Homeಮುಖಪುಟದೆಹಲಿ ಜನರಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ; ಬಂಧನದಲ್ಲಿರುವಾಗಲೇ ಮೊದಲ ಆದೇಶ ನೀಡಿದ ಸಿಎಂ ಕೇಜ್ರಿವಾಲ್

ದೆಹಲಿ ಜನರಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ; ಬಂಧನದಲ್ಲಿರುವಾಗಲೇ ಮೊದಲ ಆದೇಶ ನೀಡಿದ ಸಿಎಂ ಕೇಜ್ರಿವಾಲ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿ, ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನೀರಿನ ಕೊರತೆ ಎದುರಿಸುತ್ತಿರುವ ಪ್ರದೇಶಗಳಿಗೆ ನಿನ್ನೆ ಅಲ್ಲಿಂದಲೇ ಆದೇಶ ಹೊರಡಿಸಿದ್ದಾರೆ.

ಕಾರಾಗೃಹದಿಂದ ತಮ್ಮ ಮೊದಲ ಆದೇಶ ನೀಡಿರುವ ಕೇಜ್ರಿವಾಲ್, ಸುಡುವ ಬೇಸಿಗೆಯಲ್ಲಿ ರಾಷ್ಟ್ರ ರಾಜಧಾನಿ ಅನುಭವಿಸುತ್ತಿರುವ ನೀರಿನ ಪೂರೈಕೆಯನ್ನು ಬಲಪಡಿಸಲು, ಕೆಲ ಪ್ರದೇಶಗಳಲ್ಲಿ ಟ್ಯಾಂಕರ್‌ಗಳನ್ನು ನಿಯೋಜಿಸಲು ನಗರದ ಜಲ ಇಲಾಖೆಗೆ ಆದೇಶ ನೀಡಿದ್ದಾರೆ.

ಈ ಆದೇಶವನ್ನು ನಿನ್ನೆ ಸಂಜೆ ದೆಹಲಿ ಜಲ ಸಚಿವೆ ಅತಿಶಿ ಅವರಿಗೆ ಕಳುಹಿಸಲಾದ ಟಿಪ್ಪಣಿಯ ಮೂಲಕ ತಲುಪಿಸಲಾಗಿದೆ. ಕೇಜ್ರಿವಾಲ್ ಜೈಲಿನಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರೂ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಎಎಪಿ ಸಮರ್ಥಿಸಿಕೊಂಡಿದೆ.

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರನ್ನು ಗುರುವಾರ ಬಂಧಿಸಲಾಯಿತು. ಮರುದಿನ, ನಗರದ ರೂಸ್ ಅವೆನ್ಯೂ ನ್ಯಾಯಾಲಯವು ಅವರನ್ನು ಮಾರ್ಚ್ 28 ರವರೆಗೆ ತನಿಖಾ ಸಂಸ್ಥೆಯ ಕಸ್ಟಡಿಗೆ ಒಪ್ಪಿಸಿತ್ತು.

ಅರವಿಂದ್ ಕೇಜ್ರಿವಾಲ್ ನೀಡಿದ ಆದೇಶವೇನು?

ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, ಹಾನಿಗೊಳಗಾದ ಪ್ರದೇಶಗಳಲ್ಲಿ ಸಾಕಷ್ಟು ನೀರು ಸರಬರಾಜು ಮಾಡಲು ಇಲಾಖೆಗೆ ಕೇಜ್ರಿವಾಲ್ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು.

ಬೇಕಿದ್ದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರ ಸಹಾಯ ಪಡೆಯುವಂತೆಯೂ ಅವರು ಸಚಿವರಿಗೆ ಸೂಚಿಸಿದ್ದಾರೆ.

‘ದಿಲ್ಲಿಯ ಕೆಲವು ಭಾಗಗಳಲ್ಲಿ ಜನರು ನೀರು ಮತ್ತು ಒಳಚರಂಡಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಾನು ತಿಳಿದುಕೊಂಡಿದ್ದೇನೆ. ಇದರಿಂದ ನಾನು ಚಿಂತಿತನಾಗಿದ್ದೇನೆ. ನಾನು ಜೈಲಿನಲ್ಲಿದ್ದೇನೆ ಎಂಬ ಕಾರಣಕ್ಕೆ ಜನರಿಗೆ ಈ ಸಮಸ್ಯೆ ಎದುರಾಗಬಾರದು. ನೀರಿನ ಕೊರತೆ ಇರುವ ಸ್ಥಳಗಳಿಗೆ ಟ್ಯಾಂಕರ್ ವ್ಯವಸ್ಥೆ ಮಾಡಬೇಕು ಮತ್ತು ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಕೇಜ್ರಿವಾಲ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ನಿನ್ನೆ ಎಲ್ಲರೂ ಸಮಾಜಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸಬೇಕೆಂದು ಒತ್ತಾಯಿಸಿದರು; ಯಾರನ್ನೂ ದ್ವೇಷಿಸಬೇಡಿ, ಆಡಳಿತಾರೂಢ ಬಿಜೆಪಿಯವರನ್ನೂ ಸಹ ದ್ವೇಷಿಸಬೇಡಿ ಎಂದು ಹೇಳಿದ್ದಾರೆ ಎಂಬ ಸಂದೇಶವನ್ನು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಓದಿದರು.

