Homeಮುಖಪುಟಸುಂದರ್ ನಗರದಲ್ಲಿ ಅತಂತ್ರರಾದ ಸ್ಲಂ ನಿವಾಸಿಗಳು

ಸುಂದರ್ ನಗರದಲ್ಲಿ ಅತಂತ್ರರಾದ ಸ್ಲಂ ನಿವಾಸಿಗಳು

- Advertisement -
- Advertisement -

ದೆಹಲಿಯ ಸುಂದರ್ ನಗರದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸೂಚನೆ ಮೇರೆಗೆ ಮನೆಗಳನ್ನು ತೆರವು ಮಾಡಲಾಗಿದ್ದು, ಇದರಿಂದ ಸ್ಲಂ ನಿವಾಸಿಗಳು ಅತಂತ್ರರಾಗಿದ್ದಾರೆ. ಪುನರ್ವಸತಿಯನ್ನು ಕಲ್ಪಿಸದೆ ಸ್ಲಂ ನಿವಾಸಿಗಳ ಮನೆಗಳನ್ನು ಏಕಾಏಕಿ ತೆರವು ಮಾಡಿ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸುಂದರ್ ನಗರದಲ್ಲಿ ಕೈಗೊಂಡ ಮನೆಗಳ ತೆರವು ಕಾರ್ಯಾಚರಣೆ 200ಕ್ಕೂ ಹೆಚ್ಚು ಕುಟುಂಬಗಳ  ಮೇಲೆ ಪರಿಣಾಮ ಬೀಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸೂಚನೆ ಮೇರೆ ಮನೆಗಳನ್ನು ತೆರವು ಮಾಡಲಾಗಿದೆ ಮತ್ತು ದೆಹಲಿ ಹೈಕೋರ್ಟ್ ತೆರವು ಕಾರ್ಯಚರಣೆಗೆ ತಡೆಯಲು ನಿರಾಕರಿಸಿತ್ತು.

ನ.18 ರಂದು ಪೋಸ್ಟರ್‌ಗಳು ಮತ್ತು ನೋಟಿಸ್‌ಗಳನ್ನು ಹಾಕಲಾಯಿತು ಮತ್ತು ಸ್ಲಂಗಳನ್ನು ತಕ್ಷಣವೇ ಖಾಲಿ ಮಾಡುವಂತೆ ಆದೇಶ ನೀಡಲಾಯಿತು. ಇಲ್ಲಿ ವಾಸಿಸುವ ಹೆಚ್ಚಿನವರು ಮಹಿಳೆಯರು ಮತ್ತು ಪುರುಷರು ಚಿಂದಿ ಆಯುವವರು, ರಿಕ್ಷಾ  ಚಾಲಕರು ಮತ್ತು ಮನೆಗೆಲಸ ಮಾಡುವವರು. ಅವರಲ್ಲಿ ಹಲವರು ಬಾಡಿಗೆಗೆ ವಾಸಿಸುತ್ತಿದ್ದಾರೆ. ಕೆಲವರು 40 ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದರು.

ಸುಂದರ್ ನಗರ ಬಸ್ತಿಯಲ್ಲಿರುವ ಮನೆಗಳನ್ನು ಕೆಡವುವಾಗ ಅಧಿಕಾರಿಗಳು 2015ರ ನೀತಿಯಲ್ಲಿ ರೂಪಿಸಲಾದ ದೆಹಲಿ ಸ್ಲಂ ಮತ್ತು ಜೆಜೆ ಪುನರ್ವಸತಿ ಮತ್ತು ಸ್ಥಳಾಂತರ ನೀತಿ ಎಂಬ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕಿತ್ತು. ಆದರೆ ಭೂ ಮತ್ತು ಅಭಿವೃದ್ಧಿ ಕಚೇರಿ (L&DO) ಜನರು ವಾಸಿಸುತ್ತಿದ್ದ ಮನೆಗಳನ್ನು ಕೆಡವುವ ಸಮಯದಲ್ಲಿ ಹಲವಾರು ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.

