Homeಮುಖಪುಟಸುಂದರ್ ನಗರದಲ್ಲಿ ಅತಂತ್ರರಾದ ಸ್ಲಂ ನಿವಾಸಿಗಳು

ಸುಂದರ್ ನಗರದಲ್ಲಿ ಅತಂತ್ರರಾದ ಸ್ಲಂ ನಿವಾಸಿಗಳು

- Advertisement -
- Advertisement -

ದೆಹಲಿಯ ಸುಂದರ್ ನಗರದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸೂಚನೆ ಮೇರೆಗೆ ಮನೆಗಳನ್ನು ತೆರವು ಮಾಡಲಾಗಿದ್ದು, ಇದರಿಂದ ಸ್ಲಂ ನಿವಾಸಿಗಳು ಅತಂತ್ರರಾಗಿದ್ದಾರೆ. ಪುನರ್ವಸತಿಯನ್ನು ಕಲ್ಪಿಸದೆ ಸ್ಲಂ ನಿವಾಸಿಗಳ ಮನೆಗಳನ್ನು ಏಕಾಏಕಿ ತೆರವು ಮಾಡಿ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸುಂದರ್ ನಗರದಲ್ಲಿ ಕೈಗೊಂಡ ಮನೆಗಳ ತೆರವು ಕಾರ್ಯಾಚರಣೆ 200ಕ್ಕೂ ಹೆಚ್ಚು ಕುಟುಂಬಗಳ  ಮೇಲೆ ಪರಿಣಾಮ ಬೀಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸೂಚನೆ ಮೇರೆ ಮನೆಗಳನ್ನು ತೆರವು ಮಾಡಲಾಗಿದೆ ಮತ್ತು ದೆಹಲಿ ಹೈಕೋರ್ಟ್ ತೆರವು ಕಾರ್ಯಚರಣೆಗೆ ತಡೆಯಲು ನಿರಾಕರಿಸಿತ್ತು.

ನ.18 ರಂದು ಪೋಸ್ಟರ್‌ಗಳು ಮತ್ತು ನೋಟಿಸ್‌ಗಳನ್ನು ಹಾಕಲಾಯಿತು ಮತ್ತು ಸ್ಲಂಗಳನ್ನು ತಕ್ಷಣವೇ ಖಾಲಿ ಮಾಡುವಂತೆ ಆದೇಶ ನೀಡಲಾಯಿತು. ಇಲ್ಲಿ ವಾಸಿಸುವ ಹೆಚ್ಚಿನವರು ಮಹಿಳೆಯರು ಮತ್ತು ಪುರುಷರು ಚಿಂದಿ ಆಯುವವರು, ರಿಕ್ಷಾ  ಚಾಲಕರು ಮತ್ತು ಮನೆಗೆಲಸ ಮಾಡುವವರು. ಅವರಲ್ಲಿ ಹಲವರು ಬಾಡಿಗೆಗೆ ವಾಸಿಸುತ್ತಿದ್ದಾರೆ. ಕೆಲವರು 40 ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದರು.

ಸುಂದರ್ ನಗರ ಬಸ್ತಿಯಲ್ಲಿರುವ ಮನೆಗಳನ್ನು ಕೆಡವುವಾಗ ಅಧಿಕಾರಿಗಳು 2015ರ ನೀತಿಯಲ್ಲಿ ರೂಪಿಸಲಾದ ದೆಹಲಿ ಸ್ಲಂ ಮತ್ತು ಜೆಜೆ ಪುನರ್ವಸತಿ ಮತ್ತು ಸ್ಥಳಾಂತರ ನೀತಿ ಎಂಬ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕಿತ್ತು. ಆದರೆ ಭೂ ಮತ್ತು ಅಭಿವೃದ್ಧಿ ಕಚೇರಿ (L&DO) ಜನರು ವಾಸಿಸುತ್ತಿದ್ದ ಮನೆಗಳನ್ನು ಕೆಡವುವ ಸಮಯದಲ್ಲಿ ಹಲವಾರು ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.

