಳುತ್ತದೆ. ಗುಜಿರಿ ಕೆಲಸ ಮಾಡುತ್ತಿದ್ದ ಪ್ಯಾರೆ ಲಾಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ನ.18 ರಂದು  ಮನೆಗಳನ್ನು ತೆರವುಗೊಳಿಸುವುದಾಗಿ ಪೋಸ್ಟರ್‌ ಹಾಕಿದ್ದಾರೆ. ನೋಟಿಸ್ ನಮ್ಮನ್ನು ಭಯಭೀತರನ್ನಾಗಿ ಮಾಡಿತ್ತು. ತದನಂತರ ಇದ್ದಕ್ಕಿದ್ದಂತೆ ಬುಲ್ಡೋಜರ್‌ಗಳು ಬಂದವು. ನಮ್ಮ ಮನೆಗಳನ್ನು ನೆಲಸಮ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮನೆ ಕಳೆದುಕೊಂಡವರು ಈ 3 ದಿನಗಳ ಅವಧಿಯಲ್ಲಿ ವಸತಿಗಳನ್ನು ಬಾಡಿಗೆಗೆ ಪಡೆಯಲು ಬೇಕಾದಷ್ಟು ಆರ್ಥಿಕ ಸಾಮರ್ಥ್ಯವನ್ನು ಹೊಂದಿರಲಿಲ್ಲ. ಅವರಲ್ಲಿ ಬಹುಪಾಲು ದಿನಗೂಲಿದಾರರು, ಮನೆ ಕೆಲಸಗಾರರು ಮತ್ತು ಗುಜಿರಿ ಸಂಗ್ರಹಿಸುವವರಾಗಿದ್ದರು. ಸ್ಥಳಾಂತರಗೊಂಡ ಒಂದು ಕುಟುಂಬಕ್ಕೂ ಪರ್ಯಾಯ ಪುನರ್ವಸತಿ ಒದಗಿಸಲು DUSIB ವಿಫಲವಾಗಿದೆ. ಮನೆಗಳನ್ನು ಕೆಡವಿದ ಸ್ಥಳದಿಂದ 5 ಕಿಲೋಮೀಟರ್‌ಗಳ ಒಳಗೆ ಪರ್ಯಾಯ ಪುನರ್ವಸತಿಯನ್ನು ಒದಗಿಸಬೇಕು ಎಂದು ನೀತಿಯು ಉಲ್ಲೇಖಿಸುತ್ತದೆ. ಆದರೆ ಜನರಿಗೆ ವಸತಿ ವ್ಯವಸ್ಥೆಯನ್ನು ಮಾಡಿರಲಿಲ್ಲ.

ಸುಂದರ್ ನಗರದ ಸ್ಥಳಾಂತರಗೊಂಡ ಕುಟುಂಬಗಳಿಗೆ ಜೀವನೋಪಾಯದ ಮತ್ತು ಮಕ್ಕಳ ಶಿಕ್ಷಣದ ಬಗೆಗೆ ಸಮಸ್ಯೆ ಎದುರಾಗಿದೆ. ನಾಸಿರಾ ಬೀಬಿ (33) ಸಮೀಪದ ಐಷಾರಾಮಿ ಬಂಗಲೆಯಲ್ಲಿ ಮನೆ ಕೆಲಸಗಾರ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ನಾವು ದೂರ ಹೋದರೆ ಇನ್ನು ಕೆಲಸವನ್ನು ಮಾಡಲು ಸಾಧ್ಯವಿಲ್ಲ. ಮಕ್ಕಳು ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಕಲಿಯುತ್ತಿದ್ದರು. ಮನೆಗಳನ್ನು ತೆರವಿನ ಬಳಿಕ ಮಕ್ಕಳ ಭವಿಷ್ಯವು ಅತಂತ್ರವಾಗಿದೆ ಎಂದು ಹೇಳಿದ್ದಾರೆ.

ಶಾಲಾ-ಕಾಲೇಜು ಪರೀಕ್ಷೆಗಳು ನಡೆಯುವಾಗ ಮನೆಗಳನ್ನು ಕೆಡವಬಾರದು ಎಂದು ನಿಯಮವು ಹೇಳುತ್ತದೆ.  ಆದರೆ ಫಲಕ್ ಎಂಬಾಕೆ 12ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆಕೆಯ ಮನೆಯನ್ನು ಕೂಡ ಕೆಡವಲಾಗಿದೆ. ಮುಂದಿನ ತಿಂಗಳು ಅವರ ಪ್ರಿ-ಬೋರ್ಡ್ ಪರೀಕ್ಷೆಗಳು ನಡೆಯಲಿವೆ. ನಾಳೆ ನನಗೆ ವಾರದ ಪರೀಕ್ಷೆ ಇದೆ. ನನಗೆ ಮನಸ್ಸಿಗೆ ಶಾಂತಿ ಇಲ್ಲ ಎಂದು ಫಲಕ್‌ ಅಳಲು ತೋಡಿಕೊಂಡಿದ್ದಾರೆ. ಪ್ರಿಯಾ (38) ಅವರು ಈ ಬಗ್ಗೆ ಮಾತನಾಡಿದ್ದು, ಮಕ್ಕಳ ಮತ್ತು ನಮ್ಮ ಭವಿಷ್ಯಗಳು ಈಗ ಮಂಕಾಗಿವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’: ಕೇಂದ್ರದ ಉತ್ತರದಲ್ಲಿ ಸ್ಪಷ್ಟನೆ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...