HomeUncategorizedಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

ಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

- Advertisement -
- Advertisement -

150 ವರ್ಷಗಳಷ್ಟು ಹಳೆಯದಾದ ಸುನೆಹ್ರಿ ಬಾಗ್ ಮಸೀದಿ ಧ್ವಂಸದ ಕುರಿತ ಪ್ರಕರಣ ನಗರಾಭಿವೃದ್ಧಿ ಸಚಿವಾಲಯದ ಪಾರಂಪರಿಕ ಸಂರಕ್ಷಣಾ ಸಮಿತಿಗೆ (ಎಚ್‌ಸಿಸಿ) ವಹಿಸಲಾಗಿದೆ ಎಂದು ದೆಹಲಿ ಟ್ರಾಫಿಕ್ ಪೊಲೀಸರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಆ ಪ್ರದೇಶದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ದೆಹಲಿಯ ಟ್ರಾಫಿಕ್ ಪೋಲೀಸರಿಂದ  ಮನವಿಯನ್ನು ಸ್ವೀಕರಿಸಿದ ನಂತರ ನವದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್ (NDMC) ಡಿಸೆಂಬರ್‌ನಲ್ಲಿ ಮಧ್ಯಕಾಲೀನ ಯುಗದ ಮಸೀದಿಯನ್ನು ತೆಗೆದುಹಾಕುವ ಬಗ್ಗೆ ಸಾರ್ವಜನಿಕ ಸೂಚನೆಯನ್ನು ನೀಡಿತ್ತು. ನಂತರ ಎನ್‌ಡಿಎಂಸಿ ಮಸೀದಿಯನ್ನು ತೆಗೆದುಹಾಕುವ ಉದ್ದೇಶಿತ ಕ್ರಮಕ್ಕೆ ಸಾರ್ವಜನಿಕ ಅಭಿಪ್ರಾಯವನ್ನು ಕೇಳಿದೆ.

ಎನ್‌ಡಿಎಂಸಿ ಪಾರಂಪರಿಕ ರಚನೆಯ ಭಾಗಗಳನ್ನು ಕೆಡವದಂತೆ ಅಥವಾ ಮಾರ್ಪಡಿಸದಂತೆ ತಡೆಯಲು ಕೋರಿ ದೆಹಲಿ ವಕ್ಫ್ ಬೋರ್ಡ್ (ಡಿಡಬ್ಲ್ಯೂಬಿ) ಮಾಡಿದ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಈ ಸೂಚನೆ ಬಂದಿತ್ತು. ಈ ನೋಟಿಸ್‌ ಪ್ರಶ್ನಿಸಿ ಮಸೀದಿಯ ಇಮಾಮ್‌ ಅಬ್ದುಲ್‌ ಅಜೀಜ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದೆ. ದುರುದ್ದೇಶಪೂರಿತ ಉದ್ದೇಶದಿಂದ ನೋಟಿಸ್ ನೀಡಲಾಗಿದೆ ಮತ್ತು ಮಸೀದಿಯ ಉಪಸ್ಥಿತಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ ಎಂಬುವುದಕ್ಕೆ ಪುರಾವೆಗಳು ಇಲ್ಲ ಎಂದು ಅಜೀಜ್ ವಾದಿಸಿದ್ದರು.

ನ್ಯಾಯಾಲಯದ ಕಲಾಪದಲ್ಲಿ ಸಂಚಾರಿ ಪೊಲೀಸರನ್ನು ಪ್ರತಿನಿಧಿಸುವ ಹಿರಿಯ ವಕೀಲ ಸಂಜಯ್ ಜೈನ್, ಎನ್‌ಡಿಎಂಸಿ ಸೂಚನೆಯನ್ನು ಪ್ರಶ್ನಿಸುವ ಅರ್ಜಿಯು ಪರಿಣಾಮಕಾರಿಯಾಗಿ ಇತ್ಯರ್ಥಗೊಂಡಿದೆ ಎಂದು ಪೀಠಕ್ಕೆ ತಿಳಿಸಿದ್ದಾರೆ. ಸಾರ್ವಜನಿಕ ಅಭಿಪ್ರಾಯಗಳನ್ನು ಪರಿಗಣಿಸಿದ ನಂತರ ವಿಷಯವನ್ನು ಎಚ್‌ಸಿಸಿಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.

