Homeಅಂತರಾಷ್ಟ್ರೀಯಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

9 ತಿಂಗಳಿನಿಂದ ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾನಿಗಳು

- Advertisement -
- Advertisement -

ಕೇವಲ ಎಂಟು ದಿನಗಳ ಭೇಟಿಗೆ ತೆರಳಿ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್ಎಸ್‌) ಸಿಲುಕಿದ್ದ ಅಮೆರಿಕದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ತಂಡ ಕೊನೆಗೂ ಸುರಕ್ಷಿತವಾಗಿ ಭೂಮಿಗೆ ಹಿಂದಿರುಗಿದೆ.

ನಿರೀಕ್ಷೆಯಂತೆ ಅಮೆರಿಕದ ಸ್ಥಳೀಯ ಕಾಲಮಾನ ಮಾರ್ಚ್ 18, 2025 ಸಂಜೆ 5.57 ಮತ್ತು ಭಾರತೀಯ ಕಾಲಮಾನ ಮಾರ್ಚ್‌ 19, 2025 ಮುಂಜಾನೆ 3.27ಕ್ಕೆ ಅಮೆರಿಕ ಕರಾವಳಿಯ ಫ್ಲೋರಿಡಾದ ತಲ್ಲಾಹಸ್ಸೀಯಲ್ಲಿ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್, ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಅವರನ್ನು ಹೊತ್ತ ಸ್ಪೇಸ್ ಎಕ್ಸ್‌ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಲ್ಯಾಂಡ್ ಆಗಿದೆ.

ಪ್ಯಾರಚೂಟ್‌ಗಳ ಸಹಾಯದಿಂದ ಡ್ರ್ಯಾಗನ್‌ ಬಾಹ್ಯಾಕಾಶ ನೌಕೆ ಸಮುದ್ರದ ಮೇಲೆ ಇಳಿಯುತ್ತಿದ್ದಂತೆ ರಕ್ಷಣಾ ಬೋಟ್‌ಗಳು ಸಮೀಪಕ್ಕೆ ಧಾವಿಸಿತು. ಬಾಹ್ಯಾಕಾಶ ನೌಕೆಯಲ್ಲಿದ್ದ ಗಗನಯಾನಿಗಳು ಬೋಟ್‌ಗೆ ಸ್ಥಳಾಂತರಗೊಂಡರು. ನಂತರ ಅವರನ್ನು ದಡಕ್ಕೆ ಕರೆ ತರಲಾಯಿತು.

ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಗಗನಯಾನಿಗಳು ಹೂಸ್ಟನ್‌ನಲ್ಲಿರುವ ನಾಸಾದ ಜಾನ್ಸನ್ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ ಎಂದು ನಾಸಾ ತಿಳಿಸಿದೆ.

ನಿನ್ನೆ (ಮಾ.18) ಬೆಳಿಗ್ಗೆ 10:35ಕ್ಕೆ (ಭಾರತೀಯ ಕಾಲಮಾನ) ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಐಎಸ್‌ಎಸ್‌ನಿಂದ ಹೊರಟಿತ್ತು. ಡ್ರ್ಯಾಗನ್ ಐಎಸ್‌ಎಸ್‌ನಿಂದ ಬೇರ್ಪಡುವ ವಿಡಿಯೋವನ್ನು ಹಂಚಿಕೊಂಡಿದ್ದ ನಾಸಾ, ಮುಂದಿನ 17 ಗಂಟೆಗಳಲ್ಲಿ ಅದು ಭೂಮಿಗೆ ತಲುಪಲಿದೆ ಎಂದಿತ್ತು. ಅದರಂತೆ ಸರಿಯಾದ ಸಮಯಕ್ಕೆ ತಲುಪಿದೆ.

ಬಾಹ್ಯಾಕಾಶ ನೌಕೆಯಿಂದ ಹೊರ ಬಂದ ಬಳಿಕ ಸುನಿತಾ ಮತ್ತು ಬುಚ್‌ ಕೈ ಬೀಸುತ್ತಾ, ನಗುತ್ತಾ ತೆರಳಿದ್ದಾರೆ. ಬಾಹ್ಯಾಕಾಶ ಮತ್ತು ಭೂಮಿಯ ವಾತಾವರಣ ವ್ಯತಿರಿಕ್ತವಾಗಿ ಇರುವುದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಹಾಗಾಗಿ, ನಾಸಾ ಅವರ ಆರೋಗ್ಯದ ಮೇಲೆ ನಿಗಾ ಇಡಲಿದೆ ಎನ್ನಲಾಗಿದೆ.

ಸುನಿತಾ ವಿಲಿಯಮ್ಸ್ ಹಾಗೂ ಬುಚ್‌ ವಿಲ್ಮೋರ್‌ ಕಳೆದ ವರ್ಷ (2024) ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದರು.

ಹಿಂದಿರುಗುವ ಸಮಸ್ಯೆ ಉಂಟಾದ ನಡುವೆಯೂ, ಸುನಿತಾ ಮತ್ತು ಬುಚ್ ಅವರನ್ನು ನಾಸಾ ಸ್ಪೇಸ್‌ಎಕ್ಸ್‌ನ ಕ್ರೂ-9 ಕಾರ್ಯಾಚರಣೆಗೆ ಮರು ನಿಯೋಜಿಸಿತ್ತು. ಇವರಿಬ್ಬರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ನಾಲ್ವರ ಬದಲಿಗೆ ಇಬ್ಬರು ಸಿಬ್ಬಂದಿಯೊಂದಿಗೆ ಸೆಪ್ಟೆಂಬರ್‌ನಲ್ಲಿ ಸ್ಪೇಸ್‌ಎಕ್ಸ್‌ನ ಕ್ರೂ-9 ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ನಾಸಾ ಐಎಸ್‌ಎಸ್‌ಗೆ ಕಳುಹಿಸಿತ್ತು.

ಸುನಿತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್ ತೆರಳಿದ 9 ತಿಂಗಳ ನಂತರ ಕಳೆದ ಭಾನುವಾರ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್ (SpaceX’s Crew-10) ಐಎಸ್‌ಎಸ್‌ ತಲುಪಿತ್ತು. ಆ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್, ಸ್ಪೇಸ್‌ಎಕ್ಸ್‌ನ ಕ್ರೂ-9ನಲ್ಲಿ ತೆರಳಿದ್ದ ನಾಸಾದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಭೂಮಿಗೆ ಮರಳಿದ್ದಾರೆ.

ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್‌ನಲ್ಲಿ ತೆರಳಿದ ನಾಲ್ವರು ಗಗಯಾನಿಗಳಾದ ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಅವರು ಕೆಲ ದಿನಗಳ ಕಾಲ ಐಎಸ್‌ಎಸ್‌ನಲ್ಲಿ ಉಳಿಯಲಿದ್ದಾರೆ.

ನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...