Homeಅಂತರಾಷ್ಟ್ರೀಯಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

9 ತಿಂಗಳಿನಿಂದ ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾನಿಗಳು

- Advertisement -
- Advertisement -

ಕೇವಲ ಎಂಟು ದಿನಗಳ ಭೇಟಿಗೆ ತೆರಳಿ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್ಎಸ್‌) ಸಿಲುಕಿದ್ದ ಅಮೆರಿಕದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ತಂಡ ಕೊನೆಗೂ ಸುರಕ್ಷಿತವಾಗಿ ಭೂಮಿಗೆ ಹಿಂದಿರುಗಿದೆ.

ನಿರೀಕ್ಷೆಯಂತೆ ಅಮೆರಿಕದ ಸ್ಥಳೀಯ ಕಾಲಮಾನ ಮಾರ್ಚ್ 18, 2025 ಸಂಜೆ 5.57 ಮತ್ತು ಭಾರತೀಯ ಕಾಲಮಾನ ಮಾರ್ಚ್‌ 19, 2025 ಮುಂಜಾನೆ 3.27ಕ್ಕೆ ಅಮೆರಿಕ ಕರಾವಳಿಯ ಫ್ಲೋರಿಡಾದ ತಲ್ಲಾಹಸ್ಸೀಯಲ್ಲಿ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್, ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಅವರನ್ನು ಹೊತ್ತ ಸ್ಪೇಸ್ ಎಕ್ಸ್‌ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಲ್ಯಾಂಡ್ ಆಗಿದೆ.

ಪ್ಯಾರಚೂಟ್‌ಗಳ ಸಹಾಯದಿಂದ ಡ್ರ್ಯಾಗನ್‌ ಬಾಹ್ಯಾಕಾಶ ನೌಕೆ ಸಮುದ್ರದ ಮೇಲೆ ಇಳಿಯುತ್ತಿದ್ದಂತೆ ರಕ್ಷಣಾ ಬೋಟ್‌ಗಳು ಸಮೀಪಕ್ಕೆ ಧಾವಿಸಿತು. ಬಾಹ್ಯಾಕಾಶ ನೌಕೆಯಲ್ಲಿದ್ದ ಗಗನಯಾನಿಗಳು ಬೋಟ್‌ಗೆ ಸ್ಥಳಾಂತರಗೊಂಡರು. ನಂತರ ಅವರನ್ನು ದಡಕ್ಕೆ ಕರೆ ತರಲಾಯಿತು.

ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಗಗನಯಾನಿಗಳು ಹೂಸ್ಟನ್‌ನಲ್ಲಿರುವ ನಾಸಾದ ಜಾನ್ಸನ್ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ ಎಂದು ನಾಸಾ ತಿಳಿಸಿದೆ.

ನಿನ್ನೆ (ಮಾ.18) ಬೆಳಿಗ್ಗೆ 10:35ಕ್ಕೆ (ಭಾರತೀಯ ಕಾಲಮಾನ) ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಐಎಸ್‌ಎಸ್‌ನಿಂದ ಹೊರಟಿತ್ತು. ಡ್ರ್ಯಾಗನ್ ಐಎಸ್‌ಎಸ್‌ನಿಂದ ಬೇರ್ಪಡುವ ವಿಡಿಯೋವನ್ನು ಹಂಚಿಕೊಂಡಿದ್ದ ನಾಸಾ, ಮುಂದಿನ 17 ಗಂಟೆಗಳಲ್ಲಿ ಅದು ಭೂಮಿಗೆ ತಲುಪಲಿದೆ ಎಂದಿತ್ತು. ಅದರಂತೆ ಸರಿಯಾದ ಸಮಯಕ್ಕೆ ತಲುಪಿದೆ.

ಬಾಹ್ಯಾಕಾಶ ನೌಕೆಯಿಂದ ಹೊರ ಬಂದ ಬಳಿಕ ಸುನಿತಾ ಮತ್ತು ಬುಚ್‌ ಕೈ ಬೀಸುತ್ತಾ, ನಗುತ್ತಾ ತೆರಳಿದ್ದಾರೆ. ಬಾಹ್ಯಾಕಾಶ ಮತ್ತು ಭೂಮಿಯ ವಾತಾವರಣ ವ್ಯತಿರಿಕ್ತವಾಗಿ ಇರುವುದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಹಾಗಾಗಿ, ನಾಸಾ ಅವರ ಆರೋಗ್ಯದ ಮೇಲೆ ನಿಗಾ ಇಡಲಿದೆ ಎನ್ನಲಾಗಿದೆ.

ಸುನಿತಾ ವಿಲಿಯಮ್ಸ್ ಹಾಗೂ ಬುಚ್‌ ವಿಲ್ಮೋರ್‌ ಕಳೆದ ವರ್ಷ (2024) ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದರು.

ಹಿಂದಿರುಗುವ ಸಮಸ್ಯೆ ಉಂಟಾದ ನಡುವೆಯೂ, ಸುನಿತಾ ಮತ್ತು ಬುಚ್ ಅವರನ್ನು ನಾಸಾ ಸ್ಪೇಸ್‌ಎಕ್ಸ್‌ನ ಕ್ರೂ-9 ಕಾರ್ಯಾಚರಣೆಗೆ ಮರು ನಿಯೋಜಿಸಿತ್ತು. ಇವರಿಬ್ಬರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ನಾಲ್ವರ ಬದಲಿಗೆ ಇಬ್ಬರು ಸಿಬ್ಬಂದಿಯೊಂದಿಗೆ ಸೆಪ್ಟೆಂಬರ್‌ನಲ್ಲಿ ಸ್ಪೇಸ್‌ಎಕ್ಸ್‌ನ ಕ್ರೂ-9 ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ನಾಸಾ ಐಎಸ್‌ಎಸ್‌ಗೆ ಕಳುಹಿಸಿತ್ತು.

ಸುನಿತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್ ತೆರಳಿದ 9 ತಿಂಗಳ ನಂತರ ಕಳೆದ ಭಾನುವಾರ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್ (SpaceX’s Crew-10) ಐಎಸ್‌ಎಸ್‌ ತಲುಪಿತ್ತು. ಆ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್, ಸ್ಪೇಸ್‌ಎಕ್ಸ್‌ನ ಕ್ರೂ-9ನಲ್ಲಿ ತೆರಳಿದ್ದ ನಾಸಾದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಭೂಮಿಗೆ ಮರಳಿದ್ದಾರೆ.

ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್‌ನಲ್ಲಿ ತೆರಳಿದ ನಾಲ್ವರು ಗಗಯಾನಿಗಳಾದ ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಅವರು ಕೆಲ ದಿನಗಳ ಕಾಲ ಐಎಸ್‌ಎಸ್‌ನಲ್ಲಿ ಉಳಿಯಲಿದ್ದಾರೆ.

ನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...