Homeಅಂತರಾಷ್ಟ್ರೀಯಬಾಹ್ಯಾಕಾಶದಿಂದ ಹೊರಟ ಸುನಿತಾ ವಿಲಿಯಮ್ಸ್ ತಂಡ; ಭೂಮಿಗೆ ತಲುಪಲು ಕ್ಷಣಗಣನೆ

ಬಾಹ್ಯಾಕಾಶದಿಂದ ಹೊರಟ ಸುನಿತಾ ವಿಲಿಯಮ್ಸ್ ತಂಡ; ಭೂಮಿಗೆ ತಲುಪಲು ಕ್ಷಣಗಣನೆ

- Advertisement -
- Advertisement -

ಕಳೆದ ಒಂಭತ್ತು ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿಕೊಂಡಿದ್ದ ಅಮೆರಿಕದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ತಲುಪುವ ಸಮಯ ಸನ್ನಿಹಿತವಾಗಿದೆ. ಇಡೀ ಜಗತ್ತು ಭಾರೀ ನಿರೀಕ್ಷೆಯೊಂದಿಗೆ ಇವರನ್ನು ಎದುರು ನೋಡುತ್ತಿದೆ.

ಇಂದು (ಮಾ.18) ಬೆಳಿಗ್ಗೆ ಸ್ಪೇಸ್‌ ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ (SpaceX Dragon spacecraft) ಐಎಸ್‌ಎಸ್‌ನಿಂದ ನಾಲ್ವರು ಗಗನಯಾನಿಗಳು ಹೊರಟಿದ್ದಾರೆ. ಸ್ಪೇಸ್‌ ಎಕ್ಸ್‌ ಕ್ರೂ-9 (SpaceX’s Crew-9) ಬೆಳಿಗ್ಗೆ 10:35ಕ್ಕೆ (ಭಾರತೀಯ ಕಾಲಮಾನ) ಐಎಸ್‌ಎಸ್‌ನಿಂದ ಹೊರಟಿದೆ (ಅನ್‌ಡಾಕ್) ಎಂದು ನಾಸಾ ತಿಳಿಸಿದೆ. ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್‌ಎಸ್‌) ಬೇರ್ಪಡುವ ವಿಡಿಯೋವನ್ನು ಹಂಚಿಕೊಂಡಿದೆ. ಮುಂದಿನ 17 ಗಂಟೆಗಳಲ್ಲಿ ಅದು ಭೂಮಿಗೆ ತಲುಪುವ ನಿರೀಕ್ಷೆಯಿದೆ ಎಂದಿದೆ.

“ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್ ಅವರನ್ನು ಹಿಂದಿನ ಬೈಡೆನ್‌ ಸರ್ಕಾರ ಮರೆತು ಬಿಟ್ಟಿದೆ” ಎಂದು ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಸ್ಪೇಸ್‌ಎಕ್ಸ್ ಸಂಸ್ಥೆ ಕಳೆದ ಶುಕ್ರವಾರ (ಮಾ.14) ತನ್ನ ಫಾಲ್ಕನ್ 9 ರಾಕೆಟ್‌ನಲ್ಲಿ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಉಡಾಯಿಸಿತ್ತು.

ಸುನಿತಾ ವಿಲಿಯಮ್ಸ್ ಹಾಗೂ ಬುಚ್‌ ವಿಲ್ಮೋರ್‌ ಕಳೆದ ವರ್ಷ (2024) ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದರು.

ಹಿಂದಿರುಗುವ ಸಮಸ್ಯೆ ಉಂಟಾದ ನಡುವೆಯೂ, ಸುನಿತಾ ಮತ್ತು ಬುಚ್ ಅವರನ್ನು ನಾಸಾ ಸ್ಪೇಸ್‌ಎಕ್ಸ್‌ನ ಕ್ರೂ-9 ಕಾರ್ಯಾಚರಣೆಗೆ ಮರು ನಿಯೋಜಿಸಿತ್ತು. ಇವರಿಬ್ಬರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ನಾಲ್ವರ ಬದಲಿಗೆ ಇಬ್ಬರು ಸಿಬ್ಬಂದಿಯೊಂದಿಗೆ ಸೆಪ್ಟೆಂಬರ್‌ನಲ್ಲಿ ಸ್ಪೇಸ್‌ಎಕ್ಸ್‌ನ ಕ್ರೂ-9 ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಐಎಸ್‌ಎಸ್‌ಗೆ ಕಳುಹಿಸಿತ್ತು.