“ಭಾರತದ ಒಳಗೆ ಮತ್ತು ಹೊರಗೆ ಹಲವಾರು ಶಕ್ತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ. ಅವರನ್ನು ದೀರ್ಘಕಾಲ ಕಂಬಿಗಳ ಹಿಂದೆ ಇಡಲು ಯಾವುದೇ ಜೈಲು ಇಲ್ಲ. ನಾನು ಶೀಘ್ರದಲ್ಲೇ ಹೊರಗೆ ಬಂದು ನನ್ನ ಭರವಸೆಗಳನ್ನು ಈಡೇರಿಸುತ್ತೇನೆ” ಎಂದು ದೆಹಲಿ ಮುಖ್ಯಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಜೈಲು ನಿಯಮಗಳು ಏನು ಹೇಳುತ್ತವೆ?

ದೆಹಲಿಯ ತಿಹಾರ್ ಜೈಲಿನ ಮಾಜಿ ಕಾನೂನು ಅಧಿಕಾರಿಯೊಬ್ಬರು ಹೇಳುವಂತೆ, ಒಬ್ಬ ಕೈದಿಯು ವಾರದಲ್ಲಿ ಎರಡು ಸಭೆಗಳನ್ನು ಮಾತ್ರ ನಡೆಸಬಹುದು, ಇದು ಕೇಜ್ರಿವಾಲ್‌ಗೆ ಮುಖ್ಯಮಂತ್ರಿಯಾಗಿ ತನ್ನ ಜವಾಬ್ದಾರಿಗಳನ್ನು ನಿರ್ವಹಿಸಲು ಕಷ್ಟಕರವಾಗುತ್ತದೆ. ಅವರನ್ನು ಗೃಹಬಂಧನದಲ್ಲಿ ಇರಿಸಿದರೆ ಬಂಧನದೊಳಗಿಂದ ಅವರ ಆಡಳಿತವನ್ನು ಸುಗಮಗೊಳಿಸಬಹುದಾದ ಏಕೈಕ ಮಾರ್ಗವಾಗಿದೆ.

ಲೆಫ್ಟಿನೆಂಟ್ ಗವರ್ನರ್ ಅವರು ಯಾವುದೇ ಕಟ್ಟಡವನ್ನು ಜೈಲಿನಂತೆ ಪರಿವರ್ತಿಸುವ ಅಧಿಕಾರವನ್ನು ಹೊಂದಿದ್ದಾರೆ. ಕೇಜ್ರಿವಾಲ್ ಅವರನ್ನು ಗೃಹಬಂಧನದಲ್ಲಿ ಇರಿಸಲು ಅವರಿಗೆ ಮನವರಿಕೆ ಮಾಡಿದರೆ, ಅದು ದೆಹಲಿ ಸರ್ಕಾರದ ದೈನಂದಿನ ಕಾರ್ಯಚಟುವಟಿಕೆಯಲ್ಲಿ ಭಾಗವಾಗಲು ಸಹಾಯ ಮಾಡುತ್ತದೆ.

“ಯಾವುದೇ ಕಟ್ಟಡವನ್ನು ಜೈಲು ಎಂದು ಘೋಷಿಸಲು ನಿರ್ವಾಹಕರಿಗೆ ಅಧಿಕಾರವಿದೆ” ಎಂದು ಸುನೀಲ್ ಗುಪ್ತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ; ಕೇಜ್ರಿವಾಲ್‌ ಕಂಡರೆ ಬಿಜೆಪಿಗೆ ಹೆದರಿಕೆ, ಅವರು ಪ್ರಚಾರ ಮಾಡುವುದು ಇಷ್ಟವಿಲ್ಲ: ಭಗವಂತ್ ಮಾನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...