Homeಮುಖಪುಟಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

ಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

- Advertisement -
- Advertisement -

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಆಡಳಿತರೂಢ ಬಿಜೆಪಿ ಹೀನಾಯ ಸೋಲಿನೊಂದಿಗೆ ಮುಖಭಂಗ ಅನುಭವಿಸಿದೆ. ಈ ರೀತಿಯ ನಿರ್ಣಾಯಕ ಫಲಿತಾಂಶಕ್ಕೆ ಕಾರಣವೇನು ಎಂಬ ಚರ್ಚೆಗಳು ಆರಂಭವಾಗಿವೆ. ಕಾಂಗ್ರೆಸ್ ಭರ್ಜರಿ ಜಯ ಕಾಣಲು ಕಾರಣವಾದ 5 ಅಂಶಗಳನ್ನು ಪಟ್ಟಿಮಾಡುವ ಪ್ರಯತ್ನ ಇಲ್ಲಿದೆ.

  1. ಕಾಂಗ್ರೆಸ್ ಘೋಷಿಸಿದ 5 ಗ್ಯಾರಂಟಿ ಯೋಜನೆಗಳು

ಕಾಂಗ್ರೆಸ್ ಪಕ್ಷವು ಪ್ರಣಾಳಿಕೆ ಬಿಡುಗಡೆಗೂ ಮುನ್ನವೇ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಮನೆಯೊಡತಿಗೆ 2000 ರೂ, ನಿರುದ್ಯೋಗಿಗಳಿಗೆ 3000 ರೂ ನಿರುದ್ಯೋಗ ಭತ್ಯೆ, ಬಿಪಿಎಲ್ ಕಾರ್ಡುದಾರರಿಗೆ ತಲಾ 10ಕೆಜಿ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪಾಸ್ ಎಂಬ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಸುಲಭವಾಗಿ ತಲುಪಿದವು.

2. ಜಾತ್ಯತೀತತೆ ಬೆಂಬಲಿಸಿದ್ದು, ದೃಢವಾಗಿ ನಿಂತಿದ್ದು

ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮತೀಯ ಗೂಂಡಾಗಿರಿ, ದ್ವೇ‍ಷ ಭಾಷಣ, ಅನ್ಯಧರ್ಮ ದ್ವೇ‍ಷಗಳಲ್ಲಿ ಮುಳುಗಿಹೋಯಿತು. ಹಲಾಲ್-ಹಿಜಾಬ್, ಮುಸ್ಲಿಮರಿಗೆ ವ್ಯಾಪಾರಕ್ಕೆ ಅಡ್ಡಿ, ಉರಿಗೌಡ – ನಂಜೇಗೌಡ ವಿವಾದ ಹುಟ್ಟು ಹಾಕಿದರು. ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದರು. ಆದರೆ ಈ ಎಲ್ಲಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜಾತ್ಯಾತೀತತೆಯ ಪರವಾಗಿ ದೃಢವಾಗಿ ನಿಂತಿತು. ಭಾರತ್ ಜೋಡೋ ಯಾತ್ರೆ ನಡೆಸಿ ದ್ವೇಷದ ವಿರುದ್ದ ದನಿಯೆತ್ತಿದ್ದು. ತಮ್ಮ ಪ್ರಣಾಳಿಕೆಯನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದುಕೊಂಡಿತು. ಅದು ಅವರಿಗೆ ಜಯ ತಂದುಕೊಟ್ಟಿತು.

3. ಪ್ರಾದೇಶಿಕತೆ ಪರ ನಿಂತ ಕಾಂಗ್ರೆಸ್

ಬಿಜೆಪಿಯ ಹಿಂದಿ ಹೇರಿಕೆ, ಅಮುಲ್ ಮಾರಾಟ, ಜಿಎಸ್‌ಟಿ ಮೋಸ, ನೆರೆ-ಬರ ಪರಿಹಾರ ಕೊಡದಿರುವುದನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿತು. ಕನ್ನಡ ಮತ್ತು ಕರ್ನಾಟಕದ ಪರ ದನಿ ಎತ್ತಿತ್ತು. ಅದು ಅವರ ಗೆಲುವಿಗೆ ಸಹಕಾರಿಯಾಯಿತು.

4. ಟಿಕೆಟ್ ಹಂಚಿಕೆಯಲ್ಲಿ ಜಾಣತನ: ಬೇರೆ ಪಕ್ಷಗಳಿಂದ ಪಕ್ಷಕ್ಕೆ ಸೆಳೆದುಕೊಂಡಿದ್ದು

ಕಾಂಗ್ರೆಸ್ ಪಕ್ಷ ಬೇಗನೇ ಟಿಕೆಟ್ ಘೋಷಿಸಿತು. ಬಂಡಾಯವನ್ನು ಸಮರ್ಪಕವಾಗಿ ನಿಭಾಯಿಸಿತು. ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಸೇರಿದಂತೆ ಬೇರೆ ಪಕ್ಷಗಳ ಟಿಕೆಟ್ ವಂಚಿತರನ್ನು ಸೆಳೆದುಕೊಂಡಿತು. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಒಟ್ಟಾಗಿ ಚುನಾವಣೆ ಎದುರಿಸಿ ಗೆಲುವು ಕಂಡರು.

