HomeUncategorizedಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

ಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

- Advertisement -
- Advertisement -

150 ವರ್ಷಗಳಷ್ಟು ಹಳೆಯದಾದ ಸುನೆಹ್ರಿ ಬಾಗ್ ಮಸೀದಿ ಧ್ವಂಸದ ಕುರಿತ ಪ್ರಕರಣ ನಗರಾಭಿವೃದ್ಧಿ ಸಚಿವಾಲಯದ ಪಾರಂಪರಿಕ ಸಂರಕ್ಷಣಾ ಸಮಿತಿಗೆ (ಎಚ್‌ಸಿಸಿ) ವಹಿಸಲಾಗಿದೆ ಎಂದು ದೆಹಲಿ ಟ್ರಾಫಿಕ್ ಪೊಲೀಸರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಆ ಪ್ರದೇಶದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ದೆಹಲಿಯ ಟ್ರಾಫಿಕ್ ಪೋಲೀಸರಿಂದ  ಮನವಿಯನ್ನು ಸ್ವೀಕರಿಸಿದ ನಂತರ ನವದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್ (NDMC) ಡಿಸೆಂಬರ್‌ನಲ್ಲಿ ಮಧ್ಯಕಾಲೀನ ಯುಗದ ಮಸೀದಿಯನ್ನು ತೆಗೆದುಹಾಕುವ ಬಗ್ಗೆ ಸಾರ್ವಜನಿಕ ಸೂಚನೆಯನ್ನು ನೀಡಿತ್ತು. ನಂತರ ಎನ್‌ಡಿಎಂಸಿ ಮಸೀದಿಯನ್ನು ತೆಗೆದುಹಾಕುವ ಉದ್ದೇಶಿತ ಕ್ರಮಕ್ಕೆ ಸಾರ್ವಜನಿಕ ಅಭಿಪ್ರಾಯವನ್ನು ಕೇಳಿದೆ.

ಎನ್‌ಡಿಎಂಸಿ ಪಾರಂಪರಿಕ ರಚನೆಯ ಭಾಗಗಳನ್ನು ಕೆಡವದಂತೆ ಅಥವಾ ಮಾರ್ಪಡಿಸದಂತೆ ತಡೆಯಲು ಕೋರಿ ದೆಹಲಿ ವಕ್ಫ್ ಬೋರ್ಡ್ (ಡಿಡಬ್ಲ್ಯೂಬಿ) ಮಾಡಿದ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಈ ಸೂಚನೆ ಬಂದಿತ್ತು. ಈ ನೋಟಿಸ್‌ ಪ್ರಶ್ನಿಸಿ ಮಸೀದಿಯ ಇಮಾಮ್‌ ಅಬ್ದುಲ್‌ ಅಜೀಜ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದೆ. ದುರುದ್ದೇಶಪೂರಿತ ಉದ್ದೇಶದಿಂದ ನೋಟಿಸ್ ನೀಡಲಾಗಿದೆ ಮತ್ತು ಮಸೀದಿಯ ಉಪಸ್ಥಿತಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ ಎಂಬುವುದಕ್ಕೆ ಪುರಾವೆಗಳು ಇಲ್ಲ ಎಂದು ಅಜೀಜ್ ವಾದಿಸಿದ್ದರು.

ನ್ಯಾಯಾಲಯದ ಕಲಾಪದಲ್ಲಿ ಸಂಚಾರಿ ಪೊಲೀಸರನ್ನು ಪ್ರತಿನಿಧಿಸುವ ಹಿರಿಯ ವಕೀಲ ಸಂಜಯ್ ಜೈನ್, ಎನ್‌ಡಿಎಂಸಿ ಸೂಚನೆಯನ್ನು ಪ್ರಶ್ನಿಸುವ ಅರ್ಜಿಯು ಪರಿಣಾಮಕಾರಿಯಾಗಿ ಇತ್ಯರ್ಥಗೊಂಡಿದೆ ಎಂದು ಪೀಠಕ್ಕೆ ತಿಳಿಸಿದ್ದಾರೆ. ಸಾರ್ವಜನಿಕ ಅಭಿಪ್ರಾಯಗಳನ್ನು ಪರಿಗಣಿಸಿದ ನಂತರ ವಿಷಯವನ್ನು ಎಚ್‌ಸಿಸಿಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.

