Homeಮುಖಪುಟರಾಜಕೀಯಕ್ಕೆ ಬರುವುದಿಲ್ಲ ಎಂದ ಸೂಪರ್ ಸ್ಟಾರ್ ರಜನಿಕಾಂತ್‌!: ಆರ್‌ಎಂಎಂ ವಿಸರ್ಜನೆ

ರಾಜಕೀಯಕ್ಕೆ ಬರುವುದಿಲ್ಲ ಎಂದ ಸೂಪರ್ ಸ್ಟಾರ್ ರಜನಿಕಾಂತ್‌!: ಆರ್‌ಎಂಎಂ ವಿಸರ್ಜನೆ

- Advertisement -
- Advertisement -

ತಮಿಳುನಾಡಿನಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ತಾವೇ ಹುಟ್ಟು ಹಾಕಿದ್ದ ರಜನಿಕಾಂತ್‌ ಮಕ್ಕಳ್ ಮಂಡ್ರಮ್ ರಾಜಕೀಯ ವೇದಿಕೆಯನ್ನು ವಿಸರ್ಜಿಸಿದ್ದು, ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಜಕೀಯ ಪ್ರವೇಶದ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.

ನಟ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಚರ್ಚೆ ಮೂರು ದಶಕಗಳಿಂದಲೂ ನಡೆಯುತ್ತಲೇ ಇತ್ತು.  2020 ರಲ್ಲಿ ರಜನಿಕಾಂತ್‌ ಮಕ್ಕಳ್ ಮಂಡ್ರಮ್ ಎಂಬ‌ ರಾಜಕೀಯ ವೇದಿಕೆಯನ್ನು ಹುಟ್ಟುಹಾಕಿದ್ದರು. ಆದರೆ, ತಮಿಳುನಾಡು ವಿಧಾನಸಭಾ ಚುನಾವಣೆಗೂ ಕೆಲವೇ ದಿನಗಳ ಮುನ್ನ. ರಾಜಕೀಯ ಪಕ್ಷವನ್ನು ಘೋಷಿಸುವುದಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದರು. ಈಗ ಪಕ್ಷವನ್ನು ವಿಸರ್ಜನೆ ಮಾಡುವ ಮೂಲಕ ಶಾಶ್ವತವಾಗಿ ರಜನಿಕಾಂತ್‌ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ.

ಏಳು ತಿಂಗಳ ಹಿಂದೆ ತಾವು ರಾಜಕೀಯ ಪಕ್ಷ ಸ್ಥಾಪಿಸುವುದಿಲ್ಲ ಎಂದು ಅಧಿಕೃತವಾಗಿ ಹೇಳಿ, ಚುನಾವಣಾ ರಾಜಕೀಯ ಮಾಡದೇ ಜನರ ಸೇವೆ ಮಾಡುತ್ತೇನೆ ಎಂದು ರಜನಿಕಾಂತ್‌ ಹೇಳಿದ್ದರು. “ನನ್ನ ಆರೋಗ್ಯದಲ್ಲಾದ ಏರುಪೇರಿನಿಂದ ಮತ್ತು ಕೊರೊನಾ ಸೋಂಕಿನ ಕಾರಣದಿಂದ ಪಕ್ಷ ಸ್ಥಾಪನೆಯ ವಿಚಾರವನ್ನು ಕೈಬಿಟ್ಟಿದ್ದೇನೆ. ಇದು ನನ್ನ ಮೇಲೆ ಭರವಸೆಯಿಟ್ಟಿದ್ದ ಅಭಿಮಾನಿಗಳಿಗೆ ನಿರಾಸೆಯನ್ನುಂಟುಮಾಡುತ್ತದೆ ಎಂಬುದು ನನಗೆ ತಿಳಿದಿದೆ” ಎಂದಿದ್ದರು.

ಇದನ್ನೂ ಓದಿ: ಪ್ರಶಸ್ತಿ ಮತ್ತು ಪ್ರಭುತ್ವ; ಸೂಪರ್ ಸ್ಟಾರ್ ರಜನಿಕಾಂತ್‌ಗೆ ’ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ

ಈಗ ಅಧಿಕೃತವಾಗಿ ರಜನಿಕಾಂತ್ ಮಕ್ಕಳ್ ಮಂಡ್ರಮ್ ಪಕ್ಷವನ್ನು ವಿಸರ್ಜಿಸಿದ್ದಾರೆ. ಈ ಮೂಲಕ ಮುಂದೆಂದೂ ರಾಜಕೀಯ ಮಾಡಲಾರೆ ಎಂಬ ಸಂದೇಶ ರವಾನಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳಿಂದ ಗಾವುದ ದೂರ ಇರುವ ಹಾಗೂ ಸಿನಿಮಾ ನಟರನ್ನು ಆರಾಧಿಸುವ ತಮಿಳುನಾಡಿನಲ್ಲಿ ರಜನಿಕಾಂತ್ ಹಾಲಿ ಡಿಎಂಕೆ ಮತ್ತು ಎಐಎಡಿಎಂಕೆಗೆ ಪರ್ಯಾಯವಾಗಿ ರಾಜಕೀಯ ಶಕ್ತಿಯಾಗಿ ಬೆಳೆಯುತ್ತಾರೆ ಎಂದು ಅಂದಾಜು ಮಾಡಲಾಗುತ್ತಿತ್ತು. ಆದರೆ ರಜನಿಕಾಂತ್ ಎಲ್ಲಾ ನಿರೀಕ್ಷೆ, ಲೆಕ್ಕಾಚಾರಗಳನ್ನು ರಜನಿಕಾಂತ್‌ ತಲೆಕೆಳಗೆ ಮಾಡಿದ್ದಾರೆ.

ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ಎಐಎಡಿಎಂಕೆ ಚುನಾವಣೆಯಲ್ಲಿ ಚುನಾವಣೆಯಲ್ಲಿ ಸೋತಿದ್ದು, ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ 10 ವರ್ಷಗಳ ನಂತರ ಅಧಿಕಾರ ವಹಿಸಿಕೊಂಡಿದೆ. ಮತ್ತೊಬ್ಬ  ಸೂಪರ್ ಸ್ಟಾರ್, ರಾಜಕಾರಣಿ, ಕಮಲ್ ಹಾಸನ್, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ, ಒಂದು ಸ್ಥಾನವನ್ನು ಗೆಲ್ಲದೆ ರಾಜಕೀಯದಲ್ಲಿ ಪರಿಣಾಮ ಬೀರಲು ವಿಫಲವಾಗಿದ್ದಾರೆ.


ಇದನ್ನೂ ಓದಿ: ರಾಜಕೀಯ ಪಕ್ಷ ಸ್ಥಾಪಿಸುವುದಿಲ್ಲ: ಉಲ್ಟಾ ಹೊಡೆದ ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...