ಸುಂದರ್ ನಗರ ಬಸ್ತಿಯಲ್ಲಿರುವ ಫಾತಿಮಾ ಎಂಬವರ ಮನೆಯನ್ನು ನ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆಡವಲಾಗಿದೆ. ಅವರ ಪತಿ ಟೂರಿಸ್ಟ್ ಟ್ಯಾಕ್ಸಿ ಚಾಲಕರಾಗಿದ್ದು ಆಗ್ರಾಕ್ಕೆ ತೆರಳಿದ್ದರು. ಪ್ರವಾಸಿಗರಿಗೆ ತಾಜ್ ಮಹಲ್ ತೋರಿಸಿ ಮನೆಗೆಂದು ವಾಪಾಸ್ಸು ಬರುವಾಗ ಮನೆಯೇ ನೆಲಸಮಗೊಂಡಿತ್ತು. ಮನೆ ಕಳೆದುಕೊಂಡು ಫಾತಿಮಾ (20) ಬೀದಿಯಲ್ಲಿ ತನ್ನ 4 ತಿಂಗಳ ಮಗಳನ್ನು ತೊಟ್ಟಿಲಲ್ಲಿ ಹಾಕಿಕೊಂಡು ಕುಳಿತಿದ್ದರು. ಪಕ್ಕದ ರಸ್ತೆಯಲ್ಲಿ ಗೃಹೋಪಯೋಗಿ ವಸ್ತುಗಳು ಬಿದ್ದುಕೊಂಡಿದ್ದವು. ಫಾತಿಮಾಳ ಪಕ್ಕದಲ್ಲಿ ಪಾರ್ಶ್ವವಾಯುವಿನಿಂದ ನರಳುತ್ತಿದ್ದ ಅತ್ತಿಗೆ ಕಣ್ಣೀರಿಡುತ್ತಿದ್ದರು.

ಮನೆಗಳನ್ನು ಕೆಡವಲು 15 ದಿನಗಳ ಮೊದಲು ಪರ್ಯಾಯ ಪುನರ್ವಸತಿಯನ್ನು ಒದಗಿಸಬೇಕು ಎಂದು ನಿಯಮವು ಹೇಳುತ್ತದೆ. ಗುಜಿರಿ ಕೆಲಸ ಮಾಡುತ್ತಿದ್ದ ಪ್ಯಾರೆ ಲಾಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ನ.18 ರಂದು  ಮನೆಗಳನ್ನು ತೆರವುಗೊಳಿಸುವುದಾಗಿ ಪೋಸ್ಟರ್‌ ಹಾಕಿದ್ದಾರೆ. ನೋಟಿಸ್ ನಮ್ಮನ್ನು ಭಯಭೀತರನ್ನಾಗಿ ಮಾಡಿತ್ತು. ತದನಂತರ ಇದ್ದಕ್ಕಿದ್ದಂತೆ ಬುಲ್ಡೋಜರ್‌ಗಳು ಬಂದವು. ನಮ್ಮ ಮನೆಗಳನ್ನು ನೆಲಸಮ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮನೆ ಕಳೆದುಕೊಂಡವರು ಈ 3 ದಿನಗಳ ಅವಧಿಯಲ್ಲಿ ವಸತಿಗಳನ್ನು ಬಾಡಿಗೆಗೆ ಪಡೆಯಲು ಬೇಕಾದಷ್ಟು ಆರ್ಥಿಕ ಸಾಮರ್ಥ್ಯವನ್ನು ಹೊಂದಿರಲಿಲ್ಲ. ಅವರಲ್ಲಿ ಬಹುಪಾಲು ದಿನಗೂಲಿದಾರರು, ಮನೆ ಕೆಲಸಗಾರರು ಮತ್ತು ಗುಜಿರಿ ಸಂಗ್ರಹಿಸುವವರಾಗಿದ್ದರು. ಸ್ಥಳಾಂತರಗೊಂಡ ಒಂದು ಕುಟುಂಬಕ್ಕೂ ಪರ್ಯಾಯ ಪುನರ್ವಸತಿ ಒದಗಿಸಲು DUSIB ವಿಫಲವಾಗಿದೆ. ಮನೆಗಳನ್ನು ಕೆಡವಿದ ಸ್ಥಳದಿಂದ 5 ಕಿಲೋಮೀಟರ್‌ಗಳ ಒಳಗೆ ಪರ್ಯಾಯ ಪುನರ್ವಸತಿಯನ್ನು ಒದಗಿಸಬೇಕು ಎಂದು ನೀತಿಯು ಉಲ್ಲೇಖಿಸುತ್ತದೆ. ಆದರೆ ಜನರಿಗೆ ವಸತಿ ವ್ಯವಸ್ಥೆಯನ್ನು ಮಾಡಿರಲಿಲ್ಲ.