ಅಜೀಜ್ ಮತ್ತು ಡಿಡಬ್ಲ್ಯೂಬಿ ಅವರನ್ನು ಪ್ರತಿನಿಧಿಸಿದ ವಕೀಲ ವಿರಾಜ್ ದಾತಾರ್ ಮತ್ತು ಹಿರಿಯ ವಕೀಲ ಸಂಜೋಯ್ ಘೋಸ್ , ಕಾನೂನಿನ ನಿಬಂಧನೆಗಳ ಅಡಿಯಲ್ಲಿ ನೋಟಿಸ್ ನೀಡಲಾಗಲಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಎಚ್‌ಸಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ನಿರ್ಣಯವನ್ನು ಎಚ್‌ಸಿಸಿ ತೆಗೆದುಕೊಳ್ಳಬೇಕು, ನಾವಲ್ಲ, ಎಚ್‌ಸಿಸಿ ಅನುಮತಿಯಿಲ್ಲದೆ ನಾವು ಒಂದು ಇಟ್ಟಿಗೆಯನ್ನು ಕೂಡ ಮುಟ್ಟಲು ಸಹ ಸಾಧ್ಯವಿಲ್ಲ ಎಂದು ಇದಕ್ಕೂ ವಕೀಲ ಶ್ರೀಹರ್ಷ ಪೀಚರ ಮೂಲಕ ಎನ್‌ಡಿಎಂಸಿ ಕೋರ್ಟ್‌ಗೆ ಹೇಳಿತ್ತು.

ಇತಿಹಾಸಕಾರರ ರಾಷ್ಟ್ರೀಯ ಮಟ್ಟದ ಸಂಘಟನೆಯಾದ ಇಂಡಿಯನ್ ಹಿಸ್ಟರಿ ಕಾಂಗ್ರೆಸ್ (IHC), ಎನ್‌ಡಿಎಂಸಿಯ ನಿರ್ಧಾರವನ್ನು ಸ್ವೀಕಾರಾರ್ಹವಲ್ಲ ಮತ್ತು ಅವಿವೇಕದ ಪರಮಾವಧಿ ಎಂದು ಕರೆದಿದೆ ಮತ್ತು ಈ ವರ್ಷದ ಆರಂಭದಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ ಇತ್ತೀಚಿನ ದಿನಗಳಲ್ಲಿ ನಮ್ಮ ಮಧ್ಯಕಾಲೀನ ವಾಸ್ತುಶಿಲ್ಪದ ಪರಂಪರೆಯನ್ನು ನಾಶಮಾಡಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದೆ.

ವೃತ್ತವನ್ನು ತೆಗೆದುಹಾಕುವ ಪ್ರಸ್ತಾಪವು ಸ್ವೀಕಾರಾರ್ಹವಲ್ಲ ಮತ್ತು ಇದು ನವ ದೆಹಲಿಯ ರಸ್ತೆ ಯೋಜನೆಯ ಬಗೆಗಿನ ಅವಿವೇಕದ ಕ್ರಮ, ಈ ಮಸೀದಿಯು 2009ರಲ್ಲಿ ಐತಿಹಾಸಿಕ ಪ್ರಾಮುಖ್ಯತೆಗಾಗಿ ಹೆರಿಟೇಜ್ III ಸ್ಥಾನಮಾನವನ್ನು ಪಡೆದಿದೆ. ಸುನೆಹ್ರಿ ಬಾಗ್ ಮಸೀದಿ ಕೇವಲ ಮಸೀದಿ ಅಲ್ಲ, ಇದು ನಮ್ಮ ಹಲವಾರು ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ನಿಕಟ ಸಂಬಂಧ ಹೊಂದಿರುವ ಇತಿಹಾಸವನ್ನು ಹೊಂದಿದೆ. ನಮ್ಮ ಸಂವಿಧಾನ ಸಭೆಯ ಸದಸ್ಯರಾದ ಹಸರತ್ ಮೊಹಾನಿ ಅವರು ಸಭೆಗಳಿಗೆ ಹಾಜರಾಗುವಾಗ ಇಲ್ಲಿಯೇ ಇರುತ್ತಿದ್ದರು, ಅದರ ಸುಪ್ರಸಿದ್ಧ ಇತಿಹಾಸದ ಬಗ್ಗೆ ಕಾಳಜಿ ವಹಿಸಿ ಎಂದು ಇತಿಹಾಸಕಾರ ಎಸ್.ಇರ್ಫಾನ್ ಹಬೀಬ್ ಎಕ್ಸ್ ನಲ್ಲಿ ಬರೆದಿದ್ದಾರೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...