Homeಕರ್ನಾಟಕಹೆಡ್‌ಬುಷ್ ಬಗ್ಗೆ ಮಾತಾಡುವ ಸುನೀಲ್ ಕುಮಾರ್‌ರವರೆ, ನಾರಾಯಣ ಗುರುಗಳಿಗೆ ಅವಮಾನವಾದಾಗ ಎಲ್ಲಿದ್ದೀರಿ? ಕಾಂಗ್ರೆಸ್ ಪ್ರಶ್ನೆ

ಹೆಡ್‌ಬುಷ್ ಬಗ್ಗೆ ಮಾತಾಡುವ ಸುನೀಲ್ ಕುಮಾರ್‌ರವರೆ, ನಾರಾಯಣ ಗುರುಗಳಿಗೆ ಅವಮಾನವಾದಾಗ ಎಲ್ಲಿದ್ದೀರಿ? ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಹೆಡ್‌ಬುಷ್ ಚಿತ್ರದ ಬಗ್ಗೆ ಆಕ್ಷೇಪಣೆ ಎತ್ತುವ ಸಚಿವ ಸುನೀಲ್ ಕುಮಾರ್‌ರವರೆ, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನವಾದಾಗ ಎಲ್ಲಿದ್ದೀರಿ? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಈ ಕುರಿತು ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಸರಣಿ ಟ್ವೀಟ್ ಮಾಡಿದ್ದು, ಹೆಡ್ ಬುಷ್ ಚಿತ್ರದಲ್ಲಿ ಇಲ್ಲದ ವಿವಾದ ಕಣ್ಣಿಗೆ ಬೀಳುತ್ತಲೇ ಹೆಡೆ ಎತ್ತಿ ಬುಸ್ ಬುಸ್ ಎನ್ನಲು ಹೊರಟಿರುವ ಸುನೀಲ್‌ ಕುಮಾರ್‌ರವರೆ, ಪಠ್ಯಪುಸ್ತಕದಲ್ಲಿ, ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನವಾದಾಗ ನಿಮ್ಮೊಳಗಿನ ಸಂಸ್ಕೃತಿ ವೀರ ಹೆಡೆ ಎತ್ತಲಿಲ್ಲವೇಕೆ? ನಿಮ್ಮದು ಸೆಲೆಕ್ಟೆಡ್ ಸಂಸ್ಕೃತಿ ರಕ್ಷಣೆಯೇ?” ಎಂದು ಪ್ರಶ್ನಿಸಿದೆ.

ಬಳ್ಳಾರಿಯಲ್ಲಿ ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಒಳಚರಂಡಿ ನೀರು ನಿಂತು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಸಿನೆಮಾ ಒಂದನ್ನು ಹಿಡಿದು ವಿವಾದ ಸೃಷ್ಟಿಸಲು ಯತ್ನಿಸುವ ಇಂಧನ ಸಚಿವ ಸುನೀಲ್‌ ಕುಮಾರ್‌ರವರು
ತಮ್ಮ ಇಲಾಖೆಯ ಇಂತಹ ಅವ್ಯವಸ್ಥೆ ಗಮನಿಸುವುದಿಲ್ಲವೇ? ಸಚಿವರೇ, ಮೊದಲು ನಿಮ್ಮ ಜವಾಬ್ದಾರಿಯನ್ನ ಸರಿಯಾಗಿ ನಿರ್ವಹಿಸುವುದನ್ನು ಕಲಿಯಿರಿ ಎಂದು ಕಾಂಗ್ರೆಸ್ ಎಚ್ಚರಿಸಿದೆ.

ಕೆಲಸವಿಲ್ಲದವ ಮಂಗನ ಜೊತೆ ಆಡಲು ಹೊರಟಂತೆ ಸಚಿವರು ಇಲ್ಲದ ವಿವಾದ ಸೃಷ್ಟಿಸಿ ಮೈಲೇಜ್ ಪಡೆಯಲು ಹೊರಟಿದ್ದಾರೆ. ಪಠ್ಯದಲ್ಲಿ ಸುರಪುರದ ವೀರರಿಗೆ ಅವಮಾನವಾದಾಗ ಎಲ್ಲಿ ಹೋಗಿದ್ದರು? ತಮ್ಮ ಇಂಧನ ಇಲಾಖೆಯ ಅಕ್ರಮಗಳನ್ನು ತಡೆಯಲು, ಅವ್ಯವಸ್ಥೆ ನಿವಾರಿಸಲು ಆಸಕ್ತಿ ಇಲ್ಲವೇಕೆ? ವಿವಾದಗಳಿಗೆ ಮಾತ್ರ ಇವರ ಆಸಕ್ತಿಯೇ? ಎಂದು ಕಿಡಿಕಾರಿದೆ.

ಇದನ್ನೂ ಓದಿ; ಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

“ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನವಾಗಿದೆ ಎಂಬ ಚರ್ಚೆ ಮಾಧ್ಯಮ ಹಾಗೂ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೀರಗಾಸೆ ಕನ್ನಡದ ಹೆಮ್ಮೆಯ ಜಾನಪದ ಪರಂಪರೆ. ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕ್ರತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಒಂದೊಮ್ಮೆ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನವಾದರೆ ನಿರ್ಮಾಪಕರು ಹಾಗೂ ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ” ಎಂದು ಸಚಿವ ಸುನೀಲ್ ಕುಮಾರ್ ಅಕ್ಟೋಬರ್ 26ರಂದು ಟ್ವೀಟ್ ಮಾಡಿದ್ದರು.

ಉದಯೋನ್ಮುಖ ನಟ ಡಾಲಿ ಧನಂಜಯ್ ನಿರ್ಮಿಸಿ ಅಭಿನಯಿಸಿರುವ ಹೆಡ್ ಬುಷ್ ಚಿತ್ರದ ಕುರಿತು ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಬಾಕ್ಸ್ ಆಫೀಸ್‌ನಲ್ಲಿಯೂ ಕೂಡ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ ಎಂಬ ವರದಿಗಳಿವೆ. ಈ ಬೆನ್ನಲ್ಲೆ ಚಿತ್ರದಲ್ಲಿ ವೀರಗಾಸೆ ಕಲಾವಿದರ ಕಲಾವಿದರ ಮೇಲೆ ಹಲ್ಲೆ ನಡೆಸುವುದನ್ನು ತೋರಿಸಲಾಗಿದೆ ಮತ್ತು ಐತಿಹಾಸಿಕ ಕರಗಕ್ಕೆ ಅಪಮಾನ ಮಾಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ದೂರು ನೀಡಿದ್ದಾರೆ.

ಚಿತ್ರದ ವಿರುದ್ಧ ಅಪಸ್ವರ ಕೇಳಿಬಂದ ಕೂಡಲೇ ಹಲವಾರು ಸಿನಿಮಾ ನಿರ್ದೇಶಕರು, ತಂತ್ರಜ್ಞರು ಚಿತ್ರತಂಡದ ಪರ ನಿಂತಿದ್ದಾರೆ. IStanWithDhananjay ಹ್ಯಾಷ್‌ಟ್ಯಾಗ್ ಬಳಸಿ ಧನಂಜಯ್‌ರವರಿಗೆ ಬೆಂಬಲ ಘೋಷಿಸಿದ್ದಾರೆ.

ಇದನ್ನೂ ಓದಿ; ‘ಹೆಡ್‌ಬುಷ್‌‌’ ವೀರಗಾಸೆ ವಿವಾದ: ವೈರಲ್ ಆಗುತ್ತಿವೆ ಹಳೆಯ ಸಿನಿಮಾ ದೃಶ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...