HomeUncategorizedಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

ಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

- Advertisement -
- Advertisement -

150 ವರ್ಷಗಳಷ್ಟು ಹಳೆಯದಾದ ಸುನೆಹ್ರಿ ಬಾಗ್ ಮಸೀದಿ ಧ್ವಂಸದ ಕುರಿತ ಪ್ರಕರಣ ನಗರಾಭಿವೃದ್ಧಿ ಸಚಿವಾಲಯದ ಪಾರಂಪರಿಕ ಸಂರಕ್ಷಣಾ ಸಮಿತಿಗೆ (ಎಚ್‌ಸಿಸಿ) ವಹಿಸಲಾಗಿದೆ ಎಂದು ದೆಹಲಿ ಟ್ರಾಫಿಕ್ ಪೊಲೀಸರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಆ ಪ್ರದೇಶದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ದೆಹಲಿಯ ಟ್ರಾಫಿಕ್ ಪೋಲೀಸರಿಂದ  ಮನವಿಯನ್ನು ಸ್ವೀಕರಿಸಿದ ನಂತರ ನವದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್ (NDMC) ಡಿಸೆಂಬರ್‌ನಲ್ಲಿ ಮಧ್ಯಕಾಲೀನ ಯುಗದ ಮಸೀದಿಯನ್ನು ತೆಗೆದುಹಾಕುವ ಬಗ್ಗೆ ಸಾರ್ವಜನಿಕ ಸೂಚನೆಯನ್ನು ನೀಡಿತ್ತು. ನಂತರ ಎನ್‌ಡಿಎಂಸಿ ಮಸೀದಿಯನ್ನು ತೆಗೆದುಹಾಕುವ ಉದ್ದೇಶಿತ ಕ್ರಮಕ್ಕೆ ಸಾರ್ವಜನಿಕ ಅಭಿಪ್ರಾಯವನ್ನು ಕೇಳಿದೆ.

ಎನ್‌ಡಿಎಂಸಿ ಪಾರಂಪರಿಕ ರಚನೆಯ ಭಾಗಗಳನ್ನು ಕೆಡವದಂತೆ ಅಥವಾ ಮಾರ್ಪಡಿಸದಂತೆ ತಡೆಯಲು ಕೋರಿ ದೆಹಲಿ ವಕ್ಫ್ ಬೋರ್ಡ್ (ಡಿಡಬ್ಲ್ಯೂಬಿ) ಮಾಡಿದ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಈ ಸೂಚನೆ ಬಂದಿತ್ತು. ಈ ನೋಟಿಸ್‌ ಪ್ರಶ್ನಿಸಿ ಮಸೀದಿಯ ಇಮಾಮ್‌ ಅಬ್ದುಲ್‌ ಅಜೀಜ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದೆ. ದುರುದ್ದೇಶಪೂರಿತ ಉದ್ದೇಶದಿಂದ ನೋಟಿಸ್ ನೀಡಲಾಗಿದೆ ಮತ್ತು ಮಸೀದಿಯ ಉಪಸ್ಥಿತಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ ಎಂಬುವುದಕ್ಕೆ ಪುರಾವೆಗಳು ಇಲ್ಲ ಎಂದು ಅಜೀಜ್ ವಾದಿಸಿದ್ದರು.

ನ್ಯಾಯಾಲಯದ ಕಲಾಪದಲ್ಲಿ ಸಂಚಾರಿ ಪೊಲೀಸರನ್ನು ಪ್ರತಿನಿಧಿಸುವ ಹಿರಿಯ ವಕೀಲ ಸಂಜಯ್ ಜೈನ್, ಎನ್‌ಡಿಎಂಸಿ ಸೂಚನೆಯನ್ನು ಪ್ರಶ್ನಿಸುವ ಅರ್ಜಿಯು ಪರಿಣಾಮಕಾರಿಯಾಗಿ ಇತ್ಯರ್ಥಗೊಂಡಿದೆ ಎಂದು ಪೀಠಕ್ಕೆ ತಿಳಿಸಿದ್ದಾರೆ. ಸಾರ್ವಜನಿಕ ಅಭಿಪ್ರಾಯಗಳನ್ನು ಪರಿಗಣಿಸಿದ ನಂತರ ವಿಷಯವನ್ನು ಎಚ್‌ಸಿಸಿಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.

