Homeಮುಖಪುಟಮಹಿಳಾ ಸಿಬ್ಬಂದಿ 'ಮುಟ್ಟು' ಸಾಬೀತಿಗೆ 'ಸ್ಯಾನಿಟರಿ ಪ್ಯಾಡ್‌'ನ ಫೋಟೋ ಕೇಳಿದ ಮೇಲ್ವಿಚಾರಕ

ಮಹಿಳಾ ಸಿಬ್ಬಂದಿ ‘ಮುಟ್ಟು’ ಸಾಬೀತಿಗೆ ‘ಸ್ಯಾನಿಟರಿ ಪ್ಯಾಡ್‌’ನ ಫೋಟೋ ಕೇಳಿದ ಮೇಲ್ವಿಚಾರಕ

- Advertisement -
- Advertisement -

ಮಹಿಳಾ ಸಿಬ್ಬಂದಿಗಳು ತಮ್ಮ ‘ಮುಟ್ಟು’ ಸಾಬೀತು ಪಡಿಸಲು, ತಾವು ಧರಿಸಿರುವ ಸ್ಯಾನಿಟರಿ ಪ್ಯಾಡ್‌ನ ಫೋಟೋ ತೆಗೆದು, ತಂದು ತೋರಿಸುವಂತೆ ಕೇಳಲಾಗಿರುವ ಅಮಾನವೀಯ ಘಟನೆ ಹರಿಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ವಿಶ್ವವಿದ್ಯಾಲಯದಲ್ಲಿ ನೈರ್ಮಲ್ಯ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಸ್ಯಾನಿಟರಿ ಪ್ಯಾಡ್‌ಗಳ ಛಾಯಚಿತ್ರ ತೆಗೆಯುವಂತೆ ಅವರ ಮೇಲ್ವಿಚಾರಕರು ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ.

ಅಕ್ಟೋಬರ್ 26 ರಂದು ಕ್ಯಾಂಪಸ್‌ನಲ್ಲಿ ಕೆಲ ಮಹಿಳೆಯರು ತಡವಾಗಿ ಕೆಲಸಕ್ಕೆ ಬಂದಿದ್ದರು. ಅವರನ್ನು ಮೇಲ್ವಿಚಾರಕರಾದ ವಿನೋದ್ ಮತ್ತು ಜೀತೇಂದ್ರ ನಿಂದಿಸಲಾರಂಭಿಸಿದ್ದರು. ಈ ವೇಳೆ, ಅವರು ಋತುಚಕ್ರದಲ್ಲಿದ್ದಾರೆ ಮತ್ತು ಸುಸ್ತಾಗಿದ್ದಾರೆಂದು ಇತರ ಸಿಬ್ಬಂದಿಗಳು ಮೇಲ್ವಿಚಾರಕರಿಗೆ ತಿಳಿಸಿದ್ದಾರೆ. ಆದರೆ, ಅವರ ಮಾತನ್ನು ನಂಬದ ವಿನೋದ್ ಮತ್ತು ಜೀತೇಂದ್ರ, ‘ವಾಶ್‌ರೂಮ್‌ಗೆ ಹೋಗಿ, ತಮ್ಮ ಸ್ಯಾನಿಟರ್ ಪ್ಯಾಡ್‌ನ ಚಿತ್ರ ತೆಗೆದು, ತಮ್ಮ ಮುಟ್ಟನ್ನು ಸಾಬೀತುಪಡಿಸಿ’ ಎಂದು ಸೂಚಿಸಿದ್ದಾರೆ. ಅದನ್ನು ಪರಿಶೀಲಿಸುವಂತೆ ಮತ್ತೊಬ್ಬ ಮಹಿಳಾ ಸಿಬ್ಬಂದಿಗೆ ನಿರ್ದೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ.

“ಮುಟ್ಟನ್ನು ದೃಢೀಕರಿಸಲು ಖಾಸಗಿ ಭಾಗಗಳ ಫೋಟೋಗಳನ್ನು ಪುರಾವೆಯಾಗಿ ಕ್ಲಿಕ್ಕಿಸಬೇಕೆಂದು ಮೇಲ್ವಿಚಾರಕರು ಒತ್ತಾಯಿಸಿದರು. ನಮ್ಮಲ್ಲಿ ಇಬ್ಬರು ಆ ಸೂಚನೆಗಳನ್ನು ಪಾಲಿಸಲು ನಿರಾಕರಿಸಿದಾಗ, ನಮ್ಮನ್ನು ಮೇಲ್ವಿಚಾರಕರು ನಿಂದಿಸಿದರು. ವಜಾಗೊಳಿಸುವುದಾಗಿ ಬೆದರಿಕೆ ಹಾಕಿದರು” ಎಂದು ಸಂತ್ರಸ್ತ ಮಹಿಳೆಯರು ದೂರಿರುವುದಾಗಿ ವರದಿಯಾಗಿದೆ.

ಘಟನೆಯ ಬಗ್ಗೆ ತಿಳಿದ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಗಳು ಮತ್ತು ಉಳಿದ ಮಹಿಳಾ ಸಿಬ್ಬಂದಿಗಳು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ.

ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ವಾರ್ಸಿಟಿ ರಿಜಿಸ್ಟ್ರಾರ್ ಕೃಷ್ಣನ್ ಕಾಂತ್, “ಘಟನೆ ಬಗ್ಗೆ ಆಂತರಿಕ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದರೆ ಅವರನ್ನು ಬಿಡಲಾಗುವುದಿಲ್ಲ. ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

“ಇಬ್ಬರು ಮೇಲ್ವಿಚಾರಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಪಿಜಿಐಎಂಎಸ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ರೋಷನ್ ಲಾಲ್ ತಿಳಿಸಿದ್ದಾರೆ.

“ಕೆಲಸದ ಸ್ಥಳದಲ್ಲಿ ಅಭದ್ರತೆ ಉಂಟುಮಾಡುವ ಯಾವುದೇ ಘಟನೆಯನ್ನು ಯಾವುದೇ ಸಂದರ್ಭದಲ್ಲೂ ಸಹಿಸಲಾಗುವುದಿಲ್ಲ. ಸುರಕ್ಷಿತ, ಗೌರವ ಹಾಗೂ ಸೂಕ್ಷ್ಮತೆಯುಳ್ಳ ಕೆಲಸದ ವಾತಾವರಣವನ್ನು ಒದಗಿಸುವು ನಮ್ಮ ಆದ್ಯತೆಯಾಗಿದೆ. ಯಾವುದೇ ರೀತಿಯ ಅನುಚಿತ ನಡವಳಿಕೆ ಅಥವಾ ದುಷ್ಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ವಿಶ್ವವಿದ್ಯಾಲಯ ಹೇಳಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...