Homeಮುಖಪುಟಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

ಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

- Advertisement -
- Advertisement -

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಆಡಳಿತರೂಢ ಬಿಜೆಪಿ ಹೀನಾಯ ಸೋಲಿನೊಂದಿಗೆ ಮುಖಭಂಗ ಅನುಭವಿಸಿದೆ. ಈ ರೀತಿಯ ನಿರ್ಣಾಯಕ ಫಲಿತಾಂಶಕ್ಕೆ ಕಾರಣವೇನು ಎಂಬ ಚರ್ಚೆಗಳು ಆರಂಭವಾಗಿವೆ. ಕಾಂಗ್ರೆಸ್ ಭರ್ಜರಿ ಜಯ ಕಾಣಲು ಕಾರಣವಾದ 5 ಅಂಶಗಳನ್ನು ಪಟ್ಟಿಮಾಡುವ ಪ್ರಯತ್ನ ಇಲ್ಲಿದೆ.

  1. ಕಾಂಗ್ರೆಸ್ ಘೋಷಿಸಿದ 5 ಗ್ಯಾರಂಟಿ ಯೋಜನೆಗಳು

ಕಾಂಗ್ರೆಸ್ ಪಕ್ಷವು ಪ್ರಣಾಳಿಕೆ ಬಿಡುಗಡೆಗೂ ಮುನ್ನವೇ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಮನೆಯೊಡತಿಗೆ 2000 ರೂ, ನಿರುದ್ಯೋಗಿಗಳಿಗೆ 3000 ರೂ ನಿರುದ್ಯೋಗ ಭತ್ಯೆ, ಬಿಪಿಎಲ್ ಕಾರ್ಡುದಾರರಿಗೆ ತಲಾ 10ಕೆಜಿ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪಾಸ್ ಎಂಬ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಸುಲಭವಾಗಿ ತಲುಪಿದವು.

2. ಜಾತ್ಯತೀತತೆ ಬೆಂಬಲಿಸಿದ್ದು, ದೃಢವಾಗಿ ನಿಂತಿದ್ದು

ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮತೀಯ ಗೂಂಡಾಗಿರಿ, ದ್ವೇ‍ಷ ಭಾಷಣ, ಅನ್ಯಧರ್ಮ ದ್ವೇ‍ಷಗಳಲ್ಲಿ ಮುಳುಗಿಹೋಯಿತು. ಹಲಾಲ್-ಹಿಜಾಬ್, ಮುಸ್ಲಿಮರಿಗೆ ವ್ಯಾಪಾರಕ್ಕೆ ಅಡ್ಡಿ, ಉರಿಗೌಡ – ನಂಜೇಗೌಡ ವಿವಾದ ಹುಟ್ಟು ಹಾಕಿದರು. ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದರು. ಆದರೆ ಈ ಎಲ್ಲಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜಾತ್ಯಾತೀತತೆಯ ಪರವಾಗಿ ದೃಢವಾಗಿ ನಿಂತಿತು. ಭಾರತ್ ಜೋಡೋ ಯಾತ್ರೆ ನಡೆಸಿ ದ್ವೇಷದ ವಿರುದ್ದ ದನಿಯೆತ್ತಿದ್ದು. ತಮ್ಮ ಪ್ರಣಾಳಿಕೆಯನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದುಕೊಂಡಿತು. ಅದು ಅವರಿಗೆ ಜಯ ತಂದುಕೊಟ್ಟಿತು.

3. ಪ್ರಾದೇಶಿಕತೆ ಪರ ನಿಂತ ಕಾಂಗ್ರೆಸ್

ಬಿಜೆಪಿಯ ಹಿಂದಿ ಹೇರಿಕೆ, ಅಮುಲ್ ಮಾರಾಟ, ಜಿಎಸ್‌ಟಿ ಮೋಸ, ನೆರೆ-ಬರ ಪರಿಹಾರ ಕೊಡದಿರುವುದನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿತು. ಕನ್ನಡ ಮತ್ತು ಕರ್ನಾಟಕದ ಪರ ದನಿ ಎತ್ತಿತ್ತು. ಅದು ಅವರ ಗೆಲುವಿಗೆ ಸಹಕಾರಿಯಾಯಿತು.

4. ಟಿಕೆಟ್ ಹಂಚಿಕೆಯಲ್ಲಿ ಜಾಣತನ: ಬೇರೆ ಪಕ್ಷಗಳಿಂದ ಪಕ್ಷಕ್ಕೆ ಸೆಳೆದುಕೊಂಡಿದ್ದು

ಕಾಂಗ್ರೆಸ್ ಪಕ್ಷ ಬೇಗನೇ ಟಿಕೆಟ್ ಘೋಷಿಸಿತು. ಬಂಡಾಯವನ್ನು ಸಮರ್ಪಕವಾಗಿ ನಿಭಾಯಿಸಿತು. ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಸೇರಿದಂತೆ ಬೇರೆ ಪಕ್ಷಗಳ ಟಿಕೆಟ್ ವಂಚಿತರನ್ನು ಸೆಳೆದುಕೊಂಡಿತು. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಒಟ್ಟಾಗಿ ಚುನಾವಣೆ ಎದುರಿಸಿ ಗೆಲುವು ಕಂಡರು.

5. ಬಿಜೆಪಿ ಸರ್ಕಾರದ ವಿರುದ್ಧವಿದ್ದ ಆಡಳಿತವಿರೋಧಿ ಅಲೆ, 40% ಕಮಿಷನ್ ವಿರುದ್ಧ ಜನಾಕ್ರೋಶ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಜನಪರ ಆಡಳಿತ ನೀಡುವಲ್ಲಿ ವಿಫಲವಾಯಿತು. ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಿತು. ಬಿಪಿಎಲ್ ಅರ್ಜಿದಾರರಿಗೆ ನೀಡುವ ಅಕ್ಕಿಯ ಕಡಿತ ಮಾಡಿತು. ಕೋವಿಡ್ ನಿರ್ವಹಣೆಯಲ್ಲಿ, ಆಕ್ಸಿಜನ್, ಆಸ್ಪತ್ರೆ ಬೆಡ್ ಪೂರೈಸುವಲ್ಲಿ ಸಂಪೂರ್ಣ ವಿಫಲವಾಯಿತು. ಪಠ್ಯ ಪುಸ್ತಕ  ಒಂದು ಕಡೆ ಹಿಂದಿನ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಕಡಿತ ಮಾಡಿದರೆ ಇನ್ನೊಂದು ಕಡೆ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಯಿತು. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ನಿರಂತರವಾಗಿ ಏರಿದ್ದು ಜನರನ್ನು ಬಾಧಿಸತೊಡಗಿತು. ಇದೆಲ್ಲವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಕಾಂಗ್ರೆಸ್ ಶಕ್ತಿ ಮೀರಿ ಯತ್ನಿಸಿತು. ಸಾಮಾಜಿಕ ಜಾಲತಾಣಗಳ ಮೂಲಕ ಮಾತ್ರವಲ್ಲದೇ ಹಲವಾರು ಬೀದಿ ಹೋರಾಟಗಳನ್ನು ನಡೆಸಿತು.

ಸಾಲು ಸಾಲು ಹಗರಣಗಳಲ್ಲಿ ಮುಳುಗಿದ ಬಿಜೆಪಿ –  ಟ್ಯಾಗ್ ಕೊಟ್ಟ ಕಾಂಗ್ರೆಸ್

ಯಡಿಯೂರಪ್ಪನವರು ಕರ್ನಾಟಕದ ಸಿಎಂ ಆಗುತ್ತಲೆ ಅವರ ಪುತ್ರ ಸೂಪರ್ ಸಿಎಂ ಎನಿಸಿಕೊಂಡರು. ಸರ್ಕಾರದಲ್ಲಿ ಹಸ್ತಕ್ಷೇಪ ಮಾತ್ರವಲ್ಲದೇ ಭಾರೀ ಭ್ರಷ್ಟಾಚಾರ ನಡೆಸುತ್ತಾರೆ ಎಂಬ ಆರೋಪಗಳು ಕೇಳಿ ಬಂದವು. (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದನ್ನೂ ಮತ್ತು ಶೆಲ್ ಕಂಪೆನಿಗಳ ಮೂಲಕವಾಗಿಯೂ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸಿದ್ದರು. ಈ ಕುರಿತು ಪವರ್ ಟಿವಿ ಸ್ಟಿಂಗ್ ಆಪರೇಷನ್ ನಡೆಸಿ ನಿರಂತರ ವರದಿ ಮಾಡಿತ್ತು. ಈ ಪ್ರಕರಣದ ತನಿಖೆ ಇಂದಿಗೂ ನಡೆಯುತ್ತಿದೆ.

ಇನ್ನು ಬೊಮ್ಮಾಯಿಯವರು ಸಿಎಂ ಆಗುತ್ತಲೇ 40% ಕಮಿಷನ್ ಸರ್ಕಾರ, ಬಿಟ್ ಕಾಯಿನ್ ಹಗರಣ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ – ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ, ಮಠಗಳ ಅನುದಾನದಲ್ಲಿಯೂ 30% ಕಮಿಷನ್!, ಪಿಎಸ್‌ಐ ಹಗರಣ, ಮತದಾರರ ಪಟ್ಟಿ ಹಗರಣ, ಸ್ಯಾಂಟ್ರೋ ರವಿ ಕೇಸ್, ಮಾಡಾಳ್ ಹಗರಣ.. ಹೀಗೆ ಪಟ್ಟಿ ಬೆಳೆಯುತ್ತಲೇ ಇರುವುದು ಬಿಜೆಪಿ ಸೋಲಿಗೆ, ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಯಿತು.

ಇದನ್ನೂ ಓದಿ: ಮುರಿಯಲಾಗದ 37 ವರ್ಷಗಳ ಇತಿಹಾಸ; ಆಡಳಿತರೂಢ ಸರ್ಕಾರ ಕೆಡವಿದ ಮತದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...