ಸುಂದರ್ ನಗರದ ಸ್ಥಳಾಂತರಗೊಂಡ ಕುಟುಂಬಗಳಿಗೆ ಜೀವನೋಪಾಯದ ಮತ್ತು ಮಕ್ಕಳ ಶಿಕ್ಷಣದ ಬಗೆಗೆ ಸಮಸ್ಯೆ ಎದುರಾಗಿದೆ. ನಾಸಿರಾ ಬೀಬಿ (33) ಸಮೀಪದ ಐಷಾರಾಮಿ ಬಂಗಲೆಯಲ್ಲಿ ಮನೆ ಕೆಲಸಗಾರ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ನಾವು ದೂರ ಹೋದರೆ ಇನ್ನು ಕೆಲಸವನ್ನು ಮಾಡಲು ಸಾಧ್ಯವಿಲ್ಲ. ಮಕ್ಕಳು ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಕಲಿಯುತ್ತಿದ್ದರು. ಮನೆಗಳನ್ನು ತೆರವಿನ ಬಳಿಕ ಮಕ್ಕಳ ಭವಿಷ್ಯವು ಅತಂತ್ರವಾಗಿದೆ ಎಂದು ಹೇಳಿದ್ದಾರೆ.

ಶಾಲಾ-ಕಾಲೇಜು ಪರೀಕ್ಷೆಗಳು ನಡೆಯುವಾಗ ಮನೆಗಳನ್ನು ಕೆಡವಬಾರದು ಎಂದು ನಿಯಮವು ಹೇಳುತ್ತದೆ.  ಆದರೆ ಫಲಕ್ ಎಂಬಾಕೆ 12ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆಕೆಯ ಮನೆಯನ್ನು ಕೂಡ ಕೆಡವಲಾಗಿದೆ. ಮುಂದಿನ ತಿಂಗಳು ಅವರ ಪ್ರಿ-ಬೋರ್ಡ್ ಪರೀಕ್ಷೆಗಳು ನಡೆಯಲಿವೆ. ನಾಳೆ ನನಗೆ ವಾರದ ಪರೀಕ್ಷೆ ಇದೆ. ನನಗೆ ಮನಸ್ಸಿಗೆ ಶಾಂತಿ ಇಲ್ಲ ಎಂದು ಫಲಕ್‌ ಅಳಲು ತೋಡಿಕೊಂಡಿದ್ದಾರೆ. ಪ್ರಿಯಾ (38) ಅವರು ಈ ಬಗ್ಗೆ ಮಾತನಾಡಿದ್ದು, ಮಕ್ಕಳ ಮತ್ತು ನಮ್ಮ ಭವಿಷ್ಯಗಳು ಈಗ ಮಂಕಾಗಿವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’: ಕೇಂದ್ರದ ಉತ್ತರದಲ್ಲಿ ಸ್ಪಷ್ಟನೆ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...