HomeUncategorizedಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

ಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

- Advertisement -
- Advertisement -

150 ವರ್ಷಗಳಷ್ಟು ಹಳೆಯದಾದ ಸುನೆಹ್ರಿ ಬಾಗ್ ಮಸೀದಿ ಧ್ವಂಸದ ಕುರಿತ ಪ್ರಕರಣ ನಗರಾಭಿವೃದ್ಧಿ ಸಚಿವಾಲಯದ ಪಾರಂಪರಿಕ ಸಂರಕ್ಷಣಾ ಸಮಿತಿಗೆ (ಎಚ್‌ಸಿಸಿ) ವಹಿಸಲಾಗಿದೆ ಎಂದು ದೆಹಲಿ ಟ್ರಾಫಿಕ್ ಪೊಲೀಸರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಆ ಪ್ರದೇಶದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ದೆಹಲಿಯ ಟ್ರಾಫಿಕ್ ಪೋಲೀಸರಿಂದ  ಮನವಿಯನ್ನು ಸ್ವೀಕರಿಸಿದ ನಂತರ ನವದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್ (NDMC) ಡಿಸೆಂಬರ್‌ನಲ್ಲಿ ಮಧ್ಯಕಾಲೀನ ಯುಗದ ಮಸೀದಿಯನ್ನು ತೆಗೆದುಹಾಕುವ ಬಗ್ಗೆ ಸಾರ್ವಜನಿಕ ಸೂಚನೆಯನ್ನು ನೀಡಿತ್ತು. ನಂತರ ಎನ್‌ಡಿಎಂಸಿ ಮಸೀದಿಯನ್ನು ತೆಗೆದುಹಾಕುವ ಉದ್ದೇಶಿತ ಕ್ರಮಕ್ಕೆ ಸಾರ್ವಜನಿಕ ಅಭಿಪ್ರಾಯವನ್ನು ಕೇಳಿದೆ.

ಎನ್‌ಡಿಎಂಸಿ ಪಾರಂಪರಿಕ ರಚನೆಯ ಭಾಗಗಳನ್ನು ಕೆಡವದಂತೆ ಅಥವಾ ಮಾರ್ಪಡಿಸದಂತೆ ತಡೆಯಲು ಕೋರಿ ದೆಹಲಿ ವಕ್ಫ್ ಬೋರ್ಡ್ (ಡಿಡಬ್ಲ್ಯೂಬಿ) ಮಾಡಿದ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಈ ಸೂಚನೆ ಬಂದಿತ್ತು. ಈ ನೋಟಿಸ್‌ ಪ್ರಶ್ನಿಸಿ ಮಸೀದಿಯ ಇಮಾಮ್‌ ಅಬ್ದುಲ್‌ ಅಜೀಜ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದೆ. ದುರುದ್ದೇಶಪೂರಿತ ಉದ್ದೇಶದಿಂದ ನೋಟಿಸ್ ನೀಡಲಾಗಿದೆ ಮತ್ತು ಮಸೀದಿಯ ಉಪಸ್ಥಿತಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ ಎಂಬುವುದಕ್ಕೆ ಪುರಾವೆಗಳು ಇಲ್ಲ ಎಂದು ಅಜೀಜ್ ವಾದಿಸಿದ್ದರು.

ನ್ಯಾಯಾಲಯದ ಕಲಾಪದಲ್ಲಿ ಸಂಚಾರಿ ಪೊಲೀಸರನ್ನು ಪ್ರತಿನಿಧಿಸುವ ಹಿರಿಯ ವಕೀಲ ಸಂಜಯ್ ಜೈನ್, ಎನ್‌ಡಿಎಂಸಿ ಸೂಚನೆಯನ್ನು ಪ್ರಶ್ನಿಸುವ ಅರ್ಜಿಯು ಪರಿಣಾಮಕಾರಿಯಾಗಿ ಇತ್ಯರ್ಥಗೊಂಡಿದೆ ಎಂದು ಪೀಠಕ್ಕೆ ತಿಳಿಸಿದ್ದಾರೆ. ಸಾರ್ವಜನಿಕ ಅಭಿಪ್ರಾಯಗಳನ್ನು ಪರಿಗಣಿಸಿದ ನಂತರ ವಿಷಯವನ್ನು ಎಚ್‌ಸಿಸಿಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.

