Homeಅಂತರಾಷ್ಟ್ರೀಯಬಾಹ್ಯಾಕಾಶದಿಂದ ಹೊರಟ ಸುನಿತಾ ವಿಲಿಯಮ್ಸ್ ತಂಡ; ಭೂಮಿಗೆ ತಲುಪಲು ಕ್ಷಣಗಣನೆ

ಬಾಹ್ಯಾಕಾಶದಿಂದ ಹೊರಟ ಸುನಿತಾ ವಿಲಿಯಮ್ಸ್ ತಂಡ; ಭೂಮಿಗೆ ತಲುಪಲು ಕ್ಷಣಗಣನೆ

- Advertisement -
- Advertisement -

ಕಳೆದ ಒಂಭತ್ತು ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿಕೊಂಡಿದ್ದ ಅಮೆರಿಕದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ತಲುಪುವ ಸಮಯ ಸನ್ನಿಹಿತವಾಗಿದೆ. ಇಡೀ ಜಗತ್ತು ಭಾರೀ ನಿರೀಕ್ಷೆಯೊಂದಿಗೆ ಇವರನ್ನು ಎದುರು ನೋಡುತ್ತಿದೆ.

ಇಂದು (ಮಾ.18) ಬೆಳಿಗ್ಗೆ ಸ್ಪೇಸ್‌ ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ (SpaceX Dragon spacecraft) ಐಎಸ್‌ಎಸ್‌ನಿಂದ ನಾಲ್ವರು ಗಗನಯಾನಿಗಳು ಹೊರಟಿದ್ದಾರೆ. ಸ್ಪೇಸ್‌ ಎಕ್ಸ್‌ ಕ್ರೂ-9 (SpaceX’s Crew-9) ಬೆಳಿಗ್ಗೆ 10:35ಕ್ಕೆ (ಭಾರತೀಯ ಕಾಲಮಾನ) ಐಎಸ್‌ಎಸ್‌ನಿಂದ ಹೊರಟಿದೆ (ಅನ್‌ಡಾಕ್) ಎಂದು ನಾಸಾ ತಿಳಿಸಿದೆ. ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್‌ಎಸ್‌) ಬೇರ್ಪಡುವ ವಿಡಿಯೋವನ್ನು ಹಂಚಿಕೊಂಡಿದೆ. ಮುಂದಿನ 17 ಗಂಟೆಗಳಲ್ಲಿ ಅದು ಭೂಮಿಗೆ ತಲುಪುವ ನಿರೀಕ್ಷೆಯಿದೆ ಎಂದಿದೆ.

“ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್ ಅವರನ್ನು ಹಿಂದಿನ ಬೈಡೆನ್‌ ಸರ್ಕಾರ ಮರೆತು ಬಿಟ್ಟಿದೆ” ಎಂದು ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಸ್ಪೇಸ್‌ಎಕ್ಸ್ ಸಂಸ್ಥೆ ಕಳೆದ ಶುಕ್ರವಾರ (ಮಾ.14) ತನ್ನ ಫಾಲ್ಕನ್ 9 ರಾಕೆಟ್‌ನಲ್ಲಿ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಉಡಾಯಿಸಿತ್ತು.

ಸುನಿತಾ ವಿಲಿಯಮ್ಸ್ ಹಾಗೂ ಬುಚ್‌ ವಿಲ್ಮೋರ್‌ ಕಳೆದ ವರ್ಷ (2024) ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದರು.

ಹಿಂದಿರುಗುವ ಸಮಸ್ಯೆ ಉಂಟಾದ ನಡುವೆಯೂ, ಸುನಿತಾ ಮತ್ತು ಬುಚ್ ಅವರನ್ನು ನಾಸಾ ಸ್ಪೇಸ್‌ಎಕ್ಸ್‌ನ ಕ್ರೂ-9 ಕಾರ್ಯಾಚರಣೆಗೆ ಮರು ನಿಯೋಜಿಸಿತ್ತು. ಇವರಿಬ್ಬರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ನಾಲ್ವರ ಬದಲಿಗೆ ಇಬ್ಬರು ಸಿಬ್ಬಂದಿಯೊಂದಿಗೆ ಸೆಪ್ಟೆಂಬರ್‌ನಲ್ಲಿ ಸ್ಪೇಸ್‌ಎಕ್ಸ್‌ನ ಕ್ರೂ-9 ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಐಎಸ್‌ಎಸ್‌ಗೆ ಕಳುಹಿಸಿತ್ತು.