ಅಜೀಜ್ ಮತ್ತು ಡಿಡಬ್ಲ್ಯೂಬಿ ಅವರನ್ನು ಪ್ರತಿನಿಧಿಸಿದ ವಕೀಲ ವಿರಾಜ್ ದಾತಾರ್ ಮತ್ತು ಹಿರಿಯ ವಕೀಲ ಸಂಜೋಯ್ ಘೋಸ್ , ಕಾನೂನಿನ ನಿಬಂಧನೆಗಳ ಅಡಿಯಲ್ಲಿ ನೋಟಿಸ್ ನೀಡಲಾಗಲಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಎಚ್‌ಸಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ನಿರ್ಣಯವನ್ನು ಎಚ್‌ಸಿಸಿ ತೆಗೆದುಕೊಳ್ಳಬೇಕು, ನಾವಲ್ಲ, ಎಚ್‌ಸಿಸಿ ಅನುಮತಿಯಿಲ್ಲದೆ ನಾವು ಒಂದು ಇಟ್ಟಿಗೆಯನ್ನು ಕೂಡ ಮುಟ್ಟಲು ಸಹ ಸಾಧ್ಯವಿಲ್ಲ ಎಂದು ಇದಕ್ಕೂ ವಕೀಲ ಶ್ರೀಹರ್ಷ ಪೀಚರ ಮೂಲಕ ಎನ್‌ಡಿಎಂಸಿ ಕೋರ್ಟ್‌ಗೆ ಹೇಳಿತ್ತು.

ಇತಿಹಾಸಕಾರರ ರಾಷ್ಟ್ರೀಯ ಮಟ್ಟದ ಸಂಘಟನೆಯಾದ ಇಂಡಿಯನ್ ಹಿಸ್ಟರಿ ಕಾಂಗ್ರೆಸ್ (IHC), ಎನ್‌ಡಿಎಂಸಿಯ ನಿರ್ಧಾರವನ್ನು ಸ್ವೀಕಾರಾರ್ಹವಲ್ಲ ಮತ್ತು ಅವಿವೇಕದ ಪರಮಾವಧಿ ಎಂದು ಕರೆದಿದೆ ಮತ್ತು ಈ ವರ್ಷದ ಆರಂಭದಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ ಇತ್ತೀಚಿನ ದಿನಗಳಲ್ಲಿ ನಮ್ಮ ಮಧ್ಯಕಾಲೀನ ವಾಸ್ತುಶಿಲ್ಪದ ಪರಂಪರೆಯನ್ನು ನಾಶಮಾಡಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದೆ.

ವೃತ್ತವನ್ನು ತೆಗೆದುಹಾಕುವ ಪ್ರಸ್ತಾಪವು ಸ್ವೀಕಾರಾರ್ಹವಲ್ಲ ಮತ್ತು ಇದು ನವ ದೆಹಲಿಯ ರಸ್ತೆ ಯೋಜನೆಯ ಬಗೆಗಿನ ಅವಿವೇಕದ ಕ್ರಮ, ಈ ಮಸೀದಿಯು 2009ರಲ್ಲಿ ಐತಿಹಾಸಿಕ ಪ್ರಾಮುಖ್ಯತೆಗಾಗಿ ಹೆರಿಟೇಜ್ III ಸ್ಥಾನಮಾನವನ್ನು ಪಡೆದಿದೆ. ಸುನೆಹ್ರಿ ಬಾಗ್ ಮಸೀದಿ ಕೇವಲ ಮಸೀದಿ ಅಲ್ಲ, ಇದು ನಮ್ಮ ಹಲವಾರು ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ನಿಕಟ ಸಂಬಂಧ ಹೊಂದಿರುವ ಇತಿಹಾಸವನ್ನು ಹೊಂದಿದೆ. ನಮ್ಮ ಸಂವಿಧಾನ ಸಭೆಯ ಸದಸ್ಯರಾದ ಹಸರತ್ ಮೊಹಾನಿ ಅವರು ಸಭೆಗಳಿಗೆ ಹಾಜರಾಗುವಾಗ ಇಲ್ಲಿಯೇ ಇರುತ್ತಿದ್ದರು, ಅದರ ಸುಪ್ರಸಿದ್ಧ ಇತಿಹಾಸದ ಬಗ್ಗೆ ಕಾಳಜಿ ವಹಿಸಿ ಎಂದು ಇತಿಹಾಸಕಾರ ಎಸ್.ಇರ್ಫಾನ್ ಹಬೀಬ್ ಎಕ್ಸ್ ನಲ್ಲಿ ಬರೆದಿದ್ದಾರೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....