Homeಅಂತರಾಷ್ಟ್ರೀಯಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

9 ತಿಂಗಳಿನಿಂದ ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾನಿಗಳು

- Advertisement -
- Advertisement -

ಕೇವಲ ಎಂಟು ದಿನಗಳ ಭೇಟಿಗೆ ತೆರಳಿ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್ಎಸ್‌) ಸಿಲುಕಿದ್ದ ಅಮೆರಿಕದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ತಂಡ ಕೊನೆಗೂ ಸುರಕ್ಷಿತವಾಗಿ ಭೂಮಿಗೆ ಹಿಂದಿರುಗಿದೆ.

ನಿರೀಕ್ಷೆಯಂತೆ ಅಮೆರಿಕದ ಸ್ಥಳೀಯ ಕಾಲಮಾನ ಮಾರ್ಚ್ 18, 2025 ಸಂಜೆ 5.57 ಮತ್ತು ಭಾರತೀಯ ಕಾಲಮಾನ ಮಾರ್ಚ್‌ 19, 2025 ಮುಂಜಾನೆ 3.27ಕ್ಕೆ ಅಮೆರಿಕ ಕರಾವಳಿಯ ಫ್ಲೋರಿಡಾದ ತಲ್ಲಾಹಸ್ಸೀಯಲ್ಲಿ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್, ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಅವರನ್ನು ಹೊತ್ತ ಸ್ಪೇಸ್ ಎಕ್ಸ್‌ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಲ್ಯಾಂಡ್ ಆಗಿದೆ.

ಪ್ಯಾರಚೂಟ್‌ಗಳ ಸಹಾಯದಿಂದ ಡ್ರ್ಯಾಗನ್‌ ಬಾಹ್ಯಾಕಾಶ ನೌಕೆ ಸಮುದ್ರದ ಮೇಲೆ ಇಳಿಯುತ್ತಿದ್ದಂತೆ ರಕ್ಷಣಾ ಬೋಟ್‌ಗಳು ಸಮೀಪಕ್ಕೆ ಧಾವಿಸಿತು. ಬಾಹ್ಯಾಕಾಶ ನೌಕೆಯಲ್ಲಿದ್ದ ಗಗನಯಾನಿಗಳು ಬೋಟ್‌ಗೆ ಸ್ಥಳಾಂತರಗೊಂಡರು. ನಂತರ ಅವರನ್ನು ದಡಕ್ಕೆ ಕರೆ ತರಲಾಯಿತು.

ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಗಗನಯಾನಿಗಳು ಹೂಸ್ಟನ್‌ನಲ್ಲಿರುವ ನಾಸಾದ ಜಾನ್ಸನ್ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ ಎಂದು ನಾಸಾ ತಿಳಿಸಿದೆ.

ನಿನ್ನೆ (ಮಾ.18) ಬೆಳಿಗ್ಗೆ 10:35ಕ್ಕೆ (ಭಾರತೀಯ ಕಾಲಮಾನ) ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಐಎಸ್‌ಎಸ್‌ನಿಂದ ಹೊರಟಿತ್ತು. ಡ್ರ್ಯಾಗನ್ ಐಎಸ್‌ಎಸ್‌ನಿಂದ ಬೇರ್ಪಡುವ ವಿಡಿಯೋವನ್ನು ಹಂಚಿಕೊಂಡಿದ್ದ ನಾಸಾ, ಮುಂದಿನ 17 ಗಂಟೆಗಳಲ್ಲಿ ಅದು ಭೂಮಿಗೆ ತಲುಪಲಿದೆ ಎಂದಿತ್ತು. ಅದರಂತೆ ಸರಿಯಾದ ಸಮಯಕ್ಕೆ ತಲುಪಿದೆ.

ಬಾಹ್ಯಾಕಾಶ ನೌಕೆಯಿಂದ ಹೊರ ಬಂದ ಬಳಿಕ ಸುನಿತಾ ಮತ್ತು ಬುಚ್‌ ಕೈ ಬೀಸುತ್ತಾ, ನಗುತ್ತಾ ತೆರಳಿದ್ದಾರೆ. ಬಾಹ್ಯಾಕಾಶ ಮತ್ತು ಭೂಮಿಯ ವಾತಾವರಣ ವ್ಯತಿರಿಕ್ತವಾಗಿ ಇರುವುದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಹಾಗಾಗಿ, ನಾಸಾ ಅವರ ಆರೋಗ್ಯದ ಮೇಲೆ ನಿಗಾ ಇಡಲಿದೆ ಎನ್ನಲಾಗಿದೆ.

ಸುನಿತಾ ವಿಲಿಯಮ್ಸ್ ಹಾಗೂ ಬುಚ್‌ ವಿಲ್ಮೋರ್‌ ಕಳೆದ ವರ್ಷ (2024) ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದರು.

ಹಿಂದಿರುಗುವ ಸಮಸ್ಯೆ ಉಂಟಾದ ನಡುವೆಯೂ, ಸುನಿತಾ ಮತ್ತು ಬುಚ್ ಅವರನ್ನು ನಾಸಾ ಸ್ಪೇಸ್‌ಎಕ್ಸ್‌ನ ಕ್ರೂ-9 ಕಾರ್ಯಾಚರಣೆಗೆ ಮರು ನಿಯೋಜಿಸಿತ್ತು. ಇವರಿಬ್ಬರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ನಾಲ್ವರ ಬದಲಿಗೆ ಇಬ್ಬರು ಸಿಬ್ಬಂದಿಯೊಂದಿಗೆ ಸೆಪ್ಟೆಂಬರ್‌ನಲ್ಲಿ ಸ್ಪೇಸ್‌ಎಕ್ಸ್‌ನ ಕ್ರೂ-9 ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ನಾಸಾ ಐಎಸ್‌ಎಸ್‌ಗೆ ಕಳುಹಿಸಿತ್ತು.

ಸುನಿತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್ ತೆರಳಿದ 9 ತಿಂಗಳ ನಂತರ ಕಳೆದ ಭಾನುವಾರ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್ (SpaceX’s Crew-10) ಐಎಸ್‌ಎಸ್‌ ತಲುಪಿತ್ತು. ಆ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್, ಸ್ಪೇಸ್‌ಎಕ್ಸ್‌ನ ಕ್ರೂ-9ನಲ್ಲಿ ತೆರಳಿದ್ದ ನಾಸಾದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಭೂಮಿಗೆ ಮರಳಿದ್ದಾರೆ.

ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್‌ನಲ್ಲಿ ತೆರಳಿದ ನಾಲ್ವರು ಗಗಯಾನಿಗಳಾದ ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಅವರು ಕೆಲ ದಿನಗಳ ಕಾಲ ಐಎಸ್‌ಎಸ್‌ನಲ್ಲಿ ಉಳಿಯಲಿದ್ದಾರೆ.

ನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....