ಸುಂದರ್ ನಗರ ಬಸ್ತಿಯಲ್ಲಿರುವ ಫಾತಿಮಾ ಎಂಬವರ ಮನೆಯನ್ನು ನ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆಡವಲಾಗಿದೆ. ಅವರ ಪತಿ ಟೂರಿಸ್ಟ್ ಟ್ಯಾಕ್ಸಿ ಚಾಲಕರಾಗಿದ್ದು ಆಗ್ರಾಕ್ಕೆ ತೆರಳಿದ್ದರು. ಪ್ರವಾಸಿಗರಿಗೆ ತಾಜ್ ಮಹಲ್ ತೋರಿಸಿ ಮನೆಗೆಂದು ವಾಪಾಸ್ಸು ಬರುವಾಗ ಮನೆಯೇ ನೆಲಸಮಗೊಂಡಿತ್ತು. ಮನೆ ಕಳೆದುಕೊಂಡು ಫಾತಿಮಾ (20) ಬೀದಿಯಲ್ಲಿ ತನ್ನ 4 ತಿಂಗಳ ಮಗಳನ್ನು ತೊಟ್ಟಿಲಲ್ಲಿ ಹಾಕಿಕೊಂಡು ಕುಳಿತಿದ್ದರು. ಪಕ್ಕದ ರಸ್ತೆಯಲ್ಲಿ ಗೃಹೋಪಯೋಗಿ ವಸ್ತುಗಳು ಬಿದ್ದುಕೊಂಡಿದ್ದವು. ಫಾತಿಮಾಳ ಪಕ್ಕದಲ್ಲಿ ಪಾರ್ಶ್ವವಾಯುವಿನಿಂದ ನರಳುತ್ತಿದ್ದ ಅತ್ತಿಗೆ ಕಣ್ಣೀರಿಡುತ್ತಿದ್ದರು.

ಮನೆಗಳನ್ನು ಕೆಡವಲು 15 ದಿನಗಳ ಮೊದಲು ಪರ್ಯಾಯ ಪುನರ್ವಸತಿಯನ್ನು ಒದಗಿಸಬೇಕು ಎಂದು ನಿಯಮವು ಹೇಳುತ್ತದೆ. ಗುಜಿರಿ ಕೆಲಸ ಮಾಡುತ್ತಿದ್ದ ಪ್ಯಾರೆ ಲಾಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ನ.18 ರಂದು  ಮನೆಗಳನ್ನು ತೆರವುಗೊಳಿಸುವುದಾಗಿ ಪೋಸ್ಟರ್‌ ಹಾಕಿದ್ದಾರೆ. ನೋಟಿಸ್ ನಮ್ಮನ್ನು ಭಯಭೀತರನ್ನಾಗಿ ಮಾಡಿತ್ತು. ತದನಂತರ ಇದ್ದಕ್ಕಿದ್ದಂತೆ ಬುಲ್ಡೋಜರ್‌ಗಳು ಬಂದವು. ನಮ್ಮ ಮನೆಗಳನ್ನು ನೆಲಸಮ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮನೆ ಕಳೆದುಕೊಂಡವರು ಈ 3 ದಿನಗಳ ಅವಧಿಯಲ್ಲಿ ವಸತಿಗಳನ್ನು ಬಾಡಿಗೆಗೆ ಪಡೆಯಲು ಬೇಕಾದಷ್ಟು ಆರ್ಥಿಕ ಸಾಮರ್ಥ್ಯವನ್ನು ಹೊಂದಿರಲಿಲ್ಲ. ಅವರಲ್ಲಿ ಬಹುಪಾಲು ದಿನಗೂಲಿದಾರರು, ಮನೆ ಕೆಲಸಗಾರರು ಮತ್ತು ಗುಜಿರಿ ಸಂಗ್ರಹಿಸುವವರಾಗಿದ್ದರು. ಸ್ಥಳಾಂತರಗೊಂಡ ಒಂದು ಕುಟುಂಬಕ್ಕೂ ಪರ್ಯಾಯ ಪುನರ್ವಸತಿ ಒದಗಿಸಲು DUSIB ವಿಫಲವಾಗಿದೆ. ಮನೆಗಳನ್ನು ಕೆಡವಿದ ಸ್ಥಳದಿಂದ 5 ಕಿಲೋಮೀಟರ್‌ಗಳ ಒಳಗೆ ಪರ್ಯಾಯ ಪುನರ್ವಸತಿಯನ್ನು ಒದಗಿಸಬೇಕು ಎಂದು ನೀತಿಯು ಉಲ್ಲೇಖಿಸುತ್ತದೆ. ಆದರೆ ಜನರಿಗೆ ವಸತಿ ವ್ಯವಸ್ಥೆಯನ್ನು ಮಾಡಿರಲಿಲ್ಲ.

