Homeಅಂತರಾಷ್ಟ್ರೀಯಬಾಹ್ಯಾಕಾಶದಿಂದ ಹೊರಟ ಸುನಿತಾ ವಿಲಿಯಮ್ಸ್ ತಂಡ; ಭೂಮಿಗೆ ತಲುಪಲು ಕ್ಷಣಗಣನೆ

ಬಾಹ್ಯಾಕಾಶದಿಂದ ಹೊರಟ ಸುನಿತಾ ವಿಲಿಯಮ್ಸ್ ತಂಡ; ಭೂಮಿಗೆ ತಲುಪಲು ಕ್ಷಣಗಣನೆ

- Advertisement -
- Advertisement -

ಕಳೆದ ಒಂಭತ್ತು ತಿಂಗಳಿನಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಸಿಲುಕಿಕೊಂಡಿದ್ದ ಅಮೆರಿಕದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ತಲುಪುವ ಸಮಯ ಸನ್ನಿಹಿತವಾಗಿದೆ. ಇಡೀ ಜಗತ್ತು ಭಾರೀ ನಿರೀಕ್ಷೆಯೊಂದಿಗೆ ಇವರನ್ನು ಎದುರು ನೋಡುತ್ತಿದೆ.

ಇಂದು (ಮಾ.18) ಬೆಳಿಗ್ಗೆ ಸ್ಪೇಸ್‌ ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ (SpaceX Dragon spacecraft) ಐಎಸ್‌ಎಸ್‌ನಿಂದ ನಾಲ್ವರು ಗಗನಯಾನಿಗಳು ಹೊರಟಿದ್ದಾರೆ. ಸ್ಪೇಸ್‌ ಎಕ್ಸ್‌ ಕ್ರೂ-9 (SpaceX’s Crew-9) ಬೆಳಿಗ್ಗೆ 10:35ಕ್ಕೆ (ಭಾರತೀಯ ಕಾಲಮಾನ) ಐಎಸ್‌ಎಸ್‌ನಿಂದ ಹೊರಟಿದೆ (ಅನ್‌ಡಾಕ್) ಎಂದು ನಾಸಾ ತಿಳಿಸಿದೆ. ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್‌ಎಸ್‌) ಬೇರ್ಪಡುವ ವಿಡಿಯೋವನ್ನು ಹಂಚಿಕೊಂಡಿದೆ. ಮುಂದಿನ 17 ಗಂಟೆಗಳಲ್ಲಿ ಅದು ಭೂಮಿಗೆ ತಲುಪುವ ನಿರೀಕ್ಷೆಯಿದೆ ಎಂದಿದೆ.

“ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್ ಅವರನ್ನು ಹಿಂದಿನ ಬೈಡೆನ್‌ ಸರ್ಕಾರ ಮರೆತು ಬಿಟ್ಟಿದೆ” ಎಂದು ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಸ್ಪೇಸ್‌ಎಕ್ಸ್ ಸಂಸ್ಥೆ ಕಳೆದ ಶುಕ್ರವಾರ (ಮಾ.14) ತನ್ನ ಫಾಲ್ಕನ್ 9 ರಾಕೆಟ್‌ನಲ್ಲಿ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಉಡಾಯಿಸಿತ್ತು.

ಸುನಿತಾ ವಿಲಿಯಮ್ಸ್ ಹಾಗೂ ಬುಚ್‌ ವಿಲ್ಮೋರ್‌ ಕಳೆದ ವರ್ಷ (2024) ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದರು.

ಹಿಂದಿರುಗುವ ಸಮಸ್ಯೆ ಉಂಟಾದ ನಡುವೆಯೂ, ಸುನಿತಾ ಮತ್ತು ಬುಚ್ ಅವರನ್ನು ನಾಸಾ ಸ್ಪೇಸ್‌ಎಕ್ಸ್‌ನ ಕ್ರೂ-9 ಕಾರ್ಯಾಚರಣೆಗೆ ಮರು ನಿಯೋಜಿಸಿತ್ತು. ಇವರಿಬ್ಬರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ನಾಲ್ವರ ಬದಲಿಗೆ ಇಬ್ಬರು ಸಿಬ್ಬಂದಿಯೊಂದಿಗೆ ಸೆಪ್ಟೆಂಬರ್‌ನಲ್ಲಿ ಸ್ಪೇಸ್‌ಎಕ್ಸ್‌ನ ಕ್ರೂ-9 ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಐಎಸ್‌ಎಸ್‌ಗೆ ಕಳುಹಿಸಿತ್ತು.

