Homeಚಳವಳಿಶ್ರದ್ಧಾಂಜಲಿ : ಕರ್ನಾಟಕದ ಮಕ್ಕಳಿಗೂ ಪ್ರೇರಣೆಯಾಗಿದ್ದ ಸಂತ ಸುಂದರಲಾಲ್ ಬಹುಗುಣ

ಶ್ರದ್ಧಾಂಜಲಿ : ಕರ್ನಾಟಕದ ಮಕ್ಕಳಿಗೂ ಪ್ರೇರಣೆಯಾಗಿದ್ದ ಸಂತ ಸುಂದರಲಾಲ್ ಬಹುಗುಣ

- Advertisement -
- Advertisement -

ಋಷಿಯಂತೆ ಬದುಕಿ, ಪರಿಸರ ಜಾಗೃತಿ ಮೂಡಿಸಿ, ಅದಕ್ಕಾಗಿ ಪಾದಯಾತ್ರೆ ನಡೆಸಿ ಹೋರಾಟ ಮಾಡಿ ಹಿಮಾಲಯದ ತಪ್ಪಲು ಹಸಿರಾಗಿರುವಂತೆ ನೋಡಿಕೊಂಡ ಸುಂದರಲಾಲ್ ಬಹುಗುಣ ಅವರನ್ನು ಮೇ 21ರಂದು ಕಳೆದುಕೊಂಡೆವು.

ಎಂಟನೆಯ ತರಗತಿಯ ಇಂಗ್ಲಿಷ್ ಪಠ್ಯದಲ್ಲಿ ’ಚಿಪ್ಕೊ ಚಳವಳಿ’ಯ ಬಗ್ಗೆ ಪಾಠವಿತ್ತು. ಆ ಪಾಠವನ್ನು ಓದಿದ ನನ್ನ ಹಲವಾರು ವಿದ್ಯಾರ್ಥಿಗಳು ಆಡುಕುರಿಗಳಿಗಾಗಿ ಮತ್ತು ಉರುವಲಿಗಾಗಿ ಗಿಡ ಕಡಿಯುವವರೊಂದಿಗೆ ಜಗಳಕ್ಕಿಳಿದು ಪೊಲೀಸ್ ಸ್ಟೇಷನ್ನಿಗೆ ಸುದ್ದಿ ಮುಟ್ಟಿಸಿ ಹಲವಾರು ಗಿಡಗಳ ರಕ್ಷಣೆ ಮಾಡಿದರು. ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೂಟಿಯ ದಿನಗಳಂದು ಶಿಕ್ಷಕರ ಮಾರ್ಗದರ್ಶನದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸುತ್ತಿದ್ದರು. ಹೊಲ ಮನೆ ಇಲ್ಲದ ನೌಕರರ ಮಕ್ಕಳು ತಮ್ಮ ಸ್ನೇಹಿತರ ಹೊಲಗಳಲ್ಲಿ ಹಣ್ಣಿನ ಗಿಡ ನೆಟ್ಟರು. ಇಂತಹ ಎಲ್ಲ ಪರಿಸರ ರಕ್ಷಣಾ ಚಟುವಟಿಕೆಗೆ ಮೂಲಕಾರಣ ಸುಂದರಲಾಲ್ ಬಹುಗುಣರು. ಗಢವಾಲದ ಈ ಸಂತ ಕರ್ನಾಟಕದ ಮಕ್ಕಳನ್ನು ಈ ರೀತಿ ಗಿಡ ನೆಡಲು ಪ್ರೇರೆಪಿಸಿದ್ದರು.

ಕೆಲವರ್ಷಗಳ ಹಿಂದೆ ’ಪಶ್ಚಿಮ ಘಟ್ಟ ಉಳಿಸಿ’ ಅಭಿಯಾನದಲ್ಲಿ ಅವರು ಗೋವೆಗೆ ಬಂದಿದ್ದರು. ಅಲ್ಲಿ ಅವರಾಡಿದ ಮಾತುಗಳು ಇನ್ನೂ ನೆನಪಿನಲ್ಲಿ ಹಸಿರಾಗಿ ಉಳಿದಿವೆ.

