Homeಕರ್ನಾಟಕಸೂಪರ್‌ವೈಸರ್ ನಿರ್ಲಕ್ಷ್ಯ : ಗುಬ್ಬಿ ಕಾರ್ಮಿಕ ಮಹಿಳೆಯ ದುರ್ಮರಣ

ಸೂಪರ್‌ವೈಸರ್ ನಿರ್ಲಕ್ಷ್ಯ : ಗುಬ್ಬಿ ಕಾರ್ಮಿಕ ಮಹಿಳೆಯ ದುರ್ಮರಣ

- Advertisement -
- Advertisement -

ಸೂಪರ್‌ವೈಸರ್ ನಿರ್ಲಕ್ಷ್ಯದಿಂದ ಕೆಎಂಎಫ್ ಪಶುಆಹಾರ ಉತ್ಪಾದನಾ ಘಟಕದಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆಯೊಬ್ಬರು ಚೈನ್ ಕನ್ವೈನರ್ ಮಿಷನ್‌ಗೆ ಸಿಲುಕಿ ನಜ್ಜುಗುಜ್ಜಾಗಿ ಮರಣ ಹೊಂದಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ಸಂಭವಿಸಿದೆ.

ಗುಬ್ಬಿಯ ಕೆಎಂಎಫ್‌ ಘಟಕದಲ್ಲಿ ಕಳೆದ 12-13 ವರ್ಷಗಳಿಂದ ಕೆಲಸ ಮಾಡುತ್ತಿದ್ದ 32 ವರ್ಷದ ಮಂಗಳಮ್ಮ ಮಾರ್ಚ್ 23ರಂದು ಬೆಳಗ್ಗೆ ಹಾಜರಾಗಿ ಕೆಲಸ ಮಾಡತೊಡಗಿದ್ದಾರೆ. ಕೆಲಸ ಮಾಡುವ ಸಮಯದಲ್ಲಿ ಸ್ಥಳದಲ್ಲಿರಬೇಕಾದ ಸೂಪರ್ ವೈಸರ್ ಇರದೇ ಹೊರಗೆ ಹೋಗಿದ್ದಾರೆ. ಹೀಗಾಗಿ ಚೈನ್ ಕನ್ವೈನರ್ ಸ್ವಚ್ಛ ಮಾಡುತ್ತಿದ್ದ ವೇಳೆ ಮಂಗಳಮ್ಮ ರೋಲರ್ ನಲ್ಲಿ ಸಿಲುಕಿ ದೇಹವೇ ಪುಡಿಪುಡಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಸೂಪರ್‌ವೈಸರ್ ಜಿ.ಎಂ.ರವಿ ಅವರು ಘಟಕದಲ್ಲಿದ್ದರೆ ಅನಾಹುತವನ್ನು ತಪ್ಪಿಸಬಹುದಾಗಿತ್ತು. ಆದರೆ ರವಿ ಹೋಗಿದ್ದು ಅನಾಹುತಕ್ಕೆ ಕಾರಣ ಎಂದು ದೂರಲಾಗಿದೆ.

ಮಂಗಳಮ್ಮ ಕುಟುಂಬದ ಜವಾಬ್ದಾರಿ ಹೊತ್ತಿದ್ದರು. ಇಡೀ ಕುಟುಂಬ ಮಂಗಳಮ್ಮ ದುಡಿಮೆಯಿಂದಲೇ ಸಾಗುತ್ತಿತ್ತು. ಗಂಡ ಗಾರೆಕೆಲಸ ಮಾಡುತ್ತಿದ್ದರಾದರೂ, ಆತ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲಸವಿಲ್ಲದೆ ಪತಿ ಮನೆಯಲ್ಲಿದ್ದು, ಮಂಗಳಮ್ಮ ಅವರ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.

ಲಾಕ್‌ಡೌನ್‌ ಸಮಯದಲ್ಲಿಯೂ ಮನೆಯನ್ನು ನಡೆಸುವುದಕ್ಕಾಗಿ ಮಂಗಳಮ್ಮ ದಿನನಿತ್ಯ ಕೆಲಸಕ್ಕೆ ಹೋಗುತ್ತಿದ್ದರು. ಇಂದು ತಿಳಿಯದೇ ಆದ ಸಣ್ಣ ಅವಘಡದಿಂದ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಮಂಗಳಮ್ಮಗೆ ಮೂರು ವರ್ಷದ ಹೆಣ್ಣು ಮಗುವೊಂದು ಇದ್ದು ಈಗ ಅನಾಥವಾಗಿದೆ. ತಾಯಿ ಯಂತ್ರಕ್ಕೆ ಸಿಲುಕಿ ಮೃತಪಟ್ಟಿರುವುದರಿಂದ ಮಗುವನ್ನು ನೋಡಿಕೊಳ್ಳಲು ಯಾರೂ ಇಲ್ಲವಾಗಿದೆ. ತಂದೆ ಅನಾರೋಗ್ಯ ಪೀಡಿತರಾಗಿ ಮಗುವನ್ನು ನೋಡಿಕೊಳ್ಳುವ ಶಕ್ತಿ ಹೊಂದಿಲ್ಲ. ಇಂತಹ ದುರಂತದ ಸಮಯದಲ್ಲಿ ಕೋವಿಡ್ ಸಾಂಕ್ರಾಮಿಕ  ಹರಡುತ್ತಿದೆ. ಹಾಗಾಗಿ ಸರ್ಕಾರ ಕೂಡಲೇ ಪರಿಹಾರ ನೀಡಿ ಮಗುವಿನ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕಿದೆ.

ಸರ್ಕಾರ ಮತ್ತು ಜಿಲ್ಲಾಡಳಿತ ಕೂಡಲೇ ಬಡಕುಟುಂಬದ ನೆರವಿಗೆ ಬರಬೇಕಾಗಿದೆ. ಲಾಕ್‌ಡೌನ್‌ ಸಮಯದಲ್ಲಿಯೇ ತೆಲಂಗಾಣದಲ್ಲಿ ಇದೇ ರೀತಿ ಮೂರು ಮಕ್ಕಳ ತಂದೆ ತಾಯಿಗಳು ಮರಣ ಹೊಂದಿದ್ದಾಗ ಅಲ್ಲಿನ ಮುಖ್ಯಮಂತ್ರಿ ಕೆ.ಸಿ ಚಂದ್ರಶೇಖರ್‌ರವರು ಜಿಲ್ಲಾಢಳಿತಕ್ಕೇ ಆದೇಶಿಸಿ ಆ ಮಕ್ಕಳ ಜವಾಬ್ದಾರಿ ಸರ್ಕಾರದ್ದು ಎಂದು ಘೋಷಿಸಿದ್ದರು. ಆ ಮಕ್ಕಳ ವಿದ್ಯಾಬ್ಯಾಸ ಮತ್ತು ಜೀವನೋಪಾಯಕ್ಕೆ ಕ್ರಮ ತೆಗೆದುಕೊಂಡಿದ್ದರು. ಅಂತಹದೇ ಕ್ರಮ ಗುಬ್ಬಿಯಲ್ಲಿಯೂ ಜರುಗಬೇಕಿದೆ.


ಇದನ್ನೂ ಓದಿ: ಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...