Homeಮುಖಪುಟಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

ಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

- Advertisement -
- Advertisement -

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಆಡಳಿತರೂಢ ಬಿಜೆಪಿ ಹೀನಾಯ ಸೋಲಿನೊಂದಿಗೆ ಮುಖಭಂಗ ಅನುಭವಿಸಿದೆ. ಈ ರೀತಿಯ ನಿರ್ಣಾಯಕ ಫಲಿತಾಂಶಕ್ಕೆ ಕಾರಣವೇನು ಎಂಬ ಚರ್ಚೆಗಳು ಆರಂಭವಾಗಿವೆ. ಕಾಂಗ್ರೆಸ್ ಭರ್ಜರಿ ಜಯ ಕಾಣಲು ಕಾರಣವಾದ 5 ಅಂಶಗಳನ್ನು ಪಟ್ಟಿಮಾಡುವ ಪ್ರಯತ್ನ ಇಲ್ಲಿದೆ.

  1. ಕಾಂಗ್ರೆಸ್ ಘೋಷಿಸಿದ 5 ಗ್ಯಾರಂಟಿ ಯೋಜನೆಗಳು

ಕಾಂಗ್ರೆಸ್ ಪಕ್ಷವು ಪ್ರಣಾಳಿಕೆ ಬಿಡುಗಡೆಗೂ ಮುನ್ನವೇ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಮನೆಯೊಡತಿಗೆ 2000 ರೂ, ನಿರುದ್ಯೋಗಿಗಳಿಗೆ 3000 ರೂ ನಿರುದ್ಯೋಗ ಭತ್ಯೆ, ಬಿಪಿಎಲ್ ಕಾರ್ಡುದಾರರಿಗೆ ತಲಾ 10ಕೆಜಿ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪಾಸ್ ಎಂಬ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಸುಲಭವಾಗಿ ತಲುಪಿದವು.

2. ಜಾತ್ಯತೀತತೆ ಬೆಂಬಲಿಸಿದ್ದು, ದೃಢವಾಗಿ ನಿಂತಿದ್ದು

ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮತೀಯ ಗೂಂಡಾಗಿರಿ, ದ್ವೇ‍ಷ ಭಾಷಣ, ಅನ್ಯಧರ್ಮ ದ್ವೇ‍ಷಗಳಲ್ಲಿ ಮುಳುಗಿಹೋಯಿತು. ಹಲಾಲ್-ಹಿಜಾಬ್, ಮುಸ್ಲಿಮರಿಗೆ ವ್ಯಾಪಾರಕ್ಕೆ ಅಡ್ಡಿ, ಉರಿಗೌಡ – ನಂಜೇಗೌಡ ವಿವಾದ ಹುಟ್ಟು ಹಾಕಿದರು. ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದರು. ಆದರೆ ಈ ಎಲ್ಲಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜಾತ್ಯಾತೀತತೆಯ ಪರವಾಗಿ ದೃಢವಾಗಿ ನಿಂತಿತು. ಭಾರತ್ ಜೋಡೋ ಯಾತ್ರೆ ನಡೆಸಿ ದ್ವೇಷದ ವಿರುದ್ದ ದನಿಯೆತ್ತಿದ್ದು. ತಮ್ಮ ಪ್ರಣಾಳಿಕೆಯನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದುಕೊಂಡಿತು. ಅದು ಅವರಿಗೆ ಜಯ ತಂದುಕೊಟ್ಟಿತು.

3. ಪ್ರಾದೇಶಿಕತೆ ಪರ ನಿಂತ ಕಾಂಗ್ರೆಸ್

ಬಿಜೆಪಿಯ ಹಿಂದಿ ಹೇರಿಕೆ, ಅಮುಲ್ ಮಾರಾಟ, ಜಿಎಸ್‌ಟಿ ಮೋಸ, ನೆರೆ-ಬರ ಪರಿಹಾರ ಕೊಡದಿರುವುದನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿತು. ಕನ್ನಡ ಮತ್ತು ಕರ್ನಾಟಕದ ಪರ ದನಿ ಎತ್ತಿತ್ತು. ಅದು ಅವರ ಗೆಲುವಿಗೆ ಸಹಕಾರಿಯಾಯಿತು.

4. ಟಿಕೆಟ್ ಹಂಚಿಕೆಯಲ್ಲಿ ಜಾಣತನ: ಬೇರೆ ಪಕ್ಷಗಳಿಂದ ಪಕ್ಷಕ್ಕೆ ಸೆಳೆದುಕೊಂಡಿದ್ದು

ಕಾಂಗ್ರೆಸ್ ಪಕ್ಷ ಬೇಗನೇ ಟಿಕೆಟ್ ಘೋಷಿಸಿತು. ಬಂಡಾಯವನ್ನು ಸಮರ್ಪಕವಾಗಿ ನಿಭಾಯಿಸಿತು. ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಸೇರಿದಂತೆ ಬೇರೆ ಪಕ್ಷಗಳ ಟಿಕೆಟ್ ವಂಚಿತರನ್ನು ಸೆಳೆದುಕೊಂಡಿತು. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಒಟ್ಟಾಗಿ ಚುನಾವಣೆ ಎದುರಿಸಿ ಗೆಲುವು ಕಂಡರು.