’ನಾವು ಶಿವನ ಜಟೆಯಲ್ಲಿ ಗಂಗೆ ವಾಸಿಸಿದ್ದಾಳೆಂದು ನಂಬಿದ್ದೇವೆ. ಶಿವ ಹಿಮಾಲಯವಾಸಿ. ಅವನ ಜಟೆಯೆಂದರೆ ಹಿಮಾಲಯದ ತಪ್ಪಲಿನ ದಟ್ಟ ಅರಣ್ಯದಲ್ಲಿಯ ವೃಕ್ಷರಾಶಿ. ತಮ್ಮ ಬೇರುಗಳ ಮೂಲಕ ನೀರನ್ನು ಭೂಮಿಯ ಅಂತರಾಳಕ್ಕೆ ಇಳಿಸುತ್ತವೆ. ಹೀಗಾಗಿ ಅಂತರ್ಜಲ ಹೆಚ್ಚಾಗಿ ವರ್ಷವಿಡೀ ನಾವು ನೀರು ಪಡೆಯುತ್ತೇವೆ. ನಾವು ಅರಣ್ಯನಾಶದಿಂದ ಶಿವನ ಜಟೆಯನ್ನು ಕತ್ತರಿಸಿದರೆ ಗಂಗೆಯ ವಾಸಸ್ಥಾನವನ್ನು ಹಾಳುಮಾಡಿದಂತಾಗುತ್ತದೆ. ಅರಣ್ಯ ಉಳಿದರೆ ಗಂಗೆ, ಗಂಗೆ ಉಳಿದರೆ ನೀರು’ ಎಂದಿದ್ದರು.

ಹಲವು ದಶಕಗಳ ಹಿಂದೆಯೇ ಸುಂದರಲಾಲ್ ಬಹುಗುಣರು ಪ್ರವಾಹಗಳ ಪರಿಣಾಮವನ್ನು ಊಹಿಸಿದ್ದರು. ಹಿಮಾಲಯದ ದೇವಧಾರು ಮತ್ತು ಇತ್ಯಾದಿ ಮರಗಳ ನಾಶದಿಂದ ಭೂಮಿಯ ಮೇಲ್ಮೈ ಸಡಿಲಗೊಂಡು ಮಣ್ಣೆಲ್ಲ ಹಳ್ಳ ತೊರೆಗಳ ಮೂಲಕ ನದಿಯನ್ನು ಸೇರುತ್ತದೆ. ನದಿಯ ಆಳ ಕಡಿಮೆಯಾಗಿ ಅಗಲ ಹೆಚ್ಚಾಗುವುದು. ನದಿ ತನ್ನ ಒಡಲನ್ನು ಬಿಟ್ಟು ಸುತ್ತೆಲ್ಲ ಪಸರಿಸಿ ಹರಿಯುತ್ತದೆ. ಊರುಗಳು ಮತ್ತು ಹೊಲಗಳಲ್ಲೆಲ್ಲ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗುತ್ತದೆ. ಭೂಮಿಯ ಮೇಲ್ಮೈ ಮಣ್ಣು ನಾಶವಾಗಿ ಭೂಮಿ ಬರಡಾಗುತ್ತದೆ. ಜನರ ಆಹಾರ ಮೂಲವಾದ ಹೊಲಗಳನ್ನು ಕಳೆದುಕೊಳ್ಳುತ್ತಾರೆ. ಗಿಡ ಕಡಿಯುವುದನ್ನು ನಿಲ್ಲಿಸಿ ಪ್ರವಾಹಗಳನ್ನು ತಡೆಯಬೇಕೆಂದು ಆಗಲೇ ಹೇಳಿದ್ದರು. ಸರಕಾರಗಳು ಟಿಂಬರ್ ಮಾಫಿಯಾಗಳ ಪ್ರಭಾವಕ್ಕೆ ಮಣಿನು ಅವರ ಮಾತನ್ನು ನಿರ್ಲಕ್ಷಿಸಿದವು. ಪ್ರತಿಫಲ ಎಲ್ಲರೂ ಅನುಭವಿಸಬೇಕಾಯಿತು.