ಸುಂದರ್ ನಗರದ ಸ್ಥಳಾಂತರಗೊಂಡ ಕುಟುಂಬಗಳಿಗೆ ಜೀವನೋಪಾಯದ ಮತ್ತು ಮಕ್ಕಳ ಶಿಕ್ಷಣದ ಬಗೆಗೆ ಸಮಸ್ಯೆ ಎದುರಾಗಿದೆ. ನಾಸಿರಾ ಬೀಬಿ (33) ಸಮೀಪದ ಐಷಾರಾಮಿ ಬಂಗಲೆಯಲ್ಲಿ ಮನೆ ಕೆಲಸಗಾರ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ನಾವು ದೂರ ಹೋದರೆ ಇನ್ನು ಕೆಲಸವನ್ನು ಮಾಡಲು ಸಾಧ್ಯವಿಲ್ಲ. ಮಕ್ಕಳು ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಕಲಿಯುತ್ತಿದ್ದರು. ಮನೆಗಳನ್ನು ತೆರವಿನ ಬಳಿಕ ಮಕ್ಕಳ ಭವಿಷ್ಯವು ಅತಂತ್ರವಾಗಿದೆ ಎಂದು ಹೇಳಿದ್ದಾರೆ.

ಶಾಲಾ-ಕಾಲೇಜು ಪರೀಕ್ಷೆಗಳು ನಡೆಯುವಾಗ ಮನೆಗಳನ್ನು ಕೆಡವಬಾರದು ಎಂದು ನಿಯಮವು ಹೇಳುತ್ತದೆ.  ಆದರೆ ಫಲಕ್ ಎಂಬಾಕೆ 12ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆಕೆಯ ಮನೆಯನ್ನು ಕೂಡ ಕೆಡವಲಾಗಿದೆ. ಮುಂದಿನ ತಿಂಗಳು ಅವರ ಪ್ರಿ-ಬೋರ್ಡ್ ಪರೀಕ್ಷೆಗಳು ನಡೆಯಲಿವೆ. ನಾಳೆ ನನಗೆ ವಾರದ ಪರೀಕ್ಷೆ ಇದೆ. ನನಗೆ ಮನಸ್ಸಿಗೆ ಶಾಂತಿ ಇಲ್ಲ ಎಂದು ಫಲಕ್‌ ಅಳಲು ತೋಡಿಕೊಂಡಿದ್ದಾರೆ. ಪ್ರಿಯಾ (38) ಅವರು ಈ ಬಗ್ಗೆ ಮಾತನಾಡಿದ್ದು, ಮಕ್ಕಳ ಮತ್ತು ನಮ್ಮ ಭವಿಷ್ಯಗಳು ಈಗ ಮಂಕಾಗಿವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’: ಕೇಂದ್ರದ ಉತ್ತರದಲ್ಲಿ ಸ್ಪಷ್ಟನೆ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...