Homeಮುಖಪುಟಚಕ್ಕಾ ಜಾಮ್‌ಗೆ ಬೆಂಬಲ: ಹತ್ತಾರು ಕಾರ್ಮಿಕ ಮುಖಂಡರನ್ನು ಬಂಧಿಸುತ್ತಿರುವ ದೆಹಲಿ ಪೊಲೀಸರು

ಚಕ್ಕಾ ಜಾಮ್‌ಗೆ ಬೆಂಬಲ: ಹತ್ತಾರು ಕಾರ್ಮಿಕ ಮುಖಂಡರನ್ನು ಬಂಧಿಸುತ್ತಿರುವ ದೆಹಲಿ ಪೊಲೀಸರು

ಕಾರ್ಮಿಕ ಮುಖಂಡರು ಸಹ ತಮ್ಮ ಪ್ರಜಾತಾಂತ್ರಿಕ ಹೋರಾಟ ನಡೆಸಲು ಬಿಡುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ 73 ದಿನಗಳಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟಿಸುತ್ತಿರುವ ರೈತರು ಇಂದು ದೇಶಾದ್ಯಾಂತ ಚಕ್ಕಾ ಜಾಮ್ (ಸಂಚಾರ ಸ್ಥಗಿತ ಹೋರಾಟ) ಗೆ ಕರೆ ನೀಡಿದ್ದಾರೆ. ಈ ರೈತ ಹೋರಾಟವನ್ನು ಬೆಂಬಲಿಸಿ ಹತ್ತಾರು ಕಾರ್ಮಿಕ ಸಂಘಟನೆಗಳು ಹೇಳಿಕೆ ನೀಡಿದ್ದವು. ಅಲ್ಲದೇ ಚಕ್ಕಾ ಜಾಮ್‌ನಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ನಿರ್ಣಯಿಸಿದ್ದವು. ಇದನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಶುಕ್ರವಾರ ರಾತ್ರಿಯಿಂದಲೇ ಹತ್ತಾರು ಕಾರ್ಮಿಕ ಮುಖಂಡರನ್ನು ಬಂಧಿಸಿದ್ದಾರೆ.

ದೆಹಲಿಯ ಐಟಿಒನ ಶಹೀದ್ ಪಾರ್ಕ್‌ನಲ್ಲಿ ಇಂದು ಬೃಹತ್ ಹೋರಾಟ ನಡೆಸಲು ಕಾರ್ಮಿಕ ಸಂಘಟನೆಗಳು ನಿರ್ಧಿರಿಸದ್ದವು. ಈ ಕುರಿತು ದೆಹಲಿ ಪೊಲೀಸರ್ ನೋಟಿಸ್ ಸಹ ನೀಡಲಾಗಿತ್ತು. ಆದರೆ ಕಳೆದ ರಾತ್ರಿಯಿಂದ ಟ್ರೇಡ್ ಯೂನಿಯನ್ ಮುಖಂಡರನ್ನು ಪೊಲೀಸರು ಸಿಕ್ಕ ಸಿಕ್ಕಲ್ಲಿ ಬಂಧಿಸುತ್ತಿದ್ದಾರೆ. ಉತ್ತರ ದೆಹಲಿ ಸಿಐಟಿಯು ಕಾರ್ಯದರ್ಶಿಯಾಗಿರುವ ವಿಪಿನ್ ಅವರನ್ನು ಬದ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಚೌರಾಸಿಯಾ ಅವರನ್ನು ಬುರಾರಿ ಪೊಲೀಸರು ವಶಕ್ಕೆ ಪಡೆದ ನಂತರ ಅವರನ್ನು ಗೃಹಬಂಧನದಲ್ಲಿರಿಸಿದ್ದಾರೆ. ಇಂದು ಬೆಳಿಗ್ಗೆ 5 ಗಂಟೆಗೆ ದೆಹಲಿಯ ಐಎಫ್‌ಟಿಯು ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಅನಿಮೆಶ್ ಅವರನ್ನು ಸಿ.ಆರ್ ಪಾರ್ಕ್‌ನಲ್ಲಿರುವ ಅವರ ಮನೆಯಿಂದ ಬಂಧಿಸಲಾಗಿದೆ. ಐಎಫ್‌ಟಿಯುಗೆ ಸಂಬಂಧಿಸಿದ ಪ್ರಗತಿಶೀಲ್ ಮಹಿಳಾ ಸಂಘಟನ್‌ನ ಪೂನಮ್ ಕೌಶಿಕ್ ರವರನ್ನು ಗೃಹಬಂಧನದಲ್ಲಿಡಲಾಗಿದೆ. ಪೊಲೀಸರು ಅವರ ಮನೆಯ ಹೊರಗೆ ಕಾವಲು ಕಾಯುತ್ತಿದ್ದಾರೆ. ಎಐಸಿಸಿಟಿಯುನ ಸೂರ್ಯ ಪ್ರಕಾಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಜ್ದೂರ್ ಸಹಯೋಗ್ ಕೇಂದ್ರದ ಸಂಚಾಲಕರಾದ ನಯನ್‌ರವರು ಆರೋಪಿಸಿದ್ದಾರೆ.

