Homeಮುಖಪುಟರಾಜಕೀಯಕ್ಕೆ ಬರುವುದಿಲ್ಲ ಎಂದ ಸೂಪರ್ ಸ್ಟಾರ್ ರಜನಿಕಾಂತ್‌!: ಆರ್‌ಎಂಎಂ ವಿಸರ್ಜನೆ

ರಾಜಕೀಯಕ್ಕೆ ಬರುವುದಿಲ್ಲ ಎಂದ ಸೂಪರ್ ಸ್ಟಾರ್ ರಜನಿಕಾಂತ್‌!: ಆರ್‌ಎಂಎಂ ವಿಸರ್ಜನೆ

- Advertisement -
- Advertisement -

ತಮಿಳುನಾಡಿನಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ತಾವೇ ಹುಟ್ಟು ಹಾಕಿದ್ದ ರಜನಿಕಾಂತ್‌ ಮಕ್ಕಳ್ ಮಂಡ್ರಮ್ ರಾಜಕೀಯ ವೇದಿಕೆಯನ್ನು ವಿಸರ್ಜಿಸಿದ್ದು, ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಜಕೀಯ ಪ್ರವೇಶದ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.

ನಟ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಚರ್ಚೆ ಮೂರು ದಶಕಗಳಿಂದಲೂ ನಡೆಯುತ್ತಲೇ ಇತ್ತು.  2020 ರಲ್ಲಿ ರಜನಿಕಾಂತ್‌ ಮಕ್ಕಳ್ ಮಂಡ್ರಮ್ ಎಂಬ‌ ರಾಜಕೀಯ ವೇದಿಕೆಯನ್ನು ಹುಟ್ಟುಹಾಕಿದ್ದರು. ಆದರೆ, ತಮಿಳುನಾಡು ವಿಧಾನಸಭಾ ಚುನಾವಣೆಗೂ ಕೆಲವೇ ದಿನಗಳ ಮುನ್ನ. ರಾಜಕೀಯ ಪಕ್ಷವನ್ನು ಘೋಷಿಸುವುದಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದರು. ಈಗ ಪಕ್ಷವನ್ನು ವಿಸರ್ಜನೆ ಮಾಡುವ ಮೂಲಕ ಶಾಶ್ವತವಾಗಿ ರಜನಿಕಾಂತ್‌ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ.

ಏಳು ತಿಂಗಳ ಹಿಂದೆ ತಾವು ರಾಜಕೀಯ ಪಕ್ಷ ಸ್ಥಾಪಿಸುವುದಿಲ್ಲ ಎಂದು ಅಧಿಕೃತವಾಗಿ ಹೇಳಿ, ಚುನಾವಣಾ ರಾಜಕೀಯ ಮಾಡದೇ ಜನರ ಸೇವೆ ಮಾಡುತ್ತೇನೆ ಎಂದು ರಜನಿಕಾಂತ್‌ ಹೇಳಿದ್ದರು. “ನನ್ನ ಆರೋಗ್ಯದಲ್ಲಾದ ಏರುಪೇರಿನಿಂದ ಮತ್ತು ಕೊರೊನಾ ಸೋಂಕಿನ ಕಾರಣದಿಂದ ಪಕ್ಷ ಸ್ಥಾಪನೆಯ ವಿಚಾರವನ್ನು ಕೈಬಿಟ್ಟಿದ್ದೇನೆ. ಇದು ನನ್ನ ಮೇಲೆ ಭರವಸೆಯಿಟ್ಟಿದ್ದ ಅಭಿಮಾನಿಗಳಿಗೆ ನಿರಾಸೆಯನ್ನುಂಟುಮಾಡುತ್ತದೆ ಎಂಬುದು ನನಗೆ ತಿಳಿದಿದೆ” ಎಂದಿದ್ದರು.

ಇದನ್ನೂ ಓದಿ: ಪ್ರಶಸ್ತಿ ಮತ್ತು ಪ್ರಭುತ್ವ; ಸೂಪರ್ ಸ್ಟಾರ್ ರಜನಿಕಾಂತ್‌ಗೆ ’ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ

ಈಗ ಅಧಿಕೃತವಾಗಿ ರಜನಿಕಾಂತ್ ಮಕ್ಕಳ್ ಮಂಡ್ರಮ್ ಪಕ್ಷವನ್ನು ವಿಸರ್ಜಿಸಿದ್ದಾರೆ. ಈ ಮೂಲಕ ಮುಂದೆಂದೂ ರಾಜಕೀಯ ಮಾಡಲಾರೆ ಎಂಬ ಸಂದೇಶ ರವಾನಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳಿಂದ ಗಾವುದ ದೂರ ಇರುವ ಹಾಗೂ ಸಿನಿಮಾ ನಟರನ್ನು ಆರಾಧಿಸುವ ತಮಿಳುನಾಡಿನಲ್ಲಿ ರಜನಿಕಾಂತ್ ಹಾಲಿ ಡಿಎಂಕೆ ಮತ್ತು ಎಐಎಡಿಎಂಕೆಗೆ ಪರ್ಯಾಯವಾಗಿ ರಾಜಕೀಯ ಶಕ್ತಿಯಾಗಿ ಬೆಳೆಯುತ್ತಾರೆ ಎಂದು ಅಂದಾಜು ಮಾಡಲಾಗುತ್ತಿತ್ತು. ಆದರೆ ರಜನಿಕಾಂತ್ ಎಲ್ಲಾ ನಿರೀಕ್ಷೆ, ಲೆಕ್ಕಾಚಾರಗಳನ್ನು ರಜನಿಕಾಂತ್‌ ತಲೆಕೆಳಗೆ ಮಾಡಿದ್ದಾರೆ.

ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ಎಐಎಡಿಎಂಕೆ ಚುನಾವಣೆಯಲ್ಲಿ ಚುನಾವಣೆಯಲ್ಲಿ ಸೋತಿದ್ದು, ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ 10 ವರ್ಷಗಳ ನಂತರ ಅಧಿಕಾರ ವಹಿಸಿಕೊಂಡಿದೆ. ಮತ್ತೊಬ್ಬ  ಸೂಪರ್ ಸ್ಟಾರ್, ರಾಜಕಾರಣಿ, ಕಮಲ್ ಹಾಸನ್, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ, ಒಂದು ಸ್ಥಾನವನ್ನು ಗೆಲ್ಲದೆ ರಾಜಕೀಯದಲ್ಲಿ ಪರಿಣಾಮ ಬೀರಲು ವಿಫಲವಾಗಿದ್ದಾರೆ.


ಇದನ್ನೂ ಓದಿ: ರಾಜಕೀಯ ಪಕ್ಷ ಸ್ಥಾಪಿಸುವುದಿಲ್ಲ: ಉಲ್ಟಾ ಹೊಡೆದ ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...