5. ಬಿಜೆಪಿ ಸರ್ಕಾರದ ವಿರುದ್ಧವಿದ್ದ ಆಡಳಿತವಿರೋಧಿ ಅಲೆ, 40% ಕಮಿಷನ್ ವಿರುದ್ಧ ಜನಾಕ್ರೋಶ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಜನಪರ ಆಡಳಿತ ನೀಡುವಲ್ಲಿ ವಿಫಲವಾಯಿತು. ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಿತು. ಬಿಪಿಎಲ್ ಅರ್ಜಿದಾರರಿಗೆ ನೀಡುವ ಅಕ್ಕಿಯ ಕಡಿತ ಮಾಡಿತು. ಕೋವಿಡ್ ನಿರ್ವಹಣೆಯಲ್ಲಿ, ಆಕ್ಸಿಜನ್, ಆಸ್ಪತ್ರೆ ಬೆಡ್ ಪೂರೈಸುವಲ್ಲಿ ಸಂಪೂರ್ಣ ವಿಫಲವಾಯಿತು. ಪಠ್ಯ ಪುಸ್ತಕ  ಒಂದು ಕಡೆ ಹಿಂದಿನ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಕಡಿತ ಮಾಡಿದರೆ ಇನ್ನೊಂದು ಕಡೆ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಯಿತು. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ನಿರಂತರವಾಗಿ ಏರಿದ್ದು ಜನರನ್ನು ಬಾಧಿಸತೊಡಗಿತು. ಇದೆಲ್ಲವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಕಾಂಗ್ರೆಸ್ ಶಕ್ತಿ ಮೀರಿ ಯತ್ನಿಸಿತು. ಸಾಮಾಜಿಕ ಜಾಲತಾಣಗಳ ಮೂಲಕ ಮಾತ್ರವಲ್ಲದೇ ಹಲವಾರು ಬೀದಿ ಹೋರಾಟಗಳನ್ನು ನಡೆಸಿತು.

ಸಾಲು ಸಾಲು ಹಗರಣಗಳಲ್ಲಿ ಮುಳುಗಿದ ಬಿಜೆಪಿ –  ಟ್ಯಾಗ್ ಕೊಟ್ಟ ಕಾಂಗ್ರೆಸ್

ಯಡಿಯೂರಪ್ಪನವರು ಕರ್ನಾಟಕದ ಸಿಎಂ ಆಗುತ್ತಲೆ ಅವರ ಪುತ್ರ ಸೂಪರ್ ಸಿಎಂ ಎನಿಸಿಕೊಂಡರು. ಸರ್ಕಾರದಲ್ಲಿ ಹಸ್ತಕ್ಷೇಪ ಮಾತ್ರವಲ್ಲದೇ ಭಾರೀ ಭ್ರಷ್ಟಾಚಾರ ನಡೆಸುತ್ತಾರೆ ಎಂಬ ಆರೋಪಗಳು ಕೇಳಿ ಬಂದವು. (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದನ್ನೂ ಮತ್ತು ಶೆಲ್ ಕಂಪೆನಿಗಳ ಮೂಲಕವಾಗಿಯೂ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸಿದ್ದರು. ಈ ಕುರಿತು ಪವರ್ ಟಿವಿ ಸ್ಟಿಂಗ್ ಆಪರೇಷನ್ ನಡೆಸಿ ನಿರಂತರ ವರದಿ ಮಾಡಿತ್ತು. ಈ ಪ್ರಕರಣದ ತನಿಖೆ ಇಂದಿಗೂ ನಡೆಯುತ್ತಿದೆ.

ಇನ್ನು ಬೊಮ್ಮಾಯಿಯವರು ಸಿಎಂ ಆಗುತ್ತಲೇ 40% ಕಮಿಷನ್ ಸರ್ಕಾರ, ಬಿಟ್ ಕಾಯಿನ್ ಹಗರಣ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ – ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ, ಮಠಗಳ ಅನುದಾನದಲ್ಲಿಯೂ 30% ಕಮಿಷನ್!, ಪಿಎಸ್‌ಐ ಹಗರಣ, ಮತದಾರರ ಪಟ್ಟಿ ಹಗರಣ, ಸ್ಯಾಂಟ್ರೋ ರವಿ ಕೇಸ್, ಮಾಡಾಳ್ ಹಗರಣ.. ಹೀಗೆ ಪಟ್ಟಿ ಬೆಳೆಯುತ್ತಲೇ ಇರುವುದು ಬಿಜೆಪಿ ಸೋಲಿಗೆ, ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಯಿತು.

ಇದನ್ನೂ ಓದಿ: ಮುರಿಯಲಾಗದ 37 ವರ್ಷಗಳ ಇತಿಹಾಸ; ಆಡಳಿತರೂಢ ಸರ್ಕಾರ ಕೆಡವಿದ ಮತದಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ರೋಹಿತ್ ವೇಮುಲಾ’ ದಲಿತ ಸಮುದಾಯಕ್ಕೆ ಸೇರಿಲ್ಲ!: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

0
ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ. 2016ರ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ...