Homeಕರ್ನಾಟಕಸೂಪರ್‌ವೈಸರ್ ನಿರ್ಲಕ್ಷ್ಯ : ಗುಬ್ಬಿ ಕಾರ್ಮಿಕ ಮಹಿಳೆಯ ದುರ್ಮರಣ

ಸೂಪರ್‌ವೈಸರ್ ನಿರ್ಲಕ್ಷ್ಯ : ಗುಬ್ಬಿ ಕಾರ್ಮಿಕ ಮಹಿಳೆಯ ದುರ್ಮರಣ

- Advertisement -
- Advertisement -

ಸೂಪರ್‌ವೈಸರ್ ನಿರ್ಲಕ್ಷ್ಯದಿಂದ ಕೆಎಂಎಫ್ ಪಶುಆಹಾರ ಉತ್ಪಾದನಾ ಘಟಕದಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆಯೊಬ್ಬರು ಚೈನ್ ಕನ್ವೈನರ್ ಮಿಷನ್‌ಗೆ ಸಿಲುಕಿ ನಜ್ಜುಗುಜ್ಜಾಗಿ ಮರಣ ಹೊಂದಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ಸಂಭವಿಸಿದೆ.

ಗುಬ್ಬಿಯ ಕೆಎಂಎಫ್‌ ಘಟಕದಲ್ಲಿ ಕಳೆದ 12-13 ವರ್ಷಗಳಿಂದ ಕೆಲಸ ಮಾಡುತ್ತಿದ್ದ 32 ವರ್ಷದ ಮಂಗಳಮ್ಮ ಮಾರ್ಚ್ 23ರಂದು ಬೆಳಗ್ಗೆ ಹಾಜರಾಗಿ ಕೆಲಸ ಮಾಡತೊಡಗಿದ್ದಾರೆ. ಕೆಲಸ ಮಾಡುವ ಸಮಯದಲ್ಲಿ ಸ್ಥಳದಲ್ಲಿರಬೇಕಾದ ಸೂಪರ್ ವೈಸರ್ ಇರದೇ ಹೊರಗೆ ಹೋಗಿದ್ದಾರೆ. ಹೀಗಾಗಿ ಚೈನ್ ಕನ್ವೈನರ್ ಸ್ವಚ್ಛ ಮಾಡುತ್ತಿದ್ದ ವೇಳೆ ಮಂಗಳಮ್ಮ ರೋಲರ್ ನಲ್ಲಿ ಸಿಲುಕಿ ದೇಹವೇ ಪುಡಿಪುಡಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಸೂಪರ್‌ವೈಸರ್ ಜಿ.ಎಂ.ರವಿ ಅವರು ಘಟಕದಲ್ಲಿದ್ದರೆ ಅನಾಹುತವನ್ನು ತಪ್ಪಿಸಬಹುದಾಗಿತ್ತು. ಆದರೆ ರವಿ ಹೋಗಿದ್ದು ಅನಾಹುತಕ್ಕೆ ಕಾರಣ ಎಂದು ದೂರಲಾಗಿದೆ.

ಮಂಗಳಮ್ಮ ಕುಟುಂಬದ ಜವಾಬ್ದಾರಿ ಹೊತ್ತಿದ್ದರು. ಇಡೀ ಕುಟುಂಬ ಮಂಗಳಮ್ಮ ದುಡಿಮೆಯಿಂದಲೇ ಸಾಗುತ್ತಿತ್ತು. ಗಂಡ ಗಾರೆಕೆಲಸ ಮಾಡುತ್ತಿದ್ದರಾದರೂ, ಆತ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲಸವಿಲ್ಲದೆ ಪತಿ ಮನೆಯಲ್ಲಿದ್ದು, ಮಂಗಳಮ್ಮ ಅವರ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.

ಲಾಕ್‌ಡೌನ್‌ ಸಮಯದಲ್ಲಿಯೂ ಮನೆಯನ್ನು ನಡೆಸುವುದಕ್ಕಾಗಿ ಮಂಗಳಮ್ಮ ದಿನನಿತ್ಯ ಕೆಲಸಕ್ಕೆ ಹೋಗುತ್ತಿದ್ದರು. ಇಂದು ತಿಳಿಯದೇ ಆದ ಸಣ್ಣ ಅವಘಡದಿಂದ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಮಂಗಳಮ್ಮಗೆ ಮೂರು ವರ್ಷದ ಹೆಣ್ಣು ಮಗುವೊಂದು ಇದ್ದು ಈಗ ಅನಾಥವಾಗಿದೆ. ತಾಯಿ ಯಂತ್ರಕ್ಕೆ ಸಿಲುಕಿ ಮೃತಪಟ್ಟಿರುವುದರಿಂದ ಮಗುವನ್ನು ನೋಡಿಕೊಳ್ಳಲು ಯಾರೂ ಇಲ್ಲವಾಗಿದೆ. ತಂದೆ ಅನಾರೋಗ್ಯ ಪೀಡಿತರಾಗಿ ಮಗುವನ್ನು ನೋಡಿಕೊಳ್ಳುವ ಶಕ್ತಿ ಹೊಂದಿಲ್ಲ. ಇಂತಹ ದುರಂತದ ಸಮಯದಲ್ಲಿ ಕೋವಿಡ್ ಸಾಂಕ್ರಾಮಿಕ  ಹರಡುತ್ತಿದೆ. ಹಾಗಾಗಿ ಸರ್ಕಾರ ಕೂಡಲೇ ಪರಿಹಾರ ನೀಡಿ ಮಗುವಿನ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕಿದೆ.

ಸರ್ಕಾರ ಮತ್ತು ಜಿಲ್ಲಾಡಳಿತ ಕೂಡಲೇ ಬಡಕುಟುಂಬದ ನೆರವಿಗೆ ಬರಬೇಕಾಗಿದೆ. ಲಾಕ್‌ಡೌನ್‌ ಸಮಯದಲ್ಲಿಯೇ ತೆಲಂಗಾಣದಲ್ಲಿ ಇದೇ ರೀತಿ ಮೂರು ಮಕ್ಕಳ ತಂದೆ ತಾಯಿಗಳು ಮರಣ ಹೊಂದಿದ್ದಾಗ ಅಲ್ಲಿನ ಮುಖ್ಯಮಂತ್ರಿ ಕೆ.ಸಿ ಚಂದ್ರಶೇಖರ್‌ರವರು ಜಿಲ್ಲಾಢಳಿತಕ್ಕೇ ಆದೇಶಿಸಿ ಆ ಮಕ್ಕಳ ಜವಾಬ್ದಾರಿ ಸರ್ಕಾರದ್ದು ಎಂದು ಘೋಷಿಸಿದ್ದರು. ಆ ಮಕ್ಕಳ ವಿದ್ಯಾಬ್ಯಾಸ ಮತ್ತು ಜೀವನೋಪಾಯಕ್ಕೆ ಕ್ರಮ ತೆಗೆದುಕೊಂಡಿದ್ದರು. ಅಂತಹದೇ ಕ್ರಮ ಗುಬ್ಬಿಯಲ್ಲಿಯೂ ಜರುಗಬೇಕಿದೆ.


ಇದನ್ನೂ ಓದಿ: ಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...