5. ಬಿಜೆಪಿ ಸರ್ಕಾರದ ವಿರುದ್ಧವಿದ್ದ ಆಡಳಿತವಿರೋಧಿ ಅಲೆ, 40% ಕಮಿಷನ್ ವಿರುದ್ಧ ಜನಾಕ್ರೋಶ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಜನಪರ ಆಡಳಿತ ನೀಡುವಲ್ಲಿ ವಿಫಲವಾಯಿತು. ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಿತು. ಬಿಪಿಎಲ್ ಅರ್ಜಿದಾರರಿಗೆ ನೀಡುವ ಅಕ್ಕಿಯ ಕಡಿತ ಮಾಡಿತು. ಕೋವಿಡ್ ನಿರ್ವಹಣೆಯಲ್ಲಿ, ಆಕ್ಸಿಜನ್, ಆಸ್ಪತ್ರೆ ಬೆಡ್ ಪೂರೈಸುವಲ್ಲಿ ಸಂಪೂರ್ಣ ವಿಫಲವಾಯಿತು. ಪಠ್ಯ ಪುಸ್ತಕ  ಒಂದು ಕಡೆ ಹಿಂದಿನ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಕಡಿತ ಮಾಡಿದರೆ ಇನ್ನೊಂದು ಕಡೆ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಯಿತು. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ನಿರಂತರವಾಗಿ ಏರಿದ್ದು ಜನರನ್ನು ಬಾಧಿಸತೊಡಗಿತು. ಇದೆಲ್ಲವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಕಾಂಗ್ರೆಸ್ ಶಕ್ತಿ ಮೀರಿ ಯತ್ನಿಸಿತು. ಸಾಮಾಜಿಕ ಜಾಲತಾಣಗಳ ಮೂಲಕ ಮಾತ್ರವಲ್ಲದೇ ಹಲವಾರು ಬೀದಿ ಹೋರಾಟಗಳನ್ನು ನಡೆಸಿತು.

ಸಾಲು ಸಾಲು ಹಗರಣಗಳಲ್ಲಿ ಮುಳುಗಿದ ಬಿಜೆಪಿ –  ಟ್ಯಾಗ್ ಕೊಟ್ಟ ಕಾಂಗ್ರೆಸ್

ಯಡಿಯೂರಪ್ಪನವರು ಕರ್ನಾಟಕದ ಸಿಎಂ ಆಗುತ್ತಲೆ ಅವರ ಪುತ್ರ ಸೂಪರ್ ಸಿಎಂ ಎನಿಸಿಕೊಂಡರು. ಸರ್ಕಾರದಲ್ಲಿ ಹಸ್ತಕ್ಷೇಪ ಮಾತ್ರವಲ್ಲದೇ ಭಾರೀ ಭ್ರಷ್ಟಾಚಾರ ನಡೆಸುತ್ತಾರೆ ಎಂಬ ಆರೋಪಗಳು ಕೇಳಿ ಬಂದವು. (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದನ್ನೂ ಮತ್ತು ಶೆಲ್ ಕಂಪೆನಿಗಳ ಮೂಲಕವಾಗಿಯೂ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸಿದ್ದರು. ಈ ಕುರಿತು ಪವರ್ ಟಿವಿ ಸ್ಟಿಂಗ್ ಆಪರೇಷನ್ ನಡೆಸಿ ನಿರಂತರ ವರದಿ ಮಾಡಿತ್ತು. ಈ ಪ್ರಕರಣದ ತನಿಖೆ ಇಂದಿಗೂ ನಡೆಯುತ್ತಿದೆ.

ಇನ್ನು ಬೊಮ್ಮಾಯಿಯವರು ಸಿಎಂ ಆಗುತ್ತಲೇ 40% ಕಮಿಷನ್ ಸರ್ಕಾರ, ಬಿಟ್ ಕಾಯಿನ್ ಹಗರಣ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ – ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ, ಮಠಗಳ ಅನುದಾನದಲ್ಲಿಯೂ 30% ಕಮಿಷನ್!, ಪಿಎಸ್‌ಐ ಹಗರಣ, ಮತದಾರರ ಪಟ್ಟಿ ಹಗರಣ, ಸ್ಯಾಂಟ್ರೋ ರವಿ ಕೇಸ್, ಮಾಡಾಳ್ ಹಗರಣ.. ಹೀಗೆ ಪಟ್ಟಿ ಬೆಳೆಯುತ್ತಲೇ ಇರುವುದು ಬಿಜೆಪಿ ಸೋಲಿಗೆ, ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಯಿತು.

ಇದನ್ನೂ ಓದಿ: ಮುರಿಯಲಾಗದ 37 ವರ್ಷಗಳ ಇತಿಹಾಸ; ಆಡಳಿತರೂಢ ಸರ್ಕಾರ ಕೆಡವಿದ ಮತದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....