ಅಜೀಜ್ ಮತ್ತು ಡಿಡಬ್ಲ್ಯೂಬಿ ಅವರನ್ನು ಪ್ರತಿನಿಧಿಸಿದ ವಕೀಲ ವಿರಾಜ್ ದಾತಾರ್ ಮತ್ತು ಹಿರಿಯ ವಕೀಲ ಸಂಜೋಯ್ ಘೋಸ್ , ಕಾನೂನಿನ ನಿಬಂಧನೆಗಳ ಅಡಿಯಲ್ಲಿ ನೋಟಿಸ್ ನೀಡಲಾಗಲಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಎಚ್‌ಸಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ನಿರ್ಣಯವನ್ನು ಎಚ್‌ಸಿಸಿ ತೆಗೆದುಕೊಳ್ಳಬೇಕು, ನಾವಲ್ಲ, ಎಚ್‌ಸಿಸಿ ಅನುಮತಿಯಿಲ್ಲದೆ ನಾವು ಒಂದು ಇಟ್ಟಿಗೆಯನ್ನು ಕೂಡ ಮುಟ್ಟಲು ಸಹ ಸಾಧ್ಯವಿಲ್ಲ ಎಂದು ಇದಕ್ಕೂ ವಕೀಲ ಶ್ರೀಹರ್ಷ ಪೀಚರ ಮೂಲಕ ಎನ್‌ಡಿಎಂಸಿ ಕೋರ್ಟ್‌ಗೆ ಹೇಳಿತ್ತು.

ಇತಿಹಾಸಕಾರರ ರಾಷ್ಟ್ರೀಯ ಮಟ್ಟದ ಸಂಘಟನೆಯಾದ ಇಂಡಿಯನ್ ಹಿಸ್ಟರಿ ಕಾಂಗ್ರೆಸ್ (IHC), ಎನ್‌ಡಿಎಂಸಿಯ ನಿರ್ಧಾರವನ್ನು ಸ್ವೀಕಾರಾರ್ಹವಲ್ಲ ಮತ್ತು ಅವಿವೇಕದ ಪರಮಾವಧಿ ಎಂದು ಕರೆದಿದೆ ಮತ್ತು ಈ ವರ್ಷದ ಆರಂಭದಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ ಇತ್ತೀಚಿನ ದಿನಗಳಲ್ಲಿ ನಮ್ಮ ಮಧ್ಯಕಾಲೀನ ವಾಸ್ತುಶಿಲ್ಪದ ಪರಂಪರೆಯನ್ನು ನಾಶಮಾಡಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದೆ.

ವೃತ್ತವನ್ನು ತೆಗೆದುಹಾಕುವ ಪ್ರಸ್ತಾಪವು ಸ್ವೀಕಾರಾರ್ಹವಲ್ಲ ಮತ್ತು ಇದು ನವ ದೆಹಲಿಯ ರಸ್ತೆ ಯೋಜನೆಯ ಬಗೆಗಿನ ಅವಿವೇಕದ ಕ್ರಮ, ಈ ಮಸೀದಿಯು 2009ರಲ್ಲಿ ಐತಿಹಾಸಿಕ ಪ್ರಾಮುಖ್ಯತೆಗಾಗಿ ಹೆರಿಟೇಜ್ III ಸ್ಥಾನಮಾನವನ್ನು ಪಡೆದಿದೆ. ಸುನೆಹ್ರಿ ಬಾಗ್ ಮಸೀದಿ ಕೇವಲ ಮಸೀದಿ ಅಲ್ಲ, ಇದು ನಮ್ಮ ಹಲವಾರು ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ನಿಕಟ ಸಂಬಂಧ ಹೊಂದಿರುವ ಇತಿಹಾಸವನ್ನು ಹೊಂದಿದೆ. ನಮ್ಮ ಸಂವಿಧಾನ ಸಭೆಯ ಸದಸ್ಯರಾದ ಹಸರತ್ ಮೊಹಾನಿ ಅವರು ಸಭೆಗಳಿಗೆ ಹಾಜರಾಗುವಾಗ ಇಲ್ಲಿಯೇ ಇರುತ್ತಿದ್ದರು, ಅದರ ಸುಪ್ರಸಿದ್ಧ ಇತಿಹಾಸದ ಬಗ್ಗೆ ಕಾಳಜಿ ವಹಿಸಿ ಎಂದು ಇತಿಹಾಸಕಾರ ಎಸ್.ಇರ್ಫಾನ್ ಹಬೀಬ್ ಎಕ್ಸ್ ನಲ್ಲಿ ಬರೆದಿದ್ದಾರೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...