Homeಕರ್ನಾಟಕಸೂಪರ್‌ವೈಸರ್ ನಿರ್ಲಕ್ಷ್ಯ : ಗುಬ್ಬಿ ಕಾರ್ಮಿಕ ಮಹಿಳೆಯ ದುರ್ಮರಣ

ಸೂಪರ್‌ವೈಸರ್ ನಿರ್ಲಕ್ಷ್ಯ : ಗುಬ್ಬಿ ಕಾರ್ಮಿಕ ಮಹಿಳೆಯ ದುರ್ಮರಣ

- Advertisement -
- Advertisement -

ಸೂಪರ್‌ವೈಸರ್ ನಿರ್ಲಕ್ಷ್ಯದಿಂದ ಕೆಎಂಎಫ್ ಪಶುಆಹಾರ ಉತ್ಪಾದನಾ ಘಟಕದಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆಯೊಬ್ಬರು ಚೈನ್ ಕನ್ವೈನರ್ ಮಿಷನ್‌ಗೆ ಸಿಲುಕಿ ನಜ್ಜುಗುಜ್ಜಾಗಿ ಮರಣ ಹೊಂದಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ಸಂಭವಿಸಿದೆ.

ಗುಬ್ಬಿಯ ಕೆಎಂಎಫ್‌ ಘಟಕದಲ್ಲಿ ಕಳೆದ 12-13 ವರ್ಷಗಳಿಂದ ಕೆಲಸ ಮಾಡುತ್ತಿದ್ದ 32 ವರ್ಷದ ಮಂಗಳಮ್ಮ ಮಾರ್ಚ್ 23ರಂದು ಬೆಳಗ್ಗೆ ಹಾಜರಾಗಿ ಕೆಲಸ ಮಾಡತೊಡಗಿದ್ದಾರೆ. ಕೆಲಸ ಮಾಡುವ ಸಮಯದಲ್ಲಿ ಸ್ಥಳದಲ್ಲಿರಬೇಕಾದ ಸೂಪರ್ ವೈಸರ್ ಇರದೇ ಹೊರಗೆ ಹೋಗಿದ್ದಾರೆ. ಹೀಗಾಗಿ ಚೈನ್ ಕನ್ವೈನರ್ ಸ್ವಚ್ಛ ಮಾಡುತ್ತಿದ್ದ ವೇಳೆ ಮಂಗಳಮ್ಮ ರೋಲರ್ ನಲ್ಲಿ ಸಿಲುಕಿ ದೇಹವೇ ಪುಡಿಪುಡಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಸೂಪರ್‌ವೈಸರ್ ಜಿ.ಎಂ.ರವಿ ಅವರು ಘಟಕದಲ್ಲಿದ್ದರೆ ಅನಾಹುತವನ್ನು ತಪ್ಪಿಸಬಹುದಾಗಿತ್ತು. ಆದರೆ ರವಿ ಹೋಗಿದ್ದು ಅನಾಹುತಕ್ಕೆ ಕಾರಣ ಎಂದು ದೂರಲಾಗಿದೆ.

ಮಂಗಳಮ್ಮ ಕುಟುಂಬದ ಜವಾಬ್ದಾರಿ ಹೊತ್ತಿದ್ದರು. ಇಡೀ ಕುಟುಂಬ ಮಂಗಳಮ್ಮ ದುಡಿಮೆಯಿಂದಲೇ ಸಾಗುತ್ತಿತ್ತು. ಗಂಡ ಗಾರೆಕೆಲಸ ಮಾಡುತ್ತಿದ್ದರಾದರೂ, ಆತ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲಸವಿಲ್ಲದೆ ಪತಿ ಮನೆಯಲ್ಲಿದ್ದು, ಮಂಗಳಮ್ಮ ಅವರ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.

ಲಾಕ್‌ಡೌನ್‌ ಸಮಯದಲ್ಲಿಯೂ ಮನೆಯನ್ನು ನಡೆಸುವುದಕ್ಕಾಗಿ ಮಂಗಳಮ್ಮ ದಿನನಿತ್ಯ ಕೆಲಸಕ್ಕೆ ಹೋಗುತ್ತಿದ್ದರು. ಇಂದು ತಿಳಿಯದೇ ಆದ ಸಣ್ಣ ಅವಘಡದಿಂದ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಮಂಗಳಮ್ಮಗೆ ಮೂರು ವರ್ಷದ ಹೆಣ್ಣು ಮಗುವೊಂದು ಇದ್ದು ಈಗ ಅನಾಥವಾಗಿದೆ. ತಾಯಿ ಯಂತ್ರಕ್ಕೆ ಸಿಲುಕಿ ಮೃತಪಟ್ಟಿರುವುದರಿಂದ ಮಗುವನ್ನು ನೋಡಿಕೊಳ್ಳಲು ಯಾರೂ ಇಲ್ಲವಾಗಿದೆ. ತಂದೆ ಅನಾರೋಗ್ಯ ಪೀಡಿತರಾಗಿ ಮಗುವನ್ನು ನೋಡಿಕೊಳ್ಳುವ ಶಕ್ತಿ ಹೊಂದಿಲ್ಲ. ಇಂತಹ ದುರಂತದ ಸಮಯದಲ್ಲಿ ಕೋವಿಡ್ ಸಾಂಕ್ರಾಮಿಕ  ಹರಡುತ್ತಿದೆ. ಹಾಗಾಗಿ ಸರ್ಕಾರ ಕೂಡಲೇ ಪರಿಹಾರ ನೀಡಿ ಮಗುವಿನ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕಿದೆ.

ಸರ್ಕಾರ ಮತ್ತು ಜಿಲ್ಲಾಡಳಿತ ಕೂಡಲೇ ಬಡಕುಟುಂಬದ ನೆರವಿಗೆ ಬರಬೇಕಾಗಿದೆ. ಲಾಕ್‌ಡೌನ್‌ ಸಮಯದಲ್ಲಿಯೇ ತೆಲಂಗಾಣದಲ್ಲಿ ಇದೇ ರೀತಿ ಮೂರು ಮಕ್ಕಳ ತಂದೆ ತಾಯಿಗಳು ಮರಣ ಹೊಂದಿದ್ದಾಗ ಅಲ್ಲಿನ ಮುಖ್ಯಮಂತ್ರಿ ಕೆ.ಸಿ ಚಂದ್ರಶೇಖರ್‌ರವರು ಜಿಲ್ಲಾಢಳಿತಕ್ಕೇ ಆದೇಶಿಸಿ ಆ ಮಕ್ಕಳ ಜವಾಬ್ದಾರಿ ಸರ್ಕಾರದ್ದು ಎಂದು ಘೋಷಿಸಿದ್ದರು. ಆ ಮಕ್ಕಳ ವಿದ್ಯಾಬ್ಯಾಸ ಮತ್ತು ಜೀವನೋಪಾಯಕ್ಕೆ ಕ್ರಮ ತೆಗೆದುಕೊಂಡಿದ್ದರು. ಅಂತಹದೇ ಕ್ರಮ ಗುಬ್ಬಿಯಲ್ಲಿಯೂ ಜರುಗಬೇಕಿದೆ.


ಇದನ್ನೂ ಓದಿ: ಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...