ಬರೋಬ್ಬರಿ 9 ತಿಂಗಳ ನಂತರ ಕಳೆದ ಭಾನುವಾರ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್ (SpaceX’s Crew-10) ಐಎಸ್‌ಎಸ್‌ ತಲುಪಿದೆ. ಆ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್, ಸ್ಪೇಸ್‌ಎಕ್ಸ್‌ನ ಕ್ರೂ-9ನಲ್ಲಿ ತೆರಳಿದ್ದ ನಾಸಾದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಭೂಮಿಗೆ ಹೊರಟಿದ್ದಾರೆ.

ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್‌ನಲ್ಲಿ ತೆರಳಿದ ನಾಲ್ವರು ಗಗಯಾನಿಗಳಾದ ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಅವರು ಕೆಲ ದಿನಗಳ ಕಾಲ ಐಎಸ್‌ಎಸ್‌ನಲ್ಲಿ ಉಳಿಯಲಿದ್ದಾರೆ.

ಹಿಂದಿರುವ ಮುನ್ನ ಕೊನೆಯದಾಗಿ ತಮ್ಮ ಸಹೋದ್ಯೋಗಿಗಳಿಗೆ ಸಂದೇಶ ಕಳುಹಿಸಿರುವ ಕ್ರೂ-9ನಲ್ಲಿ ತೆರಳಿದ್ದ ನಿಕ್ ಹೇಗ್ “ಐಎಸ್‌ಎಸ್‌ನಲ್ಲಿ ಉಳಿದಿರುವ ಸಹೋದ್ಯೋಗಿಗಳು ಮತ್ತು ಆತ್ಮೀಯ ಸ್ನೇಹಿತರೇ… ನಾವು ನಿಮಗಾಗಿ ಕಾಯುತ್ತಿರುತ್ತೇವೆ, ಕ್ರೂ-9 ಮನೆಗೆ ಹೋಗುತ್ತಿದೆ” ಎಂದು ಹೇಳಿದ್ದಾರೆ.

ಐಎಸ್‌ಎಸ್‌ನಲ್ಲಿ ಉಳಿದುಕೊಂಡಿರುವ ಗಗನಯಾನಿಗಳು ಬಾಹ್ಯಾಕಾಶ ಸೂಟ್‌ಗಳನ್ನು ಕಳಚಿ ಆರಾಮದಾಯಕ ಬಟ್ಟೆಗಳನ್ನು ಧರಿಸಲು ಅವಕಾಶ ನೀಡಲಾಗಿದೆ ಎಂದು ವರದಿಗಳು ಹೇಳಿವೆ.

ಗಗನಯಾನಿಗಳು ಭೂಮಿಗೆ ತಲುಪುವುದು ಯಾವಾಗ? 

ಭಾರತೀಯ ಕಾಲಮಾನ ಮಾರ್ಚ್ 19 ಬುಧವಾರ ಮುಂಜಾನೆ 3.27 ಮತ್ತು ಅಮೆರಿಕದ ಕಾಲಮಾನ ಮಾರ್ಚ್ 18 ಮಂಗಳವಾರ ಸಂಜೆ 5.57ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಸುನಿತಾ, ಬುಚ್ ಸೇರಿದಂತೆ ನಾಲ್ವರು ಗಗನಯಾನಿಗಳನ್ನು ಹೊತ್ತ ಬಾಹ್ಯಾಕಾಶ ನೌಕೆ ಪ್ಯಾರಚೂಟ್‌ಗಳನ್ನು ಬಳಸಿ ನೀರಿನ ಮೇಲೆ ಇಳಿಯುವ ಸಾಧ್ಯತೆ ಇದೆ. ಆ ಬಳಿಕ ರಕ್ಷಣಾ ಬೋಟ್‌ಗಳು ಅವರನ್ನು ದಡಕ್ಕೆ ಕರೆತರಲಿದೆ.

ನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...