ಬರೋಬ್ಬರಿ 9 ತಿಂಗಳ ನಂತರ ಕಳೆದ ಭಾನುವಾರ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್ (SpaceX’s Crew-10) ಐಎಸ್‌ಎಸ್‌ ತಲುಪಿದೆ. ಆ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್, ಸ್ಪೇಸ್‌ಎಕ್ಸ್‌ನ ಕ್ರೂ-9ನಲ್ಲಿ ತೆರಳಿದ್ದ ನಾಸಾದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಭೂಮಿಗೆ ಹೊರಟಿದ್ದಾರೆ.

ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್‌ನಲ್ಲಿ ತೆರಳಿದ ನಾಲ್ವರು ಗಗಯಾನಿಗಳಾದ ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಅವರು ಕೆಲ ದಿನಗಳ ಕಾಲ ಐಎಸ್‌ಎಸ್‌ನಲ್ಲಿ ಉಳಿಯಲಿದ್ದಾರೆ.

ಹಿಂದಿರುವ ಮುನ್ನ ಕೊನೆಯದಾಗಿ ತಮ್ಮ ಸಹೋದ್ಯೋಗಿಗಳಿಗೆ ಸಂದೇಶ ಕಳುಹಿಸಿರುವ ಕ್ರೂ-9ನಲ್ಲಿ ತೆರಳಿದ್ದ ನಿಕ್ ಹೇಗ್ “ಐಎಸ್‌ಎಸ್‌ನಲ್ಲಿ ಉಳಿದಿರುವ ಸಹೋದ್ಯೋಗಿಗಳು ಮತ್ತು ಆತ್ಮೀಯ ಸ್ನೇಹಿತರೇ… ನಾವು ನಿಮಗಾಗಿ ಕಾಯುತ್ತಿರುತ್ತೇವೆ, ಕ್ರೂ-9 ಮನೆಗೆ ಹೋಗುತ್ತಿದೆ” ಎಂದು ಹೇಳಿದ್ದಾರೆ.

ಐಎಸ್‌ಎಸ್‌ನಲ್ಲಿ ಉಳಿದುಕೊಂಡಿರುವ ಗಗನಯಾನಿಗಳು ಬಾಹ್ಯಾಕಾಶ ಸೂಟ್‌ಗಳನ್ನು ಕಳಚಿ ಆರಾಮದಾಯಕ ಬಟ್ಟೆಗಳನ್ನು ಧರಿಸಲು ಅವಕಾಶ ನೀಡಲಾಗಿದೆ ಎಂದು ವರದಿಗಳು ಹೇಳಿವೆ.

ಗಗನಯಾನಿಗಳು ಭೂಮಿಗೆ ತಲುಪುವುದು ಯಾವಾಗ? 

ಭಾರತೀಯ ಕಾಲಮಾನ ಮಾರ್ಚ್ 19 ಬುಧವಾರ ಮುಂಜಾನೆ 3.27 ಮತ್ತು ಅಮೆರಿಕದ ಕಾಲಮಾನ ಮಾರ್ಚ್ 18 ಮಂಗಳವಾರ ಸಂಜೆ 5.57ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಸುನಿತಾ, ಬುಚ್ ಸೇರಿದಂತೆ ನಾಲ್ವರು ಗಗನಯಾನಿಗಳನ್ನು ಹೊತ್ತ ಬಾಹ್ಯಾಕಾಶ ನೌಕೆ ಪ್ಯಾರಚೂಟ್‌ಗಳನ್ನು ಬಳಸಿ ನೀರಿನ ಮೇಲೆ ಇಳಿಯುವ ಸಾಧ್ಯತೆ ಇದೆ. ಆ ಬಳಿಕ ರಕ್ಷಣಾ ಬೋಟ್‌ಗಳು ಅವರನ್ನು ದಡಕ್ಕೆ ಕರೆತರಲಿದೆ.

ನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...