ಇಂದು ನಾವು ಐಟಿಓದಲ್ಲಿ ಚಕ್ಕಾ ಜಾಮ್ ನಡೆಸುತ್ತಿರಲಿಲ್ಲ. ಬದಲಿಗೆ ಸಾರ್ವಜನಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಇದು ಶಹೀದ್ ಪಾರ್ಕ್ ಒಳಗೆ ನಡೆಯುವ ಶಾಂತಿಯುತ ಪ್ರತಿಭಟನೆಯಾಗಿತ್ತು. ಅಲ್ಲಿ ಸಾಮಾನ್ಯವಾಗಿ ಅನೇಕ ಕಾರ್ಯಕ್ರಮಗಳು ನಡೆಯುತ್ತವೆ. ಆದರೆ ಆ ಕಾರ್ಯಕ್ರಮವನ್ನು ತಡೆಯುವುದಕ್ಕಾಗಿ ಈ ಬಂಧನಗಳನ್ನು ಪೊಲೀಸರು ಮಾಡಿದ್ದಾರೆ. ಅಲ್ಲದೆ ಅದಕ್ಕೆ ಯಾವುದೇ ವಿವರಣೆಯನ್ನು ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಎಲ್ಲಾ ಕಾರ್ಮಿಕ ಸಂಘಗಳು, ವಿದ್ಯಾರ್ಥಿ ಸಂಘಟನೆಗಳು, ಮಹಿಳಾ ಸಂಘಟನೆಗಳು, ಪ್ರಜಾಪ್ರಭುತ್ವ ಹಕ್ಕುಗಳ ಸಂಘಟನೆಗಳ ಜಂಟಿ ಪ್ರತಿಭಟನೆಯಾಗಿತ್ತು. ಇದೇ ರೀತಿಯಾಗಿ ಈಗಾಗಲೇ ದೆಹಲಿ ಫಾರ್ ಫಾರ್ಮರ್ಸ್ ಹೆಸರಿನಲ್ಲಿ ಈಗಾಗಲೇ ಹಲವಾರು ಕಾರ್ಯಕ್ರಮಗಳು ನಡೆದಿವೆ. ಅವುಗಳೆಲ್ಲದರ ಸಮಾರೋಪ ಕಾರ್ಯಕ್ರಮವಾಗಿ ಇಂದು ನಾವು ಶಹೀದ್ ಪಾರ್ಕ್‌ನ ಒಳಗೆ ಕಾರ್ಯಕ್ರಮ ನಡೆಸಲು ಯೋಜಿಸಿದ್ದೆವು. ಆದರೆ ಪೊಲೀಸರು ಸಹ ಅಡ್ಡಿಪಡಿಸುತ್ತಿದ್ದಾರೆ ಮತ್ತು ನಮಗೆ ಅವಕಾಶ ನೀಡುತ್ತಿಲ್ಲ ಎಂದು ಅವರು ದೂರಿದ್ದಾರೆ.

ದೆಹಲಿಯಲ್ಲಿ ಇಂದು ಸುಮಾರು 50 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ರಸ್ತೆಗಳಿಗೆ ಮುಳ್ಳಿನ ಸರಳುಗಳನ್ನು ನೆಡುವುದು, ಕಾಂಕ್ರೀಟ್ ಗೋಡೆಗಳನ್ನು ಕಟ್ಟುವುದು, ಮುಳ್ಳು ತಂತಿ ಬೇಲಿ ಮತ್ತು ದೊಡ್ಡ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಸರ್ಕಾರದ ಈ ದಮನ ಕ್ರಮಕ್ಕೆ ಪ್ರಪಂಚಾದ್ಯಂತ ಟೀಕೆ ವ್ಯಕ್ತವಾಗಿತ್ತು. ಈಗ ಪೊಲೀಸರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಕಾರ್ಮಿಕ ಮುಖಂಡರು ಸಹ ತಮ್ಮ ಪ್ರಜಾತಾಂತ್ರಿಕ ಹೋರಾಟ ನಡೆಸಲು ಬಿಡುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.


ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...