ಬರೋಬ್ಬರಿ 9 ತಿಂಗಳ ನಂತರ ಕಳೆದ ಭಾನುವಾರ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್ (SpaceX’s Crew-10) ಐಎಸ್‌ಎಸ್‌ ತಲುಪಿದೆ. ಆ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್, ಸ್ಪೇಸ್‌ಎಕ್ಸ್‌ನ ಕ್ರೂ-9ನಲ್ಲಿ ತೆರಳಿದ್ದ ನಾಸಾದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಭೂಮಿಗೆ ಹೊರಟಿದ್ದಾರೆ.

ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್‌ನಲ್ಲಿ ತೆರಳಿದ ನಾಲ್ವರು ಗಗಯಾನಿಗಳಾದ ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಅವರು ಕೆಲ ದಿನಗಳ ಕಾಲ ಐಎಸ್‌ಎಸ್‌ನಲ್ಲಿ ಉಳಿಯಲಿದ್ದಾರೆ.

ಹಿಂದಿರುವ ಮುನ್ನ ಕೊನೆಯದಾಗಿ ತಮ್ಮ ಸಹೋದ್ಯೋಗಿಗಳಿಗೆ ಸಂದೇಶ ಕಳುಹಿಸಿರುವ ಕ್ರೂ-9ನಲ್ಲಿ ತೆರಳಿದ್ದ ನಿಕ್ ಹೇಗ್ “ಐಎಸ್‌ಎಸ್‌ನಲ್ಲಿ ಉಳಿದಿರುವ ಸಹೋದ್ಯೋಗಿಗಳು ಮತ್ತು ಆತ್ಮೀಯ ಸ್ನೇಹಿತರೇ… ನಾವು ನಿಮಗಾಗಿ ಕಾಯುತ್ತಿರುತ್ತೇವೆ, ಕ್ರೂ-9 ಮನೆಗೆ ಹೋಗುತ್ತಿದೆ” ಎಂದು ಹೇಳಿದ್ದಾರೆ.

ಐಎಸ್‌ಎಸ್‌ನಲ್ಲಿ ಉಳಿದುಕೊಂಡಿರುವ ಗಗನಯಾನಿಗಳು ಬಾಹ್ಯಾಕಾಶ ಸೂಟ್‌ಗಳನ್ನು ಕಳಚಿ ಆರಾಮದಾಯಕ ಬಟ್ಟೆಗಳನ್ನು ಧರಿಸಲು ಅವಕಾಶ ನೀಡಲಾಗಿದೆ ಎಂದು ವರದಿಗಳು ಹೇಳಿವೆ.

ಗಗನಯಾನಿಗಳು ಭೂಮಿಗೆ ತಲುಪುವುದು ಯಾವಾಗ? 

ಭಾರತೀಯ ಕಾಲಮಾನ ಮಾರ್ಚ್ 19 ಬುಧವಾರ ಮುಂಜಾನೆ 3.27 ಮತ್ತು ಅಮೆರಿಕದ ಕಾಲಮಾನ ಮಾರ್ಚ್ 18 ಮಂಗಳವಾರ ಸಂಜೆ 5.57ಕ್ಕೆ ಫ್ಲೋರಿಡಾ ಕರಾವಳಿಯಲ್ಲಿ ಸುನಿತಾ, ಬುಚ್ ಸೇರಿದಂತೆ ನಾಲ್ವರು ಗಗನಯಾನಿಗಳನ್ನು ಹೊತ್ತ ಬಾಹ್ಯಾಕಾಶ ನೌಕೆ ಪ್ಯಾರಚೂಟ್‌ಗಳನ್ನು ಬಳಸಿ ನೀರಿನ ಮೇಲೆ ಇಳಿಯುವ ಸಾಧ್ಯತೆ ಇದೆ. ಆ ಬಳಿಕ ರಕ್ಷಣಾ ಬೋಟ್‌ಗಳು ಅವರನ್ನು ದಡಕ್ಕೆ ಕರೆತರಲಿದೆ.

ನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...