ಅಜೀಜ್ ಮತ್ತು ಡಿಡಬ್ಲ್ಯೂಬಿ ಅವರನ್ನು ಪ್ರತಿನಿಧಿಸಿದ ವಕೀಲ ವಿರಾಜ್ ದಾತಾರ್ ಮತ್ತು ಹಿರಿಯ ವಕೀಲ ಸಂಜೋಯ್ ಘೋಸ್ , ಕಾನೂನಿನ ನಿಬಂಧನೆಗಳ ಅಡಿಯಲ್ಲಿ ನೋಟಿಸ್ ನೀಡಲಾಗಲಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಎಚ್‌ಸಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ನಿರ್ಣಯವನ್ನು ಎಚ್‌ಸಿಸಿ ತೆಗೆದುಕೊಳ್ಳಬೇಕು, ನಾವಲ್ಲ, ಎಚ್‌ಸಿಸಿ ಅನುಮತಿಯಿಲ್ಲದೆ ನಾವು ಒಂದು ಇಟ್ಟಿಗೆಯನ್ನು ಕೂಡ ಮುಟ್ಟಲು ಸಹ ಸಾಧ್ಯವಿಲ್ಲ ಎಂದು ಇದಕ್ಕೂ ವಕೀಲ ಶ್ರೀಹರ್ಷ ಪೀಚರ ಮೂಲಕ ಎನ್‌ಡಿಎಂಸಿ ಕೋರ್ಟ್‌ಗೆ ಹೇಳಿತ್ತು.

ಇತಿಹಾಸಕಾರರ ರಾಷ್ಟ್ರೀಯ ಮಟ್ಟದ ಸಂಘಟನೆಯಾದ ಇಂಡಿಯನ್ ಹಿಸ್ಟರಿ ಕಾಂಗ್ರೆಸ್ (IHC), ಎನ್‌ಡಿಎಂಸಿಯ ನಿರ್ಧಾರವನ್ನು ಸ್ವೀಕಾರಾರ್ಹವಲ್ಲ ಮತ್ತು ಅವಿವೇಕದ ಪರಮಾವಧಿ ಎಂದು ಕರೆದಿದೆ ಮತ್ತು ಈ ವರ್ಷದ ಆರಂಭದಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ ಇತ್ತೀಚಿನ ದಿನಗಳಲ್ಲಿ ನಮ್ಮ ಮಧ್ಯಕಾಲೀನ ವಾಸ್ತುಶಿಲ್ಪದ ಪರಂಪರೆಯನ್ನು ನಾಶಮಾಡಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದೆ.

ವೃತ್ತವನ್ನು ತೆಗೆದುಹಾಕುವ ಪ್ರಸ್ತಾಪವು ಸ್ವೀಕಾರಾರ್ಹವಲ್ಲ ಮತ್ತು ಇದು ನವ ದೆಹಲಿಯ ರಸ್ತೆ ಯೋಜನೆಯ ಬಗೆಗಿನ ಅವಿವೇಕದ ಕ್ರಮ, ಈ ಮಸೀದಿಯು 2009ರಲ್ಲಿ ಐತಿಹಾಸಿಕ ಪ್ರಾಮುಖ್ಯತೆಗಾಗಿ ಹೆರಿಟೇಜ್ III ಸ್ಥಾನಮಾನವನ್ನು ಪಡೆದಿದೆ. ಸುನೆಹ್ರಿ ಬಾಗ್ ಮಸೀದಿ ಕೇವಲ ಮಸೀದಿ ಅಲ್ಲ, ಇದು ನಮ್ಮ ಹಲವಾರು ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ನಿಕಟ ಸಂಬಂಧ ಹೊಂದಿರುವ ಇತಿಹಾಸವನ್ನು ಹೊಂದಿದೆ. ನಮ್ಮ ಸಂವಿಧಾನ ಸಭೆಯ ಸದಸ್ಯರಾದ ಹಸರತ್ ಮೊಹಾನಿ ಅವರು ಸಭೆಗಳಿಗೆ ಹಾಜರಾಗುವಾಗ ಇಲ್ಲಿಯೇ ಇರುತ್ತಿದ್ದರು, ಅದರ ಸುಪ್ರಸಿದ್ಧ ಇತಿಹಾಸದ ಬಗ್ಗೆ ಕಾಳಜಿ ವಹಿಸಿ ಎಂದು ಇತಿಹಾಸಕಾರ ಎಸ್.ಇರ್ಫಾನ್ ಹಬೀಬ್ ಎಕ್ಸ್ ನಲ್ಲಿ ಬರೆದಿದ್ದಾರೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...