Homeಅಂತರಾಷ್ಟ್ರೀಯಬಾಹ್ಯಾಕಾಶದಿಂದ ಹೊರಟ ಸುನಿತಾ ವಿಲಿಯಮ್ಸ್ ತಂಡ; ಭೂಮಿಗೆ ತಲುಪಲು ಕ್ಷಣಗಣನೆ

ಬಾಹ್ಯಾಕಾಶದಿಂದ ಹೊರಟ ಸುನಿತಾ ವಿಲಿಯಮ್ಸ್ ತಂಡ; ಭೂಮಿಗೆ ತಲುಪಲು ಕ್ಷಣಗಣನೆ

- Advertisement -
- Advertisement -

ಕಳೆದ ಒಂಭತ್ತು ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿಕೊಂಡಿದ್ದ ಅಮೆರಿಕದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ತಲುಪುವ ಸಮಯ ಸನ್ನಿಹಿತವಾಗಿದೆ. ಇಡೀ ಜಗತ್ತು ಭಾರೀ ನಿರೀಕ್ಷೆಯೊಂದಿಗೆ ಇವರನ್ನು ಎದುರು ನೋಡುತ್ತಿದೆ.

ಇಂದು (ಮಾ.18) ಬೆಳಿಗ್ಗೆ ಸ್ಪೇಸ್‌ ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ (SpaceX Dragon spacecraft) ಐಎಸ್‌ಎಸ್‌ನಿಂದ ನಾಲ್ವರು ಗಗನಯಾನಿಗಳು ಹೊರಟಿದ್ದಾರೆ. ಸ್ಪೇಸ್‌ ಎಕ್ಸ್‌ ಕ್ರೂ-9 (SpaceX’s Crew-9) ಬೆಳಿಗ್ಗೆ 10:35ಕ್ಕೆ (ಭಾರತೀಯ ಕಾಲಮಾನ) ಐಎಸ್‌ಎಸ್‌ನಿಂದ ಹೊರಟಿದೆ (ಅನ್‌ಡಾಕ್) ಎಂದು ನಾಸಾ ತಿಳಿಸಿದೆ. ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್‌ಎಸ್‌) ಬೇರ್ಪಡುವ ವಿಡಿಯೋವನ್ನು ಹಂಚಿಕೊಂಡಿದೆ. ಮುಂದಿನ 17 ಗಂಟೆಗಳಲ್ಲಿ ಅದು ಭೂಮಿಗೆ ತಲುಪುವ ನಿರೀಕ್ಷೆಯಿದೆ ಎಂದಿದೆ.

“ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್ ಅವರನ್ನು ಹಿಂದಿನ ಬೈಡೆನ್‌ ಸರ್ಕಾರ ಮರೆತು ಬಿಟ್ಟಿದೆ” ಎಂದು ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಸ್ಪೇಸ್‌ಎಕ್ಸ್ ಸಂಸ್ಥೆ ಕಳೆದ ಶುಕ್ರವಾರ (ಮಾ.14) ತನ್ನ ಫಾಲ್ಕನ್ 9 ರಾಕೆಟ್‌ನಲ್ಲಿ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಉಡಾಯಿಸಿತ್ತು.

ಸುನಿತಾ ವಿಲಿಯಮ್ಸ್ ಹಾಗೂ ಬುಚ್‌ ವಿಲ್ಮೋರ್‌ ಕಳೆದ ವರ್ಷ (2024) ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದರು.

ಹಿಂದಿರುಗುವ ಸಮಸ್ಯೆ ಉಂಟಾದ ನಡುವೆಯೂ, ಸುನಿತಾ ಮತ್ತು ಬುಚ್ ಅವರನ್ನು ನಾಸಾ ಸ್ಪೇಸ್‌ಎಕ್ಸ್‌ನ ಕ್ರೂ-9 ಕಾರ್ಯಾಚರಣೆಗೆ ಮರು ನಿಯೋಜಿಸಿತ್ತು. ಇವರಿಬ್ಬರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ನಾಲ್ವರ ಬದಲಿಗೆ ಇಬ್ಬರು ಸಿಬ್ಬಂದಿಯೊಂದಿಗೆ ಸೆಪ್ಟೆಂಬರ್‌ನಲ್ಲಿ ಸ್ಪೇಸ್‌ಎಕ್ಸ್‌ನ ಕ್ರೂ-9 ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಐಎಸ್‌ಎಸ್‌ಗೆ ಕಳುಹಿಸಿತ್ತು.

