Homeಕರ್ನಾಟಕಸೂಪರ್‌ವೈಸರ್ ನಿರ್ಲಕ್ಷ್ಯ : ಗುಬ್ಬಿ ಕಾರ್ಮಿಕ ಮಹಿಳೆಯ ದುರ್ಮರಣ

ಸೂಪರ್‌ವೈಸರ್ ನಿರ್ಲಕ್ಷ್ಯ : ಗುಬ್ಬಿ ಕಾರ್ಮಿಕ ಮಹಿಳೆಯ ದುರ್ಮರಣ

- Advertisement -
- Advertisement -

ಸೂಪರ್‌ವೈಸರ್ ನಿರ್ಲಕ್ಷ್ಯದಿಂದ ಕೆಎಂಎಫ್ ಪಶುಆಹಾರ ಉತ್ಪಾದನಾ ಘಟಕದಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆಯೊಬ್ಬರು ಚೈನ್ ಕನ್ವೈನರ್ ಮಿಷನ್‌ಗೆ ಸಿಲುಕಿ ನಜ್ಜುಗುಜ್ಜಾಗಿ ಮರಣ ಹೊಂದಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ಸಂಭವಿಸಿದೆ.

ಗುಬ್ಬಿಯ ಕೆಎಂಎಫ್‌ ಘಟಕದಲ್ಲಿ ಕಳೆದ 12-13 ವರ್ಷಗಳಿಂದ ಕೆಲಸ ಮಾಡುತ್ತಿದ್ದ 32 ವರ್ಷದ ಮಂಗಳಮ್ಮ ಮಾರ್ಚ್ 23ರಂದು ಬೆಳಗ್ಗೆ ಹಾಜರಾಗಿ ಕೆಲಸ ಮಾಡತೊಡಗಿದ್ದಾರೆ. ಕೆಲಸ ಮಾಡುವ ಸಮಯದಲ್ಲಿ ಸ್ಥಳದಲ್ಲಿರಬೇಕಾದ ಸೂಪರ್ ವೈಸರ್ ಇರದೇ ಹೊರಗೆ ಹೋಗಿದ್ದಾರೆ. ಹೀಗಾಗಿ ಚೈನ್ ಕನ್ವೈನರ್ ಸ್ವಚ್ಛ ಮಾಡುತ್ತಿದ್ದ ವೇಳೆ ಮಂಗಳಮ್ಮ ರೋಲರ್ ನಲ್ಲಿ ಸಿಲುಕಿ ದೇಹವೇ ಪುಡಿಪುಡಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಸೂಪರ್‌ವೈಸರ್ ಜಿ.ಎಂ.ರವಿ ಅವರು ಘಟಕದಲ್ಲಿದ್ದರೆ ಅನಾಹುತವನ್ನು ತಪ್ಪಿಸಬಹುದಾಗಿತ್ತು. ಆದರೆ ರವಿ ಹೋಗಿದ್ದು ಅನಾಹುತಕ್ಕೆ ಕಾರಣ ಎಂದು ದೂರಲಾಗಿದೆ.

ಮಂಗಳಮ್ಮ ಕುಟುಂಬದ ಜವಾಬ್ದಾರಿ ಹೊತ್ತಿದ್ದರು. ಇಡೀ ಕುಟುಂಬ ಮಂಗಳಮ್ಮ ದುಡಿಮೆಯಿಂದಲೇ ಸಾಗುತ್ತಿತ್ತು. ಗಂಡ ಗಾರೆಕೆಲಸ ಮಾಡುತ್ತಿದ್ದರಾದರೂ, ಆತ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲಸವಿಲ್ಲದೆ ಪತಿ ಮನೆಯಲ್ಲಿದ್ದು, ಮಂಗಳಮ್ಮ ಅವರ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.

ಲಾಕ್‌ಡೌನ್‌ ಸಮಯದಲ್ಲಿಯೂ ಮನೆಯನ್ನು ನಡೆಸುವುದಕ್ಕಾಗಿ ಮಂಗಳಮ್ಮ ದಿನನಿತ್ಯ ಕೆಲಸಕ್ಕೆ ಹೋಗುತ್ತಿದ್ದರು. ಇಂದು ತಿಳಿಯದೇ ಆದ ಸಣ್ಣ ಅವಘಡದಿಂದ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಮಂಗಳಮ್ಮಗೆ ಮೂರು ವರ್ಷದ ಹೆಣ್ಣು ಮಗುವೊಂದು ಇದ್ದು ಈಗ ಅನಾಥವಾಗಿದೆ. ತಾಯಿ ಯಂತ್ರಕ್ಕೆ ಸಿಲುಕಿ ಮೃತಪಟ್ಟಿರುವುದರಿಂದ ಮಗುವನ್ನು ನೋಡಿಕೊಳ್ಳಲು ಯಾರೂ ಇಲ್ಲವಾಗಿದೆ. ತಂದೆ ಅನಾರೋಗ್ಯ ಪೀಡಿತರಾಗಿ ಮಗುವನ್ನು ನೋಡಿಕೊಳ್ಳುವ ಶಕ್ತಿ ಹೊಂದಿಲ್ಲ. ಇಂತಹ ದುರಂತದ ಸಮಯದಲ್ಲಿ ಕೋವಿಡ್ ಸಾಂಕ್ರಾಮಿಕ  ಹರಡುತ್ತಿದೆ. ಹಾಗಾಗಿ ಸರ್ಕಾರ ಕೂಡಲೇ ಪರಿಹಾರ ನೀಡಿ ಮಗುವಿನ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕಿದೆ.

ಸರ್ಕಾರ ಮತ್ತು ಜಿಲ್ಲಾಡಳಿತ ಕೂಡಲೇ ಬಡಕುಟುಂಬದ ನೆರವಿಗೆ ಬರಬೇಕಾಗಿದೆ. ಲಾಕ್‌ಡೌನ್‌ ಸಮಯದಲ್ಲಿಯೇ ತೆಲಂಗಾಣದಲ್ಲಿ ಇದೇ ರೀತಿ ಮೂರು ಮಕ್ಕಳ ತಂದೆ ತಾಯಿಗಳು ಮರಣ ಹೊಂದಿದ್ದಾಗ ಅಲ್ಲಿನ ಮುಖ್ಯಮಂತ್ರಿ ಕೆ.ಸಿ ಚಂದ್ರಶೇಖರ್‌ರವರು ಜಿಲ್ಲಾಢಳಿತಕ್ಕೇ ಆದೇಶಿಸಿ ಆ ಮಕ್ಕಳ ಜವಾಬ್ದಾರಿ ಸರ್ಕಾರದ್ದು ಎಂದು ಘೋಷಿಸಿದ್ದರು. ಆ ಮಕ್ಕಳ ವಿದ್ಯಾಬ್ಯಾಸ ಮತ್ತು ಜೀವನೋಪಾಯಕ್ಕೆ ಕ್ರಮ ತೆಗೆದುಕೊಂಡಿದ್ದರು. ಅಂತಹದೇ ಕ್ರಮ ಗುಬ್ಬಿಯಲ್ಲಿಯೂ ಜರುಗಬೇಕಿದೆ.


ಇದನ್ನೂ ಓದಿ: ಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...