PC : Sakshi

ಅವರು ದೊಡ್ಡ ದೊಡ್ಡ ಅಣೆಕಟ್ಟುಗಳನ್ನು ವಿರೋಧಿಸಿದರು. ನಮ್ಮ ಅರಣ್ಯಗಳೇ ನಮ್ಮ ಅಣೆಕಟ್ಟುಗಳು. ಅರಣ್ಯ ಉಳಿಸಿದರೆ ಅಲ್ಲಿಯ ಗಿಡಮರಗಳು ಅಂತರ್ಜಲ ಹೆಚ್ಚಿಸಿ ವರ್ಷವಿಡಿ ನೀರನ್ನು ಹಿಡಿದಿಡುತ್ತವೆ. ನದಿಗಳು ಹನ್ನೆರಡು ತಿಂಗಳು ಹರಿಯುತ್ತವೆ. ಜೀವ ವೈವಿಧ್ಯ ರಕ್ಷಣೆಯಾಗುತ್ತದೆ. ಮಾನವನ ಅವಶ್ಯಕತೆಗಳಾದ Food, Fodder, Fibre, Fertilizer, Furniture ಇತ್ಯಾದಿಗಳು ಸುಲಭವಾಗಿ ದೊರಕುತ್ತವೆ. ಇಂತಹ ದಟ್ಟ ಅರಣ್ಯ ನಾಶಮಾಡಿ ಅಣೆಕಟ್ಟು ಕಟ್ಟಿ ನೀರನ್ನು ಉಳಿಸುವ ಪ್ರಯತ್ನವೆಂದರೆ ಜಲಸಂಪನ್ಮೂಲವನ್ನು ನಾಶ ಮಾಡಿ ಜಲ ಉಳಿಸುವ ಯತ್ನ. ಈ ಜಲಾಶಯಗಳು ಅರ್ಥಹೀನ, ಹಿಮಾಲಯದ ತಪ್ಪಲಿನಲ್ಲಿ ಈ ಜಲಾಶಯಗಳು ಟೈಂಬಾಂಬ್ ಇಟ್ಟಂತೆ ಎಂದು ಹೇಳುತ್ತಿದ್ದರು. ದೊಡ್ಡ ದೊಡ್ಡ ಅಣೆಕಟ್ಟುಗಳು ನಿರ್ಮಾಣದ ವಿರುದ್ಧ ಹೋರಾಟ ಮಾಡಿದರು.

ಗೋಧಿ, ಅಕ್ಕಿಯನ್ನು ಬೆಳೆಯಲು ಬಹಳ ನೀರು ಬೇಕು. ಅದರ ಬದಲಿಗೆ ಕಡಿಮೆ ನೀರು ಬೇಡುವ ತೃಣಧಾನ್ಯಗಳನ್ನು ಬೆಳೆಯಲು ಪ್ರೋತ್ಸಾಹಿಸಿದರು. ತಾವು ಗೋಧಿ ಮತ್ತು ಅಕ್ಕಿಯನ್ನು ಉಣ್ಣುವುದನ್ನೇ ಬಿಟ್ಟರು.

ಅವರು ಕರ್ನಾಟಕದ ಲಕ್ಷವೃಕ್ಷ ಆಂದೋಲನ, ಅಪ್ಪಿಕೊ ಚಳವಳಿ ಇತ್ಯಾದಿಗಳಲ್ಲಿ ಭಾಗವಹಿಸಿದ್ದರು. ಇಲ್ಲಿಯ ಬಹಳಷ್ಟು ಶಾಲಾಮಕ್ಕಳನ್ನು ಭೇಟಿಯಾಗಿ ಅವರೊಂದಿಗೆ ಮಾತನಾಡಿದರು. ಗಿಡಮರ ನೆಡಲು ಪ್ರೇರೇಪಿಸಿದರು.

ಆ ಹಿರಿಯ ಜೀವ ತನ್ನ ಮುಂದಿನ ಜನಾಂಗಗಳ ಬಗೆಗೆ ಹೊಂದಿದ್ದ ಕಾಳಜಿಯನ್ನು ನಾವು ಅರ್ಥಮಾಡಿಕೊಳ್ಳಬೇಕು. ಭೂಮಿಯ ಮೇಲಿನ ಹಸಿರು ಹೊದಿಕೆ ಉಳಿಸಿಕೊಳ್ಳಬೇಕು. ಈ ಮುಖಾಂತರ ಸುಂದರಲಾಲ್ ಬಹುಗುಣರಿಗೆ ಶ್ರದ್ಧಾಂಜಲಿ ಅರ್ಪಿಸಬೇಕು.

ಆರ್ ಜಿ ತಿಮ್ಮಾಪುರ
ನಿವೃತ್ತ ಶಿಕ್ಷಕರು, ಪರಿಸರಾಸಕ್ತರು ಮತ್ತು ಪ್ರಸ್ತುತ ಸಾವಯವ ಕೃಷಿಕರು


ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...