Homeಮುಖಪುಟಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

ಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

- Advertisement -
- Advertisement -

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಆಡಳಿತರೂಢ ಬಿಜೆಪಿ ಹೀನಾಯ ಸೋಲಿನೊಂದಿಗೆ ಮುಖಭಂಗ ಅನುಭವಿಸಿದೆ. ಈ ರೀತಿಯ ನಿರ್ಣಾಯಕ ಫಲಿತಾಂಶಕ್ಕೆ ಕಾರಣವೇನು ಎಂಬ ಚರ್ಚೆಗಳು ಆರಂಭವಾಗಿವೆ. ಕಾಂಗ್ರೆಸ್ ಭರ್ಜರಿ ಜಯ ಕಾಣಲು ಕಾರಣವಾದ 5 ಅಂಶಗಳನ್ನು ಪಟ್ಟಿಮಾಡುವ ಪ್ರಯತ್ನ ಇಲ್ಲಿದೆ.

  1. ಕಾಂಗ್ರೆಸ್ ಘೋಷಿಸಿದ 5 ಗ್ಯಾರಂಟಿ ಯೋಜನೆಗಳು

ಕಾಂಗ್ರೆಸ್ ಪಕ್ಷವು ಪ್ರಣಾಳಿಕೆ ಬಿಡುಗಡೆಗೂ ಮುನ್ನವೇ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಮನೆಯೊಡತಿಗೆ 2000 ರೂ, ನಿರುದ್ಯೋಗಿಗಳಿಗೆ 3000 ರೂ ನಿರುದ್ಯೋಗ ಭತ್ಯೆ, ಬಿಪಿಎಲ್ ಕಾರ್ಡುದಾರರಿಗೆ ತಲಾ 10ಕೆಜಿ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪಾಸ್ ಎಂಬ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಸುಲಭವಾಗಿ ತಲುಪಿದವು.

2. ಜಾತ್ಯತೀತತೆ ಬೆಂಬಲಿಸಿದ್ದು, ದೃಢವಾಗಿ ನಿಂತಿದ್ದು

ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮತೀಯ ಗೂಂಡಾಗಿರಿ, ದ್ವೇ‍ಷ ಭಾಷಣ, ಅನ್ಯಧರ್ಮ ದ್ವೇ‍ಷಗಳಲ್ಲಿ ಮುಳುಗಿಹೋಯಿತು. ಹಲಾಲ್-ಹಿಜಾಬ್, ಮುಸ್ಲಿಮರಿಗೆ ವ್ಯಾಪಾರಕ್ಕೆ ಅಡ್ಡಿ, ಉರಿಗೌಡ – ನಂಜೇಗೌಡ ವಿವಾದ ಹುಟ್ಟು ಹಾಕಿದರು. ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದರು. ಆದರೆ ಈ ಎಲ್ಲಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜಾತ್ಯಾತೀತತೆಯ ಪರವಾಗಿ ದೃಢವಾಗಿ ನಿಂತಿತು. ಭಾರತ್ ಜೋಡೋ ಯಾತ್ರೆ ನಡೆಸಿ ದ್ವೇಷದ ವಿರುದ್ದ ದನಿಯೆತ್ತಿದ್ದು. ತಮ್ಮ ಪ್ರಣಾಳಿಕೆಯನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದುಕೊಂಡಿತು. ಅದು ಅವರಿಗೆ ಜಯ ತಂದುಕೊಟ್ಟಿತು.

3. ಪ್ರಾದೇಶಿಕತೆ ಪರ ನಿಂತ ಕಾಂಗ್ರೆಸ್

ಬಿಜೆಪಿಯ ಹಿಂದಿ ಹೇರಿಕೆ, ಅಮುಲ್ ಮಾರಾಟ, ಜಿಎಸ್‌ಟಿ ಮೋಸ, ನೆರೆ-ಬರ ಪರಿಹಾರ ಕೊಡದಿರುವುದನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿತು. ಕನ್ನಡ ಮತ್ತು ಕರ್ನಾಟಕದ ಪರ ದನಿ ಎತ್ತಿತ್ತು. ಅದು ಅವರ ಗೆಲುವಿಗೆ ಸಹಕಾರಿಯಾಯಿತು.

4. ಟಿಕೆಟ್ ಹಂಚಿಕೆಯಲ್ಲಿ ಜಾಣತನ: ಬೇರೆ ಪಕ್ಷಗಳಿಂದ ಪಕ್ಷಕ್ಕೆ ಸೆಳೆದುಕೊಂಡಿದ್ದು

ಕಾಂಗ್ರೆಸ್ ಪಕ್ಷ ಬೇಗನೇ ಟಿಕೆಟ್ ಘೋಷಿಸಿತು. ಬಂಡಾಯವನ್ನು ಸಮರ್ಪಕವಾಗಿ ನಿಭಾಯಿಸಿತು. ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಸೇರಿದಂತೆ ಬೇರೆ ಪಕ್ಷಗಳ ಟಿಕೆಟ್ ವಂಚಿತರನ್ನು ಸೆಳೆದುಕೊಂಡಿತು. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಒಟ್ಟಾಗಿ ಚುನಾವಣೆ ಎದುರಿಸಿ ಗೆಲುವು ಕಂಡರು.

