Homeಕರ್ನಾಟಕಹೆಡ್‌ಬುಷ್ ಬಗ್ಗೆ ಮಾತಾಡುವ ಸುನೀಲ್ ಕುಮಾರ್‌ರವರೆ, ನಾರಾಯಣ ಗುರುಗಳಿಗೆ ಅವಮಾನವಾದಾಗ ಎಲ್ಲಿದ್ದೀರಿ? ಕಾಂಗ್ರೆಸ್ ಪ್ರಶ್ನೆ

ಹೆಡ್‌ಬುಷ್ ಬಗ್ಗೆ ಮಾತಾಡುವ ಸುನೀಲ್ ಕುಮಾರ್‌ರವರೆ, ನಾರಾಯಣ ಗುರುಗಳಿಗೆ ಅವಮಾನವಾದಾಗ ಎಲ್ಲಿದ್ದೀರಿ? ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಹೆಡ್‌ಬುಷ್ ಚಿತ್ರದ ಬಗ್ಗೆ ಆಕ್ಷೇಪಣೆ ಎತ್ತುವ ಸಚಿವ ಸುನೀಲ್ ಕುಮಾರ್‌ರವರೆ, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನವಾದಾಗ ಎಲ್ಲಿದ್ದೀರಿ? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಈ ಕುರಿತು ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಸರಣಿ ಟ್ವೀಟ್ ಮಾಡಿದ್ದು, ಹೆಡ್ ಬುಷ್ ಚಿತ್ರದಲ್ಲಿ ಇಲ್ಲದ ವಿವಾದ ಕಣ್ಣಿಗೆ ಬೀಳುತ್ತಲೇ ಹೆಡೆ ಎತ್ತಿ ಬುಸ್ ಬುಸ್ ಎನ್ನಲು ಹೊರಟಿರುವ ಸುನೀಲ್‌ ಕುಮಾರ್‌ರವರೆ, ಪಠ್ಯಪುಸ್ತಕದಲ್ಲಿ, ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನವಾದಾಗ ನಿಮ್ಮೊಳಗಿನ ಸಂಸ್ಕೃತಿ ವೀರ ಹೆಡೆ ಎತ್ತಲಿಲ್ಲವೇಕೆ? ನಿಮ್ಮದು ಸೆಲೆಕ್ಟೆಡ್ ಸಂಸ್ಕೃತಿ ರಕ್ಷಣೆಯೇ?” ಎಂದು ಪ್ರಶ್ನಿಸಿದೆ.

ಬಳ್ಳಾರಿಯಲ್ಲಿ ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಒಳಚರಂಡಿ ನೀರು ನಿಂತು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಸಿನೆಮಾ ಒಂದನ್ನು ಹಿಡಿದು ವಿವಾದ ಸೃಷ್ಟಿಸಲು ಯತ್ನಿಸುವ ಇಂಧನ ಸಚಿವ ಸುನೀಲ್‌ ಕುಮಾರ್‌ರವರು
ತಮ್ಮ ಇಲಾಖೆಯ ಇಂತಹ ಅವ್ಯವಸ್ಥೆ ಗಮನಿಸುವುದಿಲ್ಲವೇ? ಸಚಿವರೇ, ಮೊದಲು ನಿಮ್ಮ ಜವಾಬ್ದಾರಿಯನ್ನ ಸರಿಯಾಗಿ ನಿರ್ವಹಿಸುವುದನ್ನು ಕಲಿಯಿರಿ ಎಂದು ಕಾಂಗ್ರೆಸ್ ಎಚ್ಚರಿಸಿದೆ.

ಕೆಲಸವಿಲ್ಲದವ ಮಂಗನ ಜೊತೆ ಆಡಲು ಹೊರಟಂತೆ ಸಚಿವರು ಇಲ್ಲದ ವಿವಾದ ಸೃಷ್ಟಿಸಿ ಮೈಲೇಜ್ ಪಡೆಯಲು ಹೊರಟಿದ್ದಾರೆ. ಪಠ್ಯದಲ್ಲಿ ಸುರಪುರದ ವೀರರಿಗೆ ಅವಮಾನವಾದಾಗ ಎಲ್ಲಿ ಹೋಗಿದ್ದರು? ತಮ್ಮ ಇಂಧನ ಇಲಾಖೆಯ ಅಕ್ರಮಗಳನ್ನು ತಡೆಯಲು, ಅವ್ಯವಸ್ಥೆ ನಿವಾರಿಸಲು ಆಸಕ್ತಿ ಇಲ್ಲವೇಕೆ? ವಿವಾದಗಳಿಗೆ ಮಾತ್ರ ಇವರ ಆಸಕ್ತಿಯೇ? ಎಂದು ಕಿಡಿಕಾರಿದೆ.

ಇದನ್ನೂ ಓದಿ; ಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

“ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನವಾಗಿದೆ ಎಂಬ ಚರ್ಚೆ ಮಾಧ್ಯಮ ಹಾಗೂ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೀರಗಾಸೆ ಕನ್ನಡದ ಹೆಮ್ಮೆಯ ಜಾನಪದ ಪರಂಪರೆ. ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕ್ರತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಒಂದೊಮ್ಮೆ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನವಾದರೆ ನಿರ್ಮಾಪಕರು ಹಾಗೂ ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ” ಎಂದು ಸಚಿವ ಸುನೀಲ್ ಕುಮಾರ್ ಅಕ್ಟೋಬರ್ 26ರಂದು ಟ್ವೀಟ್ ಮಾಡಿದ್ದರು.

ಉದಯೋನ್ಮುಖ ನಟ ಡಾಲಿ ಧನಂಜಯ್ ನಿರ್ಮಿಸಿ ಅಭಿನಯಿಸಿರುವ ಹೆಡ್ ಬುಷ್ ಚಿತ್ರದ ಕುರಿತು ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಬಾಕ್ಸ್ ಆಫೀಸ್‌ನಲ್ಲಿಯೂ ಕೂಡ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ ಎಂಬ ವರದಿಗಳಿವೆ. ಈ ಬೆನ್ನಲ್ಲೆ ಚಿತ್ರದಲ್ಲಿ ವೀರಗಾಸೆ ಕಲಾವಿದರ ಕಲಾವಿದರ ಮೇಲೆ ಹಲ್ಲೆ ನಡೆಸುವುದನ್ನು ತೋರಿಸಲಾಗಿದೆ ಮತ್ತು ಐತಿಹಾಸಿಕ ಕರಗಕ್ಕೆ ಅಪಮಾನ ಮಾಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ದೂರು ನೀಡಿದ್ದಾರೆ.

ಚಿತ್ರದ ವಿರುದ್ಧ ಅಪಸ್ವರ ಕೇಳಿಬಂದ ಕೂಡಲೇ ಹಲವಾರು ಸಿನಿಮಾ ನಿರ್ದೇಶಕರು, ತಂತ್ರಜ್ಞರು ಚಿತ್ರತಂಡದ ಪರ ನಿಂತಿದ್ದಾರೆ. IStanWithDhananjay ಹ್ಯಾಷ್‌ಟ್ಯಾಗ್ ಬಳಸಿ ಧನಂಜಯ್‌ರವರಿಗೆ ಬೆಂಬಲ ಘೋಷಿಸಿದ್ದಾರೆ.

ಇದನ್ನೂ ಓದಿ; ‘ಹೆಡ್‌ಬುಷ್‌‌’ ವೀರಗಾಸೆ ವಿವಾದ: ವೈರಲ್ ಆಗುತ್ತಿವೆ ಹಳೆಯ ಸಿನಿಮಾ ದೃಶ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...