ಬರೋಬ್ಬರಿ 9 ತಿಂಗಳ ನಂತರ ಕಳೆದ ಭಾನುವಾರ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್ (SpaceX’s Crew-10) ಐಎಸ್‌ಎಸ್‌ ತಲುಪಿದೆ. ಆ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್, ಸ್ಪೇಸ್‌ಎಕ್ಸ್‌ನ ಕ್ರೂ-9ನಲ್ಲಿ ತೆರಳಿದ್ದ ನಾಸಾದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಭೂಮಿಗೆ ಹೊರಟಿದ್ದಾರೆ.

ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್‌ನಲ್ಲಿ ತೆರಳಿದ ನಾಲ್ವರು ಗಗಯಾನಿಗಳಾದ ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಅವರು ಕೆಲ ದಿನಗಳ ಕಾಲ ಐಎಸ್‌ಎಸ್‌ನಲ್ಲಿ ಉಳಿಯಲಿದ್ದಾರೆ.

ಹಿಂದಿರುವ ಮುನ್ನ ಕೊನೆಯದಾಗಿ ತಮ್ಮ ಸಹೋದ್ಯೋಗಿಗಳಿಗೆ ಸಂದೇಶ ಕಳುಹಿಸಿರುವ ಕ್ರೂ-9ನಲ್ಲಿ ತೆರಳಿದ್ದ ನಿಕ್ ಹೇಗ್ “ಐಎಸ್‌ಎಸ್‌ನಲ್ಲಿ ಉಳಿದಿರುವ ಸಹೋದ್ಯೋಗಿಗಳು ಮತ್ತು ಆತ್ಮೀಯ ಸ್ನೇಹಿತರೇ… ನಾವು ನಿಮಗಾಗಿ ಕಾಯುತ್ತಿರುತ್ತೇವೆ, ಕ್ರೂ-9 ಮನೆಗೆ ಹೋಗುತ್ತಿದೆ” ಎಂದು ಹೇಳಿದ್ದಾರೆ.

ಐಎಸ್‌ಎಸ್‌ನಲ್ಲಿ ಉಳಿದುಕೊಂಡಿರುವ ಗಗನಯಾನಿಗಳು ಬಾಹ್ಯಾಕಾಶ ಸೂಟ್‌ಗಳನ್ನು ಕಳಚಿ ಆರಾಮದಾಯಕ ಬಟ್ಟೆಗಳನ್ನು ಧರಿಸಲು ಅವಕಾಶ ನೀಡಲಾಗಿದೆ ಎಂದು ವರದಿಗಳು ಹೇಳಿವೆ.

ಗಗನಯಾನಿಗಳು ಭೂಮಿಗೆ ತಲುಪುವುದು ಯಾವಾಗ? 

ಭಾರತೀಯ ಕಾಲಮಾನ ಮಾರ್ಚ್ 19 ಬುಧವಾರ ಮುಂಜಾನೆ 3.27 ಮತ್ತು ಅಮೆರಿಕದ ಕಾಲಮಾನ ಮಾರ್ಚ್ 18 ಮಂಗಳವಾರ ಸಂಜೆ 5.57ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಸುನಿತಾ, ಬುಚ್ ಸೇರಿದಂತೆ ನಾಲ್ವರು ಗಗನಯಾನಿಗಳನ್ನು ಹೊತ್ತ ಬಾಹ್ಯಾಕಾಶ ನೌಕೆ ಪ್ಯಾರಚೂಟ್‌ಗಳನ್ನು ಬಳಸಿ ನೀರಿನ ಮೇಲೆ ಇಳಿಯುವ ಸಾಧ್ಯತೆ ಇದೆ. ಆ ಬಳಿಕ ರಕ್ಷಣಾ ಬೋಟ್‌ಗಳು ಅವರನ್ನು ದಡಕ್ಕೆ ಕರೆತರಲಿದೆ.

ನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...