5. ಬಿಜೆಪಿ ಸರ್ಕಾರದ ವಿರುದ್ಧವಿದ್ದ ಆಡಳಿತವಿರೋಧಿ ಅಲೆ, 40% ಕಮಿಷನ್ ವಿರುದ್ಧ ಜನಾಕ್ರೋಶ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಜನಪರ ಆಡಳಿತ ನೀಡುವಲ್ಲಿ ವಿಫಲವಾಯಿತು. ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಿತು. ಬಿಪಿಎಲ್ ಅರ್ಜಿದಾರರಿಗೆ ನೀಡುವ ಅಕ್ಕಿಯ ಕಡಿತ ಮಾಡಿತು. ಕೋವಿಡ್ ನಿರ್ವಹಣೆಯಲ್ಲಿ, ಆಕ್ಸಿಜನ್, ಆಸ್ಪತ್ರೆ ಬೆಡ್ ಪೂರೈಸುವಲ್ಲಿ ಸಂಪೂರ್ಣ ವಿಫಲವಾಯಿತು. ಪಠ್ಯ ಪುಸ್ತಕ  ಒಂದು ಕಡೆ ಹಿಂದಿನ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಕಡಿತ ಮಾಡಿದರೆ ಇನ್ನೊಂದು ಕಡೆ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಯಿತು. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ನಿರಂತರವಾಗಿ ಏರಿದ್ದು ಜನರನ್ನು ಬಾಧಿಸತೊಡಗಿತು. ಇದೆಲ್ಲವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಕಾಂಗ್ರೆಸ್ ಶಕ್ತಿ ಮೀರಿ ಯತ್ನಿಸಿತು. ಸಾಮಾಜಿಕ ಜಾಲತಾಣಗಳ ಮೂಲಕ ಮಾತ್ರವಲ್ಲದೇ ಹಲವಾರು ಬೀದಿ ಹೋರಾಟಗಳನ್ನು ನಡೆಸಿತು.

ಸಾಲು ಸಾಲು ಹಗರಣಗಳಲ್ಲಿ ಮುಳುಗಿದ ಬಿಜೆಪಿ –  ಟ್ಯಾಗ್ ಕೊಟ್ಟ ಕಾಂಗ್ರೆಸ್

ಯಡಿಯೂರಪ್ಪನವರು ಕರ್ನಾಟಕದ ಸಿಎಂ ಆಗುತ್ತಲೆ ಅವರ ಪುತ್ರ ಸೂಪರ್ ಸಿಎಂ ಎನಿಸಿಕೊಂಡರು. ಸರ್ಕಾರದಲ್ಲಿ ಹಸ್ತಕ್ಷೇಪ ಮಾತ್ರವಲ್ಲದೇ ಭಾರೀ ಭ್ರಷ್ಟಾಚಾರ ನಡೆಸುತ್ತಾರೆ ಎಂಬ ಆರೋಪಗಳು ಕೇಳಿ ಬಂದವು. (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದನ್ನೂ ಮತ್ತು ಶೆಲ್ ಕಂಪೆನಿಗಳ ಮೂಲಕವಾಗಿಯೂ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸಿದ್ದರು. ಈ ಕುರಿತು ಪವರ್ ಟಿವಿ ಸ್ಟಿಂಗ್ ಆಪರೇಷನ್ ನಡೆಸಿ ನಿರಂತರ ವರದಿ ಮಾಡಿತ್ತು. ಈ ಪ್ರಕರಣದ ತನಿಖೆ ಇಂದಿಗೂ ನಡೆಯುತ್ತಿದೆ.

ಇನ್ನು ಬೊಮ್ಮಾಯಿಯವರು ಸಿಎಂ ಆಗುತ್ತಲೇ 40% ಕಮಿಷನ್ ಸರ್ಕಾರ, ಬಿಟ್ ಕಾಯಿನ್ ಹಗರಣ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ – ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ, ಮಠಗಳ ಅನುದಾನದಲ್ಲಿಯೂ 30% ಕಮಿಷನ್!, ಪಿಎಸ್‌ಐ ಹಗರಣ, ಮತದಾರರ ಪಟ್ಟಿ ಹಗರಣ, ಸ್ಯಾಂಟ್ರೋ ರವಿ ಕೇಸ್, ಮಾಡಾಳ್ ಹಗರಣ.. ಹೀಗೆ ಪಟ್ಟಿ ಬೆಳೆಯುತ್ತಲೇ ಇರುವುದು ಬಿಜೆಪಿ ಸೋಲಿಗೆ, ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಯಿತು.

ಇದನ್ನೂ ಓದಿ: ಮುರಿಯಲಾಗದ 37 ವರ್ಷಗಳ ಇತಿಹಾಸ; ಆಡಳಿತರೂಢ ಸರ್ಕಾರ ಕೆಡವಿದ ಮತದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...